Homeಮುಖಪುಟನಟಿ ಸಂಜನಾರಿಗೆ ಅಶ್ಲೀಲ ಮೆಸೇಜ್‌‌: ಆ್ಯಡಂ ಬಿದ್ದಪ್ಪ ಅರೆಸ್ಟ್‌

ನಟಿ ಸಂಜನಾರಿಗೆ ಅಶ್ಲೀಲ ಮೆಸೇಜ್‌‌: ಆ್ಯಡಂ ಬಿದ್ದಪ್ಪ ಅರೆಸ್ಟ್‌

- Advertisement -
- Advertisement -

ಬೆಂಗಳೂರು: ಅಶ್ಲೀಲ ಸಂದೇಶಗಳನ್ನು ಕಳುಹಿಸಿದ್ದಾರೆ ಎಂದು ಆರೋಪಿಸಿ ಫ್ಯಾಷನ್ ಡಿಸೈನರ್ ಪ್ರಸಾದ್ ಬಿದ್ದಪ್ಪ ಅವರ ಪುತ್ರ ಆ್ಯಡಂ ಬಿದ್ದಪ್ಪ ವಿರುದ್ಧ ಬಹುಭಾಷಾ ನಟಿ ಸಂಜನಾ ಗಲ್ರಾನಿಯವರು ಇಂದಿರಾನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಪೊಲೀಸರು ಕೊಡಗಿನ ಆಡಂ ಬಿದ್ದಪ್ಪನನ್ನು ಬಂಧಿಸಿದ್ದಾರೆ. ಮಾಧ್ಯಮಗಳಿಗೆ ಹೇಳಿಕೆ ನೀಡಿರುವ ಪೂರ್ವ ಪೊಲೀಸ್ ಉಪ ಆಯುಕ್ತ ಭೀಮಾಶಂಕರ್ ಎಸ್.ಗುಳೇದ್, ”ಆ್ಯಡಂನಿಂದ ಅಶ್ಲೀಲ ಸಂದೇಶಗಳು ಬರುತ್ತಿರುವುದಾಗಿ ಮಹಿಳೆಯೊಬ್ಬರು ದೂರು ನೀಡಿದ್ದರು. ಹೀಗಾಗಿ ಇಂದಿರಾನಗರ ಪೊಲೀಸ್ ಠಾಣೆಯಲ್ಲಿ ನಿನ್ನೆ ಪ್ರಕರಣ ದಾಖಲಾಗಿದೆ” ಎಂದು ತಿಳಿಸಿದ್ದಾರೆ.

ಆಶ್ಲೀಲ ಮೆಸೇಜ್‌ಗಳು ಬರುತ್ತಿರುವ ಕುರಿತು ನಟಿ ಸಂಜನಾ ಗಲ್ರಾನಿಯವರು ಮಾಧ್ಯಮದೊಂದಿಗೆ ಮಾಹಿತಿ ಹಂಚಿಕೊಂಡಿದ್ದರು.

 ಸಂಜನಾ ಅವರ ಪತ್ರಿಕಾ ಹೇಳಿಕೆ

ನಮಸ್ಕಾರ, ನನಗೆ ಸುಮಾರು ಜನ ಮಾಧ್ಯಮ ಮಿತ್ರರು ಕರೆ ಮಾಡುತ್ತಿದ್ದೀರಿ.. ಕ್ಷಮೆ ಇರಲಿ.. ನಾನು ಯಾವುದೇ ಅಗ್ಗದ ಪ್ರಚಾರ ಅಥವಾ ಬೇಡದ ವಿಚಾರಕ್ಕೆ ಸುದ್ದಿ ಆಗಲು ಬಯಸುವುದಿಲ್ಲ..”

“ನಾನು ನನ್ನ ಕುಟುಂಬ ಸದ್ಯ ಈ ಪ್ರಕರಣದಿಂದ ವಿಚಲಿತರಾಗಿದ್ದೇವೆ. ವಿವಿಐಪಿ ಒಬ್ಬರ ಪುತ್ರ ನನಗೆ ಕಳೆದ ಶುಕ್ರವಾರ ಮಾರ್ಚ್ 25ರ ರಾತ್ರಿ 11 ಗಂಟೆ ಸುಮಾರಿಗೆ ವಾಟ್ಸ್ ಆ್ಯಪ್ ನಲ್ಲಿ ಅಶ್ಲೀಲ ಸಂದೇಶಗಳನ್ನು ಕಳಿಸಿದ್ದಾನೆ.”

“ಆ ವ್ಯಕ್ತಿಯ ವಿರುದ್ಧ ನಾವು ಈಗಾಗಲೇ ಕಾನೂನು ರೀತಿಯ ಕ್ರಮಕ್ಕೆ ಮುಂದಾಗಿದ್ದೇವೆ. ನನಗೆ ಕಳಿಸಿದ್ದ ಸಂದೇಶವು ಅಸಹ್ಯ, ಅಶ್ಲೀಲಕರವಾಗಿತ್ತು. ಅದನ್ನು ನಾನು ಹೇಳಲು ಸಾಧ್ಯವಿಲ್ಲ. ಕಳೆದ ಒಂದು ವಾರದಿಂದ ಈ ರೀತಿಯ ಸಂದೇಶದಿಂದ ನಾನು ಭಾರೀ ನೊಂದಿದ್ದೇನೆ.‌ ಹಾಗೂ ನನಗೆ ಇಂತಹ ಪ್ರಕರಣಗಳಿಂದ ವ್ಯತಿರಿಕ್ತ ಪರಿಣಾಮವಾಗದಿರಲಿ ಎಂಬ ಕಾರಣಕ್ಕೆ ದೂರ ಉಳಿದಿದ್ದೇನೆ. ಜೀವನದಲ್ಲಿ ಅನೇಕ ಏರಿಳಿತಗಳನ್ನು ನೋಡಿದ್ದೇನೆ.”

“ಕಳೆದ ಎರಡು ವರ್ಷಗಳಿಂದ ನಾನು ಕಠಿಣ ಪರಿಸ್ಥಿತಿಯನ್ನು ಎದುರಿಸುತ್ತಿದ್ದೇನೆ. ನನ್ನ ಪ್ರಾಮಾಣಿಕ, ಆಧ್ಯಾತ್ಮಿಕ ಪ್ರಯತ್ನದಿಂದ ನನ್ನ ಕುಟುಂಬದ ಸಹಕಾರದೊಂದಿಗೆ ಜೀವನ ಸಾಗುತ್ತಿದೆ.”

“ನನಗೆ ಅಶ್ಲೀಲ ಸಂದೇಶ ಕಳಿಸಿರುವ ವಿವಿಐಪಿ ಪುತ್ರನ ವಿರುದ್ಧ ನನಗೆ ಆಕ್ರೋಶವಿದೆ. ಅವರ ತಂದೆಯನ್ನು ನಾನು ಗೌರವಿಸುತ್ತೇನೆ. ನನಗೆ ಈ ಯುವಕನ ವರ್ತನೆಯಿಂದಾಗಿ ಬೇಸರವಾಗಿದೆ. ಅನಿವಾರ್ಯವಾಗಿ ಆತನ ವಿರುದ್ಧ ದೂರು ಕೊಡುತ್ತಿದ್ದೇನೆ.”

“ಯೂಟ್ಯೂಬ್, ಫೇಸ್ಬುಕ್, ಟ್ವಿಟ್ಟರ್, ವಾಟ್ಸ್ ಆ್ಯಪ್, ಇನ್ಸ್ಟಾಗ್ರಾಮ್ ಮೂಲಕ ಅಶ್ಲೀಲ ಸಂದೇಶಗಳನ್ನು ಕಳಿಸುವುದು ಕಾನೂನಿನ ಪ್ರಕಾರ ಅಪರಾಧ. section 66 ಪ್ರಕಾರ ಇದಕ್ಕೆ 3 ವರ್ಷಗಳ ಕಾಲ ಜಾಮೀನು ರಹಿತ ಕಾರಾಗೃಹ ಶಿಕ್ಷೆಗೆ ಒಳಪಡಿಸಲಾಗುತ್ತದೆ. 354ರ ಪ್ರಕಾರ ಪ್ರಕರಣವನ್ನು ದಾಖಲಿಸಲಾಗಿದೆ.”

“ಇನ್ನೂ ನಾನು ಪೋಷಕರಲ್ಲಿ ಮನವಿ ಮಾಡುವುದು ಏನೆಂದರೆ ನಿಮ್ಮ ಮಕ್ಕಳ ಅಂತರ್ಜಾಲ ಬಳಕೆ ಕಡೆ ಗಮನವಿಡಿ. ಯಾಕೆಂದರೆ ನಮ್ಮ ಸೈಬರ್ ಕ್ರೈಂ ವಿಭಾಗದಲ್ಲಿ ಪೊಲೀಸರು ಕ್ಷಣಮಾತ್ರದಲ್ಲಿ ನಿಮ್ಮ ಹೆಡೆಮುರಿ ಕಟ್ಟುತ್ತಾರೆ. ಹೀಗಾಗಿ ಇಂತಹ ಅಶ್ಲೀಲಕರವಾದ ಚಟುವಟಿಕೆಗಳಿಂದ ದೂರು ಇರಿ.”

ಕರ್ನಾಟಕ ಪೊಲೀಸರಿಗೆ ನಾನು ಧನ್ಯವಾದ ತಿಳಿಸುತ್ತೇನೆ. ಈ ಪ್ರಕರಣದಲ್ಲಿ ಪೊಲೀಸರು ನಮಗೆ ನ್ಯಾಯ ಕೊಡಿಸಿದ್ದಾರೆ.

– ಸಂಜನಾ ಗಲ್ರಾನಿ, ಬಹುಭಾಷಾ ನಟಿ


ಇದನ್ನೂ ಓದಿರಿ: ನಿಮ್ಮಿಂದಾಗಿ ನಾನು ನೇಣು ಹಾಕಿಕೊಳ್ಬೇಕಾ? ಸುವರ್ಣ ಟಿ.ವಿ. ವಿರುದ್ಧ ನಟಿ ಸಂಜನಾ ಕಿಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...

ಕೊಲ್ಕತ್ತಾದ 26 ಲಕ್ಷ ಮತದಾರರ ಹೆಸರು 2002 ರ ಪಟ್ಟಿಗೆ ಹೊಂದಿಕೆಯಾಗುತ್ತಿಲ್ಲ: ಮುಖ್ಯ ಚುನಾವಣಾ ಅಧಿಕಾರಿ

ಕೋಲ್ಕತ್ತಾ ಮತ್ತು ಸುತ್ತಮುತ್ತಲಿನ ಹಲವಾರು ವಿಧಾನಸಭಾ ಕ್ಷೇತ್ರಗಳ ಮತದಾರರ ಹೆಸರುಗಳು 2002 ರ ಮತದಾರರ ಪಟ್ಟಿಯಲ್ಲಿರುವ ನಮೂದುಗಳಿಗೆ ಹೊಂದಿಕೆಯಾಗುತ್ತಿಲ್ಲ ಎಂದು ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಅಗರ್ವಾಲ್ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ...