Homeಮುಖಪುಟಅಪ್ರಾಪ್ತ ಬಾಲಕಿಯ ಅತ್ಯಾಚಾರ, ಕೊಲೆ: ಆರೋಪಿಯ ಗಲ್ಲು ಶಿಕ್ಷೆಗೆ ಸುಪ್ರೀಂಕೋರ್ಟ್ ತಡೆ

ಅಪ್ರಾಪ್ತ ಬಾಲಕಿಯ ಅತ್ಯಾಚಾರ, ಕೊಲೆ: ಆರೋಪಿಯ ಗಲ್ಲು ಶಿಕ್ಷೆಗೆ ಸುಪ್ರೀಂಕೋರ್ಟ್ ತಡೆ

- Advertisement -
- Advertisement -

2018 ರಲ್ಲಿ ಡೆಹ್ರಾಡೂನ್‌ನಲ್ಲಿ 11 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಹತ್ಯೆಗೈದಿದ್ದ ಆರೋಪಿಯೊಬ್ಬರಿಗೆ ವಿಧಿಸಲಾಗಿದ್ದ ಗಲ್ಲು ಶಿಕ್ಷೆಗೆ ಸುಪ್ರೀಂ ಕೋರ್ಟ್ ತಡೆ ನೀಡಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ವಿಚಾರಣಾ ನ್ಯಾಯಾಲಯವು ನೀಡಿದ್ದ ಮರಣದಂಡನೆಯನ್ನು ಅನುಮೋದಿಸಿದ್ದ ಉತ್ತರಾಖಂಡ ಹೈಕೋರ್ಟ್‌ನ ಜನವರಿ 2020 ರ ತೀರ್ಪಿನ ವಿರುದ್ಧ ಆರೋಪಿ ಸುಪ್ರೀಂ ಕೋರ್ಟ್‌‌ಗೆ ಮೇಲ್ಮನವಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ, ಅರ್ಜಿದಾರನ ಮಾನಸಿಕ ಸ್ಥಿತಿಯನ್ನು ಮೌಲ್ಯಮಾಪನವನ್ನು ಮಾಡಿ ಅದರ ವರದಿಯನ್ನು ನೀಡುವಂತೆ ನ್ಯಾಯಮೂರ್ತಿ ಯು.ಯು.ಲಲಿತ್ ನೇತೃತ್ವದ ಪೀಠ ಸೂಚಿಸಿದೆ.

“ಪ್ರಕರಣದಲ್ಲಿ ಹೆಚ್ಚಿನ ಪರಿಗಣನೆಗೆ ಬಾಕಿಯಿದೆ, ಅರ್ಜಿದಾರನಿಗೆ ನೀಡಲಾದ ಮರಣದಂಡನೆಯ ಕಾರ್ಯಾಚರಣೆಯನ್ನು ತಡೆಹಿಡಿಯಲಾಗುತ್ತದೆ. ಈ ಸಂಬಂಧದ ಸೂಚನೆಯನ್ನು ತಕ್ಷಣವೇ ಸಂಬಂಧಪಟ್ಟ ಕಾರಾಗೃಹಕ್ಕೆ ಕಳುಹಿಸಲಿ” ಎಂದು ನ್ಯಾಯಮೂರ್ತಿಗಳಾದ ಎಸ್‌ಆರ್ ಭಟ್ ಮತ್ತು ಪಿ ಎಸ್ ನರಸಿಂಹ ಅವರನ್ನೊಳಗೊಂಡ ಪೀಠ ಮಾರ್ಚ್ 2 ಆದೇಶದಲ್ಲಿ ಹೇಳಿದೆ.

ಇದನ್ನೂ ಓದಿ: ಕೊಲೆ ಯತ್ನ ಪ್ರಕರಣ: ವಕೀಲ ಜಗದೀಶ್‌ಗೆ ಜಾಮೀನು, ಇನ್ನೊಂದು ಪ್ರಕರಣದ ವಿಚಾರಣೆ ಮಾ.7ಕ್ಕೆ

ಈ ವಿಷಯದಲ್ಲಿ ಸಂಪೂರ್ಣ ವರದಿ ಪಡೆಯುವ ಸಲುವಾಗಿ, ಅಪರಾಧಿ ಜೈಲಿನಲ್ಲಿದ್ದಾಗ ಮಾಡಿದ ಕೆಲಸಗಳ ಸ್ವರೂಪದ ಬಗ್ಗೆ ಸಂಬಂಧಿಸಿದ ಜೈಲು ಆಡಳಿತ ಏಪ್ರಿಲ್ 25 ರೊಳಗೆ ವರದಿಯನ್ನು ತನ್ನ ಮುಂದೆ ಇಡಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಜೊತೆಗೆ ನ್ಯಾಯದ ಹಿತಾಸಕ್ತಿಗಾಗಿ ನಾವು ಮೇಲ್ಮನವಿದಾರರ ಮಾನಸಿಕ ಸ್ಥಿತಿಗತಿಯ ಮೌಲ್ಯಮಾಪನವನ್ನು ಪಡೆಯಬೇಕೆಂದು ಭಾವಿಸುತ್ತೇವೆ” ಎಂದು ಪೀಠ ತಿಳಿಸಿದೆ.

ಘಟನೆ ಹಿನ್ನೆಲೆ: 

ಜುಲೈ 2018 ರಲ್ಲಿ ಡೆಹ್ರಾಡೂನ್‌ನಲ್ಲಿ 11 ವರ್ಷದ ಬಾಲಕಿಯ ತಂದೆ ನೀಡಿದ ದೂರಿನ ಮೇರೆಗೆ ಅಪರಾಧಿ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ. ಇತರ ಮಕ್ಕಳೊಂದಿಗೆ ಆಟವಾಡುತ್ತಿದ್ದ ತನ್ನ ಮಗಳು ನಾಮತ್ತೆಯಾಗಿದ್ದಾರೆ. ಮಕ್ಕಳ ಬಳಿ ತನ್ನ ಮಗಳ ಬಗ್ಗೆ ವಿಚಾರಿಸಿದಾಗ ಆರೋಪಿ ಜೈ ಪ್ರಕಾಶ್ ಆಕೆಯನ್ನು ತನ್ನ ಗುಡಿಸಲಿನ ಕಡೆಗೆ ಕರೆದೊಯ್ದಿದ್ದಾನೆ ಎಂದು ತಿಳಿಸಲಾಗಿತ್ತು. ಗುಡಿಸಲಿನಲ್ಲಿ ಸಂತ್ರಸ್ತೆಯ ಶವ ಪತ್ತೆಯಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿತ್ತು.

ವಿಚಾರಣೆ ವೇಳೆ ಆರೋಪಿಯು ನಿರಪರಾಧಿ ಎಂದು ಹೇಳಿಕೊಂಡಿದ್ದು, ಈ ಪ್ರಕರಣದಲ್ಲಿ ತನ್ನನ್ನು ತಪ್ಪಾಗಿ ಸಿಲುಕಿಸಲಾಗಿದೆ ಎಂದು ಹೇಳಿದ್ದರು.

ಆರೋಪಿ ಜೈ ಪ್ರಕಾಶ್ ವಿರುದ್ಧ ಅವರನ್ನು ಭಾರತೀಯ ದಂಡ ಸಂಹಿತೆಯ ಅಡಿಯಲ್ಲಿ ಅತ್ಯಾಚಾರ ಮತ್ತು ಕೊಲೆ ಸೇರಿದಂತೆ ಪೋಕ್ಸೊ ಸಂಬಂಧಿತ ನಿಬಂಧನೆಗಳ ಅಡಿಯಲ್ಲಿ ಆಗಸ್ಟ್ 2019 ರಲ್ಲಿ ವಿಚಾರಣಾ ನ್ಯಾಯಾಲಯವು ದೋಷಿ ಎಂದು ತೀರ್ಪು ನೀಡಿತ್ತು. ಜೊತೆಗೆ  ಆರೋಪಿಯು ಅಸಹಾಯಕಳಾದ ಸಂತ್ರಸ್ತೆ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ್ದಾರೆ ಎಂಬುದನ್ನು ಸಾಬೀತುಪಡಿಸುವಲ್ಲಿ ಪ್ರಾಸಿಕ್ಯೂಷನ್ ಯಶಸ್ವಿಯಾಗಿದೆ ಎಂದು ಹೈಕೋರ್ಟ್ ಹೇಳಿತ್ತು.


ಇದನ್ನೂ ಓದಿ: ನಾಗರಾಜ್‌ ಮಂಜುಳೆಯ ‘ಝುಂಡ್‌’: ಕ್ರೀಡಾ ಜಗತ್ತಿನ ‘ಅಸ್ಪೃಶ್ಯ ಭಾರತ ದರ್ಶನ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....