Homeಮುಖಪುಟ45ನೇ ಚೆನ್ನೈ ಪುಸ್ತಕ ಮೇಳ: 12 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ಪುಸ್ತಕ ಮಾರಾಟ

45ನೇ ಚೆನ್ನೈ ಪುಸ್ತಕ ಮೇಳ: 12 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ಪುಸ್ತಕ ಮಾರಾಟ

- Advertisement -
- Advertisement -

ತಮಿಳುನಾಡಿನ ಚೆನ್ನೈ ನಗರದ ನಂದನಂ ವೈಎಂಸಿಎ ಮೈದಾನದಲ್ಲಿ ದಕ್ಷಿಣ ಭಾರತದ ಪುಸ್ತಕ ಮಾರಾಟಗಾರರು ಮತ್ತು ಪ್ರಕಾಶಕರ ಸಂಘ (BAPASI) ಆಯೋಜಿಸಿದ್ದ 45ನೇ ಚೆನ್ನೈ ಪುಸ್ತಕ ಮೇಳಕ್ಕೆ ದೇಶದ ನಾನಾ ಭಾಗಗಳಿಂದ ಸುಮಾರು 15 ಲಕ್ಷಕ್ಕೂ ಅಧಿಕ ಮಂದಿ ಭೇಟಿ ನೀಡಿದ್ದಾರೆ.

’ಈ ಪುಸ್ತಕ ಮೇಳದಲ್ಲಿ 12 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ಪುಸ್ತಕಗಳನ್ನು ಮಾರಾಟ ಮಾಡಲಾಗಿದೆ’ ಎಂದು BAPASI ಅಧ್ಯಕ್ಷ ಎಸ್. ವೈರವನ್ ಹೇಳಿದ್ದಾರೆ.

ತಮಿಳುನಾಡಿನಲ್ಲಿ ಕೋವಿಡ್ ಪ್ರಕರಣಗಳು ಇಳಿಮುಖವಾದ ನಂತರ ಫೆಬ್ರವರಿ 16 ರಂದು ಪುಸ್ತಕ ಮೇಳ ಆರಂಭವಾಗಿತ್ತು. ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಉದ್ಘಾಟಿಸಿದ ಈ ಮೇಳದಲ್ಲಿ ದೇಶಾದ್ಯಂತದ ಪುಸ್ತಕ ಮಾರಾಟಗಾರರ 800 ಕ್ಕೂ ಹೆಚ್ಚು ಮಳಿಗೆಗಳು ಇದ್ದವು.

ಭಾನುವಾರ ಈ ಮೇಳಕ್ಕೆ ತೆರೆ ಎಳೆಯಲಾಗಿದೆ. ನಿರೀಕ್ಷೆಯಂತೆ, ಮೇಳದ ಕೊನೆ ದಿನ ಸಾವಿರಾರು ಜನರು ಸೇರಿದ್ದು, ಪುಸ್ತಕಗಳ ಮಾರಾಟದಲ್ಲಿ ಅತ್ಯಂತ ಏರಿಕೆ ಕಂಡುಬಂದಿದೆ. ಜನರನ್ನು ನಿಯಂತ್ರಿಸಲು ಮೈದಾನದಲ್ಲಿ ಪೊಲೀಸರನ್ನು ನಿಯೋಜಿಸಲಾಗಿತ್ತು.

ಇದನ್ನೂ ಓದಿ: ರಾಜೇಶ್ವರಿ ತೇಜಸ್ವಿಯವರ ಹೊಸ ಪುಸ್ತಕದ ಆಯ್ದ ಭಾಗ – ‘ನನ್ನ ಡ್ರೈವಿಂಗ್ ಡೈರಿ’

ಈ ಬಾರಿಯ ಮೇಳದಲ್ಲಿ ರಾಜ್ಯ ಸರ್ಕಾರದ ‘ಇಲ್ಲಂ ತೇಡಿ ಕಲ್ವಿ’ (Illam Thedi Kalvi)ಯೋಜನೆ, ವಿಜ್ಞಾನ ಪ್ರದರ್ಶನ, Keezhadi ಛಾಯಾಚಿತ್ರ ಗ್ಯಾಲರಿ ಮತ್ತು ಹಳೆಯ ಕುಂಬಾರಿಕೆ ಕಲಾಕೃತಿಗಳ ಪ್ರದರ್ಶನಕ್ಕೆ ಸಂಬಂಧಿಸಿದ ಮಳಿಗೆಗಳು ಸಹ ಇದ್ದವು.

ಪ್ರಸಿದ್ಧ ನಾಯಕರ ಶಿಲ್ಪಗಳು ಮೇಳದಲ್ಲಿ ಮತ್ತೊಂದು ಆಕರ್ಷಣೆಯಾಗಿದ್ದವು. ಮಾಜಿ ಸಿಎಂ ಎಂ. ಕರುಣಾನಿಧಿ, ಜನಪ್ರಿಯ ತಮಿಳು ಕವಿ ತಿರುವಳ್ಳುವರ್, ಬುದ್ಧ, ಮಾಜಿ ರಾಷ್ಟ್ರಪತಿ ಎಪಿಜೆ ಅಬ್ದುಲ್ ಕಲಾಂ, ದ್ರಾವಿಡ ಧೀಮಂತ ‘ಪೆರಿಯಾರ್’ ಇವಿ ರಾಮಸಾಮಿ ಮತ್ತಿತರ ನಾಯಕರ ಕಲಾಕೃತಿಗಳು ಮಾರಾಟಕ್ಕೆ ಲಭ್ಯವಿದ್ದವು.

Image
PC: Twitter@bijoyghosh70

’ಜಲ್ಲಿಕಟ್ಟು ಪ್ರತಿಭಟನೆಯ ನಂತರ ಯುವಕರಲ್ಲಿ ರಾಜಕೀಯದ ಪ್ರಜ್ಞೆ ಹೆಚ್ಚಾಗಿದೆ. ಕಳೆದೆರಡು ವರ್ಷಗಳಿಂದ ಜಾತ್ರೆಯಲ್ಲಿ ತಮ್ಮ ಕಲಾಕೃತಿಗಳನ್ನು ಪ್ರದರ್ಶಿಸುತ್ತಿದ್ದು, ಈ ಬಾರಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ತಿರುವಳ್ಳುವರ್ ಮತ್ತು ಪೆರಿಯಾರ್ ಕಲಾಕೃತಿಗಳು ಹೆಚ್ಚು ಮಾರಾಟವಾಗಿವೆ’ ಎಂದು ಶಿಲ್ಪ ಕಲಾವಿದ ಅರುಣ್ ತೈತನ್ ಹೇಳಿದ್ದಾರೆ.

ಈ ಬಾರಿಯ ಮೇಳದಲ್ಲಿ ಅತಿ ಹೆಚ್ಚಿನ ಶಾಲಾ ವಿದ್ಯಾರ್ಥಿಗಳು ಭಾವಹಿಸಿದ್ದರು ಎಂದು BAPASI ಕಾರ್ಯದರ್ಶಿ ಎಸ್‌.ಕೆ.ಮುರುಗನ್ ಹೇಳಿದ್ದಾರೆ.


ಇದನ್ನೂ ಓದಿ: ಭ್ರಮೆ ಮತ್ತು ವಾಸ್ತವಗಳ ನಡುವೆ ಪುಸ್ತಕದ ಆಯ್ದ ಭಾಗ; ಯು.ಜಿ.ಕೃಷ್ಣಮೂರ್ತಿ ರಮಣರನ್ನು ಭೇಟಿಯಾದುದು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...