Homeಮುಖಪುಟಪ್ರತಿ ಊರಿನ ಸರ್ಕಾರಿ ಶಾಲೆಯಲ್ಲೂ ಇಂತಹ ಶಿಕ್ಷಕಿ ಇರಬೇಕಲ್ಲವೇ?

ಪ್ರತಿ ಊರಿನ ಸರ್ಕಾರಿ ಶಾಲೆಯಲ್ಲೂ ಇಂತಹ ಶಿಕ್ಷಕಿ ಇರಬೇಕಲ್ಲವೇ?

- Advertisement -
- Advertisement -

ಶಿಕ್ಷಣವು ನಿಮ್ಮನ್ನು ಬಾನೆತ್ತರಕ್ಕೆ ಕೊಂಡೊಯ್ಯುತ್ತದೆ…. ಉತ್ತಮ ಶಿಕ್ಷಣ, ಉತ್ತಮ ಜ್ಞಾನವು ನಮ್ಮ ಪ್ರತಿಭೆಯನ್ನು ಹೆಚ್ಚಿಸುತ್ತದೆ. ಅದೇ ರೀತಿಯಲ್ಲಿ ತಮಿಳುನಾಡಿನ ಸರ್ಕಾರ ಶಾಲೆಯಲ್ಲಿ ಓದುತ್ತಿರುವ ದಿನಗೂಲಿ ಕಾರ್ಮಿಕನ ಚಿಕ್ಕ ಮಗಳು ವಿಮಾನ ಹತ್ತುತ್ತಾಳೆ ಎಂಬುದನ್ನು ಆಕೆಯ ಪೋಷಕರೇ ನಂಬಲಾಗಲಿಲ್ಲ.

‘ಸೂರರೈ ಪೋಟ್ರು’ ಸಿನಿಮಾದ ಚಿತ್ರತಂಡವು ಆಯೋಚಿಸಿದ್ದ ಪ್ರಬಂಧ ಸ್ಪರ್ಧೆಯಲ್ಲಿ ಸೇಲಂ ಜಿಲ್ಲೆಯ ಜಾನ್ ಚೆಟ್ಟಿಮಂಕುರಿಚಿಯಲ್ಲಿರುವ ಸರ್ಕಾರಿ ಶಾಲೆಯ ವಿದ್ಯಾರ್ಥಿನಿ ಅಂತರಿಕ್ಷಾ ಮೊದಲ ಬಹುಮಾನ ಪಡೆದುಕೊಂಡಳು. ಪ್ರತಿಫಲವಾಗಿ ಆಕೆಗೆ ವಿಮಾನಯಾನ ಮಾಡುವ ಅವಕಾಶವನ್ನು ಚಿತ್ರತಂಡ ಬಹುಮಾನವಾಗಿ ನೀಡಿದೆ.

ಇಂತಹ ಅವಕಾಶಕ್ಕಾಗಿ ಆಕೆ ತನ್ನ ಶಿಕ್ಷಕಿ ಎಸ್ ಉಮಾ ಮಹೇಶ್ವರಿ ಅವರಿಗೆ ಧನ್ಯವಾದ ಹೇಳುತ್ತಾಳೆ. ಪುಸ್ತಕ ಓದುವ ಅಭಿರುಚಿಯನ್ನು ಮೈಗೂಡಿಸಿಕೊಂಡಿರುವ ಉಮಾ ಅವರು ಸುಮಾರು ಎರಡು ದಶಕಗಳಿಂದ ಹಲವು ಸರ್ಕಾರಿ ಶಾಲೆಯ ಮಕ್ಕಳ ಜೀವನದಲ್ಲಿ ಹೊಸ ಚಿತ್ತಾರ ಮೂಡಿಸಿದ್ದಾರೆ.

ಮಕ್ಕಳಲ್ಲಿ ಹೊಸ ಹುರುಪು, ಚೈತನ್ಯವನ್ನು ತುಂಬುವ ಅವರು, 2005ರಲ್ಲಿ ಆರಂಭವಾದ ಜಾನ್ ಚೆಟ್ಟಿಮಂಕುರಿಚಿ ಸರ್ಕಾರಿ ಶಾಲೆಯಲ್ಲಿ ‘ಕಲೈಕತಿರ್’ ಎಂಬ ಪತ್ರಿಕೆಯನ್ನು ತರುತ್ತಿದ್ದಾರೆ. ಅದು ನಿಯಮಿತವಾಗಿ 6, 7 ಮತ್ತು 8 ನೇ ತರಗತಿಗಳ ವಿದ್ಯಾರ್ಥಿಗಳಿಗೆ ಬೆನ್ನುಹೊರೆಯನ್ನು ಕಡಿಮೆ ಮಾಡುವ ಮೂಲಕ ಹೆಚ್ಚಿನ ಓದು ಮತ್ತು ವಿಜ್ಞಾನ ಪ್ರಯೋಗಗಳಿಗೆ ಸಹಕಾರಿಯಾಗಿದೆ. ಉಮಾ ಅವರ ಈ ಚಿಕ್ಕ ಪ್ರಯೋಗವು ವಿದ್ಯಾರ್ಥಿಗಳಲ್ಲಿ ಓದಿನಲ್ಲಿ ಸಾಕಷ್ಟು ಬದಲಾವಣೆಯನ್ನು ತರುತ್ತಿದೆ.

ಸದಾ ಓದಿನಲ್ಲೇ ತಮ್ಮ ಹೆಚ್ಚು ಸಮಯ ಕಳೆಯುವ ಉಮಾ ಅವರು ತಮ್ಮ ವಿದ್ಯಾರ್ಥಿಗಳಿಗೂ ಓದುವ ಹವ್ಯಾಸವನ್ನು ತುಂಬಿದ್ದಾರೆ. ಅವರು ಕೆಲಸ ಮಾಡುವ ಪ್ರತಿಯೊಂದು ಶಾಲೆಯಲ್ಲಿಯೂ ತಮ್ಮ ವಿದ್ಯಾರ್ಥಿಗಳಿಗೆ ನಿಗದಿತ ಪಠ್ಯಪುಸ್ತಕಗಳನ್ನು ಮೀರಿ ಓದುವ ಹವ್ಯಾಸವನ್ನು ಬಿತ್ತಿದ್ದಾರೆ ಮತ್ತು ಬಿತ್ತುತ್ತಿದ್ದಾರೆ.

ಇದನ್ನೂ ಓದಿರಿ: 334 ವರ್ಷಗಳ ಇತಿಹಾಸವಿರುವ ಚೆನ್ನೈ ಪಾಲಿಕೆಗೆ ಮೊದಲ ಬಾರಿಗೆ ದಲಿತ ಮಹಿಳೆ ಮೇಯರ್‌

2018ರಲ್ಲಿ ಕ್ರೋಮ್‌ಪೇಟೆಯ ಸರ್ಕಾರಿ ಶಾಲೆಯಲ್ಲಿ ಅವರು ಪ್ರಕಟಿಸುತ್ತಿದ್ದ ‘ಕ್ಲಾಸ್ ರೂಮ್ ಲೈಬ್ರರಿ’, ‘ತುಂಬಿ’ ಮತ್ತು ಅಗರಮ್‌ ಶಾಲೆಯಲ್ಲಿ ಪ್ರಕಟಿಸುತ್ತಿದ್ದ ‘ಯಧುಮ್’ ಎಂಬ ಹೆಸರಿನ ನಿಯತಕಾಲಿಕೆಗಳು ವಿದ್ಯಾರ್ಥಿಗಳಿಗೆ ನೆರವಾಗಿವೆ. ಅನೇಕ ವಿದ್ಯಾರ್ಥಿಗಳು ಹೆಚ್ಚು ಪದಗಳನ್ನು ಕಲಿಯಲು, ಅವುಗಳ ಅರ್ಥಗಳನ್ನು ತಿಳಿಯಲು ಈ ನಿಯತಕಾಲಿಕೆಗಳು ಸಹಾಯ ಮಾಡಿವೆ.

ಅಂಕಪಟ್ಟಿಯ ಅಂಕಗಳು ವಿದ್ಯಾರ್ಥಿಗಳಲ್ಲಿ ಪ್ರಬುದ್ದತೆಯನ್ನು ರೂಪಿಸುವುದಿಲ್ಲ. ಆದರೆ, ಅಂಕಗಳಿಗೂ ಹೊರತಾದ ಜ್ಞಾನವು ಶಾಲಾ ಮಕ್ಕಳನ್ನು ಭಾವಪರವಶರನ್ನಾಗಿಸುತ್ತದೆ. ಅಪ್ರಬುದ್ಧತೆಯನ್ನು ಅಳಿಸಿ ಪ್ರಬುದ್ದತೆಯನ್ನು ಬೆಳೆಸುತ್ತದೆ. ಇದೂ ಕೂಡ ವಿದ್ಯಾರ್ಥಿಗಳು ಹೆಚ್ಚು ಅಂಕಗಳನ್ನೂ ಪಡೆಯಲು ಸಹಾಯ ಮಾಡುತ್ತದೆ ಎನ್ನುತ್ತಾರೆ ಉಮಾ.

ಈಗ ವಿದ್ಯಾರ್ಥಿಗಳ ಮೂಲ ಕಲ್ಪನೆಗಳು, ಕಥೆಗಳು, ಲೇಖನಗಳು ಮತ್ತು ಸೃಜನಶೀಲ ಚಿತ್ರಣಗಳೊಂದಿಗೆ ಶಾಲೆಯು ಅಭಿವೃದ್ಧಿ ಹೊಂದುತ್ತಿದೆ. ತನ್ನ ಬಿಡುವಿನ ವೇಳೆಯಲ್ಲಿ, ಲೇಖಕರನ್ನು ಭೇಟಿ ಮಾಡಲು ಮತ್ತು ಹೊಸ ಶೀರ್ಷಿಕೆಗಳನ್ನು ಹುಡುಕಲು ಉಮಾ ಅವರು ತಮ್ಮ ಶಾಲೆಯ ಆರು ವಿದ್ಯಾರ್ಥಿಗಳನ್ನು ನಂದನಂನಲ್ಲಿರುವ ಚೆನ್ನೈ ಪುಸ್ತಕ ಮೇಳಕ್ಕೆ ಕರೆದೊಯ್ದು ವಿದ್ಯಾರ್ಥಿಗಳ ಜ್ಞಾನವನ್ನು ಮತ್ತಷ್ಟು ವಿಸ್ತರಿಸುತ್ತಿದ್ದಾರೆ.

ಮಕ್ಕಳು ಮತ್ತು ಶಿಕ್ಷಕರಿಗೆ ಹುಟ್ಟುಹಬ್ಬದ ಸಂದರ್ಭದಲ್ಲಿ ಉಮಾ ಅವರು ನೀಡುವ ಉಡುಗೊರೆಗಳು ಅದ್ಭುತ ಪುಸ್ತಕಗಳಾಗಿರುತ್ತವೆ. ಅವರ ಈ ನಡೆ ಸುತ್ತಲಿನ ಜನರಲ್ಲಿ ಲವಲವಿಕೆಯ ಮನೋಭಾವವನ್ನು ಬೆಳೆಸುತ್ತದೆ ಎಂದು ಕ್ರೋಂಪೇಟೆಯ ಎಂಬಿಎನ್ ಸರ್ಕಾರಿ ಬಾಲಕಿಯರ ಪ್ರೌಢಶಾಲೆಯ ಸಮಾಜ ವಿಜ್ಞಾನ ಶಿಕ್ಷಕಿ ಎಂ ಗಾಂಧಿಮತಿ ಹೇಳುತ್ತಾರೆ.

“ವಿದ್ಯಾರ್ಥಿಗಳು ಒಮ್ಮೆ ಪುಸ್ತಕವನ್ನು ತೆಗೆದುಕೊಂಡರೆ, ಅವರು ಬೇಗನೆ ಓದುವ ಹವ್ಯಾಸವನ್ನು ಬೆಳೆಸಿಕೊಳ್ಳುತ್ತಾರೆ. ವಿಶೇಷವಾಗಿ ಈ ವಯಸ್ಸಿನಲ್ಲಿ ಮಕ್ಕಳು ಹೆಚ್ಚು ಓದುವುದು ಗಮನಾರ್ಹ” ಎಂದು ಗಾಂಧಿಮತಿ ಹೇಳುತ್ತಾರೆ.

ಮಕ್ಕಳ ಪೋಷಕರು ತಮ್ಮ ಮಕ್ಕಳು ಪುಸ್ತಕಗಳ ಓದಿನಲ್ಲಿ ಮುಳುಗಿರುವುದನ್ನು ನೋಡಿ ಕುತೂಹಲಗೊಳ್ಳುತ್ತಾರೆ ಮತ್ತು ಸಂತೋಷ ಪಡುತ್ತಾರೆ. ಉಮಾ ಅವರ ಸಣ್ಣ ಪುಸ್ತಕ ಸಂಗ್ರಹವು ಈಗ ದೊಡ್ಡ ಗ್ರಂಥಾಲಯವಾಗಿ ಮಾರ್ಪಟ್ಟಿದೆ. ಏಕೆಂದರೆ ಪೋಷಕರು ಪುಸ್ತಕಗಳ ಬಂಡಲ್‌ಗಳನ್ನು ದಾನ ಮಾಡುತ್ತಿದ್ದಾರೆ, ಲೇಖಕರು ತಮ್ಮ ಪುಸ್ತಕಗಳ ಸಹಿ ಮಾಡಿದ ಪ್ರತಿಗಳನ್ನು ಕೊಡುಗೆ ನೀಡುತ್ತಿದ್ದಾರೆ ಎಂದು ಶಾಲೆಯ ಮುಖ್ಯ ಶಿಕ್ಷಕರು ಹೇಳುತ್ತಾರೆ.

ವಿದ್ಯಾರ್ಥಿಗಳು ಬರೆದ ಪುಸ್ತಕ ವಿಮರ್ಶೆಗಳನ್ನು ಸ್ಥಳೀಯ ಪತ್ರಿಕೆಗಳು ಪ್ರಕಟಿಸುತ್ತವೆ. ಶಾಲೆಯ ಇಬ್ಬರು ಹುಡುಗಿಯರು ಪ್ರಬಂಧ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. “ಈ ಅವಕಾಶವಿಲ್ಲದಿದ್ದರೆ, ನನಗೆ ಎಂದಾದರೂ ವಿಮಾನದಲ್ಲಿ ಹಾರಲು ಅವಕಾಶ ಸಿಗುತ್ತಿತ್ತೇ ಎಂದು ನನಗೆ ಊಹಿಸಲೂ ಸಾಧ್ಯವಿಲ್ಲ” ಎಂದು ವಿದ್ಯಾರ್ಥಿನಿ ಅಂತರಿಕ್ಷಾ ಹೇಳುತ್ತಾರೆ.


ಇದನ್ನೂ ಓದಿರಿ: ಮಹಿಳಾ ವಿಶ್ವಕಪ್‌: ಪಾಕ್‌ ವಿರುದ್ಧ ಭಾರತ ಜಯಭೇರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಇಂತಹ ಶಿಕ್ಷಕರು ವಿಧ್ಯಾರ್ಥಿಗಳ ಪಾಲಿಗೆ ದೇವರಿದ್ದ ಹಾಗೆ… ಅಭಿನಂದನೆಗಳು ಈ ಶಿಕ್ಷಕರಿಗೆ.

  2. I would like to congratulate and big Salute for a Ideal Teacher Miss Uma . I suggest to the government of India MHRD consider your valuable service and Award as RASHTRIYA SHIKSHAK SAMMAN PURASKAR 5th September 2022 .
    With regards
    Best of luck
    Your faithfully
    A.P.MUHSIN GPT Teacher govt higher primary Urdu school Aladakatti Haveri Karnataka
    9902653162

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...