Homeಮುಖಪುಟಪಂಚರಾಜ್ಯ ಚುನಾವಣೆ: ಮತದಾನದಲ್ಲಿ ಪುರುಷರನ್ನು ಮೀರಿಸಿದ ಮಹಿಳೆಯರು!

ಪಂಚರಾಜ್ಯ ಚುನಾವಣೆ: ಮತದಾನದಲ್ಲಿ ಪುರುಷರನ್ನು ಮೀರಿಸಿದ ಮಹಿಳೆಯರು!

'ಮಹಿಳೆಯರ ಅರಿವು ಮತ್ತು ಸಾಕ್ಷರತೆಯ ಮಟ್ಟ ಏರಿಕೆಯಾದಂತೆ ಸ್ವತಂತ್ರವಾಗಿ ನಿರ್ಧಾರವನ್ನು ತೆಗೆದುಕೊಳ್ಳುತ್ತಿದ್ದಾರೆ'

- Advertisement -
- Advertisement -

ದೇಶದಲ್ಲಿ ನಡೆಯುತ್ತಿರುವ ಐದು ರಾಜ್ಯಗಳ ಚುನಾವಣೆಯಲ್ಲಿ ಮಹಿಳಾ ಶಕ್ತಿ ಹಿಡಿತ ಸಾಧಿಸಿದ್ದು, ಉತ್ತರಾಖಂಡ ಮತ್ತು ಗೋವಾದಲ್ಲಿ ನಡೆದ ಮತದಾನದಲ್ಲಿ ಪುರುಷರಿಗಿಂತ ಮಹಿಳೆಯರ ಮತಗಳು ಹೆಚ್ಚಾಗಿವೆ. ಮಣಿಪುರದಲ್ಲಿ ಮೊದಲ ಹಂತದಲ್ಲಿ ಮತ್ತು ಉತ್ತರ ಪ್ರದೇಶದಲ್ಲಿ ಆರನೇ ಹಂತದವರೆಗಿನ ಮತದಾನದಲ್ಲಿ ಮಹಿಳೆ ಮತದಾರ ಸಂಖ್ಯೆ ಹೆಚ್ಚಿದೆ. ಅಲ್ಲದೆ, ಪಂಜಾಬ್‌ನಲ್ಲಿ ಪುರುಷ ಮತ್ತು ಮಹಿಳಾ ಮತಗಳು ಬಹುತೇಕ ಸಮಾನಾಗಿದ್ದು, ಮಹಿಳೆಯರಿಗಿಂತ ಪುರುಷರ ಮತಗಳ ಸಂಖ್ಯೆ ಕೇವಲ 0.08% ಹೆಚ್ಚಿದೆ.

ಉತ್ತರ ಪ್ರದೇಶದಲ್ಲಿ ಫೆಬ್ರವರಿ 20ರ ನಂತರ ನಡೆದ ಮತದಾನದಲ್ಲಿ ಪುರುಷರಿಗಿಂತ ಮಹಿಳೆಯರೇ ಹೆಚ್ಚಿನ ಸಂಖ್ಯೆಯಲ್ಲಿ ಮತ ಚಲಾಯಿಸಿದ್ದಾರೆ. ಇತ್ತೀಚೆಗೆ ನಡೆದ ಆರನೇ ಹಂತದ ಮತದಾನದಲ್ಲಿಯೂ ಮಹಿಳೆಯರು 62.62% ಮತ್ತು ಪುರುಷರು 51.03% ರಷ್ಟು ಮತ ಚಲಾಯಿಸಿದ್ದಾರೆ. ಆದರೂ, ಯುಪಿಯಲ್ಲಿ ಎಲ್ಲಾ ಆರು ಹಂತಗಳಲ್ಲಿ ಮಹಿಳಾ ಮತದಾನದ ಪ್ರಮಾಣವು 2017 ಕ್ಕಿಂತ ಕಡಿಮೆಯಾಗಿದೆ ಎಂದು ಚುನಾವಣಾ ಆಯೋಗದ ಅಂಕಿಅಂಶ ತಿಳಿಸುತ್ತದೆ.

ಹೆಚ್ಚಿನ ಮತಗಳನ್ನು ದಾಖಲಿಸುತ್ತಿರುವ ಮಹಿಳಾ ಮತಗಳ ಟ್ರೆಂಡ್ 7ನೇ ಹಂತದ ಚುನಾವಣೆಯಲ್ಲೂ ಮುಂದುವರೆಯುವುದೇ ಎಂಬುದನ್ನು ನೋಡಬೇಕಿದ್ದು, ಮುಂದಿನ ದಿನಗಳಲ್ಲಿ ನಡೆಯಲಿರುವ ಇತರ ರಾಜ್ಯಗಳ ಚುನಾವಣೆಯಲ್ಲಿಯೂ ಮಹಿಳಾ ಶಕ್ತಿ ತಮ್ಮ ಪ್ರಾತಿನಿಧ್ಯವನ್ನು ಮುನ್ನೆಲೆಗೆ ತರುವುದೇ ಎಂಬ ಕುತೂಹಲವನ್ನು ಹುಟ್ಟುಹಾಕಿವೆ.

ಕಳೆದ ದಶಕದಿಂದೀಚೆಗೆ, ಬಿಹಾರದಂತಹ ರಾಜ್ಯಗಳಲ್ಲಿಯೂ ಸಹ ಮಹಿಳೆಯರು ತಮ್ಮದೇ ಆದ ಛಾಪು ಮೂಡಿಸಿದ್ದಾರೆ. 2010 ರಲ್ಲಿ ಬಿಹಾರ ವಿಧಾನಸಭೆಗೆ ನಡೆದ ಚುನಾವಣೆಯಲ್ಲಿ ನಿತೀಶ್ ಕುಮಾರ್ ಗೆಲುವು ಸಾಧಿಸುವಲ್ಲಿ ಮಹಿಳಾ ಮತದಾರರು ನಿರ್ಣಾಯಕ ಪಾತ್ರವಹಿಸಿದ್ದಾರೆ ಎಂದು ಹೇಳಲಾಗುತ್ತದೆ.

ಇದನ್ನೂ ಓದಿ: ಪಶ್ಚಿಮ ಬಂಗಾಳ ಸ್ಥಳೀಯ ಚುನಾವಣೆಯಲ್ಲಿ ಟಿಎಂಸಿ ದಿಗ್ವಿಜಯ – ಒಂದೂ ಪುರಸಭೆ ಗೆಲ್ಲದ ಬಿಜೆಪಿ-ಕಾಂಗ್ರೆಸ್!

“ಚುನಾವಣಾ ರಾಜಕಾರಣದ ಮತದಾನದಲ್ಲಿ ಮಹಿಳೆಯರ ಭಾಗವಹಿಸುವಿಕೆಯ ಹೆಚ್ಚಳವು 2014 ರಿಂದ ಅಥವಾ ಅದಕ್ಕಿಂತ ಮುಂಚೆಯೇ ಕಂಡುಬಂದಿದೆ. ಯಾವುದೇ ಪಕ್ಷ ಅಥವಾ ರಾಜಕಾರಣಿಯ ಗೆಲುವಿಗೆ ಅವರ ಬೆಂಬಲವು ಭಾರೀ ಅತ್ಯಗತ್ಯವಾಗುತ್ತದೆ. ಮಹಿಳೆಯರ ಅರಿವು ಮತ್ತು ಸಾಕ್ಷರತೆಯ ಮಟ್ಟಗಳಲ್ಲಿ ಏರಿಕೆಯಾದಂತೆ ಅವರು ಸ್ವತಂತ್ರವಾಗಿ ನಿರ್ಧಾರವನ್ನು ತೆಗೆದುಕೊಳ್ಳುತ್ತಿದ್ದಾರೆ. ಚುನಾವಣಾ ಆಯೋಗವು ಮಹಿಳೆಯರಿಗೆ ಹೆಚ್ಚು ಅನುಕೂಲಕರವಾದ ಚುನಾವಣಾ ವ್ಯವಸ್ಥೆಯನ್ನು ಮಾಡುವುದರ ಮೇಲೆ ಚುನಾವಣಾ ರಾಜಕಾರಣದಲ್ಲಿ ಮಹಿಳೆಯ ಪಾತ್ರವು ಕೇಂದ್ರೀಕರಿಸಿದೆ” ಎಂದು ರಾಜಕೀಯ ವಿಜ್ಞಾನಿ ಮತ್ತು ಸೆಂಟರ್ ಫಾರ್ ಪಾಲಿಸಿ ರಿಸರ್ಚ್ (ಸಿಪಿಆರ್) ನಲ್ಲಿ ಸಹವರ್ತಿ ರಾಹುಲ್ ವರ್ಮಾ ಹೇಳುತ್ತಾರೆ.

ಆದರೂ, “ಮಹಿಳೆ ಮತ್ತು ಪುರುಷ ಮತದಾರರ ನಡುವಿನ ಈ ಗಮನಾರ್ಹ ಅಂತರದಲ್ಲಿ ನಾವು ಒಂದು ವಿಚಾರವನ್ನು ಗಮನಿಸಬೇಕಾಗುತ್ತದೆ. ಪುರುಷರಲ್ಲಿ ಕೆಲವರು ಉದ್ಯೋಗಕ್ಕಾಗಿ ರಾಜ್ಯಗಳನ್ನು ತೊರೆದು ವಲಸೆ ಹೋಗಿದ್ದಾರೆ. ಇದೂ ಕೂಡ ಮತದಾರರ ಶೇಕಡಾವಾರು ಬದಲಾವಣೆಗೆ ಕಾರಣವಾಗಿದೆ” ಎಂದು ಹೇಳಿದ್ದಾರೆ.

ಮತದಾನದಲ್ಲಿ ಮಹಿಳೆಯರ ಸಂಖ್ಯೆ ಹೆಚ್ಚಲು ಅಥವಾ ಮಹಿಳೆಯರ ಭಾಗವಹಿಸುವಿಕೆ ಹೆಚ್ಚಾಗಲು ಚುನಾವಣಾ ಆಯೋಗವು ಕೆಲವು ಕ್ರಮಗಳನ್ನು ತೆಗೆದುಕೊಂಡಿತು. “1. ಹೆಚ್ಚಿನ ಮಹಿಳೆಯರನ್ನು ಮತಗಟ್ಟೆಗಳ ಅಧಿಕಾರಿಗಳನ್ನಾಗಿ ನೇಮಿಸಲಾಯಿತು. 2. ಮತಗಟ್ಟೆಗಳಲ್ಲಿ ಶಿಶುಪಾಲನಾ ಸೌಲಭ್ಯ. 3. ತಮ್ಮದೇ ಆದ ಸಾಮಾಜಿಕ-ಸಾಂಸ್ಕೃತಿಕ ಪರಿಸರದಲ್ಲಿ ಮತದಾನಕ್ಕೆ ಮಹಿಳೆಯರನ್ನು ಪ್ರೇರೇಪಿಸಲು ಬ್ಲಾಕ್ ಮಟ್ಟದ ಮಹಿಳಾ ಅಧಿಕಾರಿಗಳ ನೇಮಕ. 4. ಮತದಾನದಲ್ಲಿ ಇವಿಎಂಗಳ ಬಳಕೆಯು ಹೆಚ್ಚಿನ ಮಹಿಳೆಯರು ಮತದಾನ ಕೇಂದ್ರದಲ್ಲಿ ಸುರಕ್ಷಿತ ಮತದಾನ ಮಾಡುವಂತೆ ಮಾಡಿದೆ” ಎಂದು ಚುನಾವಣಾ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪುರುಷ ಮತ್ತು ಮಹಿಳಾ ಮತದಾನದ ನಡುವಿನ ವ್ಯತ್ಯಾಸವು ಉತ್ತರಾಖಂಡದಲ್ಲಿ ಹೆಚ್ಚು ಗಮನಾರ್ಹವಾಗಿದೆ. ಮಹಿಳಾ ಮತದಾರರ ಪೈಕಿ 67.2% ಮತದಾನವಾಗಿದ್ದು, 62.6% ಪುರುಷರ ಮತದಾನವಾಗಿದೆ. ಗೋವಾದಲ್ಲಿ 80.96% ಮಹಿಳಾ ಮತದಾನವಾಗಿದ್ದು, 78.19% ಪುರುಷರ ಮತದಾನವಾಗಿದೆ. ಮಣಿಪುರದಲ್ಲಿ ನಡೆದ ಮೊದಲ ಹಂತದ ಮತದಾನದಲ್ಲಿ 87.2% ಪುರುಷರು ಮತ್ತು 89.94% ಮಹಿಳಾ ಮತದಾರರು ಮತ ಚಲಾಯಿಸಿದ್ದಾರೆ. ಆದರೆ, ಪಂಜಾಬ್‌ನಲ್ಲಿ 2017ರ ಚುನಾವಣೆಯಲ್ಲಿ ಮಹಿಳಾ ಮತದಾನ 78.16% ದಾಖಲಿಸಿತ್ತು. ಆದರೆ, ಈ ಬಾರಿಯ ಚುನಾವಣೆಯಲ್ಲಿ 71.91% ಗೆ ಕುಸಿದಿದೆ.

ಕುತೂಹಲಕಾರಿಯಾಗಿ, ಲೈಂಗಿಕ ಅಲ್ಪಸಂಖ್ಯಾತರದ ಮತದಾನವು ಗೋವಾದಲ್ಲಿ 88.89%, ಮಣಿಪುರದಲ್ಲಿ 81.1%, ಪಂಜಾಬ್‌ನಲ್ಲಿ 23.61% ರಿಂದ 38.79%, ಉತ್ತರಾಖಂಡದಲ್ಲಿ 8.65% ರಿಂದ 25.35% ಗೆ ಏರಿಕೆಯಾಗಿದೆ ಮತ್ತು ಯುಪಿಯಲ್ಲಿ ಎಲ್ಲಾ ಹಂತಗಳಲ್ಲಿ ಗಮನಾರ್ಹ ಸುಧಾರಣೆಯನ್ನು ಕಂಡಿದೆ.

2017 ರ ಚುನಾವಣೆಗೆ ಹೋಲಿಸಿದರೆ, ಒಟ್ಟಾರೆ ಮತದಾನದ ಪ್ರಮಾಣವು ಪಂಜಾಬ್ (77.4% ರಿಂದ 71.95% ಕ್ಕೆ), ಉತ್ತರಾಖಂಡ (65.56% ರಿಂದ 65.37%) ಮತ್ತು ಗೋವಾ (81.27% ರಿಂದ 79.61%) ಕ್ಕೆ ಕುಸಿದಿದೆ. ಆದರೆ, ಮಣಿಪುರ 1 ನೇ ಹಂತದಲ್ಲಿ 85.9% ರಿಂದ 88.9% ಕ್ಕೆ ಏರಿಕೆಯಾಗಿದೆ. ಯುಪಿಯಲ್ಲಿ, 1, 2 ಮತ್ತು 6 ಹಂತಗಳಲ್ಲಿ ಒಟ್ಟಾರೆ ಮತದಾನವು 2017 ಕ್ಕಿಂತ ಕಡಿಮೆಯಾಗಿದೆ. ಆದರೆ, 3, 4 ಮತ್ತು 5 ನೇ ಹಂತದಲ್ಲಿ ಮತದಾನವು ಸ್ವಲ್ಪ ಮಟ್ಟಿಗೆ ಹೆಚ್ಚಾಗಿದೆ.


ಇದನ್ನೂ ಓದಿ: ಮಣಿಪುರ: ಚುನಾವಣೆ ವೇಳೆಯ ಹಿಂಸಾಚಾರದಲ್ಲಿ ಇಬ್ಬರು ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...