Homeಮುಖಪುಟನಿಮ್ಮ ದೌರ್ಬಲ್ಯದಿಂದಾಗಿ ನಮ್ಮ ಜನ ಸಾಯುತ್ತಿದ್ದಾರೆ: ನೋ-ಫ್ಲೈ ಝೋನ್ ಹೇರದ NATO ವಿರುದ್ಧ ಕಿಡಿಕಾರಿದ ಉಕ್ರೇನ್...

ನಿಮ್ಮ ದೌರ್ಬಲ್ಯದಿಂದಾಗಿ ನಮ್ಮ ಜನ ಸಾಯುತ್ತಿದ್ದಾರೆ: ನೋ-ಫ್ಲೈ ಝೋನ್ ಹೇರದ NATO ವಿರುದ್ಧ ಕಿಡಿಕಾರಿದ ಉಕ್ರೇನ್ ಅಧ್ಯಕ್ಷ ಝೆಲೆನ್ಸ್ಕಿ

ನೋ-ಫ್ಲೈ ಝೋನ್ ಎಂದರೇನು? NATO ನಿರಾಕರಿಸಿದ್ದೇಕೆ? ಈ ಹಿಂದೆ ಎಲ್ಲೆಲ್ಲಿ ಬಳಸಲಾಗಿದ ಎಂಬುದರ ಪೂರ್ಣ ಮಾಹಿತಿ ಇಲ್ಲಿದೆ.

- Advertisement -
- Advertisement -

ಉಕ್ರೇನ್‌ ಹಲವು ಪ್ರದೇಶಗಳಲ್ಲಿ ನೋ-ಫ್ಲೈ ಝೋನ್ (no-fly zone) ಹೇರಬೇಕೆಂಬ ಉಕ್ರೇನಿಯನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರ ಮನವಿಯನ್ನು NATO ನಿರಾಕರಿಸಿದೆ. ಇದರಿಂದ ಕ್ರೋಧಗೊಂಡಿರುವ ಝೆಲೆನ್ಸ್ಕಿ “ನಿಮ್ಮ ಈ ನಿರ್ಧಾರವು ಉಕ್ರೇನಿಯನ್ ನಗರಗಳು ಮತ್ತು ಹಳ್ಳಿಗಳ ಮೇಲೆ ಮತ್ತಷ್ಟು ಬಾಂಬ್ ದಾಳಿಗೆ ಹಸಿರು ನಿಶಾನೆ ನೀಡುತ್ತದೆ” ಎಂದು ಕಿಡಿಕಾರಿದ್ದಾರೆ.

“ಈ ದಿನದಿಂದ ಸಾಯುವ ಎಲ್ಲಾ ಜನರು ನಿಮ್ಮ (NATO) ಕಾರಣದಿಂದಾಗಿ ಸಾಯುತ್ತಾರೆ, ನಿಮ್ಮ ದೌರ್ಬಲ್ಯದಿಂದಾಗಿ, ನಿಮ್ಮ ಒಗ್ಗಟ್ಟಿನ ಕೊರತೆಯಿಂದಾಗಿ ಸಾಯುತ್ತಾರೆ” ಅವರು ಹೇಳಿದ್ದಾರೆ. ಇದೇ ಸಂದರ್ಭದಲ್ಲಿಅವರು ಉಕ್ರೇನಿಯನ್ ಜನತೆಯ ಪ್ರತಿರೋಧದ ಶೌರ್ಯವನ್ನು ಶ್ಲಾಘಿಸಿದ್ದಾರೆ.

ಶುಕ್ರವಾರದ ದೂರದರ್ಶನದ ಭಾಷಣದಲ್ಲಿ ಮಾತನಾಡಿದ ಝೆಲೆನ್ಸ್ಕಿ “ಇಂದು ನ್ಯಾಟೋ ಶೃಂಗಸಭೆ ನಡೆಯುತ್ತಿದೆ. ಅದು ದುರ್ಬಲ ಮತ್ತು ಗೊಂದಲಮಯ ಶೃಂಗಸಭೆಯಾಗಿದೆ. ಯುರೋಪಿನ ಸ್ವಾತಂತ್ರ್ಯಕ್ಕಾಗಿ ಯುದ್ಧವನ್ನು ನಂಬರ್ ಒನ್ ಗುರಿ ಎಂದು ಶೃಂಗಸಭೆಯ ಎಲ್ಲರೂ ಪರಿಗಣಿಸುವುದಿಲ್ಲ ಎಂಬುದು ಸ್ಪಷ್ಟವಾಗಿದೆ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದರು.

ಏನಿದು ನೋ-ಫ್ಲೈ ಝೋನ್?

ನಿರ್ದಿಷ್ಟ ವಾಯು ಪ್ರದೇಶದಲ್ಲಿ ನೋ-ಫ್ಲೈ ಝೋನ್ ಹೇರಿದಾಗ ಅದು ಹಾರಾಟ ನಿಷೇಧ ವಲಯವಾಗಿದ್ದು, ಅಲ್ಲಿ ಕೆಲವು ವಿಮಾನಗಳನ್ನು ಪ್ರವೇಶಿಸಲು ಅನುಮತಿಸಲಾಗುವುದಿಲ್ಲ.
ಘರ್ಷಣೆಗಳು ಮತ್ತು ಯುದ್ಧಗಳ ಸಂದರ್ಭದಲ್ಲಿ ಸೈನಿಕ ಪಡೆಗಳು ಮತ್ತು ಶಸ್ತ್ರಾಸ್ತ್ರಗಳನ್ನು ಸಾಗಿಸಲು ಮತ್ತು ಕಣ್ಗಾವಲು ನಡೆಸಲು ನಿಷೇಧಿತ ವಿಮಾನಗಳನ್ನು ವಾಯುಪ್ರದೇಶಕ್ಕೆ ಪ್ರವೇಶಿಸುವುದನ್ನು ತಡೆಯಲು ಸಾಮಾನ್ಯವಾಗಿ ನೋ-ಫ್ಲೈ ಝೋನ್ ಹೇರಲಾಗುತ್ತದೆ.
ನೋ-ಫ್ಲೈ ಝೋನ್‌ಗಳನ್ನು ಮಿಲಿಟರಿ ಬಲ ಬಳಸಿಯೇ ಜಾರಿಗೊಳಿಸಬೇಕು. ಆ ಸಂದರ್ಭದಲ್ಲಿ ನಿಷೇಧಿತ ವಿಮಾನಗಳು ಪ್ರವೇಶಿಸಿದ್ದಲ್ಲಿ ಹೊಡೆದುರುಳಿಸಬಹುದು. ಇದರರ್ಥ ನಾಟೊ ತನ್ನ ಫೈಟರ್ ಜೆಟ್‌ಗಳನ್ನು ರಷ್ಯಾ ವಿರುದ್ಧ ಹೋರಾಡಲು ಉಕ್ರೇನ್‌ ಕಳಿಸಿಕೊಡಬೇಕು ಎಂಬುದೇ ಆಗಿದೆ.

ಉಕ್ರೇನ್ ಬಯಕೆಯೇನು?

ಉಕ್ರೇನ್ ಅಧ್ಯಕ್ಷ ಝೆಲೆನ್ಸ್ಕಿ ದೇಶದ “ಮಹತ್ವದ ಭಾಗಗಳ” ಮೇಲೆ ನೋ-ಫ್ಲೈ ಝೋನ್ ಹೇರಬೇಕೆಂದು NATO, ಅಮೆರಿಕ ಮತ್ತು ಹಲವು ಯೂರೋಪ್ ದೇಶಗಳಲ್ಲಿ ಮನವಿ ಮಾಡಿದ್ದರು. ಇದರಿಂದ ರಷ್ಯಾ ದಾಳಿ ಮಾಡಲು ಆಗುವುದಿಲ್ಲ ಮತ್ತು ರಷ್ಯಾ ದಾಳಿಯನ್ನು ಹಿಮ್ಮೆಟ್ಟಿಸಬಹುದು ಎಂದು ಅವರು ನಂಬಿದ್ದರು. ಅದಕ್ಕಾಗಿ ಅಮೆರಿಕ ಮತ್ತು NATO ಬಳಿ ಹಲವಾರು ಬಾರಿ ಮನವಿ ಮಾಡಿದ್ದ ಅವರು ಯುದ್ಧವಿಮಾನಗಳನ್ನು ಒದಗಿಸಬೇಕು, ಆದ್ದರಿಂದ ಉಕ್ರೇನ್ ತನ್ನನ್ನು ತಾನು ರಕ್ಷಿಸಿಕೊಳ್ಳಬಹುದು” ಎಂದು ವಾದಿಸಿದ್ದರು.

ನೋ-ಫ್ಲೈ ಝೋನ್ ಹೇರದಿರಲು ಕಾರಣವೇನು?

NATO, ಅಮೆರಿಕ ಅಥವಾ ಯೂರೋಪ್‌ನ ಯಾವುದೇ ದೇಶ ನೋ-ಫ್ಲೈ ಝೋನ್ ಹೇರಿದರೆ, ಅದನ್ನು ಜಾರಿಗೊಳಿಸಲು ಅವರೇ ಜವಾಬ್ದಾರರಾಗಿರುತ್ತಾರೆ. ಅಂದರೆ ನಿಷೇಧಿತ ರಷ್ಯಾದ ಮಿಲಿಟರಿ ವಿಮಾನಗಳ ವಿರುದ್ಧ ಹೋರಾಡಬೇಕಿರುತ್ತದೆ. “ನ್ಯಾಟೋ ಅದನ್ನು ಹೇರಿದರೆ ಮತ್ತು ನಾವು ರಷ್ಯಾದ ಒಂದು ವಿಮಾನವನ್ನು ಹೊಡೆದುರುಳಿಸಿದರೆ, ನಾವು ರಷ್ಯಾದೊಂದಿಗೆ ಯುದ್ಧದಲ್ಲಿದ್ದೇವೆ ಎಂದರ್ಥ. ಹಾಗಾಗಿ NATO ಅದನ್ನು ಬಯಸುವುದಿಲ್ಲ” ಎಂದು ನ್ಯೂ ಹೆವನ್ ವಿಶ್ವವಿದ್ಯಾಲಯದ ಪ್ರಾಧ್ಯಾಪಕರಾದ ಹೊವಾರ್ಡ್ ಸ್ಟಾಫರ್ ಹೇಳುತ್ತಾರೆ.

NFZ ಗಳನ್ನು ಜಾರಿಗೊಳಿಸಿದ ಹಿಂದಿನ ಸಂಘರ್ಷಗಳಿಗಿಂತ ಭಿನ್ನವಾಗಿ ಈ ಬಾರಿ ರಷ್ಯಾವು ದೃಢವಾದ ಮತ್ತು ಹೆಚ್ಚು ಅತ್ಯಾಧುನಿಕ ಮಿಲಿಟರಿಯನ್ನು ಹೊಂದಿದೆ ಮತ್ತು ಪರಮಾಣು ಶಕ್ತಿಯಾಗಿದೆ, ಹಾಗಾಗಿ ಅದರ ವಿರುದ್ಧ ನಾಟೋ ಹೋಗುವುದಿಲ್ಲ ಎಂದು ಅವರು ಹೇಳಿದ್ದಾರೆ.

ನಾಟೋ ವಾದವೇನು?

“ನಾವು ಉಕ್ರೇನ್‌ನ ಹತಾಶೆಯನ್ನು ಅರ್ಥಮಾಡಿಕೊಂಡಿದ್ದೇವೆ. ನ್ಯಾಟೋ ಫೈಟರ್ ವಿಮಾನಗಳನ್ನು ಉಕ್ರೇನ್‌ನ ವಾಯುಪ್ರದೇಶಕ್ಕೆ ಕಳುಹಿಸುವುದು ಮತ್ತು ರಷ್ಯಾದ ವಿಮಾನಗಳನ್ನು ಹೊಡೆದುರುಳಿಸುವ ಮೂಲಕ ಮಾತ್ರವೇ ನೋ ಫ್ಲೈ ಝೋನ್ ಅನ್ನು ಕಾರ್ಯಗತಗೊಳಿಸಲು ಸಾಧ್ಯ. ನಾವು ಅದನ್ನು ಮಾಡಿದರೆ, ಯುರೋಪ್‌ ಪೂರ್ಣ ಪ್ರಮಾಣದ ಯುದ್ಧದಲ್ಲಿ ಕೊನೆಗೊಳ್ಳುತ್ತದೆ. ಅಲ್ಲದೆ ಯುದ್ದವೂ ಇನ್ನೂ ಅನೇಕ ದೇಶಗಳನ್ನು ಒಳಗೊಂಡಿರುತ್ತದೆ ಮತ್ತು ಹೆಚ್ಚು ಜೀವಹಾನಿಯನ್ನು ಉಂಟುಮಾಡುತ್ತದೆ. ನಾವು ಈ ಸಂಘರ್ಷದ ಭಾಗವಾಗಿಲ್ಲ, ಮತ್ತು ಅದು ಉಲ್ಬಣಗೊಳ್ಳದಂತೆ ಮತ್ತು ಉಕ್ರೇನ್‌ನ ಆಚೆಗೆ ಹರಡದಂತೆ ನೋಡಿಕೊಳ್ಳುವ ಜವಾಬ್ದಾರಿ ನಮ್ಮ ಮೇಲಿದೆ” ಎಂದು ನ್ಯಾಟೋ ಮುಖ್ಯಸ್ಥ ಜೆನ್ಸ್ ಸ್ಟೋಲ್ಟೆನ್‌ಬರ್ಗ್ ಹೇಳಿದ್ದಾರೆ.

ಅಮೆರಿಕ ಏನು ಹೇಳುತ್ತದೆ?

ಅಮೆರಿಕ ಅಧ್ಯಕ್ಷ ಜೋ ಬೈಡನ್ ಮತ್ತು ಶ್ವೇತಭವನವು NFZ ಅನ್ನು ಜಾರಿಗೊಳಿಸುವುದು ಸೇರಿದಂತೆ ಉಕ್ರೇನ್‌ನಲ್ಲಿ ರಷ್ಯಾದ ವಿರುದ್ಧ ಹೋರಾಡಲು ತಮ್ಮ ಪಡೆಗಳನ್ನು ಕಳುಹಿಸುವುದಿಲ್ಲ ಎಂದು ಪದೇ ಪದೇ ಹೇಳಿದ್ದಾರೆ. “ಇದು ಮೂಲಭೂತವಾಗಿ ಯುಎಸ್ ಮಿಲಿಟರಿ ರಷ್ಯಾದ ವಿಮಾನಗಳನ್ನು ಹೊಡೆದುರುಳಿಸುವ ಮತ್ತು ರಷ್ಯಾದೊಂದಿಗೆ ಸಂಭಾವ್ಯ ನೇರ ಯುದ್ಧವನ್ನು ಉಂಟುಮಾಡುವುದನ್ನು ನಾವು ತಪ್ಪಿಸಲು ಬಯಸುತ್ತೇವೆ” ಎಂದು ಶ್ವೇತಭವನದ ಪತ್ರಿಕಾ ಕಾರ್ಯದರ್ಶಿ ಜೆನ್ ಪ್ಸಾಕಿ ಗುರುವಾರ ಹೇಳಿದ್ದರು.

ಇದುವರೆಗೂ NFZ ಗಳನ್ನು ಎಲ್ಲಿ ಹೇರಲಾಗಿದೆ

ಲಿಬಿಯಾ: ದೇಶದಲ್ಲಿ ದಾಳಿಯ ಬೆದರಿಕೆಯಲ್ಲಿರುವ ನಾಗರಿಕರನ್ನು ರಕ್ಷಿಸುವ ಕಾರಣ ನೀಡಿ ಯುಎನ್ ಸೆಕ್ಯುರಿಟಿ ಕೌನ್ಸಿಲ್ 2011 ರಲ್ಲಿ ಲಿಬಿಯಾದ ಮೇಲೆ ನ್ಯಾಟೋ ಮೂಲಕ ನೋ-ಫ್ಲೈ ಝೋನ್ ಅನ್ನು ಹೇರಿತ್ತು.

ಬೋಸ್ನಿಯಾ: NATO ಏಪ್ರಿಲ್ 1993 ರಿಂದ ಡಿಸೆಂಬರ್ 1995 ರವರೆಗೆ ಬೋಸ್ನಿಯಾದ ಮೇಲೆ ನೋ-ಫ್ಲೈ ಝೋನ್ ಅನ್ನು ಹೇರಿತ್ತು.

ಇರಾಕ್: 1991ರ ಕೊಲ್ಲಿ ಯುದ್ಧದ ನಂತರ U.S. ಮತ್ತು ಸಮ್ಮಿಶ್ರ ರಾಷ್ಟ್ರಗಳು ಇರಾಕ್‌ನಲ್ಲಿ ಎರಡು ನೋ-ಫ್ಲೈ ಝೋನ್ ಅನ್ನು ಹೇರಿದ್ದವು.

ಅಮೆರಿಕ ದೇಶವು ಹಲವೆಡೆ ನೋ-ಫ್ಲೈ ಝೋನ್ ಅನ್ನು ಹೇರಿದೆ.


ಇದನ್ನೂ ಓದಿ: ಬಹುಜನ ಭಾರತ; ಸೋತು ಗೆಲ್ಲುವುದೇ ಯುಕ್ರೇನ್?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....