Homeಮುಖಪುಟಉಕ್ರೇನ್‌- ರಷ್ಯಾ ವಾರ್‌: ಯುರೋಪ್‌ನ ಅತಿದೊಡ್ಡ ಪರಮಾಣು ವಿದ್ಯುತ್ ಸ್ಥಾವರದಲ್ಲಿ ಬೆಂಕಿ

ಉಕ್ರೇನ್‌- ರಷ್ಯಾ ವಾರ್‌: ಯುರೋಪ್‌ನ ಅತಿದೊಡ್ಡ ಪರಮಾಣು ವಿದ್ಯುತ್ ಸ್ಥಾವರದಲ್ಲಿ ಬೆಂಕಿ

ಜಪೋರಿಝಿಯಾ ಪರಮಾಣು ಸ್ಥಾವರ ಸ್ಫೋಟಿಸಿದರೆ, ಚೋರ್ನೋಬಿಲ್‌ಗಿಂತ 10 ಪಟ್ಟು ದೊಡ್ಡ ದುರಂತವಾಗುತ್ತದೆ: ಉಕ್ರೇನ್‌

- Advertisement -
- Advertisement -

ಕೀವ್‌: ರಷ್ಯಾ ದಾಳಿಯ ಬಳಿಕ ಉಕ್ರೇನ್‌ನಲ್ಲಿರುವ ಯುರೋಪಿನ ಅತಿದೊಡ್ಡ ಪರಮಾಣು ವಿದ್ಯುತ್ ಸ್ಥಾವರದಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ವರದಿಯಾಗಿದೆ.

ಅಗ್ನಿಶಾಮಕ ದಳದವರು ಬೆಂಕಿಯನ್ನು ನಂದಿಸಲು ಸಾಧ್ಯವಾಗುತ್ತಿಲ್ಲ. ಏಕೆಂದರೆ ರಷ್ಯಾದ ಪಡೆಗಳು ಅಗ್ನಿಶಾಮಕ ದಳದ ಮೇಲೆ ಗುಂಡಿನ ದಾಳಿ ಮುಂದುವರಿಸಿವೆ ಎಂದು ಜಪೋರಿಝಿಯಾ ಪರಮಾಣು ಸ್ಥಾವರದ ಬಳಿಯ ಪಟ್ಟಣದ ಮೇಯರ್ ತಿಳಿಸಿದ್ದಾರೆ.

“ಝಪೊರಿಝಿಯಾ ಪರಮಾಣು ವಿದ್ಯುತ್ ಸ್ಥಾವರದ ಮೇಲೆ ರಷ್ಯಾದ ಪಡೆಗಳು ಕ್ಷಪಣಿ ದಾಳಿ ನಡೆಸಿದ ಪರಿಣಾಮವಾಗಿ ಬೆಂಕಿ ಕಾಣಿಸಿಕೊಂಡಿದೆ” ಎಂದು ಇಲ್ಲಿನ ವಕ್ತಾರ ಆಂಡ್ರೇ ತುಜ್ ವಿಡಿಯೊ ಮೂಲಕ ತಿಳಿಸಿದ್ದಾರೆ. ಯಾವುದೇ ವಿಕಿರಣ ಘಟನೆ ಸಂಭವಿಸಬಹುದೇ ಎಂದು ನಿಕಟವಾಗಿ ಗಮನಿಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.

ತಕ್ಷಣದಲ್ಲಿ ವಿಕಿರಣ ಘಟನೆ ವರದಿಯಾಗಿಲ್ಲ. ಅಗತ್ಯ ಉಪಕರಣಗಳು ಬೆಂಕಿಗೆ ಸಿಲುಕಿಲ್ಲ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿರುವುದಾಗಿ ವರದಿಯಾಗಿದೆ. ಆದರೆ ಆಕ್ರಮಣಕಾರಿ ಪಡೆಗಳು ಮುಂದೆ ಏನು ಮಾಡಬಹುದು ಎಂಬುದು ಸ್ಪಷ್ಟವಾಗಿಲ್ಲ.

ಚೆರ್ನೋಬಿಲ್ ಪರಮಾಣು ದುರಂತವನ್ನು “ಪುನರಾವರ್ತನೆ” ಮಾಡಲು ರಷ್ಯಾ ಪ್ರಯತ್ನಿಸುತ್ತಿದೆ ಎಂದು ಉಕ್ರೇನ್ ಅಧ್ಯಕ್ಷ ವೊಲೊಡಿಮರ್ ಝೆಲೆನ್ಸ್ಕಿ ಆರೋಪಿಸಿದ್ದಾರೆ. ಜಪೋರಿಝಿಯಾ ಪರಮಾಣು ಸ್ಥಾವರದಲ್ಲಿನ ಬಿಕ್ಕಟ್ಟಿನ ಬಗ್ಗೆ ಯುಎಸ್ ಅಧ್ಯಕ್ಷ ಜೋ ಬಿಡನ್ ಸೇರಿದಂತೆ ಅಂತಾರಾಷ್ಟ್ರೀಯ ನಾಯಕರೊಂದಿಗೆ ಮಾತನಾಡಿದ್ದೇನೆ ಎಂದು ತಿಳಿಸಿದ್ದಾರೆ.

“ರಷ್ಯಾ ಹೊರತುಪಡಿಸಿ ಯಾವುದೇ ದೇಶವು ಪರಮಾಣು ಶಕ್ತಿ ಘಟಕಗಳ ಮೇಲೆ ಗುಂಡು ಹಾರಿಸಿಲ್ಲ” ಎಂದು ಝೆಲೆನ್ಸ್ಕಿ ವೀಡಿಯೊ ಸಂದೇಶದಲ್ಲಿ ಹೇಳಿದ್ದಾರೆ.

ಯುರೋಪಿನ ಅತಿದೊಡ್ಡ ಪರಮಾಣು ವಿದ್ಯುತ್ ಸ್ಥಾವರದ ಮೇಲೆ ಬೆಂಕಿ ಕಾಣಿಸಿಕೊಂಡ ನಂತರ ದಾಳಿಯನ್ನು ನಿಲ್ಲಿಸುವಂತೆ ರಷ್ಯಾದ ಪಡೆಗಳಿಗೆ ಉಕ್ರೇನಿಯನ್ ವಿದೇಶಾಂಗ ಸಚಿವ ಡಿಮಿಟ್ರೋ ಕುಲೆಬಾ ಶುಕ್ರವಾರ ಕರೆ ನೀಡಿದ್ದಾರೆ.

ಆಗ್ನೇಯ ಉಕ್ರೇನ್‌ನ ಕೈಗಾರಿಕಾ ನಗರವಾದ ಜಪೋರಿಝಿಯಾದಲ್ಲಿನ ಈ ಸ್ಥಾವರವು ದೇಶದ ಪರಮಾಣು ಶಕ್ತಿಯ ಅಂದಾಜು 40 ಪ್ರತಿಶತವನ್ನು ಪೂರೈಸುತ್ತದೆ.

“ಜಪೋರಿಝಿಯಾ ಸ್ಥಾವರ ಸ್ಫೋಟಿಸಿದರೆ, ಚೋರ್ನೋಬಿಲ್‌ಗಿಂತ 10 ಪಟ್ಟು ದೊಡ್ಡ ದುರಂತವಾಗುತ್ತದೆ. ರಷ್ಯನ್ನರು ತಕ್ಷಣವೇ ಬೆಂಕಿಯನ್ನು ನಿಲ್ಲಿಸಬೇಕು.  ಅಗ್ನಿಶಾಮಕ ಸಿಬ್ಬಂದಿಗೆ ಅವಕಾಶ ನೀಡಬೇಕು. ಭದ್ರತಾ ವಲಯವನ್ನು ಸ್ಥಾಪಿಸಬೇಕು” ಎಂದು ಕುಲೇಬಾ ಟ್ವೀಟ್ ಮಾಡಿದ್ದಾರೆ.

ರಷ್ಯಾದ ಪಡೆಗಳು “ಎಲ್ಲಾ ಕಡೆಯಿಂದ” ಗುಂಡು ಹಾರಿಸುತ್ತಿವೆ ಎಂದು ಅವರು ಬರೆದಿದ್ದಾರೆ.

1986ರ ಚೆರ್ನೋಬಿಲ್ ದುರಂತದ ಸ್ಥಳವನ್ನು ಒಳಗೊಂಡಂತೆ ಉಕ್ರೇನ್‌ನ ಪರಮಾಣು ಸ್ಥಳಗಳಲ್ಲಿನ ಎಲ್ಲಾ ಕಾರ್ಯಾಚರಣೆಯನ್ನು ನಿಲ್ಲಿಸುವಂತೆ ಯುಎನ್‌ನ ಅಂತರರಾಷ್ಟ್ರೀಯ ಪರಮಾಣು ಶಕ್ತಿ ಸಂಸ್ಥೆಯು ವಿಶ್ವಸಂಸ್ಥೆಯಲ್ಲಿ ಈಗಾಗಲೇ ರಷ್ಯಾವನ್ನು ಒತ್ತಾಯಿಸಿದೆ.


ಇದನ್ನೂ ಓದಿರಿ: ಉಕ್ರೇನ್‌- ರಷ್ಯಾ ಯುದ್ಧ: ಭಾರತೀಯ ವಿದ್ಯಾರ್ಥಿಯ ಮೇಲೆ ಗುಂಡಿನ ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...