Homeಮುಖಪುಟನಿಮ್ಮ ದೌರ್ಬಲ್ಯದಿಂದಾಗಿ ನಮ್ಮ ಜನ ಸಾಯುತ್ತಿದ್ದಾರೆ: ನೋ-ಫ್ಲೈ ಝೋನ್ ಹೇರದ NATO ವಿರುದ್ಧ ಕಿಡಿಕಾರಿದ ಉಕ್ರೇನ್...

ನಿಮ್ಮ ದೌರ್ಬಲ್ಯದಿಂದಾಗಿ ನಮ್ಮ ಜನ ಸಾಯುತ್ತಿದ್ದಾರೆ: ನೋ-ಫ್ಲೈ ಝೋನ್ ಹೇರದ NATO ವಿರುದ್ಧ ಕಿಡಿಕಾರಿದ ಉಕ್ರೇನ್ ಅಧ್ಯಕ್ಷ ಝೆಲೆನ್ಸ್ಕಿ

ನೋ-ಫ್ಲೈ ಝೋನ್ ಎಂದರೇನು? NATO ನಿರಾಕರಿಸಿದ್ದೇಕೆ? ಈ ಹಿಂದೆ ಎಲ್ಲೆಲ್ಲಿ ಬಳಸಲಾಗಿದ ಎಂಬುದರ ಪೂರ್ಣ ಮಾಹಿತಿ ಇಲ್ಲಿದೆ.

- Advertisement -
- Advertisement -

ಉಕ್ರೇನ್‌ ಹಲವು ಪ್ರದೇಶಗಳಲ್ಲಿ ನೋ-ಫ್ಲೈ ಝೋನ್ (no-fly zone) ಹೇರಬೇಕೆಂಬ ಉಕ್ರೇನಿಯನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರ ಮನವಿಯನ್ನು NATO ನಿರಾಕರಿಸಿದೆ. ಇದರಿಂದ ಕ್ರೋಧಗೊಂಡಿರುವ ಝೆಲೆನ್ಸ್ಕಿ “ನಿಮ್ಮ ಈ ನಿರ್ಧಾರವು ಉಕ್ರೇನಿಯನ್ ನಗರಗಳು ಮತ್ತು ಹಳ್ಳಿಗಳ ಮೇಲೆ ಮತ್ತಷ್ಟು ಬಾಂಬ್ ದಾಳಿಗೆ ಹಸಿರು ನಿಶಾನೆ ನೀಡುತ್ತದೆ” ಎಂದು ಕಿಡಿಕಾರಿದ್ದಾರೆ.

“ಈ ದಿನದಿಂದ ಸಾಯುವ ಎಲ್ಲಾ ಜನರು ನಿಮ್ಮ (NATO) ಕಾರಣದಿಂದಾಗಿ ಸಾಯುತ್ತಾರೆ, ನಿಮ್ಮ ದೌರ್ಬಲ್ಯದಿಂದಾಗಿ, ನಿಮ್ಮ ಒಗ್ಗಟ್ಟಿನ ಕೊರತೆಯಿಂದಾಗಿ ಸಾಯುತ್ತಾರೆ” ಅವರು ಹೇಳಿದ್ದಾರೆ. ಇದೇ ಸಂದರ್ಭದಲ್ಲಿಅವರು ಉಕ್ರೇನಿಯನ್ ಜನತೆಯ ಪ್ರತಿರೋಧದ ಶೌರ್ಯವನ್ನು ಶ್ಲಾಘಿಸಿದ್ದಾರೆ.

ಶುಕ್ರವಾರದ ದೂರದರ್ಶನದ ಭಾಷಣದಲ್ಲಿ ಮಾತನಾಡಿದ ಝೆಲೆನ್ಸ್ಕಿ “ಇಂದು ನ್ಯಾಟೋ ಶೃಂಗಸಭೆ ನಡೆಯುತ್ತಿದೆ. ಅದು ದುರ್ಬಲ ಮತ್ತು ಗೊಂದಲಮಯ ಶೃಂಗಸಭೆಯಾಗಿದೆ. ಯುರೋಪಿನ ಸ್ವಾತಂತ್ರ್ಯಕ್ಕಾಗಿ ಯುದ್ಧವನ್ನು ನಂಬರ್ ಒನ್ ಗುರಿ ಎಂದು ಶೃಂಗಸಭೆಯ ಎಲ್ಲರೂ ಪರಿಗಣಿಸುವುದಿಲ್ಲ ಎಂಬುದು ಸ್ಪಷ್ಟವಾಗಿದೆ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದರು.

ಏನಿದು ನೋ-ಫ್ಲೈ ಝೋನ್?

ನಿರ್ದಿಷ್ಟ ವಾಯು ಪ್ರದೇಶದಲ್ಲಿ ನೋ-ಫ್ಲೈ ಝೋನ್ ಹೇರಿದಾಗ ಅದು ಹಾರಾಟ ನಿಷೇಧ ವಲಯವಾಗಿದ್ದು, ಅಲ್ಲಿ ಕೆಲವು ವಿಮಾನಗಳನ್ನು ಪ್ರವೇಶಿಸಲು ಅನುಮತಿಸಲಾಗುವುದಿಲ್ಲ.
ಘರ್ಷಣೆಗಳು ಮತ್ತು ಯುದ್ಧಗಳ ಸಂದರ್ಭದಲ್ಲಿ ಸೈನಿಕ ಪಡೆಗಳು ಮತ್ತು ಶಸ್ತ್ರಾಸ್ತ್ರಗಳನ್ನು ಸಾಗಿಸಲು ಮತ್ತು ಕಣ್ಗಾವಲು ನಡೆಸಲು ನಿಷೇಧಿತ ವಿಮಾನಗಳನ್ನು ವಾಯುಪ್ರದೇಶಕ್ಕೆ ಪ್ರವೇಶಿಸುವುದನ್ನು ತಡೆಯಲು ಸಾಮಾನ್ಯವಾಗಿ ನೋ-ಫ್ಲೈ ಝೋನ್ ಹೇರಲಾಗುತ್ತದೆ.
ನೋ-ಫ್ಲೈ ಝೋನ್‌ಗಳನ್ನು ಮಿಲಿಟರಿ ಬಲ ಬಳಸಿಯೇ ಜಾರಿಗೊಳಿಸಬೇಕು. ಆ ಸಂದರ್ಭದಲ್ಲಿ ನಿಷೇಧಿತ ವಿಮಾನಗಳು ಪ್ರವೇಶಿಸಿದ್ದಲ್ಲಿ ಹೊಡೆದುರುಳಿಸಬಹುದು. ಇದರರ್ಥ ನಾಟೊ ತನ್ನ ಫೈಟರ್ ಜೆಟ್‌ಗಳನ್ನು ರಷ್ಯಾ ವಿರುದ್ಧ ಹೋರಾಡಲು ಉಕ್ರೇನ್‌ ಕಳಿಸಿಕೊಡಬೇಕು ಎಂಬುದೇ ಆಗಿದೆ.

ಉಕ್ರೇನ್ ಬಯಕೆಯೇನು?

ಉಕ್ರೇನ್ ಅಧ್ಯಕ್ಷ ಝೆಲೆನ್ಸ್ಕಿ ದೇಶದ “ಮಹತ್ವದ ಭಾಗಗಳ” ಮೇಲೆ ನೋ-ಫ್ಲೈ ಝೋನ್ ಹೇರಬೇಕೆಂದು NATO, ಅಮೆರಿಕ ಮತ್ತು ಹಲವು ಯೂರೋಪ್ ದೇಶಗಳಲ್ಲಿ ಮನವಿ ಮಾಡಿದ್ದರು. ಇದರಿಂದ ರಷ್ಯಾ ದಾಳಿ ಮಾಡಲು ಆಗುವುದಿಲ್ಲ ಮತ್ತು ರಷ್ಯಾ ದಾಳಿಯನ್ನು ಹಿಮ್ಮೆಟ್ಟಿಸಬಹುದು ಎಂದು ಅವರು ನಂಬಿದ್ದರು. ಅದಕ್ಕಾಗಿ ಅಮೆರಿಕ ಮತ್ತು NATO ಬಳಿ ಹಲವಾರು ಬಾರಿ ಮನವಿ ಮಾಡಿದ್ದ ಅವರು ಯುದ್ಧವಿಮಾನಗಳನ್ನು ಒದಗಿಸಬೇಕು, ಆದ್ದರಿಂದ ಉಕ್ರೇನ್ ತನ್ನನ್ನು ತಾನು ರಕ್ಷಿಸಿಕೊಳ್ಳಬಹುದು” ಎಂದು ವಾದಿಸಿದ್ದರು.

ನೋ-ಫ್ಲೈ ಝೋನ್ ಹೇರದಿರಲು ಕಾರಣವೇನು?

NATO, ಅಮೆರಿಕ ಅಥವಾ ಯೂರೋಪ್‌ನ ಯಾವುದೇ ದೇಶ ನೋ-ಫ್ಲೈ ಝೋನ್ ಹೇರಿದರೆ, ಅದನ್ನು ಜಾರಿಗೊಳಿಸಲು ಅವರೇ ಜವಾಬ್ದಾರರಾಗಿರುತ್ತಾರೆ. ಅಂದರೆ ನಿಷೇಧಿತ ರಷ್ಯಾದ ಮಿಲಿಟರಿ ವಿಮಾನಗಳ ವಿರುದ್ಧ ಹೋರಾಡಬೇಕಿರುತ್ತದೆ. “ನ್ಯಾಟೋ ಅದನ್ನು ಹೇರಿದರೆ ಮತ್ತು ನಾವು ರಷ್ಯಾದ ಒಂದು ವಿಮಾನವನ್ನು ಹೊಡೆದುರುಳಿಸಿದರೆ, ನಾವು ರಷ್ಯಾದೊಂದಿಗೆ ಯುದ್ಧದಲ್ಲಿದ್ದೇವೆ ಎಂದರ್ಥ. ಹಾಗಾಗಿ NATO ಅದನ್ನು ಬಯಸುವುದಿಲ್ಲ” ಎಂದು ನ್ಯೂ ಹೆವನ್ ವಿಶ್ವವಿದ್ಯಾಲಯದ ಪ್ರಾಧ್ಯಾಪಕರಾದ ಹೊವಾರ್ಡ್ ಸ್ಟಾಫರ್ ಹೇಳುತ್ತಾರೆ.

NFZ ಗಳನ್ನು ಜಾರಿಗೊಳಿಸಿದ ಹಿಂದಿನ ಸಂಘರ್ಷಗಳಿಗಿಂತ ಭಿನ್ನವಾಗಿ ಈ ಬಾರಿ ರಷ್ಯಾವು ದೃಢವಾದ ಮತ್ತು ಹೆಚ್ಚು ಅತ್ಯಾಧುನಿಕ ಮಿಲಿಟರಿಯನ್ನು ಹೊಂದಿದೆ ಮತ್ತು ಪರಮಾಣು ಶಕ್ತಿಯಾಗಿದೆ, ಹಾಗಾಗಿ ಅದರ ವಿರುದ್ಧ ನಾಟೋ ಹೋಗುವುದಿಲ್ಲ ಎಂದು ಅವರು ಹೇಳಿದ್ದಾರೆ.

ನಾಟೋ ವಾದವೇನು?

“ನಾವು ಉಕ್ರೇನ್‌ನ ಹತಾಶೆಯನ್ನು ಅರ್ಥಮಾಡಿಕೊಂಡಿದ್ದೇವೆ. ನ್ಯಾಟೋ ಫೈಟರ್ ವಿಮಾನಗಳನ್ನು ಉಕ್ರೇನ್‌ನ ವಾಯುಪ್ರದೇಶಕ್ಕೆ ಕಳುಹಿಸುವುದು ಮತ್ತು ರಷ್ಯಾದ ವಿಮಾನಗಳನ್ನು ಹೊಡೆದುರುಳಿಸುವ ಮೂಲಕ ಮಾತ್ರವೇ ನೋ ಫ್ಲೈ ಝೋನ್ ಅನ್ನು ಕಾರ್ಯಗತಗೊಳಿಸಲು ಸಾಧ್ಯ. ನಾವು ಅದನ್ನು ಮಾಡಿದರೆ, ಯುರೋಪ್‌ ಪೂರ್ಣ ಪ್ರಮಾಣದ ಯುದ್ಧದಲ್ಲಿ ಕೊನೆಗೊಳ್ಳುತ್ತದೆ. ಅಲ್ಲದೆ ಯುದ್ದವೂ ಇನ್ನೂ ಅನೇಕ ದೇಶಗಳನ್ನು ಒಳಗೊಂಡಿರುತ್ತದೆ ಮತ್ತು ಹೆಚ್ಚು ಜೀವಹಾನಿಯನ್ನು ಉಂಟುಮಾಡುತ್ತದೆ. ನಾವು ಈ ಸಂಘರ್ಷದ ಭಾಗವಾಗಿಲ್ಲ, ಮತ್ತು ಅದು ಉಲ್ಬಣಗೊಳ್ಳದಂತೆ ಮತ್ತು ಉಕ್ರೇನ್‌ನ ಆಚೆಗೆ ಹರಡದಂತೆ ನೋಡಿಕೊಳ್ಳುವ ಜವಾಬ್ದಾರಿ ನಮ್ಮ ಮೇಲಿದೆ” ಎಂದು ನ್ಯಾಟೋ ಮುಖ್ಯಸ್ಥ ಜೆನ್ಸ್ ಸ್ಟೋಲ್ಟೆನ್‌ಬರ್ಗ್ ಹೇಳಿದ್ದಾರೆ.

ಅಮೆರಿಕ ಏನು ಹೇಳುತ್ತದೆ?

ಅಮೆರಿಕ ಅಧ್ಯಕ್ಷ ಜೋ ಬೈಡನ್ ಮತ್ತು ಶ್ವೇತಭವನವು NFZ ಅನ್ನು ಜಾರಿಗೊಳಿಸುವುದು ಸೇರಿದಂತೆ ಉಕ್ರೇನ್‌ನಲ್ಲಿ ರಷ್ಯಾದ ವಿರುದ್ಧ ಹೋರಾಡಲು ತಮ್ಮ ಪಡೆಗಳನ್ನು ಕಳುಹಿಸುವುದಿಲ್ಲ ಎಂದು ಪದೇ ಪದೇ ಹೇಳಿದ್ದಾರೆ. “ಇದು ಮೂಲಭೂತವಾಗಿ ಯುಎಸ್ ಮಿಲಿಟರಿ ರಷ್ಯಾದ ವಿಮಾನಗಳನ್ನು ಹೊಡೆದುರುಳಿಸುವ ಮತ್ತು ರಷ್ಯಾದೊಂದಿಗೆ ಸಂಭಾವ್ಯ ನೇರ ಯುದ್ಧವನ್ನು ಉಂಟುಮಾಡುವುದನ್ನು ನಾವು ತಪ್ಪಿಸಲು ಬಯಸುತ್ತೇವೆ” ಎಂದು ಶ್ವೇತಭವನದ ಪತ್ರಿಕಾ ಕಾರ್ಯದರ್ಶಿ ಜೆನ್ ಪ್ಸಾಕಿ ಗುರುವಾರ ಹೇಳಿದ್ದರು.

ಇದುವರೆಗೂ NFZ ಗಳನ್ನು ಎಲ್ಲಿ ಹೇರಲಾಗಿದೆ

ಲಿಬಿಯಾ: ದೇಶದಲ್ಲಿ ದಾಳಿಯ ಬೆದರಿಕೆಯಲ್ಲಿರುವ ನಾಗರಿಕರನ್ನು ರಕ್ಷಿಸುವ ಕಾರಣ ನೀಡಿ ಯುಎನ್ ಸೆಕ್ಯುರಿಟಿ ಕೌನ್ಸಿಲ್ 2011 ರಲ್ಲಿ ಲಿಬಿಯಾದ ಮೇಲೆ ನ್ಯಾಟೋ ಮೂಲಕ ನೋ-ಫ್ಲೈ ಝೋನ್ ಅನ್ನು ಹೇರಿತ್ತು.

ಬೋಸ್ನಿಯಾ: NATO ಏಪ್ರಿಲ್ 1993 ರಿಂದ ಡಿಸೆಂಬರ್ 1995 ರವರೆಗೆ ಬೋಸ್ನಿಯಾದ ಮೇಲೆ ನೋ-ಫ್ಲೈ ಝೋನ್ ಅನ್ನು ಹೇರಿತ್ತು.

ಇರಾಕ್: 1991ರ ಕೊಲ್ಲಿ ಯುದ್ಧದ ನಂತರ U.S. ಮತ್ತು ಸಮ್ಮಿಶ್ರ ರಾಷ್ಟ್ರಗಳು ಇರಾಕ್‌ನಲ್ಲಿ ಎರಡು ನೋ-ಫ್ಲೈ ಝೋನ್ ಅನ್ನು ಹೇರಿದ್ದವು.

ಅಮೆರಿಕ ದೇಶವು ಹಲವೆಡೆ ನೋ-ಫ್ಲೈ ಝೋನ್ ಅನ್ನು ಹೇರಿದೆ.


ಇದನ್ನೂ ಓದಿ: ಬಹುಜನ ಭಾರತ; ಸೋತು ಗೆಲ್ಲುವುದೇ ಯುಕ್ರೇನ್?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...