Homeಕರ್ನಾಟಕರಾಯಚೂರು: ದಲಿತರ ಮೇಲೆ ಮಾರಣಾಂತಿಕ ಹಲ್ಲೆ; 36 ಮಂದಿ ಸವರ್ಣೀಯರ ವಿರುದ್ಧ ಎಫ್‌ಐಆರ್‌‌

ರಾಯಚೂರು: ದಲಿತರ ಮೇಲೆ ಮಾರಣಾಂತಿಕ ಹಲ್ಲೆ; 36 ಮಂದಿ ಸವರ್ಣೀಯರ ವಿರುದ್ಧ ಎಫ್‌ಐಆರ್‌‌

- Advertisement -
- Advertisement -

ಕ್ಷುಲ್ಲಕ ಕಾರಣಕ್ಕೆ ದಲಿತರ ಕೇರಿಗೆ ನುಗ್ಗಿದ ಮೇಲ್ವರ್ಗದ ಜನರ ಗುಂಪು ಕಬ್ಬಿಣದ ರಾಡು, ದೊಣ್ಣೆ, ಕಟ್ಟಿಗೆಗಳಿಂದ ದಲಿತರ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿರುವ ಘಟನೆ ರಾಯಚೂರು ಜಿಲ್ಲೆಯ ಮುದಗಲ್ ಪೋಲಿಸ್ ಠಾಣೆ ವ್ಯಾಪ್ತಿಗೆ ಬರುವ ರಾಮತ್ನಾಳ ಗ್ರಾಮದಲ್ಲಿ ನಡೆದಿದೆ.

ಮಂಗಳವಾರ ಬೆಳಗ್ಗೆ ದಲಿತರು ಕೆಲಸಕ್ಕೆ ಹೊರಟ ಸಮಯದಲ್ಲಿ ದಲಿತರ ಕೇರಿಗೆ ನುಗ್ಗಿದ ಲಿಂಗಾಯತ ಸಮುದಾಯದ ಜನರು ಮಹಿಳೆಯರು, ನನ್ನ ವೃದ್ಧ ತಂದೆಯ ಮೇಲೆ, ಮಹಿಳೆಯರ ಮೇಲೂ ಮಾರಕಾಸ್ತ್ರಗಳಿಂದ ದಾಳಿ ಮಾಡಿದ್ದಾರೆ. ಜಾತಿ ನಿಂದನೆ ಮಾಡಿ ಜೀವ ಬೆದರಿಕೆ ಹಾಕಿದ್ದಾರೆ ಎಂದು ಸಂತ್ರಸ್ತ ಪರಸಪ್ಪ, ಮುದಗಲ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಲಿಂಗಾಯತ ಸಮುದಾಯಕ್ಕೆ ಸೇರಿದ 36 ಮಂದಿಯ ವಿರುದ್ಧ ದೂರು ದಾಖಲಾಗಿದೆ. ಸೆಕ್ಷನ್ 143, 147, 148, 448, 323, 307, 324, 354, 504, 506 ಸೇರಿದಂತೆ ಎಸ್‌ಸಿ ಎಸ್‌ಟಿ ತಿದ್ದುಪಡಿ ಕಾಯ್ದೆ- 2015ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಹಲ್ಲೆಯ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ.

ಇದನ್ನೂ ಓದಿ: Writing With Fire: ದಲಿತ ಹೆಣ್ಣುಮಕ್ಕಳೇ ಕಟ್ಟಿದ ’ಖಬರ್ ಲಹರಿಯಾ’ ಕಥೆ

“ಫೆ.28 ರಂದು ಸಂಜೆ ದೂರುದಾರರ ಕೇರಿಯ ಮುಂದಿನ ಚಿಕ್ಕ ಸಿಸಿ ರಸ್ತೆಯಲ್ಲಿ ವಿಪರೀತ ವೇಗದಲ್ಲಿ ಹಾಡುಗಳನ್ನು ಜೋರಾಗಿ ಹಾಕಿಕೊಂಡು ಟ್ಯ್ರಾಕ್ಟರ್‌ಗಳಲ್ಲಿ ಆರೋಪಿಗಳು ಹೊಗುತ್ತಿದ್ದರು. ರಸ್ತೆಯಲ್ಲಿ ಮಕ್ಕಳಿರುತ್ತಾರೆ ಸ್ಪಲ್ಪ ನಿಧಾನಕ್ಕೆ ಟ್ಯ್ರಾಕ್ಟರ್‌ ಚಲಾಯಿಸಿ ಎಂದು ದೂರುದಾರರು ಹೇಳಿದಕ್ಕೆ ಕೋಪಗೊಂಡು ಅವಾಚ್ಯ ಶಬ್ಧಗಳಿಂದ ನಿಂದಿಸಿ, ಬೆದರಿಕೆ ಹಾಕಿದ್ದಾರೆ. ಇಷ್ಟಕ್ಕೆ ಸುಮ್ಮನಾಗದೆ ಬೆಳಗ್ಗೆ ಗುಂಪು ಕಟ್ಟಿಕೊಂಡು ಬಂದು ಕ್ಟಿಗೆ, ಕಬ್ಬಿಣದ ರಾಡು, ದೊಣ್ಣೆಗಳಿಂದ ಹಲ್ಲೆ ನಡೆಸಿದ್ದಾರೆ. ರಕ್ಷಣೆಗೆ ಬಂದವರ ಮೇಲೂ ಹಲ್ಲೆ ಮಾಡಲಾಗಿದೆ. ದೂರುದಾರರ ತಂದೆ, ತಾಯಿ, ತಂಗಿಯರ ಮೇಲೂ ಹಲ್ಲೆ ನಡೆಸಲಾಗಿದೆ” ಎಂದು ಎಫ್‌ಐಆರ್‌ನಲ್ಲಿ ತಿಳಿಸಲಾಗಿದೆ.

ಕೊಲೆ ಮಾಡಲು ಯತ್ನಿಸಿ, ಜಾತಿ ನಿಂದನೆ ಮಾಡಿ, ಜೀವ ಬೆದರಿಕೆ ಹಾಕಿದ್ದಾರೆ. ಇವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಮತ್ತು ನಮಗೆ ರಕ್ಷಣೆ ನೀಡಬೇಕು ಎಂದು ದೂರುದಾರ ಪರಸಪ್ಪ ಮನವಿ ಮಾಡಿದ್ದರು.

ಘಟನೆಯಲ್ಲಿ ಒಬ್ಬಾಕೆಯ ಕೈಮುರಿದಿದ್ದು, ಇನ್ನೊಬ್ಬರ ತಲೆಗೆ ಆರು ಹೊಲಿಗೆ ಹಾಕಲಾಗಿದೆ. ಗಾಯಾಳುಗಳಿಗೆ ಲಿಂಗಸ್ಗೂರು ಆಸ್ಪತ್ರೆಗೆ ದಾಖಲಿಸಿದ್ದಾರೆ.


ಇದನ್ನೂ ಓದಿ: ಅರಕಲಗೂಡು: ದಲಿತರು ಕಬ್ಬಿನ ಹಾಲಿನ ಅಂಗಡಿ ಇಟ್ಟಿದ್ದಕ್ಕೆ ಸವರ್ಣಿಯರಿಂದ ಹಲ್ಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...