Homeಮುಖಪುಟಪಂಚರಾಜ್ಯ ಚುನಾವಣೆ: ಮತದಾನದಲ್ಲಿ ಪುರುಷರನ್ನು ಮೀರಿಸಿದ ಮಹಿಳೆಯರು!

ಪಂಚರಾಜ್ಯ ಚುನಾವಣೆ: ಮತದಾನದಲ್ಲಿ ಪುರುಷರನ್ನು ಮೀರಿಸಿದ ಮಹಿಳೆಯರು!

'ಮಹಿಳೆಯರ ಅರಿವು ಮತ್ತು ಸಾಕ್ಷರತೆಯ ಮಟ್ಟ ಏರಿಕೆಯಾದಂತೆ ಸ್ವತಂತ್ರವಾಗಿ ನಿರ್ಧಾರವನ್ನು ತೆಗೆದುಕೊಳ್ಳುತ್ತಿದ್ದಾರೆ'

- Advertisement -
- Advertisement -

ದೇಶದಲ್ಲಿ ನಡೆಯುತ್ತಿರುವ ಐದು ರಾಜ್ಯಗಳ ಚುನಾವಣೆಯಲ್ಲಿ ಮಹಿಳಾ ಶಕ್ತಿ ಹಿಡಿತ ಸಾಧಿಸಿದ್ದು, ಉತ್ತರಾಖಂಡ ಮತ್ತು ಗೋವಾದಲ್ಲಿ ನಡೆದ ಮತದಾನದಲ್ಲಿ ಪುರುಷರಿಗಿಂತ ಮಹಿಳೆಯರ ಮತಗಳು ಹೆಚ್ಚಾಗಿವೆ. ಮಣಿಪುರದಲ್ಲಿ ಮೊದಲ ಹಂತದಲ್ಲಿ ಮತ್ತು ಉತ್ತರ ಪ್ರದೇಶದಲ್ಲಿ ಆರನೇ ಹಂತದವರೆಗಿನ ಮತದಾನದಲ್ಲಿ ಮಹಿಳೆ ಮತದಾರ ಸಂಖ್ಯೆ ಹೆಚ್ಚಿದೆ. ಅಲ್ಲದೆ, ಪಂಜಾಬ್‌ನಲ್ಲಿ ಪುರುಷ ಮತ್ತು ಮಹಿಳಾ ಮತಗಳು ಬಹುತೇಕ ಸಮಾನಾಗಿದ್ದು, ಮಹಿಳೆಯರಿಗಿಂತ ಪುರುಷರ ಮತಗಳ ಸಂಖ್ಯೆ ಕೇವಲ 0.08% ಹೆಚ್ಚಿದೆ.

ಉತ್ತರ ಪ್ರದೇಶದಲ್ಲಿ ಫೆಬ್ರವರಿ 20ರ ನಂತರ ನಡೆದ ಮತದಾನದಲ್ಲಿ ಪುರುಷರಿಗಿಂತ ಮಹಿಳೆಯರೇ ಹೆಚ್ಚಿನ ಸಂಖ್ಯೆಯಲ್ಲಿ ಮತ ಚಲಾಯಿಸಿದ್ದಾರೆ. ಇತ್ತೀಚೆಗೆ ನಡೆದ ಆರನೇ ಹಂತದ ಮತದಾನದಲ್ಲಿಯೂ ಮಹಿಳೆಯರು 62.62% ಮತ್ತು ಪುರುಷರು 51.03% ರಷ್ಟು ಮತ ಚಲಾಯಿಸಿದ್ದಾರೆ. ಆದರೂ, ಯುಪಿಯಲ್ಲಿ ಎಲ್ಲಾ ಆರು ಹಂತಗಳಲ್ಲಿ ಮಹಿಳಾ ಮತದಾನದ ಪ್ರಮಾಣವು 2017 ಕ್ಕಿಂತ ಕಡಿಮೆಯಾಗಿದೆ ಎಂದು ಚುನಾವಣಾ ಆಯೋಗದ ಅಂಕಿಅಂಶ ತಿಳಿಸುತ್ತದೆ.

ಹೆಚ್ಚಿನ ಮತಗಳನ್ನು ದಾಖಲಿಸುತ್ತಿರುವ ಮಹಿಳಾ ಮತಗಳ ಟ್ರೆಂಡ್ 7ನೇ ಹಂತದ ಚುನಾವಣೆಯಲ್ಲೂ ಮುಂದುವರೆಯುವುದೇ ಎಂಬುದನ್ನು ನೋಡಬೇಕಿದ್ದು, ಮುಂದಿನ ದಿನಗಳಲ್ಲಿ ನಡೆಯಲಿರುವ ಇತರ ರಾಜ್ಯಗಳ ಚುನಾವಣೆಯಲ್ಲಿಯೂ ಮಹಿಳಾ ಶಕ್ತಿ ತಮ್ಮ ಪ್ರಾತಿನಿಧ್ಯವನ್ನು ಮುನ್ನೆಲೆಗೆ ತರುವುದೇ ಎಂಬ ಕುತೂಹಲವನ್ನು ಹುಟ್ಟುಹಾಕಿವೆ.

ಕಳೆದ ದಶಕದಿಂದೀಚೆಗೆ, ಬಿಹಾರದಂತಹ ರಾಜ್ಯಗಳಲ್ಲಿಯೂ ಸಹ ಮಹಿಳೆಯರು ತಮ್ಮದೇ ಆದ ಛಾಪು ಮೂಡಿಸಿದ್ದಾರೆ. 2010 ರಲ್ಲಿ ಬಿಹಾರ ವಿಧಾನಸಭೆಗೆ ನಡೆದ ಚುನಾವಣೆಯಲ್ಲಿ ನಿತೀಶ್ ಕುಮಾರ್ ಗೆಲುವು ಸಾಧಿಸುವಲ್ಲಿ ಮಹಿಳಾ ಮತದಾರರು ನಿರ್ಣಾಯಕ ಪಾತ್ರವಹಿಸಿದ್ದಾರೆ ಎಂದು ಹೇಳಲಾಗುತ್ತದೆ.

ಇದನ್ನೂ ಓದಿ: ಪಶ್ಚಿಮ ಬಂಗಾಳ ಸ್ಥಳೀಯ ಚುನಾವಣೆಯಲ್ಲಿ ಟಿಎಂಸಿ ದಿಗ್ವಿಜಯ – ಒಂದೂ ಪುರಸಭೆ ಗೆಲ್ಲದ ಬಿಜೆಪಿ-ಕಾಂಗ್ರೆಸ್!

“ಚುನಾವಣಾ ರಾಜಕಾರಣದ ಮತದಾನದಲ್ಲಿ ಮಹಿಳೆಯರ ಭಾಗವಹಿಸುವಿಕೆಯ ಹೆಚ್ಚಳವು 2014 ರಿಂದ ಅಥವಾ ಅದಕ್ಕಿಂತ ಮುಂಚೆಯೇ ಕಂಡುಬಂದಿದೆ. ಯಾವುದೇ ಪಕ್ಷ ಅಥವಾ ರಾಜಕಾರಣಿಯ ಗೆಲುವಿಗೆ ಅವರ ಬೆಂಬಲವು ಭಾರೀ ಅತ್ಯಗತ್ಯವಾಗುತ್ತದೆ. ಮಹಿಳೆಯರ ಅರಿವು ಮತ್ತು ಸಾಕ್ಷರತೆಯ ಮಟ್ಟಗಳಲ್ಲಿ ಏರಿಕೆಯಾದಂತೆ ಅವರು ಸ್ವತಂತ್ರವಾಗಿ ನಿರ್ಧಾರವನ್ನು ತೆಗೆದುಕೊಳ್ಳುತ್ತಿದ್ದಾರೆ. ಚುನಾವಣಾ ಆಯೋಗವು ಮಹಿಳೆಯರಿಗೆ ಹೆಚ್ಚು ಅನುಕೂಲಕರವಾದ ಚುನಾವಣಾ ವ್ಯವಸ್ಥೆಯನ್ನು ಮಾಡುವುದರ ಮೇಲೆ ಚುನಾವಣಾ ರಾಜಕಾರಣದಲ್ಲಿ ಮಹಿಳೆಯ ಪಾತ್ರವು ಕೇಂದ್ರೀಕರಿಸಿದೆ” ಎಂದು ರಾಜಕೀಯ ವಿಜ್ಞಾನಿ ಮತ್ತು ಸೆಂಟರ್ ಫಾರ್ ಪಾಲಿಸಿ ರಿಸರ್ಚ್ (ಸಿಪಿಆರ್) ನಲ್ಲಿ ಸಹವರ್ತಿ ರಾಹುಲ್ ವರ್ಮಾ ಹೇಳುತ್ತಾರೆ.

ಆದರೂ, “ಮಹಿಳೆ ಮತ್ತು ಪುರುಷ ಮತದಾರರ ನಡುವಿನ ಈ ಗಮನಾರ್ಹ ಅಂತರದಲ್ಲಿ ನಾವು ಒಂದು ವಿಚಾರವನ್ನು ಗಮನಿಸಬೇಕಾಗುತ್ತದೆ. ಪುರುಷರಲ್ಲಿ ಕೆಲವರು ಉದ್ಯೋಗಕ್ಕಾಗಿ ರಾಜ್ಯಗಳನ್ನು ತೊರೆದು ವಲಸೆ ಹೋಗಿದ್ದಾರೆ. ಇದೂ ಕೂಡ ಮತದಾರರ ಶೇಕಡಾವಾರು ಬದಲಾವಣೆಗೆ ಕಾರಣವಾಗಿದೆ” ಎಂದು ಹೇಳಿದ್ದಾರೆ.

ಮತದಾನದಲ್ಲಿ ಮಹಿಳೆಯರ ಸಂಖ್ಯೆ ಹೆಚ್ಚಲು ಅಥವಾ ಮಹಿಳೆಯರ ಭಾಗವಹಿಸುವಿಕೆ ಹೆಚ್ಚಾಗಲು ಚುನಾವಣಾ ಆಯೋಗವು ಕೆಲವು ಕ್ರಮಗಳನ್ನು ತೆಗೆದುಕೊಂಡಿತು. “1. ಹೆಚ್ಚಿನ ಮಹಿಳೆಯರನ್ನು ಮತಗಟ್ಟೆಗಳ ಅಧಿಕಾರಿಗಳನ್ನಾಗಿ ನೇಮಿಸಲಾಯಿತು. 2. ಮತಗಟ್ಟೆಗಳಲ್ಲಿ ಶಿಶುಪಾಲನಾ ಸೌಲಭ್ಯ. 3. ತಮ್ಮದೇ ಆದ ಸಾಮಾಜಿಕ-ಸಾಂಸ್ಕೃತಿಕ ಪರಿಸರದಲ್ಲಿ ಮತದಾನಕ್ಕೆ ಮಹಿಳೆಯರನ್ನು ಪ್ರೇರೇಪಿಸಲು ಬ್ಲಾಕ್ ಮಟ್ಟದ ಮಹಿಳಾ ಅಧಿಕಾರಿಗಳ ನೇಮಕ. 4. ಮತದಾನದಲ್ಲಿ ಇವಿಎಂಗಳ ಬಳಕೆಯು ಹೆಚ್ಚಿನ ಮಹಿಳೆಯರು ಮತದಾನ ಕೇಂದ್ರದಲ್ಲಿ ಸುರಕ್ಷಿತ ಮತದಾನ ಮಾಡುವಂತೆ ಮಾಡಿದೆ” ಎಂದು ಚುನಾವಣಾ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪುರುಷ ಮತ್ತು ಮಹಿಳಾ ಮತದಾನದ ನಡುವಿನ ವ್ಯತ್ಯಾಸವು ಉತ್ತರಾಖಂಡದಲ್ಲಿ ಹೆಚ್ಚು ಗಮನಾರ್ಹವಾಗಿದೆ. ಮಹಿಳಾ ಮತದಾರರ ಪೈಕಿ 67.2% ಮತದಾನವಾಗಿದ್ದು, 62.6% ಪುರುಷರ ಮತದಾನವಾಗಿದೆ. ಗೋವಾದಲ್ಲಿ 80.96% ಮಹಿಳಾ ಮತದಾನವಾಗಿದ್ದು, 78.19% ಪುರುಷರ ಮತದಾನವಾಗಿದೆ. ಮಣಿಪುರದಲ್ಲಿ ನಡೆದ ಮೊದಲ ಹಂತದ ಮತದಾನದಲ್ಲಿ 87.2% ಪುರುಷರು ಮತ್ತು 89.94% ಮಹಿಳಾ ಮತದಾರರು ಮತ ಚಲಾಯಿಸಿದ್ದಾರೆ. ಆದರೆ, ಪಂಜಾಬ್‌ನಲ್ಲಿ 2017ರ ಚುನಾವಣೆಯಲ್ಲಿ ಮಹಿಳಾ ಮತದಾನ 78.16% ದಾಖಲಿಸಿತ್ತು. ಆದರೆ, ಈ ಬಾರಿಯ ಚುನಾವಣೆಯಲ್ಲಿ 71.91% ಗೆ ಕುಸಿದಿದೆ.

ಕುತೂಹಲಕಾರಿಯಾಗಿ, ಲೈಂಗಿಕ ಅಲ್ಪಸಂಖ್ಯಾತರದ ಮತದಾನವು ಗೋವಾದಲ್ಲಿ 88.89%, ಮಣಿಪುರದಲ್ಲಿ 81.1%, ಪಂಜಾಬ್‌ನಲ್ಲಿ 23.61% ರಿಂದ 38.79%, ಉತ್ತರಾಖಂಡದಲ್ಲಿ 8.65% ರಿಂದ 25.35% ಗೆ ಏರಿಕೆಯಾಗಿದೆ ಮತ್ತು ಯುಪಿಯಲ್ಲಿ ಎಲ್ಲಾ ಹಂತಗಳಲ್ಲಿ ಗಮನಾರ್ಹ ಸುಧಾರಣೆಯನ್ನು ಕಂಡಿದೆ.

2017 ರ ಚುನಾವಣೆಗೆ ಹೋಲಿಸಿದರೆ, ಒಟ್ಟಾರೆ ಮತದಾನದ ಪ್ರಮಾಣವು ಪಂಜಾಬ್ (77.4% ರಿಂದ 71.95% ಕ್ಕೆ), ಉತ್ತರಾಖಂಡ (65.56% ರಿಂದ 65.37%) ಮತ್ತು ಗೋವಾ (81.27% ರಿಂದ 79.61%) ಕ್ಕೆ ಕುಸಿದಿದೆ. ಆದರೆ, ಮಣಿಪುರ 1 ನೇ ಹಂತದಲ್ಲಿ 85.9% ರಿಂದ 88.9% ಕ್ಕೆ ಏರಿಕೆಯಾಗಿದೆ. ಯುಪಿಯಲ್ಲಿ, 1, 2 ಮತ್ತು 6 ಹಂತಗಳಲ್ಲಿ ಒಟ್ಟಾರೆ ಮತದಾನವು 2017 ಕ್ಕಿಂತ ಕಡಿಮೆಯಾಗಿದೆ. ಆದರೆ, 3, 4 ಮತ್ತು 5 ನೇ ಹಂತದಲ್ಲಿ ಮತದಾನವು ಸ್ವಲ್ಪ ಮಟ್ಟಿಗೆ ಹೆಚ್ಚಾಗಿದೆ.


ಇದನ್ನೂ ಓದಿ: ಮಣಿಪುರ: ಚುನಾವಣೆ ವೇಳೆಯ ಹಿಂಸಾಚಾರದಲ್ಲಿ ಇಬ್ಬರು ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...