Homeಮುಖಪುಟಸಿಬಿಐಗಿದ್ದ ಸಮ್ಮತಿಯನ್ನು ಹಿಂಪಡೆದ ಮೇಘಾಲಯ: ಒಂಬತ್ತು ರಾಜ್ಯಗಳಲ್ಲಿ ಸಿಬಿಐಗೆ ಎಂಟ್ರಿ ಇಲ್ಲ!

ಸಿಬಿಐಗಿದ್ದ ಸಮ್ಮತಿಯನ್ನು ಹಿಂಪಡೆದ ಮೇಘಾಲಯ: ಒಂಬತ್ತು ರಾಜ್ಯಗಳಲ್ಲಿ ಸಿಬಿಐಗೆ ಎಂಟ್ರಿ ಇಲ್ಲ!

- Advertisement -
- Advertisement -

ಕೇಂದ್ರ ತನಿಖಾ ಸಂಸ್ಥೆ (ಸಿಬಿಐ)ಗೆ ಮನ್ನಣೆ ನೀಡಿದ್ದ ರಾಜ್ಯಗಳು ಇತ್ತೀಚೆಗೆ, ಸಿಬಿಐ ಬಗೆಗೆ ತಮ್ಮ ನಿಲುವನ್ನು ಬದಲಿಸಿಕೊಂಡಿವೆ. ಹೀಗಾಗಿ, ಸಿಬಿಐಗೆ ನೀಡಿದ್ದ ಮನ್ನಣೆಯನ್ನು ಕೆಲವು ರಾಜ್ಯಗಳು ಹಿಂಪಡೆದುಕೊಂಡಿವೆ. ಇದೀಗ, ಆ ರಾಜ್ಯಗಳ ಪಟ್ಟಿಗೆ ಮೇಘಾಲಯವೂ ಸೇರಿಕೊಂಡಿದೆ.

ಸಿಬಿಐಗೆ ಕಾರ್ಯಾಚರಣೆಗೆ ನೀಡಿದ್ದ ಒಪ್ಪಿಗೆಯನ್ನು ರಾಜ್ಯಗಳು ಹಿಂಪಡೆದುಕೊಂಡರೆ, ಅಂತಹ ರಾಜ್ಯಗಳಲ್ಲಿ ರಾಜ್ಯ ಸರ್ಕಾರದ ಅನುಮತಿಯಿಲ್ಲದೆ ಯಾವುದೇ ಪ್ರಕರಣಗಳನ್ನು ಸಿಬಿಐ ತನಿಖೆ ನಡೆಸಲು ಸಾಧ್ಯವಿಲ್ಲ. ಸಿಬಿಐ ತನಿಖೆ ನಡೆಸಲು ಅನುಮತಿಯೂ ಇರುವುದಿಲ್ಲ.

ಸಿಬಿಐ ತನ್ನ ತನಿಖೆಯಲ್ಲಿ ನ್ಯಾಯಯುತ ಮತ್ತು ನಿಷ್ಪಕ್ಷಪಾತವಾಗಿ ಕಾರ್ಯನಿರ್ವಹಿಸುತ್ತಿಲ್ಲ. ಅದು ಕೇಂದ್ರ ಸರ್ಕಾರದ ಕೈಯಲ್ಲಿದ್ದು, ಬಿಜೆಪಿಯ ಕೈಗೊಂಬೆಯಾಗಿದೆ ಎಂದು ಆರೋಪಿಸಿರುವ ವಿವಿಧ ರಾಜ್ಯಗಳ ಸರ್ಕಾರಗಳು ಸಿಬಿಐಗೆ ನೀಡಿದ್ದ ಮನ್ನಣೆಯನ್ನು ವಾಪಸ್ ಪಡೆದುಕೊಂಡಿವೆ.

2015ರಲ್ಲಿ ಮಿಜೋರಾಂ ರಾಜ್ಯವು ಮೊದಲ ಬಾರಿಗೆ ಸಿಬಿಐಗೆ ನೀಡಿದ್ದ ಮನ್ನಣೆಯನ್ನು ವಾಪಸ್ ಪಡೆದುಕೊಂಡಿತು. ಆಗ ಮುಖ್ಯಮಂತ್ರಿ ಲಾಲ್ ಥನ್ಹಾವ್ಲಾ ನೇತೃತ್ವದ ಕಾಂಗ್ರೆಸ್ ರಾಜ್ಯದಲ್ಲಿ ಅಧಿಕಾರದಲ್ಲಿತ್ತು. ನಂತರ, 2018ರಲ್ಲಿ ರಾಜ್ಯದಲ್ಲಿ ಬಿಜೆಪಿ ಮಿತ್ರಪಕ್ಷವಾದ ಮಿಜೋ ನ್ಯಾಷನಲ್ ಫ್ರಂಟ್ (MNF) ಪಕ್ಷವು ಅಧಿಕಾರಕ್ಕೆ ಬಂದಿತು. ಆದರೂ, ಅದು ಸಿಬಿಐಗೆ ಮನ್ನಣೆಯನ್ನು ಮತ್ತೆ ನೀಡಲಿಲ್ಲ.

ಇದನ್ನೂ ಓದಿರಿ: ಅಪ್ರಾಪ್ತ ಬಾಲಕಿಯ ಅತ್ಯಾಚಾರ, ಕೊಲೆ: ಆರೋಪಿಯ ಗಲ್ಲು ಶಿಕ್ಷೆಗೆ ಸುಪ್ರೀಂಕೋರ್ಟ್ ತಡೆ

ಬಳಿಕ ಮಹಾರಾಷ್ಟ್ರ, ಪಂಜಾಬ್, ರಾಜಸ್ಥಾನ, ಪಶ್ಚಿಮ ಬಂಗಾಳ, ಜಾರ್ಖಂಡ್, ಛತ್ತೀಸ್ಗಢ ಮತ್ತು ಕೇರಳ ರಾಜ್ಯಗಳು ಸಿಬಿಐಗೆ ನೀಡಿದ್ದ ಮನ್ನಣೆಯನ್ನು ವಾಪಸ್ ಪಡೆದುಕೊಂಡವು. ಇದೀಗ, ಮೇಘಾಲಯವೂ ತನ್ನ ಒಪ್ಪಿಗೆಯನ್ನು ಹಿಂಪಡೆದುಕೊಂಡಿದೆ.

ವಿಶೇಷವೆಂದರೆ, ಕೇಂದ್ರದಲ್ಲಿ ಎನ್‌ಡಿಎ ಮೈತ್ರಿಕೂಟದ ಭಾಗವೇ ಆಗಿರುವ ಕಾನ್ರಾಡ್ ಸಂಗ್ಮಾ ನೇತೃತ್ವದ ನ್ಯಾಷನಲ್ ಪೀಪಲ್ಸ್ ಪಾರ್ಟಿ ಮೇಘಾಲಯದಲ್ಲಿ ಅಧಿಕಾರದಲ್ಲಿದೆ. ಆದರೂ, ರಾಜ್ಯವು ಈ ನಿರ್ಧಾರ ಕೈಗೊಂಡಿದೆ.

ಸಿಬಿಐಗೆ ನೀಡಿದ್ದ ಮನ್ನಣೆಯನ್ನು ಹಿಂತೆಗೆದುಕೊಂಡ ರಾಜ್ಯಗಳ ಪೈಕಿ, ಮಿಜೋರಾಂ ಹೊರತುಪಡಿಸಿ ಉಳಿದ ಎಲ್ಲಾ ರಾಜ್ಯಗಳಲ್ಲಿ ಎನ್‌‌ಡಿಎ ಕೂಟದ ವಿರೋಧ ಪಕ್ಷಗಳು ಆಳ್ವಿಯಲ್ಲಿವೆ.

“ಈ ನಿರ್ಧಾರವನ್ನು ಬಹಳ ಹಿಂದೆಯೇ ಮಾಡಲಾಗಿತ್ತು. ನನಗೆ ದಿನಾಂಕ ನೆನಪಿಲ್ಲ. ಆದ್ದರಿಂದ, ಈ ವಿಚಾರದಲ್ಲಿ ಆಶ್ಚರ್ಯ ಪಡುವಂತಹದ್ದು ಏನು ಇಲ್ಲ. ಬಹಳಷ್ಟು ರಾಜ್ಯಗಳು ಈ ನಿರ್ಧಾರವನ್ನು ತೆಗೆದುಕೊಂಡಿವೆ. ಅದೇ ರೀತಿಯಲ್ಲಿ ನಾವು ನಿರ್ಧರಿಸಿದ್ದೇವೆ. ತನಿಖೆಗಾಗಿ ರಾಜ್ಯಕ್ಕೆ ಬರುವವರು, ರಾಜ್ಯದ ಅನುಮತಿ ಪಡೆಯಬೇಕು. ಇದು ಸಾಮಾನ್ಯ ವಿಷಯ” ಎಂದು ಸಿಎಂ ಕಾನ್ರಾಡ್ ಸಂಗ್ಮಾ ಹೇಳಿದ್ದಾರೆ.

ಮುಖ್ಯಮಂತ್ರಿ ಕಾನ್ರಾಡ್ ಸಂಗ್ಮಾ ಅವರ ಸಹೋದರ ಜೇಮ್ಸ್ ಪಿ.ಕೆ.ಸಂಗ್ಮಾ ವಿರುದ್ಧ ಭ್ರಷ್ಟಾಚಾರದ ಆರೋಪವಿದೆ. ಈ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸುವಂತೆ ಕಾಂಗ್ರೆಸ್ ಒತ್ತಾಯಿಸಿತ್ತು. ಈ ಹಿನ್ನೆಲೆಯಲ್ಲಿ ಮೇಘಾಲಯ ಸರ್ಕಾರ ಸಿಬಿಐಗೆ ನೀಡಿದ್ದ ಮನ್ನಣೆಯನ್ನು ವಾಪಸ್ ಪಡೆದುಕೊಂಡಿದೆ ಎಂದು ಹೇಳಲಾಗುತ್ತಿದೆ.

ದೇಶದ ಎಲ್ಲಾ ನಗರ ಮತ್ತು ಗ್ರಾಮೀಣ ಪ್ರದೇಶಗಳ ಮನೆಗಳಿಗೆ ವಿದ್ಯುತ್ ಸಂಪರ್ಕಗಳನ್ನು ಒದಗಿಸುವ ಗುರಿಯನ್ನು ಹೊಂದಿದ್ದ, ಸೌಭಾಗ್ಯ ಯೋಜನೆಯನ್ನು ಮೇಘಾಲಯದಲ್ಲಿ ಅನುಷ್ಠಾನಗೊಳಿಸುವಾಗ ನಡೆದ ಭಾರೀ ಭ್ರಷ್ಟಾಚಾರದಲ್ಲಿ ಜೇಮ್ಸ್ ಭಾಗಿಯಾಗಿದ್ದಾರೆ; ಅಕ್ರಮ ಗಣಿಗಾರಿಕೆ ಮತ್ತು ಕಲ್ಲಿದ್ದಲು ಸಾಗಣೆಗೆ ಸಿಂಡಿಕೇಟ್ಗಳಿಗೆ ಅವಕಾಶ ನೀಡುವ ಮೂಲಕ ಲೂಟಿಗೆ ಅವಕಾಶ ಮಾಡಿಕೊಟ್ಟಿದ್ದಾರೆ ಎಂದು ಆರೋಪಿಸಲಾಗಿತ್ತು. ಆರೋಪದ ಹಿನ್ನೆಲೆಯಲ್ಲಿ ಜೇಮ್ಸ್ ಸಂಗ್ಮಾ ಅವರನ್ನು ಗೃಹ ಖಾತೆಯಿಂದ ಕೈಬಿಡಲಾಗಿತ್ತು.

ನವೆಂಬರ್ 2018 ರಲ್ಲಿ, ಮಮತಾ ಬ್ಯಾನರ್ಜಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸಿಬಿಐಗೆ ನೀಡಿದ್ದ ಮನ್ನಣೆಯನ್ನು ಹಿಂತೆಗೆದುಕೊಂಡಿತು. ನಂತರ ಅದೇ ವರ್ಷ, ಆಂಧ್ರಪ್ರದೇಶದಲ್ಲಿ ಅಧಿಕಾರದಲ್ಲಿದ್ದ ಚಂದ್ರಬಾಬು ನಾಯ್ಡು ನೇತೃತ್ವದ ಟಿಡಿಪಿ ಸರ್ಕಾರವೂ ಕೂಡ ತನ್ನ ಒಪ್ಪಿಗೆಯನ್ನು ಹಿಂಪಡೆದುಕೊಂಡಿತು.

“ಬಿಜೆಪಿ ತನ್ನ ಸ್ವಂತ ರಾಜಕೀಯ ಹಿತಾಸಕ್ತಿ ಮತ್ತು ಸೇಡು ತೀರಿಸಿಕೊಳ್ಳಲು ಸಿಬಿಐ ಹಾಗೂ ಇತರ ಏಜೆನ್ಸಿಗಳನ್ನು ಬಳಸಿಕೊಳ್ಳುತ್ತಿದೆ” ಎಂದು ಚಂದ್ರಬಾಬು ನಾಯ್ಡು ಮತ್ತು ಬ್ಯಾನರ್ಜಿ ಹೇಳಿದ್ದರು.

ಆದರೆ, 2019ರಲ್ಲಿ ವೈಎಸ್ ಜಗನ್ ಮೋಹನ್ ರೆಡ್ಡಿ ಅವರು ಆಂಧ್ರದಲ್ಲಿ ಅಧಿಕಾರಕ್ಕೆ ಬಂದ ನಂತರ, ಸಿಬಿಐಗೆ ಮನ್ನಣೆಯನ್ನು ಮತ್ತೆ ನೀಡಿದರು.

ಛತ್ತೀಸ್ಗಢದಲ್ಲಿ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಅವರ ಕಾಂಗ್ರೆಸ್ ಸರ್ಕಾರವು ಜನವರಿ 2019ರಲ್ಲಿ ಸಿಬಿಐಗಿದ್ದ ಸಮ್ಮತಿಯನ್ನು ಹಿಂತೆಗೆದುಕೊಂಡಿತು. 2020ರಲ್ಲಿ ಪಂಜಾಬ್, ಮಹಾರಾಷ್ಟ್ರ, ರಾಜಸ್ಥಾನ, ಕೇರಳ ಮತ್ತು ಜಾರ್ಖಂಡ್ ರಾಜ್ಯಗಳು ತಮ್ಮ ಸಮ್ಮತಿಯನ್ನು ಪಡೆದುಕೊಂಡವು.


ಇದನ್ನೂ ಓದಿರಿ: ದೆಹಲಿಯಲ್ಲಿ ಮದ್ಯ ಮಾರಾಟ ದ್ವಿಗುಣ: ರಿಯಾಯಿತಿ ಹಿಂಪಡೆದ ದೆಹಲಿ ಸರ್ಕಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...