Homeಕರ್ನಾಟಕಮತ್ತೆ ಮತ್ತೆ ದುರಂತಗಳಿಗೆ ಸಾಕ್ಷಿಯಾಗುತ್ತಿದೆ ಚಾಮರಾಜನಗರ ಜಿಲ್ಲೆ

ಮತ್ತೆ ಮತ್ತೆ ದುರಂತಗಳಿಗೆ ಸಾಕ್ಷಿಯಾಗುತ್ತಿದೆ ಚಾಮರಾಜನಗರ ಜಿಲ್ಲೆ

- Advertisement -
- Advertisement -

ಚಾಮರಾಜನಗರ ಜಿಲ್ಲೆ ಆಡಳಿತ ವರ್ಗದ ನಿರ್ಲಕ್ಷ್ಯಕ್ಕೆ ಒಳಗಾಗುವುದು ಒಂದು ಕಡೆಯಾದರೆ, ಮತ್ತೆ ಮತ್ತೆ ಯಾವುದಾದರೊಂದು ದುರಂತಕ್ಕೆ ಈಡಾಗುತ್ತಿರುವುದು ಮತ್ತೊಂದು ರೀತಿಯ ಸಮಸ್ಯೆಯಾಗಿ ಪರಿಣಮಿಸಿದೆ.

2018ನೇ ಇಸವಿ ಡಿಸೆಂಬರ್‌  14ರಂದು ಚಾಮರಾಜನಗರ ಜಿಲ್ಲೆಯಷ್ಟೇ ಅಲ್ಲ, ಇಡೀ ರಾಜ್ಯವೇ ಬೆಚ್ಚಿ ಬಿದ್ದಿತ್ತು. ಹನೂರು ತಾಲ್ಲೂಕಿನ ಕಿಚ್ಚುಗುತ್ತಿ ಮಾರಮ್ಮ ದೇವಾಲಯದ ಪ್ರಸಾದದಲ್ಲಿ ವಿಷ ಬೆರೆಸಿದ್ದರಿಂದ 17 ಜನರು ಕೊನೆಯುಸಿರೆಳೆದಿದ್ದರು. 129 ಜನ ಸಂತ್ರಸ್ತರಾದರು.

ಮಲೆ ಮಹದೇಶ್ವರ ಬೆಟ್ಟದಲ್ಲಿರುವ ಸಾಲೂರು ಬೃಹನ್ಮಠದ ಕಿರಿಯ ಇಮ್ಮಡಿ ಮಹದೇವಸ್ವಾಮೀಜಿ ಕೃತ್ಯದಲ್ಲಿ ಭಾಗಿಯಾಗಿದ್ದರು. ದೇವಾಲಯದ ಟ್ರಸ್ಟಿಗಳ ನಡುವಿನ ದ್ವೇಷವು ಭಕ್ತರಿಗೆ ವಿಷ ಹಾಕುವ ಮಟ್ಟಕ್ಕೆ ಹೋಗಿತ್ತು. ವಿಷ ಹಾಕಿದ್ದ ಈಗ ನ್ಯಾಯಾಂಗ ಬಂಧನದಲ್ಲಿದ್ದು, ಪ್ರಕರಣದ ವಿಚಾರಣೆ ನಡೆಯುತ್ತಿದೆ.

ಈ ಕರಾಳ ನೋವು ಮಾಸುವ ಮುನ್ನವೇ ಕೋವಿಡ್ ಸಂದರ್ಭದಲ್ಲಿ ಮತ್ತೊಂದು ದುರಂತಕ್ಕೆ ಚಾಮರಾಜನಗರ ಸಾಕ್ಷಿಯಾಯಿತು. ಆಕ್ಸಿಜನ್ ಸಿಗದೆ ಜನರು ಮೃತಪಟ್ಟರು. “ಒಟ್ಟು 37 ಮೃತರ ಕುಟುಂಬಸ್ಥರ ಪೈಕಿ ಕೇವಲ 24 ಮಂದಿಯ ಕುಟುಂಬಸ್ಥರಿಗೆ ಅಲ್ಪಸ್ವಲ್ಪ ಪರಿಹಾರ ದೊರೆತಿದೆ. ಇನ್ನು 13 ಸಂತ್ರಸ್ಥ ಕುಟುಂಬಸ್ಥರಿಗೆ ಪರಿಹಾರದ ಒಂದು ನಯಾಪೈಸೆಯೂ ನೀಡಿರುವುದಿಲ್ಲ” ಎಂಬ ಆರೋಪಗಳು ಬರುತ್ತಿವೆ.

ಕ್ವಾರಿ ಗುಡ್ಡ ಕುಸಿತ ದುರಂತ

ಗಾಯದ ಮೇಲೆ ಉಪ್ಪು ಸವರಿದಂತೆ ಮತ್ತೊಂದು ದುರಂತ ಚಾಮರಾಜನಗರ ಜಿಲ್ಲೆಯಲ್ಲಿ ಮಾ.4ರಂದು ಘಟಿಸಿದೆ. ಗುಂಡ್ಲುಪೇಟೆ ತಾಲ್ಲೂಕಿನ ಮಡಹಳ್ಳಿಯ ಬಿಳಿಕಲ್ಲು ಕ್ವಾರಿಯ ಗುಡ್ಡ ಕುಸಿತದಲ್ಲಿ ಕಾರ್ಮಿಕರು ಸಿಲುಕಿ ಮೂವರು ಮೃತಪಟ್ಟಿದ್ದಾರೆ. ಐವರು ಗಾಯಗೊಂಡಿದ್ದಾರೆ.

ಮಣ್ಣು, ಬಂಡೆಗಳ ಅಡಿ ಸಿಲುಕಿರುವ ಮೂವರು ಕಾರ್ಮಿಕರ ಪೈಕಿ ಒಬ್ಬರ ಮೃತದೇಹ ಪತ್ತೆಯಾಗಿದೆ. ಇನ್ನಿಬ್ಬರ ಪತ್ತೆಗೆ ಕಾರ್ಯಾಚರಣೆ ಮುಂದುವರಿದಿದ್ದು, ಅವರು ಜೀವಂತ ಬದುಕಿರುವ ಸಾಧ್ಯತೆ ಇಲ್ಲ ಎನ್ನಲಾಗುತ್ತಿದೆ.

ಹೊರಕ್ಕೆ ತೆಗೆಯಲಾದ ಮೃತ ದೇಹವನ್ನು ಉತ್ತರಪ್ರದೇಶದ ಗೋರಖ್‌ ಪುರದ ಅಜೀಂ ಉಲ್ಲಾ ಅಲಿಯಾಸ್‌ ಬಬ್ಲೂ (24) ಎಂದು ಗುರುತಿಸಲಾಗಿದೆ. ಕಲ್ಲು ಬಂಡೆಗಳ ಅಡಿಯಲ್ಲಿ ಸಿಲುಕಿರುವ ಇನ್ನಿಬ್ಬರು ಮಿರಾಜ್ (28) ಹಾಗೂ ಸರ್ಫ್ರಾಜ್ (18) ಕೂಡ ಉತ್ತರ ಪ್ರದೇಶದ ಗೋರಖ್‌ಪುರದವರೇ ಆಗಿದ್ದಾರೆಂದು ಹೇಳಲಾಗುತ್ತಿದೆ.

ಅಜೀಂ ಉಲ್ಲಾ ಹಾಗೂ ಮಿರಾಜ್‌ ಅವರು ಹಿಟಾಚಿ ಆಪರೇಟರ್‌ ಆಗಿ ಕೆಲಸ ಮಾಡುತ್ತಿದ್ದರು. ಸರ್ಫ್ರಾಜ್‌ ಸಹಾಯಕರಾಗಿದ್ದರು. ಕಲ್ಲು ಬಂಡೆಗಳ ಅಡಿಯಲ್ಲಿ ಮುಚ್ಚಿ ಹೋಗಿದ್ದ ಹಿಟಾಚಿಯಲ್ಲಿ ಸಿಲುಕಿದ್ದ ಅಜೀಂ ಉಲ್ಲಾ ಅವರ ಶವವನ್ನು ರಾಷ್ಟ್ರೀಯ ವಿಪತ್ತು ಕಾರ್ಯಪಡೆ ಹಾಗೂ ರಾಜ್ಯ ವಿಪತ್ತು ಕಾರ್ಯ ಪಡೆ ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಶನಿವಾರ ಸತತ 10 ಗಂಟೆಗಳ ಕಾರ್ಯಾಚರಣೆ ಬಳಿಕ ಹೊರತೆಗೆದ್ದಾರೆ.

ಅಲ್ಲಿಗೆ ಸಮೀಪದಲ್ಲೇ ಬಂಡೆಗಳ ಅಡಿಯಲ್ಲಿ ಸಿಲುಕಿಕೊಂಡಿರುವ ಮತ್ತೊಂದು ಹಿಟಾಚಿ ಕಡೆಯಿಂದ ದುರ್ವಾಸನೆ ಬರುತ್ತಿರುವುದರಿಂದ, ಉಳಿದಿಬ್ಬರ ಮೃತದೇಹವಿರಬಹುದೆಂಬ ಶಂಕೆಯಿಂದ ಅಲ್ಲಿ ಕಾರ್ಯಾಚರಣೆ ಆರಂಭಿಸಲಾಗಿದೆ. ಎನ್‌ಡಿಆರ್‌ಎಫ್‌ ಹಾಗೂ ಎಸ್‌ಡಿಆರ್‌ಎಫ್‌ನ ತಲಾ 20 ಮಂದಿ, ಅಗ್ನಿ ಶಾಮಕ ದಳದ 50 ಸಿಬ್ಬಂದಿ ಶನಿವಾರ ಬೆಳಿಗ್ಗೆ 6.30ಕ್ಕೆ ಕಾರ್ಯಾಚರಣೆ ಆರಂಭಿಸಿದ್ದಾರೆ.

ಫ್ರಾನ್ಸಿಸ್‌ (ಮಾರ್ಟಳ್ಳಿ, ಕೊಳ್ಳೇಗಾಲ), ಆಶ್ರೀಫ್‌ (ಗೋರಖ್‌ಪುರ್‌, ಉತ್ತರ ಪ್ರದೇಶ), ಬಬ್ಲು (ಗೋರಖ್‌ಪುರ್‌‌, ಉತ್ತರ ಪ್ರದೇಶ), ಮೀರಜ್‌ ಖಾನ್‌ (ಉತ್ತರ ಪ್ರದೇಶ), ನೂರುದ್ದೀನ್‌ (ಕ್ಯಾಲಿಕಟ್‌, ಕೇರಳ) ಎಂಬವರು ಗಾಯಗೊಂಡಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ.

ದುರಂತ ನಡೆದ ಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಶನಿವಾರ ಭೇಟಿ ನೀಡಿದ್ದರು. “ಜಿಲ್ಲೆಯಲ್ಲಿ ಅಕ್ರಮ ಗಣಿಗಾರಿಕೆಯನ್ನು ಪತ್ತೆ ಹಚ್ಚುವುದಕ್ಕಾಗಿ ಎಲ್ಲ ಗಣಿ ಚಟುವಟಿಕೆಗಳನ್ನು ತಕ್ಷಣದಿಂದಲೇ ಸ್ಥಗಿತಗೊಳಿಸಲಾಗುವುದು. ಜಿಲ್ಲಾಧಿಕಾರಿ ನೇತೃತ್ವದ ಅಧಿಕಾರಿಗಳ ತಂಡ ಖುದ್ದಾಗಿ ಗಣಿಗಳಿಗೆ ಭೇಟಿ ನೀಡಿ, ಎಲ್ಲವೂ ನಿಯಮ ಪ್ರಕಾರ ನಡೆಯುತ್ತಿದ್ದರೆ, ಗಣಿಗಾರಿಕೆಗೆ ಅವಕಾಶ ನೀಡಲಿದೆ. ಈ ಪ್ರಕರಣದಲ್ಲಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು” ಎಂದಿದ್ದಾರೆ.

ಆದರೆ ಹೆಸರು ಹೇಳಲಿಚ್ಛಿಸದ ಮೂಲಗಳ ಪ್ರಕಾರ, “ಚಾಮರಾಜನಗರ ಜಿಲ್ಲೆಯಲ್ಲಿ ಇಂತಹ ದುರಂತಗಳು ಆಗಾಗ್ಗೆ ಸಂಭವಿಸುತ್ತಿವೆ. ಆದರೆ ಬೆಳಕಿಗೆ ಬರುತ್ತಿಲ್ಲ. ಅಕ್ರಮ ಕಲ್ಲುಗಣಿಗಾರಿಕೆ ಮಿತಿಮೀರಿದೆ. ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಯಾವುದೇ ಕ್ರಮ ಜರುಗಿಸದೆ ಇರುವುದರಿಂದ ಗಣಿಗಾರಿಕೆಗೆ ಕಡಿವಾಣ ಇಲ್ಲವಾಗಿದೆ”.


ಇದನ್ನೂ ಓದಿರಿ: ‘ಕೋವಿಡ್‌ ಆಕ್ಸಿಜನ್ ದುರಂತ: ಚಾ.ನಗರ ಸಂತ್ರಸ್ತರಿಗೆ ಇನ್ನೂ ಸಿಗದ ಪರಿಹಾರ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...