Homeಮುಖಪುಟನಟಿ ರಮ್ಯಾ, ನಟ ಕಿರಣ್ ಶ್ರೀನಿವಾಸ್ ಸೇರಿ ಜೊತೆ ನಿಂತ ಎಲ್ಲರಿಗೂ ಧನ್ಯವಾದಗಳು: ನಟ ಚೇತನ್

ನಟಿ ರಮ್ಯಾ, ನಟ ಕಿರಣ್ ಶ್ರೀನಿವಾಸ್ ಸೇರಿ ಜೊತೆ ನಿಂತ ಎಲ್ಲರಿಗೂ ಧನ್ಯವಾದಗಳು: ನಟ ಚೇತನ್

ಪೊಲಿಸರು ನನ್ನ ಫೋನ್ ತೆಗೆದುಕೊಂಡ 12 ದಿನ ಆದರೂ ಫೋನ್ ವಾಪಸ್ ಕೊಟ್ಟಿಲ್ಲ. ನಾನು ಸಾಮಾಜಿಕ ಜಾಲತಾಣಗಳನ್ನು ಬಳಸಲು ಆಗುತ್ತಿಲ್ಲ.

- Advertisement -
- Advertisement -

ಸಿನಿಮಾ ರಂಗದ ಯಾರೂ ಮಾತನಾಡದಿದ್ದಾಗ ಅನ್ಯಾಯದ ವಿರುದ್ಧ ದನಿಯೆತ್ತಿದ ನಟಿ ರಮ್ಯಾ, ವಿಡಿಯೊ ಮಾಡಿದ ನಟ ಕಿರಣ್ ಶ್ರೀನಿವಾಸ್ ಸೇರಿ ನನ್ನ ಬೆಂಬಲಕ್ಕೆ ನಿಂತ ಎಲ್ಲರಿಗೂ ಧನ್ಯವಾದಗಳು ಎಂದು ನಟ ಚೇತನ್ ತಿಳಿಸಿದ್ದಾರೆ.

ಜೈಲಿನಿಂದ ಜಾಮೀನನ ಮೇಲೆ ಬಿಡುಗಡೆಯಾದ ಬಳಿಕ ಮೊದಲ ಬಾರಿಗೆ ಫೇಸ್‌ಬುಕ್‌ ಲೈವ್‌ನಲ್ಲಿ ಮಾತನಾಡಿದ ಅವರು, “ಒಂದು ಟ್ವೀಟ್ ಕಾರಣಕ್ಕೆ ನನ್ನನ್ನು ಸುಮಾರು ಒಂದು ವಾರಗಳ ಕಾಲ ಜೈಲಿನಲ್ಲಿಟ್ಟಿದ್ದರು. ಆ ಟ್ವೀಟ್‌ನಲ್ಲಿ ಯಾರನ್ನೂ ಅವಹೇಳನ ಮಾಡಿರಲಿಲ್ಲ, ಅದರಲ್ಲಿ ಅವಾಚ್ಯ ಶಬ್ದ ಇರಲಿಲ್ಲ, ಯಾರನ್ನೂ ಪ್ರಚೋದಿಸಿರಲಿಲ್ಲ. ಆದರೂ ಆ ಒಂದು ಟ್ವೀಟ್‌ ಇಟ್ಟುಕೊಂಡು ಕೋಮು ಪ್ರಚೋದನೆ ಮಾಡಿದ್ದೇನೆ ಎಂದು ಆರೋಪ ಹೊರಿಸಿ 504,  505(2) ಸೆಕ್ಷನ್‌ಗಳ ಅಡಿಯಲ್ಲಿ ಬಂಧಿಸಿದ್ದರು” ಎಂದಿದ್ದಾರೆ.

ಕಾಣದ ಕೈಗಳು ಬಂಧನದ ಹಿಂದಿವೆ. ಅಕ್ರಮವಾಗಿ ನನ್ನನ್ನು ಬಂಧಿಸಿ 8-10 ಗಂಟೆಗಳ ಕಾಲ ವೈಯಾಲಿಕಾವಲ್ ಪೊಲೀಸ್ ಠಾಣೆಯಲ್ಲಿ ಇಟ್ಟಿದ್ದರು. ಯಾವ ಕೇಸ್, ಯಾರು ದೂರುದಾರರು ಎಂದು ಸಾಕಷ್ಟು ಕೇಳಿದರೂ ನನಗೆ ಮಾಹಿತಿ ಕೊಟ್ಟಿರಲಿಲ್ಲ. ದೂರು ಕೊಟ್ಟವರು ರವಿ ಎಂಬ ವ್ಯಕ್ತಿ ಮಾತ್ರವಿಲ್ಲ ಹಲವರಿದ್ದಾರೆ ಎಂಬುದು ಗೊತ್ತಾಯಿತು. ಈ ಪ್ರಕರಣದಲ್ಲಿ ಇನ್ಸ್ ಪೆಕ್ಟರ್ ರವಿ ಕೂಡ ಬಲಿಪಶು ಎಂದು ಅವರು ತಿಳಿಸಿದ್ದಾರೆ.

ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗ ಯಾರೂ ಕೂಡ ಪ್ರಶ್ನಾತೀತರಲ್ಲ. ಪ್ರಶ್ನೆ ಮಾಡುವುದು ನಮ್ಮ ಹಕ್ಕು ಮಾತ್ರವಲ್ಲ ಕರ್ತವ್ಯ ಕೂಡ. ಈ ಬಂಧನದಿಂದ ನನಗೆ ಬೇಸರವಾಗಿಲ್ಲ, ಬದಲಿಗೆ ಹೋರಾಟ ಮಾರ್ಗದಲ್ಲಿ ಮತ್ತಷ್ಟು ವಿಶ್ವಾಸ ಬಂದಿದೆ. ನಮ್ಮ ವಿಚಾರದಲ್ಲಿ ಸ್ಪಷ್ಟತೆ, ಅಪಾರ ಶಕ್ತಿ ಮತ್ತು ಗಟ್ಟಿತನ ಇದೆ. ಹಾಗಾಗಿ ನಮ್ಮ ಸತ್ಯ ಕಂಡರೆ ಅವರಿಗೆ ಭಯ. ಅದಕ್ಕೆ ನನ್ನನ್ನು ಬಂಧಿಸಿದ್ದು ಎಂದು ಚೇತನ್ ಹೇಳಿದರು.

ಪುರು‍ಷಪ್ರಧಾನ ವ್ಯವಸ್ಥೆಯಿಂದ ಮಹಿಳೆಯರಿಗೆ ಆಗಿರುವ ಅನ್ಯಾಯ, ಶೂದ್ರರಿಗೆ ಆಗಿರುವ ಅನ್ಯಾಯ, ಬಂಡವಾಳಶಾಹಿಯಿಂದ ಬಡಜನರಿಗೆ ಆಗಿರುವ ಅನ್ಯಾಯ ಮತ್ತು ಕೋಮುವಾದ, ಅತಿ ಬ್ರಾಹ್ಮಣ್ಯ ಬಂದಿರುವುದರಿಂದ ಅಲ್ಪಸಂಖ್ಯಾತರಿಗೆ ಆಗುತ್ತಿರುವ ಅನ್ಯಾಯದ ವಿರುದ್ಧ ಹೋರಾಟ ಮುಂದುವರೆಸೋಣ. ಯಾವುದೇ ಕಾರಣಕ್ಕೆ ಕುಗ್ಗುವುದು ಬೇಡ ಎಂದರು.

ಜೈಲಿನಲ್ಲಿ ಎಸ್‌ಸಿ, ಎಸ್‌ಟಿ ಮತ್ತು ಅಲ್ಪಸಂಖ್ಯಾತರರೆ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಸ್ಥಾಪಿತ ಶಕ್ತಿಗಳು ಅವರನ್ನು ಗುರಿ ಮಾಡಿದ್ದಾರೆ. ಅವರಿಗೆ ವಕೀಲರು ಸಿಗುತ್ತಿಲ್ಲ. ನಾನು ಶ್ರೀಮಂತ ಕುಟುಂಬದಿಂದ, ಪ್ರಭಾವಿ ಜಾತಿಯಿಂದ ಮತ್ತು ಚಿತ್ರರಂಗದಿಂದ ಬಂದಿದ್ದೇನೆ. ನನ್ನ ಮೇಲೆಯೇ ಸುಳ್ಳು ಪ್ರಕರಣ ದಾಖಲಿಸಿ ಜೈಲಿಗೆ ಹಾಕಿದರೆ ಇನ್ನು ಜನಸಾಮಾನ್ಯರನ್ನು ಈ ವ್ಯವಸ್ಥೆ ಎಷ್ಟು ಕೆಟ್ಟದಾಗಿ ನಡೆಸಿಕೊಳ್ಳಬಹುದು ಯೋಚಿಸಿ ಎಂದು ಚೇತನ್ ಹೇಳಿದರು.

ನಾನು ಜೈಲಿನಲ್ಲಿ ಅಂಬೇಡ್ಕರ್‌ರವರ ಅನಿಲೇಶನ್ ಆಫ್ ಕಾಸ್ಟ್ ಮತ್ತು ಹು ಆರ್ ಶೂದ್ರಾಶ್ ಎಂಬ ಕೃತಿಗಳನ್ನು ಓದಿದೆ. ವಕೀಲ ಜಗದೀಶ್‌ರವರನ್ನು ಭೇಟಿ ಮಾಡಿದೆ. ಜಗದೀಶ್ ರವರು ಕುಗ್ಗಿಲ್ಲ.. ಅವರ ಭ್ರಷ್ಟಾಚಾರದ ವಿರುದ್ಧದ ಹೋರಾಟಕ್ಕೆ ಬೆಂಬಲ ನೀಡುವುದಾಗಿ ತಿಳಿಸಿದ್ದೇನೆ.

ಪೆರಿಯಾರ್‌ರವರನ್ನು 80 ಬಾರಿ ಜೈಲಿಗೆ ಹಾಕಲಾಗಿತ್ತು. ಜೈಲು ಎಂದರೆ ನನಗೆ ಭಯವಿಲ್ಲ. ನಾನು ಸತ್ಯಕ್ಕಾಗಿ ಮತ್ತೆ ಜೈಲಿಗೆ ಹೋಗಲು ಸಿದ್ದನಿದ್ದೇನೆ. ನಾವು ಯಾವುದೇ ಜಾತಿ, ಮತ, ಭಾಷೆಯ ವಿರುದ್ಧ ಇಲ್ಲ. ನಾವು ಅಸಮಾನತೆಯ ವಿರುದ್ಧ ಇದ್ದೇವೆ. ಬ್ರಾಹ್ಮಣ್ಯ ಎನ್ನುವುದು ಒಂದು ಮನಸ್ಥಿತಿ. ಎಲ್ಲಾ ಬ್ರಾಹ್ಮಣ್ಯರು ಸವಲತ್ತು ಪಡೆದಿರಬಹುದು. ಆದರೆ ಎಲ್ಲರೂ ಬ್ರಾಹ್ಮಣ್ಯ ಅನುಸರಿಸುವುದಿಲ್ಲ. ಅವರು ಹುಟ್ಟಿನಿಂದಲೇ ಸವಲತ್ತು ಪಡೆದಿರುವುದು ನಿಜ. ಆದರೆ ಮುಂದಕ್ಕೆ ನಾನು ಸಮಾಜಕ್ಕೆ ಜಾಸ್ತಿ ಕೊಡಬೇಕು, ಇಷ್ಟು ವಂಚಿತರಾದವರು ಜಾಸ್ತಿ ಪಡೆಯಬೇಕು. ಹಾಗಾಗಿ ನಮ್ಮ ಹೋರಾಟ ಬ್ರಾಹ್ಮಣ್ಯದ ವಿರುದ್ಧವಿರುತ್ತದೆ ಎಂದರು.

ಒಂದು ಟ್ವೀಟ್ ಗಾಗಿ ನನ್ನನ್ನು ಉದ್ದೇಶಪೂರ್ವಕವಾಗಿ ಬಂಧಿಸಿದ್ದೀರಿ. ಆದರೆ ಕೋಟ್ಯಾಂತರ ಜನ ಟ್ವೀಟ್ ಮಾಡಿದರೆ ಅವರನ್ನು ಜೈಲಿಗೆ ಹಾಕುತ್ತೀರಾ? ಭ್ರಷ್ಟಾಚಾರಿಗಳು, ಕ್ರಿಮಿನಲ್‌ಗಳು ವಿಧಾನಸೌಧದಲ್ಲಿದ್ದಾರೆ. ಅವರನ್ನು ಮುಟ್ಟುವ ಧೈರ್ಯ ಇಲ್ಲ. ನಮ್ಮನ್ನು ಮಾತ್ರ ಬಂಧಿಸುತ್ತೀರಿ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಫೆಬ್ರವರಿ 19 ರಂದು ನಾವು ಬೆಂಗಳೂರಿನಲ್ಲಿ ನೀಲಿ ಸಾಗರ ನಿರ್ಮಿಸಿದ್ದೇವೆ. ಹಾಗಾಗಿ ಪ್ರಭುತ್ವ ಹೆದರಿದೆ. ಆ ಹೋರಾಟವನ್ನು ಮುಖ್ಯವಾಹಿನಿ ಮಾಧ್ಯಮಗಳು ಪ್ರಸಾರ ಮಾಡಲಿಲ್ಲ. ಹಾಗಾಗಿ ನಾವು ಸೋಷಿಯಲ್ ಮೀಡಿಯಾ ಮಾತ್ರವಲ್ಲದೆ ಪರ್ಯಾಯ ಮಾಧ್ಯಮ ಕಟ್ಟೋಣ ಎಂದರು.

ಪೊಲಿಸರು ನನ್ನ ಫೋನ್ ತೆಗೆದುಕೊಂಡ 12 ದಿನ ಆದರೂ ಫೋನ್ ವಾಪಸ್ ಕೊಟ್ಟಿಲ್ಲ. ನಾನು ಸಾಮಾಜಿಕ ಜಾಲತಾಣಗಳನ್ನು ಬಳಸಲು ಆಗುತ್ತಿಲ್ಲ. ಬೇರೆಯವರ ಫೋನ್‌ನಲ್ಲಿ ಲಾಗಿನ್ ಆಗಿದ್ದೇನೆ ಎಂದರು.

ಶಾಂತಪ್ಪ ಎಂಬ ಗಾಯಕರು ಡಯಾಲಿಸಿಸ್ ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಸುಳ್ಳು ಪ್ರಕರಣದಲ್ಲಿ ಅವರನ್ನು ಸಿಕ್ಕಿಸಲಾಗಿದೆ. 10 ವರ್ಷದಿಂದ ಅವರು ಜೈಲಿನಲ್ಲಿದ್ದಾರೆ. ಒಳ್ಳೆಯ ಗಾಯಕರಾದ ಅವರನ್ನು ಹೊರಗೆ ತರಲು ಪ್ರಯತ್ನ ಮಾಡುತ್ತೇನೆ. ಈ ಕುರಿತು ಹಂಸಲೇಖ ಸರ್ ಜೊತೆ ಮಾತಾಡುತ್ತೇನೆ ಎಂದರು.

ಅವರ ಫೇಸ್‌ಬುಲ್ ಲೈವ್ ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ


ಇದನ್ನೂ ಓದಿ: ನಾಗರಾಜ್‌ ಮಂಜುಳೆಯ ‘ಝುಂಡ್‌’: ಕ್ರೀಡಾ ಜಗತ್ತಿನ ‘ಅಸ್ಪೃಶ್ಯ ಭಾರತ ದರ್ಶನ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...