Homeಕರ್ನಾಟಕಮತ್ತೆ ಮತ್ತೆ ದುರಂತಗಳಿಗೆ ಸಾಕ್ಷಿಯಾಗುತ್ತಿದೆ ಚಾಮರಾಜನಗರ ಜಿಲ್ಲೆ

ಮತ್ತೆ ಮತ್ತೆ ದುರಂತಗಳಿಗೆ ಸಾಕ್ಷಿಯಾಗುತ್ತಿದೆ ಚಾಮರಾಜನಗರ ಜಿಲ್ಲೆ

- Advertisement -
- Advertisement -

ಚಾಮರಾಜನಗರ ಜಿಲ್ಲೆ ಆಡಳಿತ ವರ್ಗದ ನಿರ್ಲಕ್ಷ್ಯಕ್ಕೆ ಒಳಗಾಗುವುದು ಒಂದು ಕಡೆಯಾದರೆ, ಮತ್ತೆ ಮತ್ತೆ ಯಾವುದಾದರೊಂದು ದುರಂತಕ್ಕೆ ಈಡಾಗುತ್ತಿರುವುದು ಮತ್ತೊಂದು ರೀತಿಯ ಸಮಸ್ಯೆಯಾಗಿ ಪರಿಣಮಿಸಿದೆ.

2018ನೇ ಇಸವಿ ಡಿಸೆಂಬರ್‌  14ರಂದು ಚಾಮರಾಜನಗರ ಜಿಲ್ಲೆಯಷ್ಟೇ ಅಲ್ಲ, ಇಡೀ ರಾಜ್ಯವೇ ಬೆಚ್ಚಿ ಬಿದ್ದಿತ್ತು. ಹನೂರು ತಾಲ್ಲೂಕಿನ ಕಿಚ್ಚುಗುತ್ತಿ ಮಾರಮ್ಮ ದೇವಾಲಯದ ಪ್ರಸಾದದಲ್ಲಿ ವಿಷ ಬೆರೆಸಿದ್ದರಿಂದ 17 ಜನರು ಕೊನೆಯುಸಿರೆಳೆದಿದ್ದರು. 129 ಜನ ಸಂತ್ರಸ್ತರಾದರು.

ಮಲೆ ಮಹದೇಶ್ವರ ಬೆಟ್ಟದಲ್ಲಿರುವ ಸಾಲೂರು ಬೃಹನ್ಮಠದ ಕಿರಿಯ ಇಮ್ಮಡಿ ಮಹದೇವಸ್ವಾಮೀಜಿ ಕೃತ್ಯದಲ್ಲಿ ಭಾಗಿಯಾಗಿದ್ದರು. ದೇವಾಲಯದ ಟ್ರಸ್ಟಿಗಳ ನಡುವಿನ ದ್ವೇಷವು ಭಕ್ತರಿಗೆ ವಿಷ ಹಾಕುವ ಮಟ್ಟಕ್ಕೆ ಹೋಗಿತ್ತು. ವಿಷ ಹಾಕಿದ್ದ ಈಗ ನ್ಯಾಯಾಂಗ ಬಂಧನದಲ್ಲಿದ್ದು, ಪ್ರಕರಣದ ವಿಚಾರಣೆ ನಡೆಯುತ್ತಿದೆ.

ಈ ಕರಾಳ ನೋವು ಮಾಸುವ ಮುನ್ನವೇ ಕೋವಿಡ್ ಸಂದರ್ಭದಲ್ಲಿ ಮತ್ತೊಂದು ದುರಂತಕ್ಕೆ ಚಾಮರಾಜನಗರ ಸಾಕ್ಷಿಯಾಯಿತು. ಆಕ್ಸಿಜನ್ ಸಿಗದೆ ಜನರು ಮೃತಪಟ್ಟರು. “ಒಟ್ಟು 37 ಮೃತರ ಕುಟುಂಬಸ್ಥರ ಪೈಕಿ ಕೇವಲ 24 ಮಂದಿಯ ಕುಟುಂಬಸ್ಥರಿಗೆ ಅಲ್ಪಸ್ವಲ್ಪ ಪರಿಹಾರ ದೊರೆತಿದೆ. ಇನ್ನು 13 ಸಂತ್ರಸ್ಥ ಕುಟುಂಬಸ್ಥರಿಗೆ ಪರಿಹಾರದ ಒಂದು ನಯಾಪೈಸೆಯೂ ನೀಡಿರುವುದಿಲ್ಲ” ಎಂಬ ಆರೋಪಗಳು ಬರುತ್ತಿವೆ.

ಕ್ವಾರಿ ಗುಡ್ಡ ಕುಸಿತ ದುರಂತ

ಗಾಯದ ಮೇಲೆ ಉಪ್ಪು ಸವರಿದಂತೆ ಮತ್ತೊಂದು ದುರಂತ ಚಾಮರಾಜನಗರ ಜಿಲ್ಲೆಯಲ್ಲಿ ಮಾ.4ರಂದು ಘಟಿಸಿದೆ. ಗುಂಡ್ಲುಪೇಟೆ ತಾಲ್ಲೂಕಿನ ಮಡಹಳ್ಳಿಯ ಬಿಳಿಕಲ್ಲು ಕ್ವಾರಿಯ ಗುಡ್ಡ ಕುಸಿತದಲ್ಲಿ ಕಾರ್ಮಿಕರು ಸಿಲುಕಿ ಮೂವರು ಮೃತಪಟ್ಟಿದ್ದಾರೆ. ಐವರು ಗಾಯಗೊಂಡಿದ್ದಾರೆ.

ಮಣ್ಣು, ಬಂಡೆಗಳ ಅಡಿ ಸಿಲುಕಿರುವ ಮೂವರು ಕಾರ್ಮಿಕರ ಪೈಕಿ ಒಬ್ಬರ ಮೃತದೇಹ ಪತ್ತೆಯಾಗಿದೆ. ಇನ್ನಿಬ್ಬರ ಪತ್ತೆಗೆ ಕಾರ್ಯಾಚರಣೆ ಮುಂದುವರಿದಿದ್ದು, ಅವರು ಜೀವಂತ ಬದುಕಿರುವ ಸಾಧ್ಯತೆ ಇಲ್ಲ ಎನ್ನಲಾಗುತ್ತಿದೆ.

ಹೊರಕ್ಕೆ ತೆಗೆಯಲಾದ ಮೃತ ದೇಹವನ್ನು ಉತ್ತರಪ್ರದೇಶದ ಗೋರಖ್‌ ಪುರದ ಅಜೀಂ ಉಲ್ಲಾ ಅಲಿಯಾಸ್‌ ಬಬ್ಲೂ (24) ಎಂದು ಗುರುತಿಸಲಾಗಿದೆ. ಕಲ್ಲು ಬಂಡೆಗಳ ಅಡಿಯಲ್ಲಿ ಸಿಲುಕಿರುವ ಇನ್ನಿಬ್ಬರು ಮಿರಾಜ್ (28) ಹಾಗೂ ಸರ್ಫ್ರಾಜ್ (18) ಕೂಡ ಉತ್ತರ ಪ್ರದೇಶದ ಗೋರಖ್‌ಪುರದವರೇ ಆಗಿದ್ದಾರೆಂದು ಹೇಳಲಾಗುತ್ತಿದೆ.

ಅಜೀಂ ಉಲ್ಲಾ ಹಾಗೂ ಮಿರಾಜ್‌ ಅವರು ಹಿಟಾಚಿ ಆಪರೇಟರ್‌ ಆಗಿ ಕೆಲಸ ಮಾಡುತ್ತಿದ್ದರು. ಸರ್ಫ್ರಾಜ್‌ ಸಹಾಯಕರಾಗಿದ್ದರು. ಕಲ್ಲು ಬಂಡೆಗಳ ಅಡಿಯಲ್ಲಿ ಮುಚ್ಚಿ ಹೋಗಿದ್ದ ಹಿಟಾಚಿಯಲ್ಲಿ ಸಿಲುಕಿದ್ದ ಅಜೀಂ ಉಲ್ಲಾ ಅವರ ಶವವನ್ನು ರಾಷ್ಟ್ರೀಯ ವಿಪತ್ತು ಕಾರ್ಯಪಡೆ ಹಾಗೂ ರಾಜ್ಯ ವಿಪತ್ತು ಕಾರ್ಯ ಪಡೆ ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಶನಿವಾರ ಸತತ 10 ಗಂಟೆಗಳ ಕಾರ್ಯಾಚರಣೆ ಬಳಿಕ ಹೊರತೆಗೆದ್ದಾರೆ.

ಅಲ್ಲಿಗೆ ಸಮೀಪದಲ್ಲೇ ಬಂಡೆಗಳ ಅಡಿಯಲ್ಲಿ ಸಿಲುಕಿಕೊಂಡಿರುವ ಮತ್ತೊಂದು ಹಿಟಾಚಿ ಕಡೆಯಿಂದ ದುರ್ವಾಸನೆ ಬರುತ್ತಿರುವುದರಿಂದ, ಉಳಿದಿಬ್ಬರ ಮೃತದೇಹವಿರಬಹುದೆಂಬ ಶಂಕೆಯಿಂದ ಅಲ್ಲಿ ಕಾರ್ಯಾಚರಣೆ ಆರಂಭಿಸಲಾಗಿದೆ. ಎನ್‌ಡಿಆರ್‌ಎಫ್‌ ಹಾಗೂ ಎಸ್‌ಡಿಆರ್‌ಎಫ್‌ನ ತಲಾ 20 ಮಂದಿ, ಅಗ್ನಿ ಶಾಮಕ ದಳದ 50 ಸಿಬ್ಬಂದಿ ಶನಿವಾರ ಬೆಳಿಗ್ಗೆ 6.30ಕ್ಕೆ ಕಾರ್ಯಾಚರಣೆ ಆರಂಭಿಸಿದ್ದಾರೆ.

ಫ್ರಾನ್ಸಿಸ್‌ (ಮಾರ್ಟಳ್ಳಿ, ಕೊಳ್ಳೇಗಾಲ), ಆಶ್ರೀಫ್‌ (ಗೋರಖ್‌ಪುರ್‌, ಉತ್ತರ ಪ್ರದೇಶ), ಬಬ್ಲು (ಗೋರಖ್‌ಪುರ್‌‌, ಉತ್ತರ ಪ್ರದೇಶ), ಮೀರಜ್‌ ಖಾನ್‌ (ಉತ್ತರ ಪ್ರದೇಶ), ನೂರುದ್ದೀನ್‌ (ಕ್ಯಾಲಿಕಟ್‌, ಕೇರಳ) ಎಂಬವರು ಗಾಯಗೊಂಡಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ.

ದುರಂತ ನಡೆದ ಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಶನಿವಾರ ಭೇಟಿ ನೀಡಿದ್ದರು. “ಜಿಲ್ಲೆಯಲ್ಲಿ ಅಕ್ರಮ ಗಣಿಗಾರಿಕೆಯನ್ನು ಪತ್ತೆ ಹಚ್ಚುವುದಕ್ಕಾಗಿ ಎಲ್ಲ ಗಣಿ ಚಟುವಟಿಕೆಗಳನ್ನು ತಕ್ಷಣದಿಂದಲೇ ಸ್ಥಗಿತಗೊಳಿಸಲಾಗುವುದು. ಜಿಲ್ಲಾಧಿಕಾರಿ ನೇತೃತ್ವದ ಅಧಿಕಾರಿಗಳ ತಂಡ ಖುದ್ದಾಗಿ ಗಣಿಗಳಿಗೆ ಭೇಟಿ ನೀಡಿ, ಎಲ್ಲವೂ ನಿಯಮ ಪ್ರಕಾರ ನಡೆಯುತ್ತಿದ್ದರೆ, ಗಣಿಗಾರಿಕೆಗೆ ಅವಕಾಶ ನೀಡಲಿದೆ. ಈ ಪ್ರಕರಣದಲ್ಲಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು” ಎಂದಿದ್ದಾರೆ.

ಆದರೆ ಹೆಸರು ಹೇಳಲಿಚ್ಛಿಸದ ಮೂಲಗಳ ಪ್ರಕಾರ, “ಚಾಮರಾಜನಗರ ಜಿಲ್ಲೆಯಲ್ಲಿ ಇಂತಹ ದುರಂತಗಳು ಆಗಾಗ್ಗೆ ಸಂಭವಿಸುತ್ತಿವೆ. ಆದರೆ ಬೆಳಕಿಗೆ ಬರುತ್ತಿಲ್ಲ. ಅಕ್ರಮ ಕಲ್ಲುಗಣಿಗಾರಿಕೆ ಮಿತಿಮೀರಿದೆ. ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಯಾವುದೇ ಕ್ರಮ ಜರುಗಿಸದೆ ಇರುವುದರಿಂದ ಗಣಿಗಾರಿಕೆಗೆ ಕಡಿವಾಣ ಇಲ್ಲವಾಗಿದೆ”.


ಇದನ್ನೂ ಓದಿರಿ: ‘ಕೋವಿಡ್‌ ಆಕ್ಸಿಜನ್ ದುರಂತ: ಚಾ.ನಗರ ಸಂತ್ರಸ್ತರಿಗೆ ಇನ್ನೂ ಸಿಗದ ಪರಿಹಾರ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...