Homeಅಂಕಣಗಳುಭಾರತದ ಪತ್ರಕರ್ತರು ತುರ್ತಾಗಿ ಒಂದು ಸತ್ಯವನ್ನು ಅರ್ಥಮಾಡಿಕೊಳ್ಳಲೇಬೇಕಿದೆ ನಾವೀಗ ಕೆಳಗೆ ಕುಸಿದಿದ್ದೇವೆ

ಭಾರತದ ಪತ್ರಕರ್ತರು ತುರ್ತಾಗಿ ಒಂದು ಸತ್ಯವನ್ನು ಅರ್ಥಮಾಡಿಕೊಳ್ಳಲೇಬೇಕಿದೆ ನಾವೀಗ ಕೆಳಗೆ ಕುಸಿದಿದ್ದೇವೆ

- Advertisement -
- Advertisement -

ಸ್ವಾತಂತ್ರ್ಯಾ ನಂತರದಲ್ಲಿ ಈ ದೇಶ ಎಷ್ಟು ಗೊಂದಲ, ಗಲಿಬಿಲಿಗೆ ಈಡಾಗಲಿಕ್ಕೆ ಸಾಧ್ಯವೋ ಅದಕ್ಕೆಲ್ಲವೂ ಈಗ ಈಡಾಗುತ್ತಿದೆ. ಜನ ತಮ್ಮ ಸ್ವಂತಿಕೆಯನ್ನು ಕಳೆದುಕೊಂಡಿದ್ದಾರೆ, ತಮ್ಮ ಆದ್ಯತೆಗಳನ್ನು ಬುಡಮೇಲು ಮಾಡಿಕೊಂಡಿದ್ದಾರೆ. ಹಾಗಾಗಿ ಇಲ್ಲಿ ದುರಂತವೂ ವಿಜೃಂಭಿಸುತ್ತಿದೆ, ವೈಭವಿಸುತ್ತಿದೆ. ದೇಶವೊಂದರ ಸಾಗುವಿಕೆಯಲ್ಲಿ ಇಂಥಾ ಸನ್ನಿವೇಶಗಳು ಸಹಜವಿರಬಹುದು, ಆದರೆ ಭಾರತದ ಮಟ್ಟಿಗೆ ಆ ಸಹಜವನ್ನೂ ಅಸಹಜವಾಗಿ ಹೇರಲಾಗುತ್ತಿರೋದು ದುರಂತ. ಬಹುಶಃ ಇಂದಿರಾಗಾಂಧಿ ತುರ್ತು ಪರಿಸ್ಥಿತಿ ಹೇರಿದಾಗಲೂ ಈ ದೇಶಕ್ಕೆ ಒಂದು ಸ್ಪಷ್ಟತೆಯಿತ್ತು. ಆ ಸ್ಪಷ್ಟತೆಯಿಂದಲೇ ಜೆಪಿ ಚಳುವಳಿ ಹುಟ್ಟಿಬಂತು. ಆ ಸ್ಪಷ್ಟತೆಯಿಂದಲೇ ಹಲವು ಹತ್ತು ಕ್ರಾಂತಿಕಾರಿ ಯೋಜನೆಗಳ ಹೊರತಾಗಿಯೂ ಇಂದಿರಾ ಸೋತು ಮೂಲೆ ಸೇರಬೇಕಾಯ್ತು. ಅಂಥಾ ಸ್ಪಷ್ಟತೆಗೆ ಕಾರಣವಾದದ್ದರಲ್ಲಿ ಅಂದಿನ ಮಾಧ್ಯಮಗಳು ವೃತ್ತಿನಿಷ್ಠೆಗೆ ಕಟ್ಟುಬಿದ್ದದ್ದೂ ಒಂದು ಕಾರಣ. ಆದರೆ ಈಗ ಮಾಧ್ಯಮಗಳೇ ಸ್ಪಷ್ಟತೆಯನ್ನು ಕಳೆದುಕೊಂಡು ವೃತ್ತಿನಿಷ್ಠೆಯನ್ನು ಮಣ್ಣು ಪಾಲಾಗಿಸಿವೆ. ಪ್ರಜಾಪ್ರಭುತ್ವದ ನಾಲ್ಕನೇ ಸ್ತಂಭ ಎಂಬ ಹೆಗ್ಗಳಿಕೆಯ ಮಾಧ್ಯಮ ಪ್ರಜಾಪ್ರಭುತ್ವವನ್ನು ರಕ್ಷಿಸುವುದಿರಲಿ, ಸ್ವತಃ ತನ್ನನ್ನೇ ಕಾಪಾಡಿಕೊಳ್ಳಲಾರದಷ್ಟು ದುಸ್ಥಿತಿಗೆ ಬಂದು ತಲುಪಿದೆ. ಪತ್ರಕರ್ತರ ಮೇಲೆ ಹಲ್ಲೆಗಳು ಹೆಚ್ಚುತ್ತಿರುವುದೇ ಇದಕ್ಕೆ ಸಾಕ್ಷಿ. ತಮ್ಮ ಮೇಲಿನ ಹಲ್ಲೆಗಳನ್ನು ಪ್ರತಿಭಟಿಸಲಾರದಷ್ಟು ಪತ್ರಿಕೋದ್ಯಮ ಸೈದ್ಧಾಂತಿಕ ರಾಜಕಾರಣದ ಗುಲಾಮನಾಗಿರುವುದು ಈ ನೆಲದ ದುರಂತವನ್ನು ಇನ್ನಷ್ಟು ಇಮ್ಮಡಿಗೊಳಿಸಿದೆ. ಇತ್ತೀಚೆಗೆ ಬಿಡುಗಡೆಯಾದ ವರದಿಯೊಂದು ಅದನ್ನೇ ಒತ್ತಿಒತ್ತಿ ಹೇಳುತ್ತಿದೆ.

ಏಪ್ರಿಲ್ 2019 ರಲ್ಲಿ ರಿಪೋರ್ಟರ್ಸ್ ವಿತೌಟ್ ಬಾರ್ಡರ್ಸ್ (ಗಡಿರಹಿತ ಪತ್ರಕರ್ತರು) ಎನ್ನುವ ಅಂತರರಾಷ್ಟ್ರೀಯ ಸಂಸ್ಥೆಯು ತನ್ನ ವರದಿಯನ್ನು ಬಿಡುಗಡೆ ಮಾಡಿತು. ಈ ವರದಿಯಲ್ಲಿ ವಿಶ್ವದ 180 ದೇಶಗಳನ್ನು ಆಯಾ ದೇಶಗಳ ಅಭಿವ್ಯಕ್ತಿ ಸ್ವಾತಂತ್ರದ ಆಧಾರದ ಮೇಲೆ ಕ್ರಮಾಂಕಗಳನ್ನು ನೀಡಲಾಗಿದೆ. ಭಾರತವು ಆ 180 ದೇಶಗಳಲ್ಲಿ 140ನೇ ಸ್ಥಾನದಲ್ಲಿದೆ; ಪಾಕಿಸ್ತಾನಕ್ಕಿಂತ ಕೇವಲ ಎರಡು ಸೂಚ್ಯಾಂಕ ಮುಂದಿದೆ. ಕಳೆದ ಮೂರು ವರ್ಷಗಳಲ್ಲಿ ಎರಡು ಸ್ಥಾನ ಕೆಳಕ್ಕೆ ಕುಸಿದಿರುವುದು ನಿಜಕ್ಕೂ ನಾವು ತಲೆ ತಗ್ಗಿಸಬೇಕಾದ ಸಂಗತಿ.
ಈ ವರದಿಗನುಗುಣವಾಗಿ, ವಿಶ್ವಾದ್ಯಂತ ಪತ್ರಕರ್ತರ ವಿರುದ್ಧ ರಾಜಕೀಯ ಮುಖಂಡರು ಹೆಚ್ಚೆಚ್ಚು ದ್ವೇಷವನ್ನು ಕಾರುತ್ತಿದ್ದಾರೆ. ಹಾಗಾಗಿ ಪತ್ರಕರ್ತರು ಅಪಾಯದ ಮತ್ತು ಆತಂಕದ ವಾತಾವರಣದಲ್ಲಿ ಜೀವಿಸುವಂತಾಗಿದೆ. ಪತ್ರಕರ್ತರಿಗೆ ಸುರಕ್ಷಿತವಾಗಿರುವ ದೇಶಗಳ ಸಂಖ್ಯೆ ಕ್ಷೀಣಿಸಿದೆ ಹಾಗೂ ಮಾಧ್ಯಮದ ಹಿಡಿತವು ಸರ್ವಾಧಿಕಾರದ ಆಡಳಿತದ ಕೈಯಲ್ಲಿ ಹಸ್ತಾಂತರವಾಗುತ್ತಿದೆ.

ಏಷಿಯಾ ಪೆಸಿಫಿಕ್ ಪ್ರದೇಶದಲ್ಲಿ ನಿರಂಕುಶ ಆಳ್ವಿಕೆಯ ಪ್ರೊಪಗಾಂಡಾ, ಸೆನ್ಸರ್‍ಶಿಪ್, ಬೆದರಿಕೆ, ದೈಹಿಕ ಹಿಂಸೆ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಕಿರುಕುಳ ಹೆಚ್ಚುತ್ತಿದೆ. ಇದರೊಂದಿಗೆ ಸುಳ್ಳು ಸುದ್ದಿ ಮತ್ತು ತಪ್ಪು ಮಾಹಿತಿಯ ದೊಡ್ಡ ಮಟ್ಟದಲ್ಲಿ ಪ್ರಚಾರವೂ ಒಂದು ದೊಡ್ಡ ಸಮಸ್ಯೆಯಾಗಿ ಪರಿಣಮಿಸಿದೆ. ಅಫ್ಘಾನಿಸ್ತಾನ್ ಭಾರತ ಮತ್ತು ಪಾಕಿಸ್ತಾನದಲ್ಲಿ ಕೊಲೆಯಾದ ಪತ್ರಕರ್ತರ ಸಂಖ್ಯೆ ಹೆಚ್ಚಿದೆ. ಬೆದರಿಕೆಗಳು, ಅವಮಾನ ಮತ್ತು ಹಲ್ಲೆಗಳು ಅನೇಕ ದೇಶದ ಪತ್ರಕರ್ತರಿಗೆ ಮಾಮೂಲಾಗಿದೆ.

ಭಾರತದ ಪತ್ರಕರ್ತರು ಪೊಲೀಸ್‍ರಿಂದ ಹಿಂಸೆ ಮತ್ತು ಕಿರುಕುಳ ಅನುಭವಿಸುವುದಲ್ಲದೇ ರಾಜಕೀಯ ಬೆದರಿಕೆಗಳಿಗೂ ಒಳಗಾಗುತ್ತಿದ್ದಾರೆ ಎನ್ನುತ್ತಿದೆ ಆ ವರದಿ. 2018ರಲ್ಲಿ ಕನಿಷ್ಠ ಆರು ಭಾರತೀಯ ಪತ್ರಕರ್ತರ ಕೊಲೆಯಾಯಿತು, ಈ ಕೊಲೆಗಳು ಅವರ ವೃತ್ತಿಗೆ ಸಂಬಂಧಪಟ್ಟವಾಗಿದ್ದವು. ಈ ಕೊಲೆಗಳಿಂದ ಭಾರತೀಯ ಪತ್ರಕರ್ತರು ಎದುರಿಸುತ್ತಿರುವ ಅದರಲ್ಲೂ ವಿಶೇಷವಾಗಿ ಇಂಗ್ಲೀಷ್ ಹೊರತುಪಡಿಸಿ ಪ್ರಾದೇಶಿಕ ಭಾಷೆಗಳ ಪತ್ರಕರ್ತರು ಎದುರಿಸುತ್ತಿರುವ ಅಪಾಯವನ್ನು ತೋರಿಸುತ್ತಿವೆ. ವಿಪರ್ಯಾಸವೆಂದರೆ, ಪತ್ರಕರ್ತರನ್ನು ಟ್ರೋಲ್ ಮಾಡುವಂತಹ ವ್ಯಕ್ತಿಗಳ ಸೋಶಿಯಲ್ ಮೀಡಿಯಾ ಅಕೌಂಟ್‍ಗಳನ್ನು ಸ್ವತಃ ನಮ್ಮ ಪ್ರಧಾನಿಗಳೇ ಫಾಲೋ ಮಾಡುತ್ತಿದ್ದಾರೆ. ಇದರ ಪರಿಣಾಮವೆಂದರೆ 2019ರಿಂದೀಚೆಗೆ, ಅಂದರೆ ಲೋಕಸಭಾ ಚುನಾವಣೆಗೂ ಮುನ್ನ ಪತ್ರಕರ್ತರ ಮೇಲಿನ ದಾಳಿ ಹೆಚ್ಚಾಗಿದೆ.

ಸಾಮಾಜಿಕ ಜಾಲತಾಣಗಳಲ್ಲಿ ಬಿಜೆಪಿಯ ಹಿಂದುತ್ವದ ಸಿದ್ಧಾಂತಕ್ಕೆ ಒಪ್ಪದ ವಿಷಯಗಳ ಬಗ್ಗೆ ಬರೆಯುವ, ಮಾತನಾಡುವ ಧೈರ್ಯ ತೋರಿಸಿದ ಪತ್ರಕರ್ತರನ್ನು ಕೊಲೆ ಮಾಡುವ ಕರೆ ಕೊಟ್ಟು ಅವರ ವಿರುದ್ಧ ವ್ಯವಸ್ಥಿತವಾದ ದ್ವೇಷ ಪ್ರಚಾರವನ್ನು ಸಾಮಾಜಿಕ ಜಾಲತಾಣಗಳಲ್ಲಿ ಮಾಡಿದ್ದನ್ನು ಈ ವರದಿ ಎತ್ತಿಹಿಡಿದಿದೆ. ಅದರಲ್ಲೂ ಮಹಿಳಾ ಪತ್ರಕರ್ತರ ವಿರುದ್ಧದ ದ್ವೇಷ ಪ್ರಚಾರ ಅತ್ಯಂತ ಕೆಟ್ಟದಾಗಿತ್ತು. ಪೊಲೀಸ್ ವ್ಯವಸ್ಥೆ ಮತ್ತು ಸರಕಾರಗಳು ತಮ್ಮ ಸರಕಾರದ ಬಗ್ಗೆ ವಿಮರ್ಶಾತ್ಮಕವಾದ ಪತ್ರಕರ್ತರನ್ನು ಸುಮ್ಮನಾಗಿಸಲು ದೇಶದ್ರೋಹ ಮತ್ತು ಕ್ರಿಮಿನಲ್ ಮಾನನಷ್ಟದಂತಹ ಪುರಾತನ ಕಾಲದ ಕಾನೂನುಗಳನ್ನು ಬಳಸುತ್ತಿವೆ. ಮಾವೋವಾದಿಗಳ ಪ್ರಾಬಲ್ಯವಾಗಿರುವ ಪ್ರದೇಶಗಳಲ್ಲಿ ಮತ್ತು ಕಾಶ್ಮೀರದಿಂದ ಪತ್ರಕರ್ತರು ವರದಿ ಮಾಡುವುದೇ ದುಸ್ತರ ಕೆಲಸವಾಗಿದೆ. ಅನೇಕ ಸಲ ಸರಕಾರಗಳ ನಿರ್ದೇಶನದಂತೆ POTA ಮತ್ತು UAPA ದಂತಹ ಕಠೋರ ಕಾನೂನುಗಳ ಅಡಿಯಲ್ಲಿ ಪತ್ರಕರ್ತರು ಬಂಧನಕ್ಕೊಳಗಾಗುವುದೂ ಭಾರತದಲ್ಲಿ ಕಂಡುಬಂದಿದೆ.

ರಾಜಕೀಯ ಒತ್ತಡದಲ್ಲಿ ಪತ್ರಕರ್ತರ ಮೇಲೆ ದಾಳಿಗಳು ಮತ್ತು ಬೇಕಾಬಿಟ್ಟಿಯಾಗಿ ಆಗುವ ಬಂಧನಗಳ ಬಗ್ಗೆ ಈ ವರದಿ ಪ್ರಕಟವಾದ ನಂತರ ಚರ್ಚೆಯಾಗುತ್ತಿದೆ. ಆತಂಕದ ವಾತಾವರಣದಿಂದ ಬಹುತೇಕ ಮಾಧ್ಯಮ ಸಂಸ್ಥೆಗಳು ಸರಕಾರದ ಮುಖವಾಣಿಯಾಗಿ ಬದಲಾಗಿವೆ. ಸರಕಾರವನ್ನು, ಅದರ ನೀತಿಗಳನ್ನು ಪ್ರಶ್ನಿಸುವ, ಹಗರಣಗಳನ್ನು ಬಯಲಿಗೆಳೆಯುವ ಹಾಗೂ ಜನರ ಸಮಸ್ಯೆಗಳನ್ನು ಎತ್ತಿಹಿಡಿಯುವ ಪತ್ರಕರ್ತರನ್ನು ದೇಶದ್ರೋಹಿಗಳು ಎಂದು ಬಿಂಬಿಸಲಾಗುತ್ತದೆ ಹಾಗೂ ಕಿರುಕುಳಕ್ಕೆ ಗುರಿಯಾಗುತ್ತಿದ್ದಾರೆ. ಇಂತಹ ಅನೇಕರಿಗೆ ಕೊಲೆ ಬೆದರಿಕೆಗಳೂ ಸಾಮಾನ್ಯವಾಗಿವೆ.

ಇಂತಹ ಆತಂಕದ ಮತ್ತು ದಾಸ್ಯಮನೋಭಾವದ ವಾತಾವರಣದಲ್ಲಿ ಜನರ ಸಮಸ್ಯೆಗಳನ್ನು ಎತ್ತಿಹಿಡಿಯುವವರು ಯಾರು? ಭಾರತೀಯ ಸಂವಿಧಾನವು ಅಭಿವ್ಯಕ್ತಿ ಸ್ವಾತಂತ್ರದ ಹಕ್ಕನ್ನು ನೀಡುತ್ತದೆ ಹಾಗೂ ಸಂವಿಧಾನದ 21ನೇ ಪರಿಚ್ಛೇದದಲ್ಲಿ ಜೀವ ಮತ್ತು ವೈಯಕ್ತಿಕ ಸ್ವಾತಂತ್ರದ ಹಕ್ಕನ್ನು ನೀಡಲಾಗಿದೆ. ಆದರೆ ಪತ್ರಕರ್ತರ ರಕ್ಷಣೆಗಾಗಿ ಯಾವ ಕಾನೂನು ಕಾಣುತ್ತಿಲ್ಲ.
ಪ್ರಜಾಪ್ರಭುತ್ವದ ಮುಖ್ಯ ಆಧಾರಸ್ತಂಭ ಮುಕ್ತ ಪತ್ರಿಕೋದ್ಯಮ ಹಾಗೂ ಈ ಆಧಾರಸ್ಥಂಭ ಕಳಚಿಬೀಳದಂತೆ ನೋಡಿಕೊಳ್ಳುವುದು ನಾಗರಿಕರ ಕರ್ತವ್ಯವಾಗಿದೆ. ನಿಜವಾದ ಪತ್ರಕರ್ತರ ಮತ್ತು ಪತ್ರಿಕೋದ್ಯಮದ ವಿಷಯವನ್ನು ಎತ್ತಿಹಿಡಿಯಬೇಕಾದ ಸಮಯ ಬಂದಿದೆ.
ಒಂದು ಮಾತು ಹೇಳಲೇಬೇಕು, ಈ ಎಲ್ಲಾ ಆತಂಕ ಎದುರಿಸುತ್ತಿರೋದು, ಹಲ್ಲೆಗಳನ್ನು ಅನುಭವಿಸುತ್ತಿರೋದು ಜನರ ಪರವಾಗಿ ದನಿ ಎತ್ತುತ್ತಿರುವ, ಆಡಳಿತಗಾರರನ್ನು ಪ್ರಶ್ನಿಸುತ್ತಿರುವ ಪತ್ರಿಕೋದ್ಯಮ. ಬಲಿಷ್ಠ ಪ್ರಭುತ್ವದೊಂದಿಗೆ ರಾಜಿ ಮಾಡಿಕೊಂಡ ಪತ್ರಿಕೋದ್ಯಮ ಬೆಚ್ಚಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...