Homeಮುಖಪುಟಸಿಬಿಐಗಿದ್ದ ಸಮ್ಮತಿಯನ್ನು ಹಿಂಪಡೆದ ಮೇಘಾಲಯ: ಒಂಬತ್ತು ರಾಜ್ಯಗಳಲ್ಲಿ ಸಿಬಿಐಗೆ ಎಂಟ್ರಿ ಇಲ್ಲ!

ಸಿಬಿಐಗಿದ್ದ ಸಮ್ಮತಿಯನ್ನು ಹಿಂಪಡೆದ ಮೇಘಾಲಯ: ಒಂಬತ್ತು ರಾಜ್ಯಗಳಲ್ಲಿ ಸಿಬಿಐಗೆ ಎಂಟ್ರಿ ಇಲ್ಲ!

- Advertisement -
- Advertisement -

ಕೇಂದ್ರ ತನಿಖಾ ಸಂಸ್ಥೆ (ಸಿಬಿಐ)ಗೆ ಮನ್ನಣೆ ನೀಡಿದ್ದ ರಾಜ್ಯಗಳು ಇತ್ತೀಚೆಗೆ, ಸಿಬಿಐ ಬಗೆಗೆ ತಮ್ಮ ನಿಲುವನ್ನು ಬದಲಿಸಿಕೊಂಡಿವೆ. ಹೀಗಾಗಿ, ಸಿಬಿಐಗೆ ನೀಡಿದ್ದ ಮನ್ನಣೆಯನ್ನು ಕೆಲವು ರಾಜ್ಯಗಳು ಹಿಂಪಡೆದುಕೊಂಡಿವೆ. ಇದೀಗ, ಆ ರಾಜ್ಯಗಳ ಪಟ್ಟಿಗೆ ಮೇಘಾಲಯವೂ ಸೇರಿಕೊಂಡಿದೆ.

ಸಿಬಿಐಗೆ ಕಾರ್ಯಾಚರಣೆಗೆ ನೀಡಿದ್ದ ಒಪ್ಪಿಗೆಯನ್ನು ರಾಜ್ಯಗಳು ಹಿಂಪಡೆದುಕೊಂಡರೆ, ಅಂತಹ ರಾಜ್ಯಗಳಲ್ಲಿ ರಾಜ್ಯ ಸರ್ಕಾರದ ಅನುಮತಿಯಿಲ್ಲದೆ ಯಾವುದೇ ಪ್ರಕರಣಗಳನ್ನು ಸಿಬಿಐ ತನಿಖೆ ನಡೆಸಲು ಸಾಧ್ಯವಿಲ್ಲ. ಸಿಬಿಐ ತನಿಖೆ ನಡೆಸಲು ಅನುಮತಿಯೂ ಇರುವುದಿಲ್ಲ.

ಸಿಬಿಐ ತನ್ನ ತನಿಖೆಯಲ್ಲಿ ನ್ಯಾಯಯುತ ಮತ್ತು ನಿಷ್ಪಕ್ಷಪಾತವಾಗಿ ಕಾರ್ಯನಿರ್ವಹಿಸುತ್ತಿಲ್ಲ. ಅದು ಕೇಂದ್ರ ಸರ್ಕಾರದ ಕೈಯಲ್ಲಿದ್ದು, ಬಿಜೆಪಿಯ ಕೈಗೊಂಬೆಯಾಗಿದೆ ಎಂದು ಆರೋಪಿಸಿರುವ ವಿವಿಧ ರಾಜ್ಯಗಳ ಸರ್ಕಾರಗಳು ಸಿಬಿಐಗೆ ನೀಡಿದ್ದ ಮನ್ನಣೆಯನ್ನು ವಾಪಸ್ ಪಡೆದುಕೊಂಡಿವೆ.

2015ರಲ್ಲಿ ಮಿಜೋರಾಂ ರಾಜ್ಯವು ಮೊದಲ ಬಾರಿಗೆ ಸಿಬಿಐಗೆ ನೀಡಿದ್ದ ಮನ್ನಣೆಯನ್ನು ವಾಪಸ್ ಪಡೆದುಕೊಂಡಿತು. ಆಗ ಮುಖ್ಯಮಂತ್ರಿ ಲಾಲ್ ಥನ್ಹಾವ್ಲಾ ನೇತೃತ್ವದ ಕಾಂಗ್ರೆಸ್ ರಾಜ್ಯದಲ್ಲಿ ಅಧಿಕಾರದಲ್ಲಿತ್ತು. ನಂತರ, 2018ರಲ್ಲಿ ರಾಜ್ಯದಲ್ಲಿ ಬಿಜೆಪಿ ಮಿತ್ರಪಕ್ಷವಾದ ಮಿಜೋ ನ್ಯಾಷನಲ್ ಫ್ರಂಟ್ (MNF) ಪಕ್ಷವು ಅಧಿಕಾರಕ್ಕೆ ಬಂದಿತು. ಆದರೂ, ಅದು ಸಿಬಿಐಗೆ ಮನ್ನಣೆಯನ್ನು ಮತ್ತೆ ನೀಡಲಿಲ್ಲ.

ಇದನ್ನೂ ಓದಿರಿ: ಅಪ್ರಾಪ್ತ ಬಾಲಕಿಯ ಅತ್ಯಾಚಾರ, ಕೊಲೆ: ಆರೋಪಿಯ ಗಲ್ಲು ಶಿಕ್ಷೆಗೆ ಸುಪ್ರೀಂಕೋರ್ಟ್ ತಡೆ

ಬಳಿಕ ಮಹಾರಾಷ್ಟ್ರ, ಪಂಜಾಬ್, ರಾಜಸ್ಥಾನ, ಪಶ್ಚಿಮ ಬಂಗಾಳ, ಜಾರ್ಖಂಡ್, ಛತ್ತೀಸ್ಗಢ ಮತ್ತು ಕೇರಳ ರಾಜ್ಯಗಳು ಸಿಬಿಐಗೆ ನೀಡಿದ್ದ ಮನ್ನಣೆಯನ್ನು ವಾಪಸ್ ಪಡೆದುಕೊಂಡವು. ಇದೀಗ, ಮೇಘಾಲಯವೂ ತನ್ನ ಒಪ್ಪಿಗೆಯನ್ನು ಹಿಂಪಡೆದುಕೊಂಡಿದೆ.

ವಿಶೇಷವೆಂದರೆ, ಕೇಂದ್ರದಲ್ಲಿ ಎನ್‌ಡಿಎ ಮೈತ್ರಿಕೂಟದ ಭಾಗವೇ ಆಗಿರುವ ಕಾನ್ರಾಡ್ ಸಂಗ್ಮಾ ನೇತೃತ್ವದ ನ್ಯಾಷನಲ್ ಪೀಪಲ್ಸ್ ಪಾರ್ಟಿ ಮೇಘಾಲಯದಲ್ಲಿ ಅಧಿಕಾರದಲ್ಲಿದೆ. ಆದರೂ, ರಾಜ್ಯವು ಈ ನಿರ್ಧಾರ ಕೈಗೊಂಡಿದೆ.

ಸಿಬಿಐಗೆ ನೀಡಿದ್ದ ಮನ್ನಣೆಯನ್ನು ಹಿಂತೆಗೆದುಕೊಂಡ ರಾಜ್ಯಗಳ ಪೈಕಿ, ಮಿಜೋರಾಂ ಹೊರತುಪಡಿಸಿ ಉಳಿದ ಎಲ್ಲಾ ರಾಜ್ಯಗಳಲ್ಲಿ ಎನ್‌‌ಡಿಎ ಕೂಟದ ವಿರೋಧ ಪಕ್ಷಗಳು ಆಳ್ವಿಯಲ್ಲಿವೆ.

“ಈ ನಿರ್ಧಾರವನ್ನು ಬಹಳ ಹಿಂದೆಯೇ ಮಾಡಲಾಗಿತ್ತು. ನನಗೆ ದಿನಾಂಕ ನೆನಪಿಲ್ಲ. ಆದ್ದರಿಂದ, ಈ ವಿಚಾರದಲ್ಲಿ ಆಶ್ಚರ್ಯ ಪಡುವಂತಹದ್ದು ಏನು ಇಲ್ಲ. ಬಹಳಷ್ಟು ರಾಜ್ಯಗಳು ಈ ನಿರ್ಧಾರವನ್ನು ತೆಗೆದುಕೊಂಡಿವೆ. ಅದೇ ರೀತಿಯಲ್ಲಿ ನಾವು ನಿರ್ಧರಿಸಿದ್ದೇವೆ. ತನಿಖೆಗಾಗಿ ರಾಜ್ಯಕ್ಕೆ ಬರುವವರು, ರಾಜ್ಯದ ಅನುಮತಿ ಪಡೆಯಬೇಕು. ಇದು ಸಾಮಾನ್ಯ ವಿಷಯ” ಎಂದು ಸಿಎಂ ಕಾನ್ರಾಡ್ ಸಂಗ್ಮಾ ಹೇಳಿದ್ದಾರೆ.

ಮುಖ್ಯಮಂತ್ರಿ ಕಾನ್ರಾಡ್ ಸಂಗ್ಮಾ ಅವರ ಸಹೋದರ ಜೇಮ್ಸ್ ಪಿ.ಕೆ.ಸಂಗ್ಮಾ ವಿರುದ್ಧ ಭ್ರಷ್ಟಾಚಾರದ ಆರೋಪವಿದೆ. ಈ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸುವಂತೆ ಕಾಂಗ್ರೆಸ್ ಒತ್ತಾಯಿಸಿತ್ತು. ಈ ಹಿನ್ನೆಲೆಯಲ್ಲಿ ಮೇಘಾಲಯ ಸರ್ಕಾರ ಸಿಬಿಐಗೆ ನೀಡಿದ್ದ ಮನ್ನಣೆಯನ್ನು ವಾಪಸ್ ಪಡೆದುಕೊಂಡಿದೆ ಎಂದು ಹೇಳಲಾಗುತ್ತಿದೆ.

ದೇಶದ ಎಲ್ಲಾ ನಗರ ಮತ್ತು ಗ್ರಾಮೀಣ ಪ್ರದೇಶಗಳ ಮನೆಗಳಿಗೆ ವಿದ್ಯುತ್ ಸಂಪರ್ಕಗಳನ್ನು ಒದಗಿಸುವ ಗುರಿಯನ್ನು ಹೊಂದಿದ್ದ, ಸೌಭಾಗ್ಯ ಯೋಜನೆಯನ್ನು ಮೇಘಾಲಯದಲ್ಲಿ ಅನುಷ್ಠಾನಗೊಳಿಸುವಾಗ ನಡೆದ ಭಾರೀ ಭ್ರಷ್ಟಾಚಾರದಲ್ಲಿ ಜೇಮ್ಸ್ ಭಾಗಿಯಾಗಿದ್ದಾರೆ; ಅಕ್ರಮ ಗಣಿಗಾರಿಕೆ ಮತ್ತು ಕಲ್ಲಿದ್ದಲು ಸಾಗಣೆಗೆ ಸಿಂಡಿಕೇಟ್ಗಳಿಗೆ ಅವಕಾಶ ನೀಡುವ ಮೂಲಕ ಲೂಟಿಗೆ ಅವಕಾಶ ಮಾಡಿಕೊಟ್ಟಿದ್ದಾರೆ ಎಂದು ಆರೋಪಿಸಲಾಗಿತ್ತು. ಆರೋಪದ ಹಿನ್ನೆಲೆಯಲ್ಲಿ ಜೇಮ್ಸ್ ಸಂಗ್ಮಾ ಅವರನ್ನು ಗೃಹ ಖಾತೆಯಿಂದ ಕೈಬಿಡಲಾಗಿತ್ತು.

ನವೆಂಬರ್ 2018 ರಲ್ಲಿ, ಮಮತಾ ಬ್ಯಾನರ್ಜಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸಿಬಿಐಗೆ ನೀಡಿದ್ದ ಮನ್ನಣೆಯನ್ನು ಹಿಂತೆಗೆದುಕೊಂಡಿತು. ನಂತರ ಅದೇ ವರ್ಷ, ಆಂಧ್ರಪ್ರದೇಶದಲ್ಲಿ ಅಧಿಕಾರದಲ್ಲಿದ್ದ ಚಂದ್ರಬಾಬು ನಾಯ್ಡು ನೇತೃತ್ವದ ಟಿಡಿಪಿ ಸರ್ಕಾರವೂ ಕೂಡ ತನ್ನ ಒಪ್ಪಿಗೆಯನ್ನು ಹಿಂಪಡೆದುಕೊಂಡಿತು.

“ಬಿಜೆಪಿ ತನ್ನ ಸ್ವಂತ ರಾಜಕೀಯ ಹಿತಾಸಕ್ತಿ ಮತ್ತು ಸೇಡು ತೀರಿಸಿಕೊಳ್ಳಲು ಸಿಬಿಐ ಹಾಗೂ ಇತರ ಏಜೆನ್ಸಿಗಳನ್ನು ಬಳಸಿಕೊಳ್ಳುತ್ತಿದೆ” ಎಂದು ಚಂದ್ರಬಾಬು ನಾಯ್ಡು ಮತ್ತು ಬ್ಯಾನರ್ಜಿ ಹೇಳಿದ್ದರು.

ಆದರೆ, 2019ರಲ್ಲಿ ವೈಎಸ್ ಜಗನ್ ಮೋಹನ್ ರೆಡ್ಡಿ ಅವರು ಆಂಧ್ರದಲ್ಲಿ ಅಧಿಕಾರಕ್ಕೆ ಬಂದ ನಂತರ, ಸಿಬಿಐಗೆ ಮನ್ನಣೆಯನ್ನು ಮತ್ತೆ ನೀಡಿದರು.

ಛತ್ತೀಸ್ಗಢದಲ್ಲಿ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಅವರ ಕಾಂಗ್ರೆಸ್ ಸರ್ಕಾರವು ಜನವರಿ 2019ರಲ್ಲಿ ಸಿಬಿಐಗಿದ್ದ ಸಮ್ಮತಿಯನ್ನು ಹಿಂತೆಗೆದುಕೊಂಡಿತು. 2020ರಲ್ಲಿ ಪಂಜಾಬ್, ಮಹಾರಾಷ್ಟ್ರ, ರಾಜಸ್ಥಾನ, ಕೇರಳ ಮತ್ತು ಜಾರ್ಖಂಡ್ ರಾಜ್ಯಗಳು ತಮ್ಮ ಸಮ್ಮತಿಯನ್ನು ಪಡೆದುಕೊಂಡವು.


ಇದನ್ನೂ ಓದಿರಿ: ದೆಹಲಿಯಲ್ಲಿ ಮದ್ಯ ಮಾರಾಟ ದ್ವಿಗುಣ: ರಿಯಾಯಿತಿ ಹಿಂಪಡೆದ ದೆಹಲಿ ಸರ್ಕಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....