Homeಮುಖಪುಟಮೇಘಾಲಯ-ಅಸ್ಸಾಂ ಗಡಿಯ ವಿವಾದಿತ ಗ್ರಾಮಗಳಲ್ಲಿ 30 ಮೇಘಾಲಯದಲ್ಲಿ ಉಳಿಯಲಿವೆ: ಸಿಎಂ

ಮೇಘಾಲಯ-ಅಸ್ಸಾಂ ಗಡಿಯ ವಿವಾದಿತ ಗ್ರಾಮಗಳಲ್ಲಿ 30 ಮೇಘಾಲಯದಲ್ಲಿ ಉಳಿಯಲಿವೆ: ಸಿಎಂ

- Advertisement -
- Advertisement -

ಮೇಘಾಲಯ-ಅಸ್ಸಾಂ ಗಡಿಯಲ್ಲಿರುವ 36 ವಿವಾದಿತ ಗ್ರಾಮಗಳ ಪೈಕಿ 30 ಗ್ರಾಮಗಳನ್ನು ಮೇಘಾಲಯದಲ್ಲೇ ಉಳಿಯುವಂತೆ ಎರಡು ರಾಜ್ಯಗಳ ಪ್ರಾದೇಶಿಕ ಸಮಿತಿಗಳು ಶಿಫಾರಸು ಮಾಡಿದೆ ಎಂದು ಮುಖ್ಯಮಂತ್ರಿ ಕಾನ್ರಾಡ್ ಕೆ. ಸಂಗ್ಮಾ ಸೋಮವಾರ ವಿಧಾನಸಭೆಗೆ ತಿಳಿಸಿದ್ದಾರೆ.

ಈ ವಿವಾದಿತ 36 ಗ್ರಾಮಗಳು 36.9 ಚದರ ಕಿಲೋಮೀಟರ್ ವಿಸ್ತೀರ್ಣವನ್ನು ಹೊಂದಿದ್ದು, 30 ಗ್ರಾಮಗಳು 18 ಚದರ ಕಿಮೀ ಪ್ರದೇಶದಲ್ಲಿ ಹರಡಿಕೊಂಡಿವೆ ಎಂದು ಮಾಹಿತಿ ನೀಡಿದ್ದಾರೆ.

ಅಂತರರಾಜ್ಯ ಗಡಿ ವಿವಾದವನ್ನು ಪರಿಹರಿಸಲು ಅಸ್ಸಾಂ ಸರ್ಕಾರದೊಂದಿಗಿನ ಮಾತುಕತೆಯ ಕುರಿತು ಸದನವನ್ನು ಉದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿ, “ಈಗಾಗಲೇ ಗುರುತಿಸಲಾಗಿರುವ 12 ಸ್ಥಳಗಳಿಗೆ ಯಾವುದೇ ಹೊಸ ವ್ಯತ್ಯಾಸಗಳನ್ನು ಸೇರಿಸಬಾರದು ಎಂದು ಎರಡೂ ರಾಜ್ಯಗಳು ಒಪ್ಪಿಕೊಂಡಿವೆ. 2011 ರಲ್ಲಿ ಮೇಘಾಲಯವು ಹಕ್ಕು ಸಾಧಿಸಿದ 36 ಹಳ್ಳಿಗಳಲ್ಲಿ, ಒಟ್ಟು 30 ಗ್ರಾಮಗಳನ್ನು ಮೇಘಾಲಯದಲ್ಲಿ ಉಳಿಯಲು ಎರಡು ರಾಜ್ಯಗಳ ಪ್ರಾದೇಶಿಕ ಸಮಿತಿಗಳು ಶಿಫಾರಸು ಮಾಡಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮೋದಿ ಸ್ಥಿಮಿತತೆ ಕಳೆದುಕೊಂಡಿದ್ದಾರೆ ಎಂದು ಅಮಿತ್ ಶಾ ಹೇಳಿದ್ದರು: ಮೇಘಾಲಯ ರಾಜ್ಯಪಾಲರ ಸ್ಫೋಟಕ ಹೇಳಿಕೆ

“ತಾರಾಬರಿ ಪ್ರದೇಶದಲ್ಲಿ ಮೇಘಾಲಯವು ಹಕ್ಕು ಸಾಧಿಸಿದ ಎಲ್ಲಾ ಎಂಟು ಹಳ್ಳಿಗಳು ರಾಜ್ಯದಲ್ಲಿ ಉಳಿಯುತ್ತವೆ. ಗಿಜಾಂಗ್‌ನ ಮೂರು ಹಳ್ಳಿಗಳಲ್ಲಿ ಎರಡು ನಮ್ಮೊಂದಿಗೆ ಉಳಿಯುತ್ತವೆ. ನಾವು 12 ಹಕ್ಕು ಸಾಧಿಸಿದ ಹಳ್ಳಿಗಳಲ್ಲಿ 11 ಪಡೆದಿದ್ದೇವೆ. ಬೊಕ್ಲಾಪಾರಾದಲ್ಲಿ ಒಂದು, ಖಾನಪಾರ-ಪಿಳ್ಳಂಗಟಾದ ಐದು ಹಳ್ಳಿಗಳು ಮತ್ತು ರಟಾಚೆರಾದಲ್ಲಿ ಮೂರು ಹಳ್ಳಿಗಳು ನಮ್ಮ ರಾಜ್ಯದಲ್ಲಿವೆ” ಎಂದು ಹೇಳಿದ್ದಾರೆ.

ಕ್ಯಾಬಿನೆಟ್ ಸಚಿವರ ನೇತೃತ್ವದ ಎರಡು ರಾಜ್ಯಗಳ ಪ್ರಾದೇಶಿಕ ಸಮಿತಿಗಳಿಂದ ಹಲವು ಚರ್ಚೆಗಳು, ಭೇಟಿಗಳು ಮತ್ತು ಸಮೀಕ್ಷೆಗಳನ್ನು ನಡೆಸಲಾಗಿದೆ. ವಿಶೇಷ ತಂತ್ರಜ್ಞಾನಗಳನ್ನು ಸಮೀಕ್ಷೆಯಲ್ಲಿ ಬಳಸಲಾಗಿದೆ. ಎರಡೂ ರಾಜ್ಯಗಳ ಪ್ರತಿನಿಧಿಗಳ ಸಮ್ಮುಖದಲ್ಲಿ ಸರ್ವೆ ಆಫ್ ಇಂಡಿಯಾದಿಂದ ಪ್ರದೇಶಗಳನ್ನು ಹೆಚ್ಚು ನಿಖರವಾಗಿ ನಿರ್ಧರಿಸಲಾಗುತ್ತದೆ ಎಂದು ಸಿಎಂ ಸಂಗ್ಮಾ ಎಂದಿದ್ದಾರೆ.

ಇದೆ ವೇಳೆ ಉಳಿದ ಆರು ಕ್ಷೇತ್ರಗಳ ತೀರ್ಮಾನದ ಕುರಿತು ಜನವರಿ ಅಂತ್ಯದಲ್ಲಿ ಎರಡೂ ರಾಜ್ಯಗಳು ಒಪ್ಪಂದಕ್ಕೆ ಸಹಿ ಹಾಕಿದ್ದು, ಅದನ್ನು ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ರವಾನಿಸಲಾಗಿದೆ ಎಂದು ಮುಖ್ಯಮಂತ್ರಿ ಹೇಳಿದ್ದಾರೆ.


ಇದನ್ನೂ ಓದಿ: ಸಿಬಿಐಗಿದ್ದ ಸಮ್ಮತಿಯನ್ನು ಹಿಂಪಡೆದ ಮೇಘಾಲಯ: ಒಂಬತ್ತು ರಾಜ್ಯಗಳಲ್ಲಿ ಸಿಬಿಐಗೆ ಎಂಟ್ರಿ ಇಲ್ಲ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...

ಕಾವೇರಿ ಪ್ರತಿಭಟನೆ ವೇಳೆ ಆಕ್ಷೇಪಾರ್ಹ ಹೇಳಿಕೆ : ತಮಿಳುನಾಡಿನ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಬಂಧನ

ಸೋಮವಾರ (ಆ.3) ತಂಜಾವೂರಿನಲ್ಲಿ ನಡೆದ ಕಾವೇರಿ ಪ್ರತಿಭಟನೆ ಸಂದರ್ಭದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ ಆರೋಪದ ಮೇಲೆ ತಮಿಳುನಾಡಿನ ವಿರೋಧ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ. ಉದಯನಿಧಿ ಬಂಧನಕ್ಕೂ...

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...