Homeಅಂಕಣಗಳುನೀನಾ ಮತ್ತು ಸೀತೆಯರ ದುಃಖ

ನೀನಾ ಮತ್ತು ಸೀತೆಯರ ದುಃಖ

- Advertisement -
- Advertisement -

| ಗೌರಿ ಲಂಕೇಶ್ |
27 ಮೇ 2009 (ಸಂಪಾದಕೀಯದಿಂದ)

ಒಬ್ಬಳ ಹೆಸರು ಸೀತಾ, ಇನ್ನೊಬ್ಬಳ ಹೆಸರು ನೀನಾ. ಮೊದ¯ನೆಯವಳು ಸುಮಾರು ಎರಡು ಸಾವಿರ ವರ್ಷಗಳ ಹಿಂದೆ ಸೃಷ್ಠಿಸಲ್ಪಟ್ಟ ಪುರಾಣದಲ್ಲಿ ಕಾಣಿಸಿಕೊಳ್ಳುವ ಮಹಿಳೆ. ಎರಡನೆಯವಳು ಆಧುನಿಕ ದೇಶವಾದ ಅಮೆರಿಕಾದಲ್ಲಿ ವ್ಯಂಗ್ಯಚಿತ್ರಕಾರಳಾಗಿ ದುಡಿಯುತ್ತಿರುವ ಹೆಂಗಸು. ಆದರೆ ಕಾಲ, ದೇಶ, ಭಾಷೆ, ಸಂಸ್ಕøತಿ ಮತ್ತು ಪರಂಪರೆಯನ್ನು ಮೀರಿ ಇವರಿಬ್ಬರನ್ನು ಒಂದು ಸಂಗತಿ ಜೊತೆಗೂಡಿಸುತ್ತದೆ. ಅದು ಗಂಡನಿಂದ ತಿರಸ್ಕøತಗೊಂಡಿರುವ ಮಡದಿಯೊಬ್ಬಳ ಯಾತನೆ, ಅಸಹಾಯಕತೆ ಮತ್ತು ಏಕಾಂಗಿತನ.
ಸೀತಿ ಬೇರೆ ಯಾರೂ ಅಲ್ಲ. ವಾಲ್ಮೀಕಿ ಬರೆದ ರಾಮಾಯಣದ ನಾಯಕಿ. ಆ ಸೀತೆಗಾದ ವ್ಯಥೆ ತನಗಾದ ದುಃಖಕ್ಕಿಂತ ವಿಭಿನ್ನವಾಗಿರಲಿಲ್ಲ ಎಂದು ‘ಸೀತಾ ಸಿಂಗ್ಸ್ ದ ಬ್ಲೂಸ್’ ಎಂಬ ಅನಿಮೇಷನ್ ಸಿನಿಮಾದ ಮೂಲಕ ನೀನಾ ಪ್ಯಾಲಿ ತೋರಿಸಿದ್ದರಿಂದ ಇವತ್ತು ಆಕೆ ಕೆಲ ಹಿಂದೂತ್ವವಾದಿಗಳ ಕೆಂಗಣ್ಣಿಗೆ ಗುರಿಯಾಗಿದ್ದಾಳೆ.

ಅದು ಆದದ್ದು ಹೀಗೆ: ನೀನಾಳ ಅಮೆರಿಕನ್ ಗಂಡನಿಗೆ ಭಾರತದಲ್ಲಿ ಆರು ತಿಂಗಳ ಕಾಲ ಕಾಂಟ್ರಾಕ್ಟ್ ಮೇಲೆ ಕೆಲಸ ಮಾಡುವ ಅವಕಾಶ ಸಿಗುತ್ತದೆ. ಅಲ್ಲಿಯತನಕ ಅವರಿಬ್ಬರ ದಾಂಪತ್ಯಜೀವನ ಚೆನ್ನಾಗಿ ಸಾಗಿದ್ದು, ಆತ ನೀನಾಳನ್ನು ಅಮೆರಿಕದಲ್ಲಿ ಬಿಟ್ಟು ಭಾರತಕ್ಕೆ ಬರುತ್ತಾನೆ. ಆದರೆ ಇಲ್ಲಿಗೆ ಬಂದನಂತರ ನೀನಾಳನ್ನು ನಿರ್ಲಕ್ಷಿಸಲಾರಂಭಿಸುತ್ತಾನೆ. ಹೀಗೆ ಕೆಲ ತಿಂಗಳುಗಳು ಉರುಳಿದ ನಂತರ ಆತನ ಕಾಂಟ್ರಾಕ್ಟ್ ಅನ್ನು ಇನ್ನೊಂದು ವರ್ಷದ ಅವಧಿಗೆ ವಿಸ್ತರಿಸಲಾಗುತ್ತದೆ. ಆಗ ನೀನಾ ತಾನು ತನ್ನ ಗಂಡನೊಂದಿಗೆ ವಾಸಿಸಬೇಕೆಂದು ನಿರ್ಧರಿಸಿ ತನ್ನ ಕೆಲಸಕ್ಕೆ ರಾಜಿನಾಮೆ ನೀಡಿ, ಬಾಡಿಗೆ ಮನೆಯನ್ನು ತೊರೆದು, ಗಂಟುಮೂಟೆ ಕಟ್ಟಿಕೊಂಡು ಆಕೆಯೂ ಭಾರತಕ್ಕೆ ಬರುತ್ತಾಳೆ.

ಅಪಾರ ಪ್ರೀತಿ ಹೊತ್ತು ಬಂದಿರುವ ನೀನಾಳಿಗೆ ಇಲ್ಲಿ ಆಘಾತ ಕಾದಿರುತ್ತದೆ. ಅವಳ ಗಂಡ ಆಕೆಯ ಬಗೆಗಿನ ಪ್ರೀತಿ ಮತ್ತು ಆಸಕ್ತಿಯನ್ನು ಕಳೆದುಕೊಂಡಿರುತ್ತಾನೆ. ಸಹಜವಾಗಿಯೇ ನೀನಾ ಇದನ್ನು ಕಂಡು ಘಾಸಿಗೊಳಗಾಗುತ್ತಾಳೆ. ಇದು ತಾತ್ಕಾಲಿಕ ಸಮಸ್ಯೆ ಎಂದು ಭಾವಿಸಿ ಗಂಡನ ತಾತ್ಸಾರವನ್ನು ಸಹಿಸಿಕೊಂಡಿರುತ್ತಾಳೆ. ಭಾರತದಲ್ಲಿ ಆಕೆಗೆ ಸ್ನೇಹಿತರಾಗಲಿ, ಸಹೋದ್ಯೋಗಿಗಳಾಗಲಿ ಇಲ್ಲದಿರುವುದು ಆಕೆಯ ಏಕಾಂಗಿತನವನ್ನು ಹೆಚ್ಚಿಸುತ್ತದೆ. ಜೊತೆಗೆ ಭಾರತೀಯ ಮಹಿಳೆಯರಿಗೆ ಸ್ವಾತಂತ್ರ್ಯ ಇಲ್ಲದಿರುವುದು, ಅವರನ್ನು ಎರಡನೆ ದರ್ಜೆಯ ಪ್ರಜೆಗಳಂತೆ ನಡೆಸಿಕೊಳ್ಳುವುದು, ಗಂಡನ ಹೊರತಾಗಿ ಪ್ರತ್ಯೇಕ ಅಸ್ತಿತ್ವ ಇಲ್ಲದಿರುವುದೆಲ್ಲ ನೀನಾಳಲ್ಲಿ ಬೇಸರ ಮೂಡಿಸುತ್ತದೆ.

 

ಅದೇ ಹೊತ್ತಿಗೆ ನೀನಾ ‘ರಾಮಾಯಣ’ವನ್ನು ಓದಲು ಪ್ರಾರಂಭಿಸುತ್ತಾಳೆ. ರಾಮನನ್ನು ಮರ್ಯಾದ ಪುರುಷೋತ್ತಮನೆಂದೂ, ಆತ ಎಲ್ಲ ರೀತಿಯ ಸದ್ಗುಣಗಳನ್ನು ಹೊಂದಿರುವವನೆಂದೂ; ಆದರೆ ಸೀತೆಯನ್ನು ಯಾವ ಸ್ವಂತಿಕೆಯೂ ಇಲ್ಲದ, ಸ್ವಾತಂತ್ರ್ಯವಿಲ್ಲದ ಆಕೃತಿಯಂತೆ ಚಿತ್ರಿಸಿರುವುದನ್ನು ನೋಡಿ ನೀನಾಳಿಗೆ ‘ರಾಮಾಯಣ’ ಸ್ತ್ರೀದ್ವೇಷಿಯಾದ ಕರಪತ್ರಕ್ಕಿಂತ ಹೆಚ್ಚಿನ ಮೌಲ್ಯ ಹೊಂದಿರದ ಕೃತಿ ಎಂಬಂತೆ ಕಾಣಿಸುತ್ತದೆ.ಮೂರು ಸಾವಿರ ವರ್ಷಗಳ ಹಿಂದೆ ವಾಲ್ಮೀಕಿಯ ಕಾಲ್ಪನಿಕ ಸೃಷ್ಟಿಯಾದ ಸೀತೆ ಅನುಭವಿಸಿದ ಒಬ್ಬಂಟಿತನಕ್ಕೂ, ಆಧುನಿಕ ಮಹಿಳೆಯಾದ ತಾನು 21ನೇ ಶತಮಾನದಲ್ಲಿ ಅನುಭವಿಸುತ್ತಿರುವ ನೋವಿಗೂ ಅಷ್ಟೇನೂ ವ್ಯತ್ಯಾಸವಿಲ್ಲ ಎನಿಸುತ್ತದೆ ನೀನಾಳಿಗೆ. “ನನ್ನನ್ನು ತಿರಸ್ಕರಿಸಿದ ತನ್ನ ಗಂಡನ ಬಗ್ಗೆ ನನಗಿನ್ನೂ ಇದ್ದ ಪ್ರೀತಿ, ಹಂಬಲ ಮತ್ತು ಆಶೆ ಸೀತೆಯ ಅನುಭವವೂ ಆಗಿತ್ತು. ಆಗ ರಾಮಾಯಣ ಕೇವಲ ಲಿಂಗಭೇದ ತೋರುವ ದೃಷ್ಟಾಂತ ಕತೆಯಾಗಲ್ಲದೆ, ಮನುಷ್ಯರ ನಡುವಿನ ಸಂಬಂಧಗಳು ಮತ್ತು ಹೃದಯಾಳದಲ್ಲಿರುವ ವೇದನೆಯ ಕತೆಯಂತೆ ಕಂಡಿತು. ಅದೇ ಹೊತ್ತಿಗೆ 1920ರಲ್ಲಿ ಬ್ಲೂಸ್ (ಹೆಚ್ಚಾಗಿ ದುಮ್ಮಾನಗಳ ಬಗೆಗಿನ ಹಾಡುಗಳ ಒಂದು ಸಂಗೀತ ಶೈಲಿ) ಕವನಗಳನ್ನು ಹಾಡಿದ್ದ ಆನೆಟ್ ಹಾನ್‍ಶಾ ಅವರ ಸಂಗೀತವನ್ನು ಕೇಳಿದೆ. ನನ್ನ ವೈಯಕ್ತಿಕ ದುಃಖ, ಸೀತಾಳ ಕಥನ ಮತ್ತು ಹಾನ್‍ಶಾಳ ಸಂಗೀತ, ಈ ಮೂರು ಒಟ್ಟಾಗಿ ಸಾಗಿದ್ದರಿಂದ ‘ಸೀತಾ ಸಿಂಗ್ಸ್ ದ ಬ್ಲೂ’ ಸಿನಿಮಾವನ್ನು ಮಾಡಿದೆ” ಎನ್ನುತ್ತಾಳೆ ನೀನಾ.

82 ನಿಮಿಷಗಳ ಈ ಅನಿಮೇಟೆಡ್ ಸಿನಿಮಾದಲ್ಲಿ ಸೀತೆಯನ್ನು ತಾನು ವಿಧೇಯಳನ್ನಾಗಿ ತೋರಿಸದೆ. ಉತ್ಸಾಹಿ, ದೃಢ ನಿರ್ಧಾರಗಳ ಮತ್ತು ಭಾವುಕಜೀವಿಯನ್ನಾಗಿ ತೋರಿಸಿದ್ದೇನೆ ಎಂದು ನೀನಾ ಹೇಳುತ್ತಾರಾದರೂ ನಮ್ಮ ದೇಶದಲ್ಲೇ ರಾಮಾಯಣದ ಅನೇಕ ವ್ಯಾಖ್ಯಾನಗಳಲ್ಲಿ ಸೀತೆ ಇದಕ್ಕಿಂತಲೂ ಹೆಚ್ಚು ಗಟ್ಟಿ ವ್ಯಕ್ತಿತ್ವದವಳಾಗಿ ಮೂಡಿಬಂದಿದ್ದಾಳೆ.
ಸಹಜವಾಗಿಯೇ ಇದೆಲ್ಲ ಕೆಲ ‘ರಾಮಭಕ್ತ’ರಾದ ಹಿಂದೂತ್ವವಾದಿಗಳನ್ನು ಕೆರಳಿಸಿದೆ. ವಾಲ್ಮೀಕಿಯ ಜಾನಕಿ ಮತ್ತು ತಮ್ಮ ಸುತ್ತಲೂ ಇರುವ ಸೀತೆಯ ದುಃಖ ಅವರಿಗೆ ಅರ್ಥವಾಗುವುದಾದರೂ ಹೇಗೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...