Homeಮುಖಪುಟಪಂಚರಾಜ್ಯ ಚುನಾವಣೆ: ಮತದಾನದಲ್ಲಿ ಪುರುಷರನ್ನು ಮೀರಿಸಿದ ಮಹಿಳೆಯರು!

ಪಂಚರಾಜ್ಯ ಚುನಾವಣೆ: ಮತದಾನದಲ್ಲಿ ಪುರುಷರನ್ನು ಮೀರಿಸಿದ ಮಹಿಳೆಯರು!

'ಮಹಿಳೆಯರ ಅರಿವು ಮತ್ತು ಸಾಕ್ಷರತೆಯ ಮಟ್ಟ ಏರಿಕೆಯಾದಂತೆ ಸ್ವತಂತ್ರವಾಗಿ ನಿರ್ಧಾರವನ್ನು ತೆಗೆದುಕೊಳ್ಳುತ್ತಿದ್ದಾರೆ'

- Advertisement -
- Advertisement -

ದೇಶದಲ್ಲಿ ನಡೆಯುತ್ತಿರುವ ಐದು ರಾಜ್ಯಗಳ ಚುನಾವಣೆಯಲ್ಲಿ ಮಹಿಳಾ ಶಕ್ತಿ ಹಿಡಿತ ಸಾಧಿಸಿದ್ದು, ಉತ್ತರಾಖಂಡ ಮತ್ತು ಗೋವಾದಲ್ಲಿ ನಡೆದ ಮತದಾನದಲ್ಲಿ ಪುರುಷರಿಗಿಂತ ಮಹಿಳೆಯರ ಮತಗಳು ಹೆಚ್ಚಾಗಿವೆ. ಮಣಿಪುರದಲ್ಲಿ ಮೊದಲ ಹಂತದಲ್ಲಿ ಮತ್ತು ಉತ್ತರ ಪ್ರದೇಶದಲ್ಲಿ ಆರನೇ ಹಂತದವರೆಗಿನ ಮತದಾನದಲ್ಲಿ ಮಹಿಳೆ ಮತದಾರ ಸಂಖ್ಯೆ ಹೆಚ್ಚಿದೆ. ಅಲ್ಲದೆ, ಪಂಜಾಬ್‌ನಲ್ಲಿ ಪುರುಷ ಮತ್ತು ಮಹಿಳಾ ಮತಗಳು ಬಹುತೇಕ ಸಮಾನಾಗಿದ್ದು, ಮಹಿಳೆಯರಿಗಿಂತ ಪುರುಷರ ಮತಗಳ ಸಂಖ್ಯೆ ಕೇವಲ 0.08% ಹೆಚ್ಚಿದೆ.

ಉತ್ತರ ಪ್ರದೇಶದಲ್ಲಿ ಫೆಬ್ರವರಿ 20ರ ನಂತರ ನಡೆದ ಮತದಾನದಲ್ಲಿ ಪುರುಷರಿಗಿಂತ ಮಹಿಳೆಯರೇ ಹೆಚ್ಚಿನ ಸಂಖ್ಯೆಯಲ್ಲಿ ಮತ ಚಲಾಯಿಸಿದ್ದಾರೆ. ಇತ್ತೀಚೆಗೆ ನಡೆದ ಆರನೇ ಹಂತದ ಮತದಾನದಲ್ಲಿಯೂ ಮಹಿಳೆಯರು 62.62% ಮತ್ತು ಪುರುಷರು 51.03% ರಷ್ಟು ಮತ ಚಲಾಯಿಸಿದ್ದಾರೆ. ಆದರೂ, ಯುಪಿಯಲ್ಲಿ ಎಲ್ಲಾ ಆರು ಹಂತಗಳಲ್ಲಿ ಮಹಿಳಾ ಮತದಾನದ ಪ್ರಮಾಣವು 2017 ಕ್ಕಿಂತ ಕಡಿಮೆಯಾಗಿದೆ ಎಂದು ಚುನಾವಣಾ ಆಯೋಗದ ಅಂಕಿಅಂಶ ತಿಳಿಸುತ್ತದೆ.

ಹೆಚ್ಚಿನ ಮತಗಳನ್ನು ದಾಖಲಿಸುತ್ತಿರುವ ಮಹಿಳಾ ಮತಗಳ ಟ್ರೆಂಡ್ 7ನೇ ಹಂತದ ಚುನಾವಣೆಯಲ್ಲೂ ಮುಂದುವರೆಯುವುದೇ ಎಂಬುದನ್ನು ನೋಡಬೇಕಿದ್ದು, ಮುಂದಿನ ದಿನಗಳಲ್ಲಿ ನಡೆಯಲಿರುವ ಇತರ ರಾಜ್ಯಗಳ ಚುನಾವಣೆಯಲ್ಲಿಯೂ ಮಹಿಳಾ ಶಕ್ತಿ ತಮ್ಮ ಪ್ರಾತಿನಿಧ್ಯವನ್ನು ಮುನ್ನೆಲೆಗೆ ತರುವುದೇ ಎಂಬ ಕುತೂಹಲವನ್ನು ಹುಟ್ಟುಹಾಕಿವೆ.

ಕಳೆದ ದಶಕದಿಂದೀಚೆಗೆ, ಬಿಹಾರದಂತಹ ರಾಜ್ಯಗಳಲ್ಲಿಯೂ ಸಹ ಮಹಿಳೆಯರು ತಮ್ಮದೇ ಆದ ಛಾಪು ಮೂಡಿಸಿದ್ದಾರೆ. 2010 ರಲ್ಲಿ ಬಿಹಾರ ವಿಧಾನಸಭೆಗೆ ನಡೆದ ಚುನಾವಣೆಯಲ್ಲಿ ನಿತೀಶ್ ಕುಮಾರ್ ಗೆಲುವು ಸಾಧಿಸುವಲ್ಲಿ ಮಹಿಳಾ ಮತದಾರರು ನಿರ್ಣಾಯಕ ಪಾತ್ರವಹಿಸಿದ್ದಾರೆ ಎಂದು ಹೇಳಲಾಗುತ್ತದೆ.

ಇದನ್ನೂ ಓದಿ: ಪಶ್ಚಿಮ ಬಂಗಾಳ ಸ್ಥಳೀಯ ಚುನಾವಣೆಯಲ್ಲಿ ಟಿಎಂಸಿ ದಿಗ್ವಿಜಯ – ಒಂದೂ ಪುರಸಭೆ ಗೆಲ್ಲದ ಬಿಜೆಪಿ-ಕಾಂಗ್ರೆಸ್!

“ಚುನಾವಣಾ ರಾಜಕಾರಣದ ಮತದಾನದಲ್ಲಿ ಮಹಿಳೆಯರ ಭಾಗವಹಿಸುವಿಕೆಯ ಹೆಚ್ಚಳವು 2014 ರಿಂದ ಅಥವಾ ಅದಕ್ಕಿಂತ ಮುಂಚೆಯೇ ಕಂಡುಬಂದಿದೆ. ಯಾವುದೇ ಪಕ್ಷ ಅಥವಾ ರಾಜಕಾರಣಿಯ ಗೆಲುವಿಗೆ ಅವರ ಬೆಂಬಲವು ಭಾರೀ ಅತ್ಯಗತ್ಯವಾಗುತ್ತದೆ. ಮಹಿಳೆಯರ ಅರಿವು ಮತ್ತು ಸಾಕ್ಷರತೆಯ ಮಟ್ಟಗಳಲ್ಲಿ ಏರಿಕೆಯಾದಂತೆ ಅವರು ಸ್ವತಂತ್ರವಾಗಿ ನಿರ್ಧಾರವನ್ನು ತೆಗೆದುಕೊಳ್ಳುತ್ತಿದ್ದಾರೆ. ಚುನಾವಣಾ ಆಯೋಗವು ಮಹಿಳೆಯರಿಗೆ ಹೆಚ್ಚು ಅನುಕೂಲಕರವಾದ ಚುನಾವಣಾ ವ್ಯವಸ್ಥೆಯನ್ನು ಮಾಡುವುದರ ಮೇಲೆ ಚುನಾವಣಾ ರಾಜಕಾರಣದಲ್ಲಿ ಮಹಿಳೆಯ ಪಾತ್ರವು ಕೇಂದ್ರೀಕರಿಸಿದೆ” ಎಂದು ರಾಜಕೀಯ ವಿಜ್ಞಾನಿ ಮತ್ತು ಸೆಂಟರ್ ಫಾರ್ ಪಾಲಿಸಿ ರಿಸರ್ಚ್ (ಸಿಪಿಆರ್) ನಲ್ಲಿ ಸಹವರ್ತಿ ರಾಹುಲ್ ವರ್ಮಾ ಹೇಳುತ್ತಾರೆ.

ಆದರೂ, “ಮಹಿಳೆ ಮತ್ತು ಪುರುಷ ಮತದಾರರ ನಡುವಿನ ಈ ಗಮನಾರ್ಹ ಅಂತರದಲ್ಲಿ ನಾವು ಒಂದು ವಿಚಾರವನ್ನು ಗಮನಿಸಬೇಕಾಗುತ್ತದೆ. ಪುರುಷರಲ್ಲಿ ಕೆಲವರು ಉದ್ಯೋಗಕ್ಕಾಗಿ ರಾಜ್ಯಗಳನ್ನು ತೊರೆದು ವಲಸೆ ಹೋಗಿದ್ದಾರೆ. ಇದೂ ಕೂಡ ಮತದಾರರ ಶೇಕಡಾವಾರು ಬದಲಾವಣೆಗೆ ಕಾರಣವಾಗಿದೆ” ಎಂದು ಹೇಳಿದ್ದಾರೆ.

ಮತದಾನದಲ್ಲಿ ಮಹಿಳೆಯರ ಸಂಖ್ಯೆ ಹೆಚ್ಚಲು ಅಥವಾ ಮಹಿಳೆಯರ ಭಾಗವಹಿಸುವಿಕೆ ಹೆಚ್ಚಾಗಲು ಚುನಾವಣಾ ಆಯೋಗವು ಕೆಲವು ಕ್ರಮಗಳನ್ನು ತೆಗೆದುಕೊಂಡಿತು. “1. ಹೆಚ್ಚಿನ ಮಹಿಳೆಯರನ್ನು ಮತಗಟ್ಟೆಗಳ ಅಧಿಕಾರಿಗಳನ್ನಾಗಿ ನೇಮಿಸಲಾಯಿತು. 2. ಮತಗಟ್ಟೆಗಳಲ್ಲಿ ಶಿಶುಪಾಲನಾ ಸೌಲಭ್ಯ. 3. ತಮ್ಮದೇ ಆದ ಸಾಮಾಜಿಕ-ಸಾಂಸ್ಕೃತಿಕ ಪರಿಸರದಲ್ಲಿ ಮತದಾನಕ್ಕೆ ಮಹಿಳೆಯರನ್ನು ಪ್ರೇರೇಪಿಸಲು ಬ್ಲಾಕ್ ಮಟ್ಟದ ಮಹಿಳಾ ಅಧಿಕಾರಿಗಳ ನೇಮಕ. 4. ಮತದಾನದಲ್ಲಿ ಇವಿಎಂಗಳ ಬಳಕೆಯು ಹೆಚ್ಚಿನ ಮಹಿಳೆಯರು ಮತದಾನ ಕೇಂದ್ರದಲ್ಲಿ ಸುರಕ್ಷಿತ ಮತದಾನ ಮಾಡುವಂತೆ ಮಾಡಿದೆ” ಎಂದು ಚುನಾವಣಾ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪುರುಷ ಮತ್ತು ಮಹಿಳಾ ಮತದಾನದ ನಡುವಿನ ವ್ಯತ್ಯಾಸವು ಉತ್ತರಾಖಂಡದಲ್ಲಿ ಹೆಚ್ಚು ಗಮನಾರ್ಹವಾಗಿದೆ. ಮಹಿಳಾ ಮತದಾರರ ಪೈಕಿ 67.2% ಮತದಾನವಾಗಿದ್ದು, 62.6% ಪುರುಷರ ಮತದಾನವಾಗಿದೆ. ಗೋವಾದಲ್ಲಿ 80.96% ಮಹಿಳಾ ಮತದಾನವಾಗಿದ್ದು, 78.19% ಪುರುಷರ ಮತದಾನವಾಗಿದೆ. ಮಣಿಪುರದಲ್ಲಿ ನಡೆದ ಮೊದಲ ಹಂತದ ಮತದಾನದಲ್ಲಿ 87.2% ಪುರುಷರು ಮತ್ತು 89.94% ಮಹಿಳಾ ಮತದಾರರು ಮತ ಚಲಾಯಿಸಿದ್ದಾರೆ. ಆದರೆ, ಪಂಜಾಬ್‌ನಲ್ಲಿ 2017ರ ಚುನಾವಣೆಯಲ್ಲಿ ಮಹಿಳಾ ಮತದಾನ 78.16% ದಾಖಲಿಸಿತ್ತು. ಆದರೆ, ಈ ಬಾರಿಯ ಚುನಾವಣೆಯಲ್ಲಿ 71.91% ಗೆ ಕುಸಿದಿದೆ.

ಕುತೂಹಲಕಾರಿಯಾಗಿ, ಲೈಂಗಿಕ ಅಲ್ಪಸಂಖ್ಯಾತರದ ಮತದಾನವು ಗೋವಾದಲ್ಲಿ 88.89%, ಮಣಿಪುರದಲ್ಲಿ 81.1%, ಪಂಜಾಬ್‌ನಲ್ಲಿ 23.61% ರಿಂದ 38.79%, ಉತ್ತರಾಖಂಡದಲ್ಲಿ 8.65% ರಿಂದ 25.35% ಗೆ ಏರಿಕೆಯಾಗಿದೆ ಮತ್ತು ಯುಪಿಯಲ್ಲಿ ಎಲ್ಲಾ ಹಂತಗಳಲ್ಲಿ ಗಮನಾರ್ಹ ಸುಧಾರಣೆಯನ್ನು ಕಂಡಿದೆ.

2017 ರ ಚುನಾವಣೆಗೆ ಹೋಲಿಸಿದರೆ, ಒಟ್ಟಾರೆ ಮತದಾನದ ಪ್ರಮಾಣವು ಪಂಜಾಬ್ (77.4% ರಿಂದ 71.95% ಕ್ಕೆ), ಉತ್ತರಾಖಂಡ (65.56% ರಿಂದ 65.37%) ಮತ್ತು ಗೋವಾ (81.27% ರಿಂದ 79.61%) ಕ್ಕೆ ಕುಸಿದಿದೆ. ಆದರೆ, ಮಣಿಪುರ 1 ನೇ ಹಂತದಲ್ಲಿ 85.9% ರಿಂದ 88.9% ಕ್ಕೆ ಏರಿಕೆಯಾಗಿದೆ. ಯುಪಿಯಲ್ಲಿ, 1, 2 ಮತ್ತು 6 ಹಂತಗಳಲ್ಲಿ ಒಟ್ಟಾರೆ ಮತದಾನವು 2017 ಕ್ಕಿಂತ ಕಡಿಮೆಯಾಗಿದೆ. ಆದರೆ, 3, 4 ಮತ್ತು 5 ನೇ ಹಂತದಲ್ಲಿ ಮತದಾನವು ಸ್ವಲ್ಪ ಮಟ್ಟಿಗೆ ಹೆಚ್ಚಾಗಿದೆ.


ಇದನ್ನೂ ಓದಿ: ಮಣಿಪುರ: ಚುನಾವಣೆ ವೇಳೆಯ ಹಿಂಸಾಚಾರದಲ್ಲಿ ಇಬ್ಬರು ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...