Homeಕರ್ನಾಟಕ334 ವರ್ಷಗಳ ಇತಿಹಾಸವಿರುವ ಚೆನ್ನೈ ಪಾಲಿಕೆಗೆ ಮೊದಲ ಬಾರಿಗೆ ದಲಿತ ಮಹಿಳೆ ಮೇಯರ್‌

334 ವರ್ಷಗಳ ಇತಿಹಾಸವಿರುವ ಚೆನ್ನೈ ಪಾಲಿಕೆಗೆ ಮೊದಲ ಬಾರಿಗೆ ದಲಿತ ಮಹಿಳೆ ಮೇಯರ್‌

- Advertisement -
- Advertisement -

ಗ್ರೇಟರ್ ಚೆನ್ನೈ ಮಹಾನಗರ ಪಾಲಿಕೆಯು ಆರಂಭವಾಗಿ 334 ವರ್ಷಗಳು ಕಳೆದಿವೆ. ಈ ದೀರ್ಘಾವಧಿಯ ನಂತರ, ಮೊದಲ ಬಾರಿಗೆ ಚೆನ್ನೈ ಪಾಲಿಕೆಗೆ ದಲಿತ ಮಹಿಳೆಯೊಬ್ಬರು ಮೇಯರ್ ಆಗಿ ಆಯ್ಕೆಯಾಗಿದ್ದಾರೆ.

ಚೆನ್ನೈ ಪಾಲಿಕೆಯಲ್ಲಿ ಬಹುಮತ ಪಡೆದಿರುವ ಡಿಎಂಕೆ ಪಕ್ಷವು ದಲಿತ ಕಾರ್ಪೋರೇಟರ್ ಆರ್.ಪ್ರಿಯಾ ಅವರನ್ನು ಮೇಯರ್ ಹುದ್ದೆಗೆ ಶುಕ್ರವಾರ ನಡೆದ ಚುನಾವಣೆಗೆ ನಾಮನಿರ್ದೇಶನ ಮಾಡಿತ್ತು. ಚುನಾವಣೆಯಲ್ಲಿ ಹೆಚ್ಚು ಸದಸ್ಯರ ಬೆಂಬಲ ಪಡೆದ ಪ್ರಿಯಾ ಅವರು ಮೇಯರ್ ಆಗಿ ಆಯ್ಕೆಯಾಗಿದ್ದಾರೆ.

ಚೆನ್ನೈ ಮಹಾನಗರ ಪಾಲಿಕೆಗಳಲ್ಲಿ ಮೇಯರ್, ಉಪಮೇಯರ್ ಹಾಗೂ ಪುರಸಭೆ ಅಧ್ಯಕ್ಷರು, ಪಂಚಾಯಿತಿ ಅಧ್ಯಕ್ಷರ ಸ್ಥಾನಕ್ಕೆ ಶುಕ್ರವಾರ ಪರೋಕ್ಷ ಚುನಾವಣೆ ನಡೆದಿದೆ.

ತಾರಾ ಚೆರಿಯನ್ (ಕಾಂಗ್ರೆಸ್, 1957-1958) ಮತ್ತು ಕಾಮಾಕ್ಷಿ ಜಯರಾಮನ್ (ಡಿಎಂಕೆ, 1971-1972) ನಂತರ ಪ್ರಿಯಾ ಅವರು ಚೆನ್ನೈಗೆ ಮೂರನೇ ಮಹಿಳಾ ಮೇಯರ್ ಆಗಿದ್ದಾರೆ.

ಗ್ರೇಟರ್ ಚೆನ್ನೈ ಕಾರ್ಪೊರೇಷನ್‌ನಲ್ಲಿರುವ ಒಟ್ಟು 200 ವಾರ್ಡ್‌‌ಗಳಲ್ಲಿ ಡಿಎಂಕೆ 153 ವಾರ್ಡ್‌‌ಗಳಲ್ಲಿ ಗೆಲುವು ಸಾಧಿಸಿತ್ತು. ಅಲ್ಲದೆ, ಡಿಎಂಕೆಯ ಮಿತ್ರಪಕ್ಷಗಳು 25 ಸ್ಥಾನಗಳನ್ನು ಗೆದ್ದಿವೆ. ಪಾಲಿಕೆಗೆ ಸರ್ಕಾರವು ಪರೋಕ್ಷ ಚುನಾವಣೆ ನಡೆಸಿದ್ದು, ಪ್ರಿಯಾ ಅವರನ್ನು ಮೇಯರ್ ಆಗಿ ಆಯ್ಕೆ ಮಾಡಲಾಗಿದೆ.

ಮೊದಲ ಬಾರಿಗೆ ಚುನಾವಣೆಗೆ ಸ್ಪರ್ಧಿಸಿದ್ದ ಪ್ರಿಯಾ, ಚೆನ್ನೈನ ತಿರು-ವಿ-ಕಾ ನಗರದಲ್ಲಿ ವಾರ್ಡ್ ಸಂಖ್ಯೆ 74ರಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಈ ವಾರ್ಡ್ ಚೆನ್ನೈ ನಗರದ ಅತ್ಯಂತ ಹಿಂದುಳಿದ ಮತ್ತು ಅಭಿವೃದ್ದಿ ಕಾಣದ ಪ್ರದೇಶಗಳಲ್ಲಿ ಒಂದಾಗಿದೆ. ಈ ವಾರ್ಡ್‌ನಲ್ಲಿ ಕಳಪೆ ಮೂಲಸೌಕರ್ಯಗಳಿದ್ದು, ಚಿಕ್ಕಚಿಕ್ಕ ಮನೆಗಳಲ್ಲಿ ಜನರು ವಾಸಿಸುತ್ತಿದ್ದಾರೆ.

ದಿ. ಮಾಜಿ ಸಿಎಂ ಜಯಲಲಿತಾ ಅವರು ಅಧಿಕಾರದಲ್ಲಿದ್ದಾಗ, ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳೆಯರಿಗೆ 50% ಮೀಸಲಾತಿಯನ್ನು ಜಾರಿಗೆ ತಂದರು. ಬಳಿಕ, ಎಲ್ಲಾ ಪಕ್ಷದ ನಾಯಕರು ಸ್ಥಳೀಯ ಸಂಸ್ಥೆಗಳ ಚುನಾವಣೆ ತಮ್ಮ ಪತ್ನಿಯರು, ಸಹೋದರಿಯರು ಮತ್ತು ಮಕ್ಕಳನ್ನು ಕಣಕ್ಕಿಳಿಸಲು ಪ್ರಾರಂಭಿಸಿದ್ದರು. ಈಗಲೂ ಆ ರೀತಿಯ ನಿದರ್ಶನಗಳು ಸಾಕಷ್ಟಿವೆ.

ಚುನಾವಣೆಯಲ್ಲಿ ಗೆಲುವು ಸಾಧಿಸಿದ ಮಹಿಳೆಯರ ಪರವಾಗಿ ಅವರ ಗಂಡಂದಿರು ಅಧಿಕಾರ ಚಲಾಯಿಸುತ್ತಿದ್ದ ಮತ್ತು ಚಲಾಯಿಸುತ್ತಿರುವುದೂ ಇದೆ. ಮಹಿಳಾ ಸದಸ್ಯರನ್ನು ಕೌನ್ಸಿಲ್ ಹಾಲ್‌ನಲ್ಲಿ ಟೋಕನಿಸಂ ರೀತಿಯಲ್ಲಿ ಮಾತ್ರ ಕೂರಿಸುತ್ತಿದ್ದದ್ದೂ ಇದೆ. ಚೈನ್ನೈ ಪಾಲಿಕೆಯಲ್ಲಿಯೂ ಇದೆಲ್ಲವೂ ನಡೆದಿದೆ. ಇದೆಲ್ಲವನ್ನೂ ನಿಭಾಯಿಸಿ ಮಹಿಳೆಯರೇ ತಮ್ಮ ಅಧಿಕಾರವನ್ನು ಚಲಾಯಿಸುವ ಮತ್ತು ಪಾಲಿಕೆಯಲ್ಲಿ ತಮ್ಮ ಇರುವಿಕೆಯನ್ನು ಸಾಬೀತುಪಡಿಸುವಂತೆ ಮಾಡುವ ದೊಡ್ಡ ಜವಾಬ್ದಾರಿಯೂ ಪ್ರಿಯಾ ಅವರ ಮೇಲಿದೆ. ತಮಿಳುನಾಡಿನ ವಿವಿಧ ಪಾಲಿಕೆಗಳಲ್ಲಿ ಒಟ್ಟಾರೆಯಾಗಿ ಡಿಎಂಕೆಯಿಂದ 11 ಮಹಿಳೆಯರು ಮೇಯರ್ ಹುದ್ದೆ ಅಲಂಕರಿಸಿದ್ದಾರೆ ಮತ್ತು 5 ಮಹಿಳೆಯರು ಉಪಮೇಯರ್ ಆಗಿದ್ದಾರೆ.

ಒಂದು ಮೇಯರ್, ಎರಡು ಉಪಮೇಯರ್‌ ಸ್ಥಾನ, ಪುರಸಭೆಗಳಲ್ಲಿ 6 ಅಧ್ಯಕ್ಷರು ಮತ್ತು 11 ಉಪಾಧ್ಯಕ್ಷರು, ಪಟ್ಟಣ ಪಂಚಾಯತಿಗಳಲ್ಲಿ 8 ಅಧ್ಯಕ್ಷರು ಮತ್ತು 11 ಉಪಾಧ್ಯಕ್ಷರ ಸ್ಥಾನಗಳನ್ನು ತಮ್ಮ ಪ್ರಮುಖ ಮಿತ್ರ ಪಕ್ಷವಾದ ಕಾಂಗ್ರೆ‍ಸ್‌ಗೆ ಡಿಎಂಕೆ ಬಿಟ್ಟುಕೊಟ್ಟಿದೆ. ಇತರ ಮಿತ್ರಪಕ್ಷಗಳಾದ ಸಿಪಿಐ (ಎಂ), ಸಿಪಿಐ, ಎಂಡಿಎಂಕೆ ಮತ್ತು ವಿಸಿಕೆ ತಲಾ ಒಂದು ಉಪಮೇಯರ್ ಹುದ್ದೆಯನ್ನು ಪಡೆದುಕೊಂಡಿವೆ.

ಕುಂಭಕೋಣಂನಲ್ಲಿ ಆಟೋರಿಕ್ಷಾ ಚಾಲಕ ಶರವಣನ್ ಅವರನ್ನು ಮೇಯರ್ ಆಗಿ ಆಯ್ಕೆ ಮಾಡಲಾಗಿದ್ದು, ಅವರು ಕಾಂಗ್ರೆಸ್ ಪಕ್ಷದಿಂದ ಗೆಲುವು ಸಾಧಿಸಿದ್ದರು.


ಇದನ್ನೂ ಓದಿರಿ: ರಾಯಚೂರು: ಕ್ಷುಲ್ಲಕ ಕಾರಣಕ್ಕೆ ದಲಿತರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಆರೋಪ, ದೂರು ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...