Homeಮುಖಪುಟನಟಿ ರಮ್ಯಾ, ನಟ ಕಿರಣ್ ಶ್ರೀನಿವಾಸ್ ಸೇರಿ ಜೊತೆ ನಿಂತ ಎಲ್ಲರಿಗೂ ಧನ್ಯವಾದಗಳು: ನಟ ಚೇತನ್

ನಟಿ ರಮ್ಯಾ, ನಟ ಕಿರಣ್ ಶ್ರೀನಿವಾಸ್ ಸೇರಿ ಜೊತೆ ನಿಂತ ಎಲ್ಲರಿಗೂ ಧನ್ಯವಾದಗಳು: ನಟ ಚೇತನ್

ಪೊಲಿಸರು ನನ್ನ ಫೋನ್ ತೆಗೆದುಕೊಂಡ 12 ದಿನ ಆದರೂ ಫೋನ್ ವಾಪಸ್ ಕೊಟ್ಟಿಲ್ಲ. ನಾನು ಸಾಮಾಜಿಕ ಜಾಲತಾಣಗಳನ್ನು ಬಳಸಲು ಆಗುತ್ತಿಲ್ಲ.

- Advertisement -
- Advertisement -

ಸಿನಿಮಾ ರಂಗದ ಯಾರೂ ಮಾತನಾಡದಿದ್ದಾಗ ಅನ್ಯಾಯದ ವಿರುದ್ಧ ದನಿಯೆತ್ತಿದ ನಟಿ ರಮ್ಯಾ, ವಿಡಿಯೊ ಮಾಡಿದ ನಟ ಕಿರಣ್ ಶ್ರೀನಿವಾಸ್ ಸೇರಿ ನನ್ನ ಬೆಂಬಲಕ್ಕೆ ನಿಂತ ಎಲ್ಲರಿಗೂ ಧನ್ಯವಾದಗಳು ಎಂದು ನಟ ಚೇತನ್ ತಿಳಿಸಿದ್ದಾರೆ.

ಜೈಲಿನಿಂದ ಜಾಮೀನನ ಮೇಲೆ ಬಿಡುಗಡೆಯಾದ ಬಳಿಕ ಮೊದಲ ಬಾರಿಗೆ ಫೇಸ್‌ಬುಕ್‌ ಲೈವ್‌ನಲ್ಲಿ ಮಾತನಾಡಿದ ಅವರು, “ಒಂದು ಟ್ವೀಟ್ ಕಾರಣಕ್ಕೆ ನನ್ನನ್ನು ಸುಮಾರು ಒಂದು ವಾರಗಳ ಕಾಲ ಜೈಲಿನಲ್ಲಿಟ್ಟಿದ್ದರು. ಆ ಟ್ವೀಟ್‌ನಲ್ಲಿ ಯಾರನ್ನೂ ಅವಹೇಳನ ಮಾಡಿರಲಿಲ್ಲ, ಅದರಲ್ಲಿ ಅವಾಚ್ಯ ಶಬ್ದ ಇರಲಿಲ್ಲ, ಯಾರನ್ನೂ ಪ್ರಚೋದಿಸಿರಲಿಲ್ಲ. ಆದರೂ ಆ ಒಂದು ಟ್ವೀಟ್‌ ಇಟ್ಟುಕೊಂಡು ಕೋಮು ಪ್ರಚೋದನೆ ಮಾಡಿದ್ದೇನೆ ಎಂದು ಆರೋಪ ಹೊರಿಸಿ 504,  505(2) ಸೆಕ್ಷನ್‌ಗಳ ಅಡಿಯಲ್ಲಿ ಬಂಧಿಸಿದ್ದರು” ಎಂದಿದ್ದಾರೆ.

ಕಾಣದ ಕೈಗಳು ಬಂಧನದ ಹಿಂದಿವೆ. ಅಕ್ರಮವಾಗಿ ನನ್ನನ್ನು ಬಂಧಿಸಿ 8-10 ಗಂಟೆಗಳ ಕಾಲ ವೈಯಾಲಿಕಾವಲ್ ಪೊಲೀಸ್ ಠಾಣೆಯಲ್ಲಿ ಇಟ್ಟಿದ್ದರು. ಯಾವ ಕೇಸ್, ಯಾರು ದೂರುದಾರರು ಎಂದು ಸಾಕಷ್ಟು ಕೇಳಿದರೂ ನನಗೆ ಮಾಹಿತಿ ಕೊಟ್ಟಿರಲಿಲ್ಲ. ದೂರು ಕೊಟ್ಟವರು ರವಿ ಎಂಬ ವ್ಯಕ್ತಿ ಮಾತ್ರವಿಲ್ಲ ಹಲವರಿದ್ದಾರೆ ಎಂಬುದು ಗೊತ್ತಾಯಿತು. ಈ ಪ್ರಕರಣದಲ್ಲಿ ಇನ್ಸ್ ಪೆಕ್ಟರ್ ರವಿ ಕೂಡ ಬಲಿಪಶು ಎಂದು ಅವರು ತಿಳಿಸಿದ್ದಾರೆ.

ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗ ಯಾರೂ ಕೂಡ ಪ್ರಶ್ನಾತೀತರಲ್ಲ. ಪ್ರಶ್ನೆ ಮಾಡುವುದು ನಮ್ಮ ಹಕ್ಕು ಮಾತ್ರವಲ್ಲ ಕರ್ತವ್ಯ ಕೂಡ. ಈ ಬಂಧನದಿಂದ ನನಗೆ ಬೇಸರವಾಗಿಲ್ಲ, ಬದಲಿಗೆ ಹೋರಾಟ ಮಾರ್ಗದಲ್ಲಿ ಮತ್ತಷ್ಟು ವಿಶ್ವಾಸ ಬಂದಿದೆ. ನಮ್ಮ ವಿಚಾರದಲ್ಲಿ ಸ್ಪಷ್ಟತೆ, ಅಪಾರ ಶಕ್ತಿ ಮತ್ತು ಗಟ್ಟಿತನ ಇದೆ. ಹಾಗಾಗಿ ನಮ್ಮ ಸತ್ಯ ಕಂಡರೆ ಅವರಿಗೆ ಭಯ. ಅದಕ್ಕೆ ನನ್ನನ್ನು ಬಂಧಿಸಿದ್ದು ಎಂದು ಚೇತನ್ ಹೇಳಿದರು.

ಪುರು‍ಷಪ್ರಧಾನ ವ್ಯವಸ್ಥೆಯಿಂದ ಮಹಿಳೆಯರಿಗೆ ಆಗಿರುವ ಅನ್ಯಾಯ, ಶೂದ್ರರಿಗೆ ಆಗಿರುವ ಅನ್ಯಾಯ, ಬಂಡವಾಳಶಾಹಿಯಿಂದ ಬಡಜನರಿಗೆ ಆಗಿರುವ ಅನ್ಯಾಯ ಮತ್ತು ಕೋಮುವಾದ, ಅತಿ ಬ್ರಾಹ್ಮಣ್ಯ ಬಂದಿರುವುದರಿಂದ ಅಲ್ಪಸಂಖ್ಯಾತರಿಗೆ ಆಗುತ್ತಿರುವ ಅನ್ಯಾಯದ ವಿರುದ್ಧ ಹೋರಾಟ ಮುಂದುವರೆಸೋಣ. ಯಾವುದೇ ಕಾರಣಕ್ಕೆ ಕುಗ್ಗುವುದು ಬೇಡ ಎಂದರು.

ಜೈಲಿನಲ್ಲಿ ಎಸ್‌ಸಿ, ಎಸ್‌ಟಿ ಮತ್ತು ಅಲ್ಪಸಂಖ್ಯಾತರರೆ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಸ್ಥಾಪಿತ ಶಕ್ತಿಗಳು ಅವರನ್ನು ಗುರಿ ಮಾಡಿದ್ದಾರೆ. ಅವರಿಗೆ ವಕೀಲರು ಸಿಗುತ್ತಿಲ್ಲ. ನಾನು ಶ್ರೀಮಂತ ಕುಟುಂಬದಿಂದ, ಪ್ರಭಾವಿ ಜಾತಿಯಿಂದ ಮತ್ತು ಚಿತ್ರರಂಗದಿಂದ ಬಂದಿದ್ದೇನೆ. ನನ್ನ ಮೇಲೆಯೇ ಸುಳ್ಳು ಪ್ರಕರಣ ದಾಖಲಿಸಿ ಜೈಲಿಗೆ ಹಾಕಿದರೆ ಇನ್ನು ಜನಸಾಮಾನ್ಯರನ್ನು ಈ ವ್ಯವಸ್ಥೆ ಎಷ್ಟು ಕೆಟ್ಟದಾಗಿ ನಡೆಸಿಕೊಳ್ಳಬಹುದು ಯೋಚಿಸಿ ಎಂದು ಚೇತನ್ ಹೇಳಿದರು.

ನಾನು ಜೈಲಿನಲ್ಲಿ ಅಂಬೇಡ್ಕರ್‌ರವರ ಅನಿಲೇಶನ್ ಆಫ್ ಕಾಸ್ಟ್ ಮತ್ತು ಹು ಆರ್ ಶೂದ್ರಾಶ್ ಎಂಬ ಕೃತಿಗಳನ್ನು ಓದಿದೆ. ವಕೀಲ ಜಗದೀಶ್‌ರವರನ್ನು ಭೇಟಿ ಮಾಡಿದೆ. ಜಗದೀಶ್ ರವರು ಕುಗ್ಗಿಲ್ಲ.. ಅವರ ಭ್ರಷ್ಟಾಚಾರದ ವಿರುದ್ಧದ ಹೋರಾಟಕ್ಕೆ ಬೆಂಬಲ ನೀಡುವುದಾಗಿ ತಿಳಿಸಿದ್ದೇನೆ.

ಪೆರಿಯಾರ್‌ರವರನ್ನು 80 ಬಾರಿ ಜೈಲಿಗೆ ಹಾಕಲಾಗಿತ್ತು. ಜೈಲು ಎಂದರೆ ನನಗೆ ಭಯವಿಲ್ಲ. ನಾನು ಸತ್ಯಕ್ಕಾಗಿ ಮತ್ತೆ ಜೈಲಿಗೆ ಹೋಗಲು ಸಿದ್ದನಿದ್ದೇನೆ. ನಾವು ಯಾವುದೇ ಜಾತಿ, ಮತ, ಭಾಷೆಯ ವಿರುದ್ಧ ಇಲ್ಲ. ನಾವು ಅಸಮಾನತೆಯ ವಿರುದ್ಧ ಇದ್ದೇವೆ. ಬ್ರಾಹ್ಮಣ್ಯ ಎನ್ನುವುದು ಒಂದು ಮನಸ್ಥಿತಿ. ಎಲ್ಲಾ ಬ್ರಾಹ್ಮಣ್ಯರು ಸವಲತ್ತು ಪಡೆದಿರಬಹುದು. ಆದರೆ ಎಲ್ಲರೂ ಬ್ರಾಹ್ಮಣ್ಯ ಅನುಸರಿಸುವುದಿಲ್ಲ. ಅವರು ಹುಟ್ಟಿನಿಂದಲೇ ಸವಲತ್ತು ಪಡೆದಿರುವುದು ನಿಜ. ಆದರೆ ಮುಂದಕ್ಕೆ ನಾನು ಸಮಾಜಕ್ಕೆ ಜಾಸ್ತಿ ಕೊಡಬೇಕು, ಇಷ್ಟು ವಂಚಿತರಾದವರು ಜಾಸ್ತಿ ಪಡೆಯಬೇಕು. ಹಾಗಾಗಿ ನಮ್ಮ ಹೋರಾಟ ಬ್ರಾಹ್ಮಣ್ಯದ ವಿರುದ್ಧವಿರುತ್ತದೆ ಎಂದರು.

ಒಂದು ಟ್ವೀಟ್ ಗಾಗಿ ನನ್ನನ್ನು ಉದ್ದೇಶಪೂರ್ವಕವಾಗಿ ಬಂಧಿಸಿದ್ದೀರಿ. ಆದರೆ ಕೋಟ್ಯಾಂತರ ಜನ ಟ್ವೀಟ್ ಮಾಡಿದರೆ ಅವರನ್ನು ಜೈಲಿಗೆ ಹಾಕುತ್ತೀರಾ? ಭ್ರಷ್ಟಾಚಾರಿಗಳು, ಕ್ರಿಮಿನಲ್‌ಗಳು ವಿಧಾನಸೌಧದಲ್ಲಿದ್ದಾರೆ. ಅವರನ್ನು ಮುಟ್ಟುವ ಧೈರ್ಯ ಇಲ್ಲ. ನಮ್ಮನ್ನು ಮಾತ್ರ ಬಂಧಿಸುತ್ತೀರಿ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಫೆಬ್ರವರಿ 19 ರಂದು ನಾವು ಬೆಂಗಳೂರಿನಲ್ಲಿ ನೀಲಿ ಸಾಗರ ನಿರ್ಮಿಸಿದ್ದೇವೆ. ಹಾಗಾಗಿ ಪ್ರಭುತ್ವ ಹೆದರಿದೆ. ಆ ಹೋರಾಟವನ್ನು ಮುಖ್ಯವಾಹಿನಿ ಮಾಧ್ಯಮಗಳು ಪ್ರಸಾರ ಮಾಡಲಿಲ್ಲ. ಹಾಗಾಗಿ ನಾವು ಸೋಷಿಯಲ್ ಮೀಡಿಯಾ ಮಾತ್ರವಲ್ಲದೆ ಪರ್ಯಾಯ ಮಾಧ್ಯಮ ಕಟ್ಟೋಣ ಎಂದರು.

ಪೊಲಿಸರು ನನ್ನ ಫೋನ್ ತೆಗೆದುಕೊಂಡ 12 ದಿನ ಆದರೂ ಫೋನ್ ವಾಪಸ್ ಕೊಟ್ಟಿಲ್ಲ. ನಾನು ಸಾಮಾಜಿಕ ಜಾಲತಾಣಗಳನ್ನು ಬಳಸಲು ಆಗುತ್ತಿಲ್ಲ. ಬೇರೆಯವರ ಫೋನ್‌ನಲ್ಲಿ ಲಾಗಿನ್ ಆಗಿದ್ದೇನೆ ಎಂದರು.

ಶಾಂತಪ್ಪ ಎಂಬ ಗಾಯಕರು ಡಯಾಲಿಸಿಸ್ ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಸುಳ್ಳು ಪ್ರಕರಣದಲ್ಲಿ ಅವರನ್ನು ಸಿಕ್ಕಿಸಲಾಗಿದೆ. 10 ವರ್ಷದಿಂದ ಅವರು ಜೈಲಿನಲ್ಲಿದ್ದಾರೆ. ಒಳ್ಳೆಯ ಗಾಯಕರಾದ ಅವರನ್ನು ಹೊರಗೆ ತರಲು ಪ್ರಯತ್ನ ಮಾಡುತ್ತೇನೆ. ಈ ಕುರಿತು ಹಂಸಲೇಖ ಸರ್ ಜೊತೆ ಮಾತಾಡುತ್ತೇನೆ ಎಂದರು.

ಅವರ ಫೇಸ್‌ಬುಲ್ ಲೈವ್ ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ


ಇದನ್ನೂ ಓದಿ: ನಾಗರಾಜ್‌ ಮಂಜುಳೆಯ ‘ಝುಂಡ್‌’: ಕ್ರೀಡಾ ಜಗತ್ತಿನ ‘ಅಸ್ಪೃಶ್ಯ ಭಾರತ ದರ್ಶನ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....