Homeಕರ್ನಾಟಕಯುಪಿ: ಇಂದು ಕೊನೆಯ ಹಂತದ ಚುನಾವಣೆ; ವಾರಣಾಸಿಯ ಮೇಲೆ ಎಲ್ಲರ ಕಣ್ಣು

ಯುಪಿ: ಇಂದು ಕೊನೆಯ ಹಂತದ ಚುನಾವಣೆ; ವಾರಣಾಸಿಯ ಮೇಲೆ ಎಲ್ಲರ ಕಣ್ಣು

- Advertisement -
- Advertisement -

ಲಕ್ನೋ: ಉತ್ತರ ಪ್ರದೇಶದಲ್ಲಿ 7 ಹಂತದ ಮಹಾ ಚುನಾವಣೆಯ ಕೊನೆಯ ಹಂತದ ಮತದಾನ ಇಂದು ನಡೆಯುತ್ತಿದ್ದು, 54 ಕ್ಷೇತ್ರಗಳಲ್ಲಿ ಮತದಾನ ನಡೆಯತ್ತಿದೆ. ಈ ಸುತ್ತಿನಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಸಂಸದೀಯ ಕ್ಷೇತ್ರವಾದ ವಾರಣಾಸಿಯತ್ತ ಎಲ್ಲರ ಕಣ್ಣು ನೆಟ್ಟಿದೆ.

ಅಜಂಗಢ, ಮೌ, ಜೌನ್‌ಪುರ್, ಗಾಜಿಪುರ, ಚಂದೌಲಿ, ವಾರಣಾಸಿ, ಮಿರ್ಜಾಪುರ, ಭದೋಹಿ ಮತ್ತು ಸೋನ್‌ಭದ್ರ ಜಿಲ್ಲೆಗಳಲ್ಲಿನ 54 ವಿಧಾನಸಭಾ ಕ್ಷೇತ್ರಗಳಲ್ಲಿ ಚುನಾವಣೆ ನಡೆಯುತ್ತಿದೆ.

ವಾರಣಾಸಿ ಮತ್ತು ಅದರ ಪಕ್ಕದ ಜಿಲ್ಲೆಗಳಾದ ಬನಾರಸ್ ಸಿಟಿ ಸೌತ್, ಬನಾರಸ್ ಸಿಟಿ ನಾರ್ತ್, ಶಿವಪುರ, ಸೇವಾಪುರಿ, ಕಂಟೋನ್ಮೆಂಟ್, ಅಜ್ಗರ, ಪಿಂದ್ರಾ ಮತ್ತು ರೊಹನಿಯಾದ ಕ್ಷೇತ್ರಗಳು ಬಹುಕೋನ ಸ್ಪರ್ಧೆಗೆ ಸಾಕ್ಷಿಯಾಗಿವೆ.

ಕಳೆದ ಬಾರಿ ಬಿಜೆಪಿ ಮತ್ತು ಅದರ ಮಿತ್ರಪಕ್ಷಗಳು ಈ ಪ್ರದೇಶದಲ್ಲಿ ಮುನ್ನಡೆ ಸಾಧಿಸಿದ್ದವು. ಆರು ಸ್ಥಾನಗಳು ಬಿಜೆಪಿ ಪಾಲಾಗಿವೆ. ಉಳಿದ ಎರಡರಲ್ಲಿ ಬಿಜೆಪಿ ಮಿತ್ರ ಪಕ್ಷವಾದ ಅನುಪ್ರಿಯಾ ಪಟೇಲ್ ಅವರ ಅಪ್ನಾ ದಳ (ಎಸ್) ಒಂದು ಸ್ಥಾನ, ಈಗ ಅಖಿಲೇಶ್ ಯಾದವ್ ಅವರ ಸಮಾಜವಾದಿ ಪಕ್ಷದ ಪಾಲುದಾರರಾಗಿರುವ ಓಂ ಪ್ರಕಾಶ್ ರಾಜ್‌ಭರ್ ಅವರ ಸುಹೇಲ್‌ದೇವ್ ಭಾರತೀಯ ಸಮಾಜ ಪಕ್ಷ (ಎಸ್‌ಬಿಎಸ್‌ಪಿ) ಒಂದು ಸ್ಥಾನವನ್ನು ಗೆದ್ದಿವೆ.

ಐದು ಕ್ಷೇತ್ರಗಳು ಪ್ರಧಾನಿ ಮೋದಿಯವರ ಸಂಸದೀಯ ಕ್ಷೇತ್ರವಾದ ವಾರಣಾಸಿ ವ್ಯಾಪ್ತಿಯಲ್ಲಿವೆ. ಕಳೆದ ಬಾರಿ ಬಿಜೆಪಿ ಗೆದ್ದಿದ್ದ ನೆರೆಯ ಮಿರ್ಜಾಪುರ ಮತ್ತು ಜೌನ್‌ಪುರದಲ್ಲೂ ಪ್ರಬಲ ಚುನಾವಣಾ ಸಮರ ಏರ್ಪಟ್ಟಿದೆ.

3 ಲಕ್ಷ ಮುಸ್ಲಿಮರಲ್ಲದೆ ವಾರಣಾಸಿಯಲ್ಲಿ 3.25 ಲಕ್ಷ ವೈಶ್ಯರು, ಸ್ಥಳೀಯವಾಗಿ ಒಬಿಸಿ ಕುರ್ಮಿ ​​2 ಲಕ್ಷ, ಯಾದವರು 1.5 ಲಕ್ಷ, ಠಾಕೂರ್ 1 ಲಕ್ಷ, ದಲಿತರು 80,000 ಮತ್ತು ಇತರ ಒಬಿಸಿ ಜಾತಿಗಳು 70,000 ಜನರಿದ್ದಾರೆ.

ಅಖಿಲೇಶ್ ಯಾದವ್ ಅವರ ಪಾಲುದಾರರಾದ ಅಪ್ನಾ ದಳ (ಕೆ), ರಾಜ್‌ಭರ್ ಅವರ ಎಸ್‌ಬಿಎಸ್‌ಪಿ ಮತ್ತು ಬಿಜೆಪಿ ಮಿತ್ರಪಕ್ಷಗಳಾದ ಅಪ್ನಾ ದಳ, ನಿಶಾದ್ ಪಕ್ಷಗಳ ನಡುವಿನ ಸಮರವೆಂದೇ ಕೊನೆಯ ಹಂತದ ಚುನಾವಣೆಯನ್ನು ನೋಡಲಾಗುತ್ತಿದೆ.

ಅಖಿಲೇಶ್ ಯಾದವ್ ಅವರು ವಾರಣಾಸಿ ಭಾಗದಲ್ಲಿ ನಾಲ್ಕು ಕ್ಷೇತ್ರಗಳಲ್ಲಿ ಎಸ್‌ಪಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದಾರೆ. ಇನ್ನುಳಿದ ಸ್ಥಾನಗಳನ್ನು ಇತರ ಮಿತ್ರಪಕ್ಷಗಳಾದ ಅಪ್ನಾ ದಳ, ಎಸ್‌ಬಿಎಸ್‌ಪಿಗೆ ಬಿಟ್ಟುಕೊಟ್ಟಿದ್ದಾರೆ.

ಬಿಜೆಪಿ ಏಳು ಸ್ಥಾನಗಳಲ್ಲಿ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ರೊಹಾನಿಯಾ ಕ್ಷೇತ್ರದಲ್ಲಿ ಕೇಂದ್ರ ಸಚಿವೆ ಅನುಪ್ರಿಯಾ ಪಟೇಲ್ ನೇತೃತ್ವದ ಅಪ್ನಾ ದಳ (ಎಸ್) ಅಭ್ಯರ್ಥಿ ಸ್ಪರ್ಧಿಸಿದ್ದಾರೆ.

ಈ ಚುನಾವಣೆಯು ಸಮಾಜವಾದಿ ಪಕ್ಷದ ಮುಖ್ಯಸ್ಥರಿಗೆ ಪರೀಕ್ಷೆಯೊಡ್ಡಿದೆ. ಅಖಿಲೇಶ್‌ ಅವರ ಸಂಸದೀಯ ಕ್ಷೇತ್ರವಾದ ಅಜಂಗಢ್‌ಗೆ ಸಹ ಚುನಾವಣೆ ನಡೆಯುತ್ತಿದೆ. 2017ರಲ್ಲಿ ಬಿಜೆಪಿ ಪ್ರಚಂಡ ಬಹುಮತದ ನಡುವೆಯೂ ಈ ಪ್ರದೇಶವು ಎಸ್‌ಪಿಗೆ ನಿಷ್ಠವಾಗಿತ್ತು. ಜಿಲ್ಲೆಯ 10 ಸ್ಥಾನಗಳಲ್ಲಿ ಎಸ್‌ಪಿ ಐದರಲ್ಲಿ ಗೆದ್ದಿತ್ತು.

ಉತ್ತರ ಪ್ರದೇಶ ಮತ್ತು ಇತರ ನಾಲ್ಕು ರಾಜ್ಯಗಳ ಮತ ಎಣಿಕೆಯು ಮಾರ್ಚ್ 10 ರಂದು ನಡೆಯಲಿದೆ.

ಕೋವಿಡ್‌ ಬಿಕ್ಕಟ್ಟು ನಿರ್ವಹಣೆ: ಬಿಜೆಪಿಗೆ ಮುಳುವಾಗುವುದೇ?

ಮಾನವ ಹಕ್ಕುಗಳ ಸಂಸ್ಥೆಯಾದ ಸಿಟಿಜನ್‌ ಫಾರ್‌ ಜಸ್ಟೀಸ್‌ ಅಂಡ್‌ ಫೀಸ್‌ (ಸಿಜೆಪಿ) ಹಾಗೂ ಸ್ವತಂತ್ರ ತಜ್ಞರು ಸಂಗ್ರಹಿಸಿ, ವಿಶ್ಲೇಷಿಸಿದ ದತ್ತಾಂಶಗಳು ಮಹತ್ವದ ಸಂಗತಿಯೊಂದನ್ನು ಇತ್ತೀಚೆಗೆ ಬಿಚ್ಚಿಟ್ಟಿತ್ತು. ಪ್ರಧಾನಿ ನರೇಂದ್ರ ಮೋದಿಯವರ ತವರು ಜಿಲ್ಲೆಯಾದ ವಾರಣಾಸಿಯನ್ನು ಹೊಂದಿರುವ ಪೂರ್ವ ಉತ್ತರ ಪ್ರದೇಶದ ಪೂರ್ವಂಚಲ ಭಾಗದಲ್ಲಿ ಅತಿಹೆಚ್ಚಿನ ಜನರು ಕೋವಿಡ್ ಸಾಂಕ್ರಾಮಿಕದ ವೇಳೆ ಸಾವಿಗೀಡಾಗಿದ್ದಾರೆ ಎಂದು ವರದಿ ವಿಶ್ಲೇಷಿಸಿತ್ತು.

ಸಮೀಕ್ಷೆ ನಡೆಸಿದ ಪ್ರದೇಶದ ಅಂಕಿ ಅಂಶಗಳು ಹೇಳುವುದೇನೆಂದರೆ “ಜನವರಿ 2020ರಿಂದ ಆಗಸ್ಟ್‌ 2021ರವರೆಗೆ ದಾಖಲಾದ ಸಾವಿನ ಪ್ರಮಾಣವು 2019ರ ದಾಖಲೆಗೆ ಹೋಲಿಕೆ ಮಾಡಿದರೆ ಶೇ. 60ರಷ್ಟು ಹೆಚ್ಚಾಗಿದೆ”. ಇದು ಸರ್ಕಾರಿ ದಾಖಲೆಗಳನ್ನು ಆಧರಿಸಿ ಮಾಡಿದ ವರದಿಯಾಗಿದೆ ಎಂದು ಸಿಜೆಪಿ ಹೇಳಿತ್ತು. ಈ ಎಲ್ಲ ಅಂಶಗಳು ಚುನಾವಣೆಯ ಮೇಲೆ ಪರಿಣಾಮ ಬೀರಲಿದೆಯೇ?- ಮಾರ್ಚ್ 10ರವರೆಗೆ ಕಾಯಬೇಕಷ್ಟೇ.


ಉತ್ತರ ಪ್ರದೇಶ: ಕೋವಿಡ್‌ ಅವಧಿಯಲ್ಲಿ ಮೋದಿಯ ವಾರಣಾಸಿ ಕಂಡ ಸಾವು ನೋವು: ಬೆಚ್ಚಿಬೀಳಿಸುವ ವರದಿ ಬಹಿರಂಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...