Homeಅಂಕಣಗಳುನೀನಾ ಮತ್ತು ಸೀತೆಯರ ದುಃಖ

ನೀನಾ ಮತ್ತು ಸೀತೆಯರ ದುಃಖ

- Advertisement -
- Advertisement -

| ಗೌರಿ ಲಂಕೇಶ್ |
27 ಮೇ 2009 (ಸಂಪಾದಕೀಯದಿಂದ)

ಒಬ್ಬಳ ಹೆಸರು ಸೀತಾ, ಇನ್ನೊಬ್ಬಳ ಹೆಸರು ನೀನಾ. ಮೊದ¯ನೆಯವಳು ಸುಮಾರು ಎರಡು ಸಾವಿರ ವರ್ಷಗಳ ಹಿಂದೆ ಸೃಷ್ಠಿಸಲ್ಪಟ್ಟ ಪುರಾಣದಲ್ಲಿ ಕಾಣಿಸಿಕೊಳ್ಳುವ ಮಹಿಳೆ. ಎರಡನೆಯವಳು ಆಧುನಿಕ ದೇಶವಾದ ಅಮೆರಿಕಾದಲ್ಲಿ ವ್ಯಂಗ್ಯಚಿತ್ರಕಾರಳಾಗಿ ದುಡಿಯುತ್ತಿರುವ ಹೆಂಗಸು. ಆದರೆ ಕಾಲ, ದೇಶ, ಭಾಷೆ, ಸಂಸ್ಕøತಿ ಮತ್ತು ಪರಂಪರೆಯನ್ನು ಮೀರಿ ಇವರಿಬ್ಬರನ್ನು ಒಂದು ಸಂಗತಿ ಜೊತೆಗೂಡಿಸುತ್ತದೆ. ಅದು ಗಂಡನಿಂದ ತಿರಸ್ಕøತಗೊಂಡಿರುವ ಮಡದಿಯೊಬ್ಬಳ ಯಾತನೆ, ಅಸಹಾಯಕತೆ ಮತ್ತು ಏಕಾಂಗಿತನ.
ಸೀತಿ ಬೇರೆ ಯಾರೂ ಅಲ್ಲ. ವಾಲ್ಮೀಕಿ ಬರೆದ ರಾಮಾಯಣದ ನಾಯಕಿ. ಆ ಸೀತೆಗಾದ ವ್ಯಥೆ ತನಗಾದ ದುಃಖಕ್ಕಿಂತ ವಿಭಿನ್ನವಾಗಿರಲಿಲ್ಲ ಎಂದು ‘ಸೀತಾ ಸಿಂಗ್ಸ್ ದ ಬ್ಲೂಸ್’ ಎಂಬ ಅನಿಮೇಷನ್ ಸಿನಿಮಾದ ಮೂಲಕ ನೀನಾ ಪ್ಯಾಲಿ ತೋರಿಸಿದ್ದರಿಂದ ಇವತ್ತು ಆಕೆ ಕೆಲ ಹಿಂದೂತ್ವವಾದಿಗಳ ಕೆಂಗಣ್ಣಿಗೆ ಗುರಿಯಾಗಿದ್ದಾಳೆ.

ಅದು ಆದದ್ದು ಹೀಗೆ: ನೀನಾಳ ಅಮೆರಿಕನ್ ಗಂಡನಿಗೆ ಭಾರತದಲ್ಲಿ ಆರು ತಿಂಗಳ ಕಾಲ ಕಾಂಟ್ರಾಕ್ಟ್ ಮೇಲೆ ಕೆಲಸ ಮಾಡುವ ಅವಕಾಶ ಸಿಗುತ್ತದೆ. ಅಲ್ಲಿಯತನಕ ಅವರಿಬ್ಬರ ದಾಂಪತ್ಯಜೀವನ ಚೆನ್ನಾಗಿ ಸಾಗಿದ್ದು, ಆತ ನೀನಾಳನ್ನು ಅಮೆರಿಕದಲ್ಲಿ ಬಿಟ್ಟು ಭಾರತಕ್ಕೆ ಬರುತ್ತಾನೆ. ಆದರೆ ಇಲ್ಲಿಗೆ ಬಂದನಂತರ ನೀನಾಳನ್ನು ನಿರ್ಲಕ್ಷಿಸಲಾರಂಭಿಸುತ್ತಾನೆ. ಹೀಗೆ ಕೆಲ ತಿಂಗಳುಗಳು ಉರುಳಿದ ನಂತರ ಆತನ ಕಾಂಟ್ರಾಕ್ಟ್ ಅನ್ನು ಇನ್ನೊಂದು ವರ್ಷದ ಅವಧಿಗೆ ವಿಸ್ತರಿಸಲಾಗುತ್ತದೆ. ಆಗ ನೀನಾ ತಾನು ತನ್ನ ಗಂಡನೊಂದಿಗೆ ವಾಸಿಸಬೇಕೆಂದು ನಿರ್ಧರಿಸಿ ತನ್ನ ಕೆಲಸಕ್ಕೆ ರಾಜಿನಾಮೆ ನೀಡಿ, ಬಾಡಿಗೆ ಮನೆಯನ್ನು ತೊರೆದು, ಗಂಟುಮೂಟೆ ಕಟ್ಟಿಕೊಂಡು ಆಕೆಯೂ ಭಾರತಕ್ಕೆ ಬರುತ್ತಾಳೆ.

ಅಪಾರ ಪ್ರೀತಿ ಹೊತ್ತು ಬಂದಿರುವ ನೀನಾಳಿಗೆ ಇಲ್ಲಿ ಆಘಾತ ಕಾದಿರುತ್ತದೆ. ಅವಳ ಗಂಡ ಆಕೆಯ ಬಗೆಗಿನ ಪ್ರೀತಿ ಮತ್ತು ಆಸಕ್ತಿಯನ್ನು ಕಳೆದುಕೊಂಡಿರುತ್ತಾನೆ. ಸಹಜವಾಗಿಯೇ ನೀನಾ ಇದನ್ನು ಕಂಡು ಘಾಸಿಗೊಳಗಾಗುತ್ತಾಳೆ. ಇದು ತಾತ್ಕಾಲಿಕ ಸಮಸ್ಯೆ ಎಂದು ಭಾವಿಸಿ ಗಂಡನ ತಾತ್ಸಾರವನ್ನು ಸಹಿಸಿಕೊಂಡಿರುತ್ತಾಳೆ. ಭಾರತದಲ್ಲಿ ಆಕೆಗೆ ಸ್ನೇಹಿತರಾಗಲಿ, ಸಹೋದ್ಯೋಗಿಗಳಾಗಲಿ ಇಲ್ಲದಿರುವುದು ಆಕೆಯ ಏಕಾಂಗಿತನವನ್ನು ಹೆಚ್ಚಿಸುತ್ತದೆ. ಜೊತೆಗೆ ಭಾರತೀಯ ಮಹಿಳೆಯರಿಗೆ ಸ್ವಾತಂತ್ರ್ಯ ಇಲ್ಲದಿರುವುದು, ಅವರನ್ನು ಎರಡನೆ ದರ್ಜೆಯ ಪ್ರಜೆಗಳಂತೆ ನಡೆಸಿಕೊಳ್ಳುವುದು, ಗಂಡನ ಹೊರತಾಗಿ ಪ್ರತ್ಯೇಕ ಅಸ್ತಿತ್ವ ಇಲ್ಲದಿರುವುದೆಲ್ಲ ನೀನಾಳಲ್ಲಿ ಬೇಸರ ಮೂಡಿಸುತ್ತದೆ.

 

ಅದೇ ಹೊತ್ತಿಗೆ ನೀನಾ ‘ರಾಮಾಯಣ’ವನ್ನು ಓದಲು ಪ್ರಾರಂಭಿಸುತ್ತಾಳೆ. ರಾಮನನ್ನು ಮರ್ಯಾದ ಪುರುಷೋತ್ತಮನೆಂದೂ, ಆತ ಎಲ್ಲ ರೀತಿಯ ಸದ್ಗುಣಗಳನ್ನು ಹೊಂದಿರುವವನೆಂದೂ; ಆದರೆ ಸೀತೆಯನ್ನು ಯಾವ ಸ್ವಂತಿಕೆಯೂ ಇಲ್ಲದ, ಸ್ವಾತಂತ್ರ್ಯವಿಲ್ಲದ ಆಕೃತಿಯಂತೆ ಚಿತ್ರಿಸಿರುವುದನ್ನು ನೋಡಿ ನೀನಾಳಿಗೆ ‘ರಾಮಾಯಣ’ ಸ್ತ್ರೀದ್ವೇಷಿಯಾದ ಕರಪತ್ರಕ್ಕಿಂತ ಹೆಚ್ಚಿನ ಮೌಲ್ಯ ಹೊಂದಿರದ ಕೃತಿ ಎಂಬಂತೆ ಕಾಣಿಸುತ್ತದೆ.ಮೂರು ಸಾವಿರ ವರ್ಷಗಳ ಹಿಂದೆ ವಾಲ್ಮೀಕಿಯ ಕಾಲ್ಪನಿಕ ಸೃಷ್ಟಿಯಾದ ಸೀತೆ ಅನುಭವಿಸಿದ ಒಬ್ಬಂಟಿತನಕ್ಕೂ, ಆಧುನಿಕ ಮಹಿಳೆಯಾದ ತಾನು 21ನೇ ಶತಮಾನದಲ್ಲಿ ಅನುಭವಿಸುತ್ತಿರುವ ನೋವಿಗೂ ಅಷ್ಟೇನೂ ವ್ಯತ್ಯಾಸವಿಲ್ಲ ಎನಿಸುತ್ತದೆ ನೀನಾಳಿಗೆ. “ನನ್ನನ್ನು ತಿರಸ್ಕರಿಸಿದ ತನ್ನ ಗಂಡನ ಬಗ್ಗೆ ನನಗಿನ್ನೂ ಇದ್ದ ಪ್ರೀತಿ, ಹಂಬಲ ಮತ್ತು ಆಶೆ ಸೀತೆಯ ಅನುಭವವೂ ಆಗಿತ್ತು. ಆಗ ರಾಮಾಯಣ ಕೇವಲ ಲಿಂಗಭೇದ ತೋರುವ ದೃಷ್ಟಾಂತ ಕತೆಯಾಗಲ್ಲದೆ, ಮನುಷ್ಯರ ನಡುವಿನ ಸಂಬಂಧಗಳು ಮತ್ತು ಹೃದಯಾಳದಲ್ಲಿರುವ ವೇದನೆಯ ಕತೆಯಂತೆ ಕಂಡಿತು. ಅದೇ ಹೊತ್ತಿಗೆ 1920ರಲ್ಲಿ ಬ್ಲೂಸ್ (ಹೆಚ್ಚಾಗಿ ದುಮ್ಮಾನಗಳ ಬಗೆಗಿನ ಹಾಡುಗಳ ಒಂದು ಸಂಗೀತ ಶೈಲಿ) ಕವನಗಳನ್ನು ಹಾಡಿದ್ದ ಆನೆಟ್ ಹಾನ್‍ಶಾ ಅವರ ಸಂಗೀತವನ್ನು ಕೇಳಿದೆ. ನನ್ನ ವೈಯಕ್ತಿಕ ದುಃಖ, ಸೀತಾಳ ಕಥನ ಮತ್ತು ಹಾನ್‍ಶಾಳ ಸಂಗೀತ, ಈ ಮೂರು ಒಟ್ಟಾಗಿ ಸಾಗಿದ್ದರಿಂದ ‘ಸೀತಾ ಸಿಂಗ್ಸ್ ದ ಬ್ಲೂ’ ಸಿನಿಮಾವನ್ನು ಮಾಡಿದೆ” ಎನ್ನುತ್ತಾಳೆ ನೀನಾ.

82 ನಿಮಿಷಗಳ ಈ ಅನಿಮೇಟೆಡ್ ಸಿನಿಮಾದಲ್ಲಿ ಸೀತೆಯನ್ನು ತಾನು ವಿಧೇಯಳನ್ನಾಗಿ ತೋರಿಸದೆ. ಉತ್ಸಾಹಿ, ದೃಢ ನಿರ್ಧಾರಗಳ ಮತ್ತು ಭಾವುಕಜೀವಿಯನ್ನಾಗಿ ತೋರಿಸಿದ್ದೇನೆ ಎಂದು ನೀನಾ ಹೇಳುತ್ತಾರಾದರೂ ನಮ್ಮ ದೇಶದಲ್ಲೇ ರಾಮಾಯಣದ ಅನೇಕ ವ್ಯಾಖ್ಯಾನಗಳಲ್ಲಿ ಸೀತೆ ಇದಕ್ಕಿಂತಲೂ ಹೆಚ್ಚು ಗಟ್ಟಿ ವ್ಯಕ್ತಿತ್ವದವಳಾಗಿ ಮೂಡಿಬಂದಿದ್ದಾಳೆ.
ಸಹಜವಾಗಿಯೇ ಇದೆಲ್ಲ ಕೆಲ ‘ರಾಮಭಕ್ತ’ರಾದ ಹಿಂದೂತ್ವವಾದಿಗಳನ್ನು ಕೆರಳಿಸಿದೆ. ವಾಲ್ಮೀಕಿಯ ಜಾನಕಿ ಮತ್ತು ತಮ್ಮ ಸುತ್ತಲೂ ಇರುವ ಸೀತೆಯ ದುಃಖ ಅವರಿಗೆ ಅರ್ಥವಾಗುವುದಾದರೂ ಹೇಗೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...