Homeಮುಖಪುಟ’ನಾನು ಅಧಿಕಾರಿಗಳಿಗೆ ಕರೆ ಮಾಡುತ್ತಲೇ ಇದ್ದೆ, ಯಾರು ಸ್ಪಂದಿಸಲಿಲ್ಲ’: ಗುಂಡೇಟಿಗೆ ಒಳಗಾಗಿರುವ ಭಾರತೀಯ ವಿದ್ಯಾರ್ಥಿ

’ನಾನು ಅಧಿಕಾರಿಗಳಿಗೆ ಕರೆ ಮಾಡುತ್ತಲೇ ಇದ್ದೆ, ಯಾರು ಸ್ಪಂದಿಸಲಿಲ್ಲ’: ಗುಂಡೇಟಿಗೆ ಒಳಗಾಗಿರುವ ಭಾರತೀಯ ವಿದ್ಯಾರ್ಥಿ

- Advertisement -
- Advertisement -

ಉಕ್ರೇನ್ ರಾಜಧಾನಿ ಕೀವ್‌ನಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸುತ್ತಿದ್ದ ಭಾರತೀಯ ವಿದ್ಯಾರ್ಥಿ ಹರ್ಜೋತ್ ಸಿಂಗ್ ಗುಂಡೇಟಿಗೆ ಒಳಗಾಗಿದ್ದರು. ಪ್ರಸ್ತುತ ಕೀವ್ ಸಿಟಿ ಆಸ್ಪತ್ರೆಯಲ್ಲಿ ದಾಖಲಾಗಿರುವ ಅವರು, ’ನಾನು ಅಧಿಕಾರಿಗಳಿಗೆ ಕರೆ ಮಾಡುತ್ತಲೇ ಇದ್ದೆ, ಯಾರು ಸ್ಪಂದಿಸಲಿಲ್ಲ’ ಎಂದು ಆರೋಪಿಸಿದ್ದಾರೆ.

ಎನ್‌ಡಿಟಿವಿ ಜೊತೆಗೆ ಮಾತನಾಡಿರುವ ಹರ್ಜೋತ್ ಸಿಂಗ್, “ನನ್ನ ಭುಜಕ್ಕೆ ಗುಂಡೇಟು ಬಿದ್ದಿದೆ. ವೈದ್ಯರು ನನ್ನ ಎದೆಯ ಭಾಗದಿಂದ ಗುಂಡನ್ನು ಹೊರತೆಗೆದಿದ್ದಾರೆ. ನನ್ನ ಕಾಲು ಮುರಿದಿದೆ” ಎಂದು ಹೇಳಿದ್ದಾರೆ.

“ನಾನು ಅಧಿಕಾರಿಗಳಿಗೆ ಕರೆ ಮಾಡುತ್ತಲೇ ಇದ್ದೆ. ನಾನು ಎಲ್ವಿವ್‌ಗೆ ಹೋಗಲು ನನಗೆ ಕೆಲವು ಸೌಲಭ್ಯಗಳು ಬೇಕಾಗಿದ್ದವು. ಆದರೆ ಯಾರೂ ನನ್ನನ್ನು ಸಂಪರ್ಕಿಸಲಿಲ್ಲ. ಎನ್‌ಡಿಟಿವಿ ಮಾತ್ರ ನನ್ನ ಬಳಿಗೆ ಬಂದಿದೆ. ಈಗ ಇಲ್ಲಿ ಏನಾಗುತ್ತಿದೆ ಎಂಬುದರ ವಾಸ್ತವತೆ ಇಡೀ ಜಗತ್ತಿಗೆ ತಿಳಿಯುತ್ತದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಉಕ್ರೇನ್‌ನಲ್ಲಿ ಸಿಲುಕಿದ್ದ ವಿದ್ಯಾರ್ಥಿಗಳಿಗೆ ಆಪದ್ಬಾಂಧವನಾದ ನಟ ಸೋನು ಸೂದ್

ದೆಹಲಿ ಬಳಿಯ ಛತ್ತರ್‌ಪುರದ ವಿದ್ಯಾರ್ಥಿ ಹರ್ಜೋತ್ ಸಿಂಗ್ ತನ್ನ ಸ್ನೇಹಿತರೊಂದಿಗೆ ಕ್ಯಾಬ್‌ನಲ್ಲಿ ಗಡಿಯನ್ನು ತಲುಪಲು ಪ್ರಯತ್ನಿಸುತ್ತಿದ್ದರು. ಕೀವ್‌ನಿಂದ ಹೇಗಾದರೂ ತಪ್ಪಿಸಿಕೊಂಡು ಎಲ್ವಿವ್ ತಲುಪಲು ಪ್ರಯತ್ನಿಸುತ್ತಿದ್ದರು. ಈ ವೇಳೆ ಗುಂಡೇಟು ಬಿದ್ದಿತ್ತು.

“ನಾನು ರಾಯಭಾರ ಕಚೇರಿಯ ಅಧಿಕಾರಿಗಳನ್ನು ಸಂಪರ್ಕಿಸಿದೆ.ನನಗೆ ನಡೆಯಲು ಸಾಧ್ಯವಿಲ್ಲದ್ದ ಕಾರಣ, ನನ್ನನ್ನು ಎಲ್ವಿವ್‌ಗೆ ಕರೆದೊಯ್ಯಲು ಏನಾದರೂ ಸೌಲಭ್ಯವನ್ನು ಒದಗಿಸಬಹುದೇ ಎಂದು ಕೇಳಿದೆ. ಆದರೆ ನನಗೆ ಬರೀ ಸುಳ್ಳು ಹೇಳಿಕೆಗಳು, ಭರವಸೆಗಳು ಸಿಕ್ಕವು. ಇನ್ನೂ ಅನೇಕ ಮಂದಿ ಕೀವ್‌ನಲ್ಲಿ ಸಿಕ್ಕಿಬಿದ್ದಿದ್ದಾರೆ” ಎಂದಿದ್ದಾರೆ.

“ಅನೇಕರು ತಮ್ಮ ತಮ್ಮ ಮನೆಗಳಲ್ಲಿ ಬಚ್ಚಿಟ್ಟುಕೊಂಡಿದ್ದಾರೆ, ಏನಾಗುತ್ತಿದೆ ಎಂದು ಅವರಿಗೆ ತಿಳಿದಿಲ್ಲ. ನಾನು ನಿರಂತರವಾಗಿ ರಾಯಭಾರ ಕಚೇರಿಯೊಂದಿಗೆ ಮಾತನಾಡಲು ಪ್ರಯತ್ನಿಸುತ್ತಿದ್ದೇನೆ. ನಾನು ಹೇಳುವುದೇನೆಂದರೇ, ಏನಾಯಿತು, ಅದರ ಬಗ್ಗೆ ನಾವು ಏನೂ ಮಾಡಲು ಸಾಧ್ಯವಿಲ್ಲ. ನಾವು ಒಳ್ಳೆಯದನ್ನು ಮಾತ್ರ ನಿರೀಕ್ಷಿಸಬಹುದು. ಜನರು ನನ್ನನ್ನು ಟಿವಿ ಮೂಲಕ ನೋಡಿದ್ದಾರೆ. ಈಗ ಜನರಿಗೆ ಇಲ್ಲಿ ಏನಾಗುತ್ತಿದೆ, ವಾಸ್ತವ ಏನೆಂದು ತಿಳಿಯುತ್ತಿದೆ” ಎಂದು ಹೇಳಿದ್ದಾರೆ.

“ಕೀವ್‌‌ನಿಂದ ಹೊರಟ ವಿದ್ಯಾರ್ಥಿಗೆ ಗುಂಡು ಹಾರಿಸಲಾಗಿದೆ ಎಂಬ ವರದಿಗಳನ್ನು ನಾವು ಕೇಳಿದ್ದೇವೆ. ಅವರನ್ನು ಮತ್ತೆ ಕೀವ್‌ಗೆ ಕರೆದೊಯ್ಯಲಾಗಿದೆ. ಯುದ್ಧದಲ್ಲಿ ಈ ಘಟನೆ ಸಂಭವಿಸಿದೆ” ಎಂದು ಬೆಳಗ್ಗೆ  ಕೇಂದ್ರ ಸಚಿವ ವಿ.ಕೆ.ಸಿಂಗ್ ತಿಳಿಸಿದ್ದರು.

ಇನ್ನು, ಸರ್ಕಾರದ ಪ್ರಕಾರ, ಕಳೆದ ಕೆಲವು ದಿನಗಳಲ್ಲಿ ಸುಮಾರು 17,000 ಭಾರತೀಯರು ಉಕ್ರೇನ್‌ನ ಗಡಿಯನ್ನು ತೊರೆದಿದ್ದಾರೆ. 6,000 ಕ್ಕೂ ಹೆಚ್ಚು ಜನರು ಮನೆಗೆ ಮರಳಿದ್ದಾರೆ. ಸುಮಾರು 1,700 ಜನರು ಉಕ್ರೇನ್ ತೊರೆಯಲು ಕಾಯುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಯುದ್ಧ ಪ್ರಾರಂಭವಾಗುವ ಮೊದಲು, ಸುಮಾರು 20,000 ಭಾರತೀಯರು, ಮುಖ್ಯವಾಗಿ ವೈದ್ಯಕೀಯ ವಿದ್ಯಾರ್ಥಿಗಳು ಉಕ್ರೇನ್‌ನಲ್ಲಿದ್ದರು.


ಇದನ್ನೂ ಓದಿ: ಉಕ್ರೇನ್‌- ರಷ್ಯಾ ಯುದ್ಧ: ಭಾರತೀಯ ವಿದ್ಯಾರ್ಥಿಯ ಮೇಲೆ ಗುಂಡಿನ ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...