Homeಮುಖಪುಟನಿಮ್ಮ ದೌರ್ಬಲ್ಯದಿಂದಾಗಿ ನಮ್ಮ ಜನ ಸಾಯುತ್ತಿದ್ದಾರೆ: ನೋ-ಫ್ಲೈ ಝೋನ್ ಹೇರದ NATO ವಿರುದ್ಧ ಕಿಡಿಕಾರಿದ ಉಕ್ರೇನ್...

ನಿಮ್ಮ ದೌರ್ಬಲ್ಯದಿಂದಾಗಿ ನಮ್ಮ ಜನ ಸಾಯುತ್ತಿದ್ದಾರೆ: ನೋ-ಫ್ಲೈ ಝೋನ್ ಹೇರದ NATO ವಿರುದ್ಧ ಕಿಡಿಕಾರಿದ ಉಕ್ರೇನ್ ಅಧ್ಯಕ್ಷ ಝೆಲೆನ್ಸ್ಕಿ

ನೋ-ಫ್ಲೈ ಝೋನ್ ಎಂದರೇನು? NATO ನಿರಾಕರಿಸಿದ್ದೇಕೆ? ಈ ಹಿಂದೆ ಎಲ್ಲೆಲ್ಲಿ ಬಳಸಲಾಗಿದ ಎಂಬುದರ ಪೂರ್ಣ ಮಾಹಿತಿ ಇಲ್ಲಿದೆ.

- Advertisement -
- Advertisement -

ಉಕ್ರೇನ್‌ ಹಲವು ಪ್ರದೇಶಗಳಲ್ಲಿ ನೋ-ಫ್ಲೈ ಝೋನ್ (no-fly zone) ಹೇರಬೇಕೆಂಬ ಉಕ್ರೇನಿಯನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರ ಮನವಿಯನ್ನು NATO ನಿರಾಕರಿಸಿದೆ. ಇದರಿಂದ ಕ್ರೋಧಗೊಂಡಿರುವ ಝೆಲೆನ್ಸ್ಕಿ “ನಿಮ್ಮ ಈ ನಿರ್ಧಾರವು ಉಕ್ರೇನಿಯನ್ ನಗರಗಳು ಮತ್ತು ಹಳ್ಳಿಗಳ ಮೇಲೆ ಮತ್ತಷ್ಟು ಬಾಂಬ್ ದಾಳಿಗೆ ಹಸಿರು ನಿಶಾನೆ ನೀಡುತ್ತದೆ” ಎಂದು ಕಿಡಿಕಾರಿದ್ದಾರೆ.

“ಈ ದಿನದಿಂದ ಸಾಯುವ ಎಲ್ಲಾ ಜನರು ನಿಮ್ಮ (NATO) ಕಾರಣದಿಂದಾಗಿ ಸಾಯುತ್ತಾರೆ, ನಿಮ್ಮ ದೌರ್ಬಲ್ಯದಿಂದಾಗಿ, ನಿಮ್ಮ ಒಗ್ಗಟ್ಟಿನ ಕೊರತೆಯಿಂದಾಗಿ ಸಾಯುತ್ತಾರೆ” ಅವರು ಹೇಳಿದ್ದಾರೆ. ಇದೇ ಸಂದರ್ಭದಲ್ಲಿಅವರು ಉಕ್ರೇನಿಯನ್ ಜನತೆಯ ಪ್ರತಿರೋಧದ ಶೌರ್ಯವನ್ನು ಶ್ಲಾಘಿಸಿದ್ದಾರೆ.

ಶುಕ್ರವಾರದ ದೂರದರ್ಶನದ ಭಾಷಣದಲ್ಲಿ ಮಾತನಾಡಿದ ಝೆಲೆನ್ಸ್ಕಿ “ಇಂದು ನ್ಯಾಟೋ ಶೃಂಗಸಭೆ ನಡೆಯುತ್ತಿದೆ. ಅದು ದುರ್ಬಲ ಮತ್ತು ಗೊಂದಲಮಯ ಶೃಂಗಸಭೆಯಾಗಿದೆ. ಯುರೋಪಿನ ಸ್ವಾತಂತ್ರ್ಯಕ್ಕಾಗಿ ಯುದ್ಧವನ್ನು ನಂಬರ್ ಒನ್ ಗುರಿ ಎಂದು ಶೃಂಗಸಭೆಯ ಎಲ್ಲರೂ ಪರಿಗಣಿಸುವುದಿಲ್ಲ ಎಂಬುದು ಸ್ಪಷ್ಟವಾಗಿದೆ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದರು.

ಏನಿದು ನೋ-ಫ್ಲೈ ಝೋನ್?

ನಿರ್ದಿಷ್ಟ ವಾಯು ಪ್ರದೇಶದಲ್ಲಿ ನೋ-ಫ್ಲೈ ಝೋನ್ ಹೇರಿದಾಗ ಅದು ಹಾರಾಟ ನಿಷೇಧ ವಲಯವಾಗಿದ್ದು, ಅಲ್ಲಿ ಕೆಲವು ವಿಮಾನಗಳನ್ನು ಪ್ರವೇಶಿಸಲು ಅನುಮತಿಸಲಾಗುವುದಿಲ್ಲ.
ಘರ್ಷಣೆಗಳು ಮತ್ತು ಯುದ್ಧಗಳ ಸಂದರ್ಭದಲ್ಲಿ ಸೈನಿಕ ಪಡೆಗಳು ಮತ್ತು ಶಸ್ತ್ರಾಸ್ತ್ರಗಳನ್ನು ಸಾಗಿಸಲು ಮತ್ತು ಕಣ್ಗಾವಲು ನಡೆಸಲು ನಿಷೇಧಿತ ವಿಮಾನಗಳನ್ನು ವಾಯುಪ್ರದೇಶಕ್ಕೆ ಪ್ರವೇಶಿಸುವುದನ್ನು ತಡೆಯಲು ಸಾಮಾನ್ಯವಾಗಿ ನೋ-ಫ್ಲೈ ಝೋನ್ ಹೇರಲಾಗುತ್ತದೆ.
ನೋ-ಫ್ಲೈ ಝೋನ್‌ಗಳನ್ನು ಮಿಲಿಟರಿ ಬಲ ಬಳಸಿಯೇ ಜಾರಿಗೊಳಿಸಬೇಕು. ಆ ಸಂದರ್ಭದಲ್ಲಿ ನಿಷೇಧಿತ ವಿಮಾನಗಳು ಪ್ರವೇಶಿಸಿದ್ದಲ್ಲಿ ಹೊಡೆದುರುಳಿಸಬಹುದು. ಇದರರ್ಥ ನಾಟೊ ತನ್ನ ಫೈಟರ್ ಜೆಟ್‌ಗಳನ್ನು ರಷ್ಯಾ ವಿರುದ್ಧ ಹೋರಾಡಲು ಉಕ್ರೇನ್‌ ಕಳಿಸಿಕೊಡಬೇಕು ಎಂಬುದೇ ಆಗಿದೆ.

ಉಕ್ರೇನ್ ಬಯಕೆಯೇನು?

ಉಕ್ರೇನ್ ಅಧ್ಯಕ್ಷ ಝೆಲೆನ್ಸ್ಕಿ ದೇಶದ “ಮಹತ್ವದ ಭಾಗಗಳ” ಮೇಲೆ ನೋ-ಫ್ಲೈ ಝೋನ್ ಹೇರಬೇಕೆಂದು NATO, ಅಮೆರಿಕ ಮತ್ತು ಹಲವು ಯೂರೋಪ್ ದೇಶಗಳಲ್ಲಿ ಮನವಿ ಮಾಡಿದ್ದರು. ಇದರಿಂದ ರಷ್ಯಾ ದಾಳಿ ಮಾಡಲು ಆಗುವುದಿಲ್ಲ ಮತ್ತು ರಷ್ಯಾ ದಾಳಿಯನ್ನು ಹಿಮ್ಮೆಟ್ಟಿಸಬಹುದು ಎಂದು ಅವರು ನಂಬಿದ್ದರು. ಅದಕ್ಕಾಗಿ ಅಮೆರಿಕ ಮತ್ತು NATO ಬಳಿ ಹಲವಾರು ಬಾರಿ ಮನವಿ ಮಾಡಿದ್ದ ಅವರು ಯುದ್ಧವಿಮಾನಗಳನ್ನು ಒದಗಿಸಬೇಕು, ಆದ್ದರಿಂದ ಉಕ್ರೇನ್ ತನ್ನನ್ನು ತಾನು ರಕ್ಷಿಸಿಕೊಳ್ಳಬಹುದು” ಎಂದು ವಾದಿಸಿದ್ದರು.

ನೋ-ಫ್ಲೈ ಝೋನ್ ಹೇರದಿರಲು ಕಾರಣವೇನು?

NATO, ಅಮೆರಿಕ ಅಥವಾ ಯೂರೋಪ್‌ನ ಯಾವುದೇ ದೇಶ ನೋ-ಫ್ಲೈ ಝೋನ್ ಹೇರಿದರೆ, ಅದನ್ನು ಜಾರಿಗೊಳಿಸಲು ಅವರೇ ಜವಾಬ್ದಾರರಾಗಿರುತ್ತಾರೆ. ಅಂದರೆ ನಿಷೇಧಿತ ರಷ್ಯಾದ ಮಿಲಿಟರಿ ವಿಮಾನಗಳ ವಿರುದ್ಧ ಹೋರಾಡಬೇಕಿರುತ್ತದೆ. “ನ್ಯಾಟೋ ಅದನ್ನು ಹೇರಿದರೆ ಮತ್ತು ನಾವು ರಷ್ಯಾದ ಒಂದು ವಿಮಾನವನ್ನು ಹೊಡೆದುರುಳಿಸಿದರೆ, ನಾವು ರಷ್ಯಾದೊಂದಿಗೆ ಯುದ್ಧದಲ್ಲಿದ್ದೇವೆ ಎಂದರ್ಥ. ಹಾಗಾಗಿ NATO ಅದನ್ನು ಬಯಸುವುದಿಲ್ಲ” ಎಂದು ನ್ಯೂ ಹೆವನ್ ವಿಶ್ವವಿದ್ಯಾಲಯದ ಪ್ರಾಧ್ಯಾಪಕರಾದ ಹೊವಾರ್ಡ್ ಸ್ಟಾಫರ್ ಹೇಳುತ್ತಾರೆ.

NFZ ಗಳನ್ನು ಜಾರಿಗೊಳಿಸಿದ ಹಿಂದಿನ ಸಂಘರ್ಷಗಳಿಗಿಂತ ಭಿನ್ನವಾಗಿ ಈ ಬಾರಿ ರಷ್ಯಾವು ದೃಢವಾದ ಮತ್ತು ಹೆಚ್ಚು ಅತ್ಯಾಧುನಿಕ ಮಿಲಿಟರಿಯನ್ನು ಹೊಂದಿದೆ ಮತ್ತು ಪರಮಾಣು ಶಕ್ತಿಯಾಗಿದೆ, ಹಾಗಾಗಿ ಅದರ ವಿರುದ್ಧ ನಾಟೋ ಹೋಗುವುದಿಲ್ಲ ಎಂದು ಅವರು ಹೇಳಿದ್ದಾರೆ.

ನಾಟೋ ವಾದವೇನು?

“ನಾವು ಉಕ್ರೇನ್‌ನ ಹತಾಶೆಯನ್ನು ಅರ್ಥಮಾಡಿಕೊಂಡಿದ್ದೇವೆ. ನ್ಯಾಟೋ ಫೈಟರ್ ವಿಮಾನಗಳನ್ನು ಉಕ್ರೇನ್‌ನ ವಾಯುಪ್ರದೇಶಕ್ಕೆ ಕಳುಹಿಸುವುದು ಮತ್ತು ರಷ್ಯಾದ ವಿಮಾನಗಳನ್ನು ಹೊಡೆದುರುಳಿಸುವ ಮೂಲಕ ಮಾತ್ರವೇ ನೋ ಫ್ಲೈ ಝೋನ್ ಅನ್ನು ಕಾರ್ಯಗತಗೊಳಿಸಲು ಸಾಧ್ಯ. ನಾವು ಅದನ್ನು ಮಾಡಿದರೆ, ಯುರೋಪ್‌ ಪೂರ್ಣ ಪ್ರಮಾಣದ ಯುದ್ಧದಲ್ಲಿ ಕೊನೆಗೊಳ್ಳುತ್ತದೆ. ಅಲ್ಲದೆ ಯುದ್ದವೂ ಇನ್ನೂ ಅನೇಕ ದೇಶಗಳನ್ನು ಒಳಗೊಂಡಿರುತ್ತದೆ ಮತ್ತು ಹೆಚ್ಚು ಜೀವಹಾನಿಯನ್ನು ಉಂಟುಮಾಡುತ್ತದೆ. ನಾವು ಈ ಸಂಘರ್ಷದ ಭಾಗವಾಗಿಲ್ಲ, ಮತ್ತು ಅದು ಉಲ್ಬಣಗೊಳ್ಳದಂತೆ ಮತ್ತು ಉಕ್ರೇನ್‌ನ ಆಚೆಗೆ ಹರಡದಂತೆ ನೋಡಿಕೊಳ್ಳುವ ಜವಾಬ್ದಾರಿ ನಮ್ಮ ಮೇಲಿದೆ” ಎಂದು ನ್ಯಾಟೋ ಮುಖ್ಯಸ್ಥ ಜೆನ್ಸ್ ಸ್ಟೋಲ್ಟೆನ್‌ಬರ್ಗ್ ಹೇಳಿದ್ದಾರೆ.

ಅಮೆರಿಕ ಏನು ಹೇಳುತ್ತದೆ?

ಅಮೆರಿಕ ಅಧ್ಯಕ್ಷ ಜೋ ಬೈಡನ್ ಮತ್ತು ಶ್ವೇತಭವನವು NFZ ಅನ್ನು ಜಾರಿಗೊಳಿಸುವುದು ಸೇರಿದಂತೆ ಉಕ್ರೇನ್‌ನಲ್ಲಿ ರಷ್ಯಾದ ವಿರುದ್ಧ ಹೋರಾಡಲು ತಮ್ಮ ಪಡೆಗಳನ್ನು ಕಳುಹಿಸುವುದಿಲ್ಲ ಎಂದು ಪದೇ ಪದೇ ಹೇಳಿದ್ದಾರೆ. “ಇದು ಮೂಲಭೂತವಾಗಿ ಯುಎಸ್ ಮಿಲಿಟರಿ ರಷ್ಯಾದ ವಿಮಾನಗಳನ್ನು ಹೊಡೆದುರುಳಿಸುವ ಮತ್ತು ರಷ್ಯಾದೊಂದಿಗೆ ಸಂಭಾವ್ಯ ನೇರ ಯುದ್ಧವನ್ನು ಉಂಟುಮಾಡುವುದನ್ನು ನಾವು ತಪ್ಪಿಸಲು ಬಯಸುತ್ತೇವೆ” ಎಂದು ಶ್ವೇತಭವನದ ಪತ್ರಿಕಾ ಕಾರ್ಯದರ್ಶಿ ಜೆನ್ ಪ್ಸಾಕಿ ಗುರುವಾರ ಹೇಳಿದ್ದರು.

ಇದುವರೆಗೂ NFZ ಗಳನ್ನು ಎಲ್ಲಿ ಹೇರಲಾಗಿದೆ

ಲಿಬಿಯಾ: ದೇಶದಲ್ಲಿ ದಾಳಿಯ ಬೆದರಿಕೆಯಲ್ಲಿರುವ ನಾಗರಿಕರನ್ನು ರಕ್ಷಿಸುವ ಕಾರಣ ನೀಡಿ ಯುಎನ್ ಸೆಕ್ಯುರಿಟಿ ಕೌನ್ಸಿಲ್ 2011 ರಲ್ಲಿ ಲಿಬಿಯಾದ ಮೇಲೆ ನ್ಯಾಟೋ ಮೂಲಕ ನೋ-ಫ್ಲೈ ಝೋನ್ ಅನ್ನು ಹೇರಿತ್ತು.

ಬೋಸ್ನಿಯಾ: NATO ಏಪ್ರಿಲ್ 1993 ರಿಂದ ಡಿಸೆಂಬರ್ 1995 ರವರೆಗೆ ಬೋಸ್ನಿಯಾದ ಮೇಲೆ ನೋ-ಫ್ಲೈ ಝೋನ್ ಅನ್ನು ಹೇರಿತ್ತು.

ಇರಾಕ್: 1991ರ ಕೊಲ್ಲಿ ಯುದ್ಧದ ನಂತರ U.S. ಮತ್ತು ಸಮ್ಮಿಶ್ರ ರಾಷ್ಟ್ರಗಳು ಇರಾಕ್‌ನಲ್ಲಿ ಎರಡು ನೋ-ಫ್ಲೈ ಝೋನ್ ಅನ್ನು ಹೇರಿದ್ದವು.

ಅಮೆರಿಕ ದೇಶವು ಹಲವೆಡೆ ನೋ-ಫ್ಲೈ ಝೋನ್ ಅನ್ನು ಹೇರಿದೆ.


ಇದನ್ನೂ ಓದಿ: ಬಹುಜನ ಭಾರತ; ಸೋತು ಗೆಲ್ಲುವುದೇ ಯುಕ್ರೇನ್?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...