Homeಕರ್ನಾಟಕ334 ವರ್ಷಗಳ ಇತಿಹಾಸವಿರುವ ಚೆನ್ನೈ ಪಾಲಿಕೆಗೆ ಮೊದಲ ಬಾರಿಗೆ ದಲಿತ ಮಹಿಳೆ ಮೇಯರ್‌

334 ವರ್ಷಗಳ ಇತಿಹಾಸವಿರುವ ಚೆನ್ನೈ ಪಾಲಿಕೆಗೆ ಮೊದಲ ಬಾರಿಗೆ ದಲಿತ ಮಹಿಳೆ ಮೇಯರ್‌

- Advertisement -
- Advertisement -

ಗ್ರೇಟರ್ ಚೆನ್ನೈ ಮಹಾನಗರ ಪಾಲಿಕೆಯು ಆರಂಭವಾಗಿ 334 ವರ್ಷಗಳು ಕಳೆದಿವೆ. ಈ ದೀರ್ಘಾವಧಿಯ ನಂತರ, ಮೊದಲ ಬಾರಿಗೆ ಚೆನ್ನೈ ಪಾಲಿಕೆಗೆ ದಲಿತ ಮಹಿಳೆಯೊಬ್ಬರು ಮೇಯರ್ ಆಗಿ ಆಯ್ಕೆಯಾಗಿದ್ದಾರೆ.

ಚೆನ್ನೈ ಪಾಲಿಕೆಯಲ್ಲಿ ಬಹುಮತ ಪಡೆದಿರುವ ಡಿಎಂಕೆ ಪಕ್ಷವು ದಲಿತ ಕಾರ್ಪೋರೇಟರ್ ಆರ್.ಪ್ರಿಯಾ ಅವರನ್ನು ಮೇಯರ್ ಹುದ್ದೆಗೆ ಶುಕ್ರವಾರ ನಡೆದ ಚುನಾವಣೆಗೆ ನಾಮನಿರ್ದೇಶನ ಮಾಡಿತ್ತು. ಚುನಾವಣೆಯಲ್ಲಿ ಹೆಚ್ಚು ಸದಸ್ಯರ ಬೆಂಬಲ ಪಡೆದ ಪ್ರಿಯಾ ಅವರು ಮೇಯರ್ ಆಗಿ ಆಯ್ಕೆಯಾಗಿದ್ದಾರೆ.

ಚೆನ್ನೈ ಮಹಾನಗರ ಪಾಲಿಕೆಗಳಲ್ಲಿ ಮೇಯರ್, ಉಪಮೇಯರ್ ಹಾಗೂ ಪುರಸಭೆ ಅಧ್ಯಕ್ಷರು, ಪಂಚಾಯಿತಿ ಅಧ್ಯಕ್ಷರ ಸ್ಥಾನಕ್ಕೆ ಶುಕ್ರವಾರ ಪರೋಕ್ಷ ಚುನಾವಣೆ ನಡೆದಿದೆ.

ತಾರಾ ಚೆರಿಯನ್ (ಕಾಂಗ್ರೆಸ್, 1957-1958) ಮತ್ತು ಕಾಮಾಕ್ಷಿ ಜಯರಾಮನ್ (ಡಿಎಂಕೆ, 1971-1972) ನಂತರ ಪ್ರಿಯಾ ಅವರು ಚೆನ್ನೈಗೆ ಮೂರನೇ ಮಹಿಳಾ ಮೇಯರ್ ಆಗಿದ್ದಾರೆ.

ಗ್ರೇಟರ್ ಚೆನ್ನೈ ಕಾರ್ಪೊರೇಷನ್‌ನಲ್ಲಿರುವ ಒಟ್ಟು 200 ವಾರ್ಡ್‌‌ಗಳಲ್ಲಿ ಡಿಎಂಕೆ 153 ವಾರ್ಡ್‌‌ಗಳಲ್ಲಿ ಗೆಲುವು ಸಾಧಿಸಿತ್ತು. ಅಲ್ಲದೆ, ಡಿಎಂಕೆಯ ಮಿತ್ರಪಕ್ಷಗಳು 25 ಸ್ಥಾನಗಳನ್ನು ಗೆದ್ದಿವೆ. ಪಾಲಿಕೆಗೆ ಸರ್ಕಾರವು ಪರೋಕ್ಷ ಚುನಾವಣೆ ನಡೆಸಿದ್ದು, ಪ್ರಿಯಾ ಅವರನ್ನು ಮೇಯರ್ ಆಗಿ ಆಯ್ಕೆ ಮಾಡಲಾಗಿದೆ.

ಮೊದಲ ಬಾರಿಗೆ ಚುನಾವಣೆಗೆ ಸ್ಪರ್ಧಿಸಿದ್ದ ಪ್ರಿಯಾ, ಚೆನ್ನೈನ ತಿರು-ವಿ-ಕಾ ನಗರದಲ್ಲಿ ವಾರ್ಡ್ ಸಂಖ್ಯೆ 74ರಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಈ ವಾರ್ಡ್ ಚೆನ್ನೈ ನಗರದ ಅತ್ಯಂತ ಹಿಂದುಳಿದ ಮತ್ತು ಅಭಿವೃದ್ದಿ ಕಾಣದ ಪ್ರದೇಶಗಳಲ್ಲಿ ಒಂದಾಗಿದೆ. ಈ ವಾರ್ಡ್‌ನಲ್ಲಿ ಕಳಪೆ ಮೂಲಸೌಕರ್ಯಗಳಿದ್ದು, ಚಿಕ್ಕಚಿಕ್ಕ ಮನೆಗಳಲ್ಲಿ ಜನರು ವಾಸಿಸುತ್ತಿದ್ದಾರೆ.

ದಿ. ಮಾಜಿ ಸಿಎಂ ಜಯಲಲಿತಾ ಅವರು ಅಧಿಕಾರದಲ್ಲಿದ್ದಾಗ, ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳೆಯರಿಗೆ 50% ಮೀಸಲಾತಿಯನ್ನು ಜಾರಿಗೆ ತಂದರು. ಬಳಿಕ, ಎಲ್ಲಾ ಪಕ್ಷದ ನಾಯಕರು ಸ್ಥಳೀಯ ಸಂಸ್ಥೆಗಳ ಚುನಾವಣೆ ತಮ್ಮ ಪತ್ನಿಯರು, ಸಹೋದರಿಯರು ಮತ್ತು ಮಕ್ಕಳನ್ನು ಕಣಕ್ಕಿಳಿಸಲು ಪ್ರಾರಂಭಿಸಿದ್ದರು. ಈಗಲೂ ಆ ರೀತಿಯ ನಿದರ್ಶನಗಳು ಸಾಕಷ್ಟಿವೆ.

ಚುನಾವಣೆಯಲ್ಲಿ ಗೆಲುವು ಸಾಧಿಸಿದ ಮಹಿಳೆಯರ ಪರವಾಗಿ ಅವರ ಗಂಡಂದಿರು ಅಧಿಕಾರ ಚಲಾಯಿಸುತ್ತಿದ್ದ ಮತ್ತು ಚಲಾಯಿಸುತ್ತಿರುವುದೂ ಇದೆ. ಮಹಿಳಾ ಸದಸ್ಯರನ್ನು ಕೌನ್ಸಿಲ್ ಹಾಲ್‌ನಲ್ಲಿ ಟೋಕನಿಸಂ ರೀತಿಯಲ್ಲಿ ಮಾತ್ರ ಕೂರಿಸುತ್ತಿದ್ದದ್ದೂ ಇದೆ. ಚೈನ್ನೈ ಪಾಲಿಕೆಯಲ್ಲಿಯೂ ಇದೆಲ್ಲವೂ ನಡೆದಿದೆ. ಇದೆಲ್ಲವನ್ನೂ ನಿಭಾಯಿಸಿ ಮಹಿಳೆಯರೇ ತಮ್ಮ ಅಧಿಕಾರವನ್ನು ಚಲಾಯಿಸುವ ಮತ್ತು ಪಾಲಿಕೆಯಲ್ಲಿ ತಮ್ಮ ಇರುವಿಕೆಯನ್ನು ಸಾಬೀತುಪಡಿಸುವಂತೆ ಮಾಡುವ ದೊಡ್ಡ ಜವಾಬ್ದಾರಿಯೂ ಪ್ರಿಯಾ ಅವರ ಮೇಲಿದೆ. ತಮಿಳುನಾಡಿನ ವಿವಿಧ ಪಾಲಿಕೆಗಳಲ್ಲಿ ಒಟ್ಟಾರೆಯಾಗಿ ಡಿಎಂಕೆಯಿಂದ 11 ಮಹಿಳೆಯರು ಮೇಯರ್ ಹುದ್ದೆ ಅಲಂಕರಿಸಿದ್ದಾರೆ ಮತ್ತು 5 ಮಹಿಳೆಯರು ಉಪಮೇಯರ್ ಆಗಿದ್ದಾರೆ.

ಒಂದು ಮೇಯರ್, ಎರಡು ಉಪಮೇಯರ್‌ ಸ್ಥಾನ, ಪುರಸಭೆಗಳಲ್ಲಿ 6 ಅಧ್ಯಕ್ಷರು ಮತ್ತು 11 ಉಪಾಧ್ಯಕ್ಷರು, ಪಟ್ಟಣ ಪಂಚಾಯತಿಗಳಲ್ಲಿ 8 ಅಧ್ಯಕ್ಷರು ಮತ್ತು 11 ಉಪಾಧ್ಯಕ್ಷರ ಸ್ಥಾನಗಳನ್ನು ತಮ್ಮ ಪ್ರಮುಖ ಮಿತ್ರ ಪಕ್ಷವಾದ ಕಾಂಗ್ರೆ‍ಸ್‌ಗೆ ಡಿಎಂಕೆ ಬಿಟ್ಟುಕೊಟ್ಟಿದೆ. ಇತರ ಮಿತ್ರಪಕ್ಷಗಳಾದ ಸಿಪಿಐ (ಎಂ), ಸಿಪಿಐ, ಎಂಡಿಎಂಕೆ ಮತ್ತು ವಿಸಿಕೆ ತಲಾ ಒಂದು ಉಪಮೇಯರ್ ಹುದ್ದೆಯನ್ನು ಪಡೆದುಕೊಂಡಿವೆ.

ಕುಂಭಕೋಣಂನಲ್ಲಿ ಆಟೋರಿಕ್ಷಾ ಚಾಲಕ ಶರವಣನ್ ಅವರನ್ನು ಮೇಯರ್ ಆಗಿ ಆಯ್ಕೆ ಮಾಡಲಾಗಿದ್ದು, ಅವರು ಕಾಂಗ್ರೆಸ್ ಪಕ್ಷದಿಂದ ಗೆಲುವು ಸಾಧಿಸಿದ್ದರು.


ಇದನ್ನೂ ಓದಿರಿ: ರಾಯಚೂರು: ಕ್ಷುಲ್ಲಕ ಕಾರಣಕ್ಕೆ ದಲಿತರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಆರೋಪ, ದೂರು ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....