Homeಕರ್ನಾಟಕಉಕ್ರೇನ್‌ನಿಂದ ಬಂದಿರುವ ವೈದ್ಯ ವಿದ್ಯಾರ್ಥಿಗಳ ಭವಿಷ್ಯವೇನು?: ಎಚ್.ಡಿ. ಕುಮಾರಸ್ವಾಮಿ ಪ್ರಶ್ನೆ

ಉಕ್ರೇನ್‌ನಿಂದ ಬಂದಿರುವ ವೈದ್ಯ ವಿದ್ಯಾರ್ಥಿಗಳ ಭವಿಷ್ಯವೇನು?: ಎಚ್.ಡಿ. ಕುಮಾರಸ್ವಾಮಿ ಪ್ರಶ್ನೆ

- Advertisement -
- Advertisement -

ಉಕ್ರೇನ್ ದೇಶದಿಂದ ವಾಪಸ್ ಬಂದಿರುವ ವೈದ್ಯಕೀಯ ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಆತಂಕ ವ್ಯಕ್ತಪಡಿಸಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ‘ಆಪರೇಷನ್ ಗಂಗಾ’ ಹೆಸರಿನಲ್ಲಿ ಕೇಂದ್ರ ಸರಕಾರ ಉಕ್ರೇನ್ʼನಿಂದ ವಿದ್ಯಾರ್ಥಿಗಳನ್ನು ಏರ್ʼಲಿಫ್ಟ್ ಮಾಡಿದೆ ಎಂಬುದೇನೋ ಸರಿ. ಆದರೆ, ಆ ವೈದ್ಯ ವಿದ್ಯಾರ್ಥಿಗಳ ಭವಿಷ್ಯವೇನು? ಎಂದು ಪ್ರಶ್ನಿಸಿದ್ದಾರೆ.

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಎಚ್.ಡಿ. ಕುಮಾರಸ್ವಾಮಿ, “‘ಆಪರೇಷನ್ ಗಂಗಾ’ ಹೆಸರಿನಲ್ಲಿ ಕೇಂದ್ರ ಸರಕಾರ ಉಕ್ರೇನ್ʼನಿಂದ ವಿದ್ಯಾರ್ಥಿಗಳನ್ನು ಏರ್ʼಲಿಫ್ಟ್ ಮಾಡಿದೆ ಎಂಬುದೇನೋ ಸರಿ. ಆದರೆ, ಆ ವೈದ್ಯ ವಿದ್ಯಾರ್ಥಿಗಳ ಭವಿಷ್ಯವೇನು..? ಮತ್ತೆ ಆ ದೇಶಕ್ಕೆ ಹೋಗಲು ಸಾಧ್ಯವಿಲ್ಲ. ಅಲ್ಲಿನ ಶಿಕ್ಷಣ ಸಂಸ್ಥೆ, ವಿವಿಗಳನ್ನೂ ರಷ್ಯಾ ಸೇನೆ ಧ್ವಂಸ ಮಾಡಿದೆ ಎಂದು ಮಾಧ್ಯಮಗಳೇ ತೋರಿಸುತ್ತಿವೆ” ಎಂದಿದ್ದಾರೆ.

“ಕರ್ನಾಟಕದ 800-1000 ಮಕ್ಕಳು ಸೇರಿ ಭಾರತದ 20,000ಕ್ಕೂ ಹೆಚ್ಚು ವೈದ್ಯ ವಿದ್ಯಾರ್ಥಿಗಳು ತಾಯ್ನಾಡಿಗೆ ಮರಳಿದ್ದಾರೆ. ಇನ್ನೂ ಕೆಲವರು ಬರುವವರಿದ್ದಾರೆ. ಅವರೆಲ್ಲರ ಶೈಕ್ಷಣಿಕ ಭವಿಷ್ಯದ ಪ್ರಶ್ನೆ ಏನು..? ಪೋಷಕರು ಸಾಲ ಮಾಡಿ ಮಕ್ಕಳನ್ನು ಉಕ್ರೇನ್‌ಗೆ ಕಳುಹಿಸಿದ್ದರು. ಯುದ್ಧದಿಂದ ಅವರ ಶಿಕ್ಷಣ ಅತಂತ್ರವಾಗಿದೆ” ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಉಕ್ರೇನ್: ರಕ್ಷಣೆಯಲ್ಲೂ ದಕ್ಷಿಣ ಭಾರತದವರಿಗೆ ತಾರತಮ್ಯ, ವಿದ್ಯಾರ್ಥಿಗಳ ಆರೋಪ

“ಯುದ್ಧಭೂಮಿಯಿಂದ ಜೀವ ಉಳಿಸಿಕೊಂಡು ಬಂದ ವಿದ್ಯಾರ್ಥಿಗಳ ಭವಿಷ್ಯವನ್ನು ಮತ್ತೆ ಕಟ್ಟಿಕೊಡುವುದು ಕೇಂದ್ರ ಸರಕಾರದ ಕರ್ತವ್ಯ. ಕರ್ನಾಟಕದಲ್ಲಿ 50-60 ವೈದ್ಯ ಕಾಲೇಜುಗಳಿವೆ. ಅಗತ್ಯಬಿದ್ದರೆ ಒಂದು ಪ್ರವೇಶ ಪರೀಕ್ಷೆ ನಡೆಸಿ ಇಷ್ಟೂ ವಿದ್ಯಾರ್ಥಿಗಳನ್ನು ದಾಖಲಿಸಿಕೊಳ್ಳಲಿ. ಪ್ರತಿ ಕಾಲೇಜೂ ತಲಾ 10 ಮಕ್ಕಳಿಗಾದರೂ ಉಚಿತ ಶಿಕ್ಷಣ ನೀಡಲಿ’ ಎಂದು ಆಗ್ರಹಿಸಿದ್ದಾರೆ.

“2,65,720 ಕೋಟಿ ರೂ.ಗಳಷ್ಟು ಬಜೆಟ್ ಗಾತ್ರದ ಕರ್ನಾಟಕಕ್ಕೆ 50 ರಿಂದ 100 ಕೋಟಿ ರೂ. ಖರ್ಚು ಮಾಡುವುದು ಕಷ್ಟವೇ..? ಈ ಮೊತ್ತದಲ್ಲಿ ಅರ್ಧಪಾಲನ್ನು ಕೇಂದ್ರ ಸರಕಾರವೇ ನೀಡಲಿ. ನೀಟ್ ಮೂಲಕ 50% ಸೀಟುಗಳನ್ನು ಕೇಂದ್ರ ಇಟ್ಟುಕೊಳ್ಳುವುದಿಲ್ಲವೇ..? ಎರಡೂ ಸರಕಾರಗಳು ಅಂತಃಕರಣದಿಂದ ಆಲೋಚಿಸಲಿ” ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

“ವೈದ್ಯೋ ನಾರಾಯಣೋ ಹರಿಃʼ ಎಂದು ಹೇಳುತ್ತೇವೆ. ಇಷ್ಟು ವಿದ್ಯಾರ್ಥಿಗಳು ವೈದ್ಯರಾದರೆ ಎಷ್ಟು ಜನರ ಜೀವ ಉಳಿಸಬಲ್ಲರು, ರಾಜ್ಯಕ್ಕೆಷ್ಟು ಸೇವೆ ಸಲ್ಲಿಸಬಹುದು. ʼಹಣದ ಮೂಲಕ ಶಿಕ್ಷಣಕ್ಕೆ ಬೆಲೆಕಟ್ಟಿ ಮಕ್ಕಳ ಕನಸುಗಳ ಜತೆ ವ್ಯಾಪಾರೀಕರಣ ಮಾಡುವುದು ಬೇಡ.ʼ ಕೇಂದ್ರ-ರಾಜ್ಯ ಸರಕಾರಗಳು ಕೂಡಲೇ ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು” ಎಂದು ಮಾಜಿ ಮುಖ್ಯಮಂತ್ರಿ ಆಗ್ರಹಿಸಿದ್ದಾರೆ.

ಇತ್ತೀಚೆಗೆ ಉಕ್ರೇನ್‌ನಿಂದ ಹಿಂದಿರುಗುವ ಭಾರತೀಯ ವೈದ್ಯಕೀಯ ವಿದ್ಯಾರ್ಥಿಗಳನ್ನು ದೇಶದ ವೈದ್ಯಕೀಯ ಕಾಲೇಜುಗಳಿಗೆ ದಾಖಲಿಸುವಂತೆ ಭಾರತೀಯ ವೈದ್ಯಕೀಯ ಸಂಘ ಮತ್ತು ಛತ್ತೀಸ್‌ಗಢದ ಆರೋಗ್ಯ ಸಚಿವ ಟಿ.ಎಸ್. ಸಿಂಗ್ ದೇವ್ ಒಕ್ಕೂಟ ಸರ್ಕಾರವನ್ನು ಒತ್ತಾಯಿಸಿದ್ದರು.


ಇದನ್ನೂ ಓದಿ: ಉಕ್ರೇನ್‌ನಿಂದ ಹಿಂತಿರುಗುತ್ತಿರೋ ವಿದ್ಯಾರ್ಥಿಗಳನ್ನು ದೇಶದ ವೈದ್ಯಕೀಯ ಕಾಲೇಜುಗಳಿಗೆ ದಾಖಲಿಸಿ: ವೈದ್ಯಕೀಯ ಸಂಘ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...