Homeಮುಖಪುಟಚುನಾವಣೆ ಮುಗಿದ ಕೂಡಲೇ ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆಗೆ ಸಿದ್ದತೆ: ಕಾಂಗ್ರೆಸ್ ವಿರೋಧ

ಚುನಾವಣೆ ಮುಗಿದ ಕೂಡಲೇ ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆಗೆ ಸಿದ್ದತೆ: ಕಾಂಗ್ರೆಸ್ ವಿರೋಧ

- Advertisement -
- Advertisement -

ಐದು ರಾಜ್ಯಗಳ ವಿಧಾನಸಭಾ ಚುನಾವಣೆ ನಡೆಯುವ ಮುನ್ನ ತೆರಿಗೆ ಕಡಿಮೆ ಮಾಡಿ ಸರಕಾರ ತೈಲ ಬೆಲೆ ಕಡಿಮೆ ಮಾಡಿತು. ಉತ್ತರ ಪ್ರದೇಶದ ಏಳನೇ ಹಂತದ ಚುನಾವಣೆ ಇಂದು ಮುಗಿಯಲಿದೆ. ಇದರೊಂದಿಗೆ ತೈಲ ಕಂಪೆನಿಗಳು ಬೆಲೆ ಹೆಚ್ಚಿಸುವ ಸೂಚನೆ ನೀಡಿವೆ.

ಉಕ್ರೇನ್ ಮೇಲೆ ರಷ್ಯಾ ದಾಳಿ ಮಧ್ಯೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ದರ ಬ್ಯಾರಲ್‌ಗೆ 130 ಡಾಲರ್‌ನಷ್ಟು ಏರಿಕೆಯಾಗಿದೆ. 2008ರ ನಂತರ ಅತ್ಯಂತ ಹೆಚ್ಚು ಬೆಲೆ ಇದಾಗಿದ್ದು, ರಷ್ಯಾದಿಂದ ಇಂಧನ ತರಿಸುವುದನ್ನು ನಿಲ್ಲಿಸಲು ಅಮೆರಿಕ ಮತ್ತು ಯುರೋಪಿಯನ್ ಒಕ್ಕೂಟಗಳು ನಿರ್ಬಂಧ ಹೇರಿದ್ದರಿಂದ ಈ ಬೆಳವಣಿಗೆ ನಡೆದಿದೆ.

ಇದೇ ವೇಳೆ ಭಾರತದ ಇಂಧನ ದರ ಹೆಚ್ಚಳವಾಗುವ ಸಾಧ್ಯತೆ ಇದೆ. ಪೆಟ್ರೋಲ್ ದರ ಲೀಟರ್‌ಗೆ 22 ರೂಪಾಯಿ ಹೆಚ್ಚಳವಾಗಲಿದೆ ಎಂದು ಅಂದಾಜಿಸಲಾಗಿದ್ದು, ಸದ್ಯ ಭಾರತವು ಖರೀದಿ ಮಾಡುತ್ತಿರುವ ಕಚ್ಚಾ ತೈಲ ಬ್ಯಾರಲ್‌ಗೆ 100 ಡಾಲರ್ ಆಗಿದೆ. ಇಂಧನ ಬೆಲೆ ಹೆಚ್ಚಳವಾಗುವ ಹಿನ್ನೆಲೆಯಲ್ಲಿ ದೇಶದಲ್ಲಾಗುವ ಸಮಸ್ಯೆ ತಡೆಯಲು ಅಬಕಾರಿ ತೆರಿಗೆ ಕಡಿಮೆ ಮಾಡುವಂತೆ ಕೇಂದ್ರ ಸರಕಾರದ ಮೇಲೆ ಒತ್ತಡ ಹೇರಲಾಗುತ್ತಿದೆ.

ಇಂಧನ ಬೆಲೆ ಏರಿಕೆಗೆ ಕಾಂಗ್ರೆಸ್ ವಿರೋಧ

ಇತ್ತೀಚೆಗಷ್ಟೇ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿಯವರು ಚುನಾವಣೆ ಮುಗಿದ ಬಳಿಕ ಸರಕಾರ ತೈಲ ಬೆಲೆ ಹೆಚ್ಚಳ ಮಾಡಲಿದೆ ಎಂದು ಟ್ವಿಟರ್‌ನಲ್ಲಿ ವ್ಯಂಗ್ಯವಾಡಿದ್ದರು. “ಕೂಡಲೇ ಪೆಟ್ರೋಲ್ ಟ್ಯಾಂಕ್ ಪೂರ್ತಿ ತುಂಬಿಸಿಕೊಳ್ಳಿ. ಏಕೆಂದರೆ ಮೋದಿ ಸರ್ಕಾರದ ‘ಚುನಾವಣೆ’ ಆಫರ್ ಮುಗಿಯಲಿದೆ” ಎಂದು ರಾಹುಲ್ ಟ್ವೀಟ್ ಮಾಡಿದ್ದಾರೆ.

ಕರ್ನಾಟಕದ ಕಾಂಗ್ರೆಸ್ ಶಾಸಕ ಕೃಷ್ಣಭೈರೇಗೌಡರವರು ಟ್ವೀಟ್ ಮಾಡಿ, “ಚುನಾವಣೆ ಮುಗಿದಿದೆ. ಪೆಟ್ರೋಲ್/ಡೀಸೆಲ್ ಬೆಲೆ ಏರಿಕೆಗೆ ಸಿದ್ಧರಾಗಿ” ಎಂದು ಎಚ್ಚರಿಸಿದ್ದಾರೆ.

ಸರ್ಕಾರದ ನಿಯಂತ್ರಣವಿಲ್ಲ. ಯಾವುದೇ ಹಸ್ತಕ್ಷೇಪವಿಲ್ಲ ಎಂದು ನರೇಂದ್ರ ಮೋದಿಯವರು ಹೇಳುತ್ತಾರೆ. ಆದರೆ ಚುನಾವಣೆ ನಡೆಯುತ್ತಿರುವುದರಿಂದ 3 ತಿಂಗಳಾದರೂ ಬೆಲೆ ಏರಿಕೆಯಾಗಿಲ್ಲ. ಚುನಾವಣೆಗೂ ಬೆಲೆ ಏರಿಕೆಗೂ ಯಾವುದೇ ಸಂಬಂಧವಿಲ್ಲವೇ? ಕೇವಲ ಕಾಕತಾಳೀಯವೇ? ಹಾಗಾದರೆ ಮತದಾನ ಮುಗಿದ ಕೂಡಲೇ ಬೆಲೆ ಏರಿಕೆ ಪ್ರಾರಂಭವಾಗುವುದು ಏಕೆ ಎಂದು ಅವರು ಪ್ರಶ್ನಿಸಿದ್ದಾರೆ.

ಕಚ್ಚಾ ತೈಲವು ಬ್ಯಾರೆಲ್‌ಗೆ $110 ಇದ್ದಾಗ, ಯುಪಿಎ ಪೆಟ್ರೋಲ್ ಅನ್ನು ₹60 ಕ್ಕೆ ಮಾರಿತು.

ಕಚ್ಚಾ ತೈಲವು ಬ್ಯಾರೆಲ್‌ಗೆ $74 ಇದ್ದಾಗಲೂ ಮೋದಿ ಸರ್ಕಾರವು ಪೆಟ್ರೋಲ್ ಅನ್ನು ₹95 ಕ್ಕೆ ಮಾರಾಟ ಮಾಡಿತು.

ಈಗ ಕಚ್ಚಾ ತೈಲವು $ 109 ಕ್ಕೆ ಮರಳಿದಾಗ, ಬಿಜೆಪಿ ಯಾವ ಮಟ್ಟಕ್ಕೆ ಬೆಲೆಗಳನ್ನು ಹೆಚ್ಚಿಸಲಿದೆ ಎಂದು ಊಹಿಸಿ?

ಪೆಟ್ರೋಲ್ ಲೀಟರ್‌ಗೆ ₹120-130 ತಲುಪುತ್ತದೆಯೇ? ಎಂದು ಕಾಂಗ್ರೆಸ್ ವಕ್ತಾರ ಗೌರವ್ ಪಾಂಡಿ ಟ್ವೀಟ್ ಮಾಡಿದ್ದಾರೆ.

ಕೆಲ ತಿಂಗಳುಗಳ ಹಿಂದೆ ಕಂಪನಿಗಳು ಖರೀದಿಸಿದ ಕಚ್ಛಾ ತೈಲದ ಆಧಾರದ ಮೇಲೆ ಪೆಟ್ರೋಲ್/ಡೀಸೆಲ್ ಬೆಲೆಗಳು ಈಗ ಇದ್ದಕ್ಕಿದ್ದಂತೆ ಗಗನಕ್ಕೇರಲು ಹೇಗೆ ಸಾಧ್ಯ ಎಂಬುದನ್ನು ಯಾರಾದರೂ ವಿವರಿಸಬಹುದೇ? ಏಕೆಂದರೆ ಕಚ್ಚಾ ತೈಲವನ್ನು ಈ ಒಂದೆರೆಡು ದಿನದ ಹಿಂದೆ ಕೊಳ್ಳಲು ಸಾಧ್ಯವಿಲ್ಲ. ಏಕೆಂದರೆ ಗಲ್ಫ್‌ನಿಂದ ಕಚ್ಚಾ ತೈಲವನ್ನು ಸಾಗಿಸಲು ಹಲವು ವಾರಗಳನ್ನು ತೆಗೆದುಕೊಳ್ಳುತ್ತದೆ. ತೈಲ ಕಂಪನಿಗಳು ಸಾಗಣೆಗಾಗಿ ತಿಂಗಳ ಮುಂಚಿತವಾಗಿ ಕಚ್ಚಾ ತೈಲವನ್ನು ಖರೀದಿಸುತ್ತವೆ ಎಂದು ಜಾನ್ ಎಂಬುವವರು ಟ್ವೀಟ್ ಮಾಡಿದ್ದಾರೆ.

ಪ್ರಪಂಚದಾದ್ಯಂತ ಪೆಟ್ರೋಲ್ ಮೇಲಿನ ತೆರಿಗೆ:

ಅಮೆರಿಕ: 20%
ಜಪಾನ್: 45%
ಇಂಗ್ಲೆಂಡ್: 62%
ಜರ್ಮನಿ: 65%
ಭಾರತ: 260%

ಇದು ಮುದ್ರಣದೋಷವಲ್ಲ. ಪ್ರತಿ ಲೀಟರ್ ಪೆಟ್ರೋಲ್ ಮೇಲೆ ನಾವು 260% ತೆರಿಗೆಯನ್ನು ಪಾವತಿಸುತ್ತೇವೆ ಎಂದು ಕಾಂಗ್ರೆಸ್ ವಕ್ತಾರ ಸರಳ್ ಪಟೇಲ್ ಆತಂಕ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: ಪಾಕ್ ಕ್ರಿಕೆಟ್ ನಾಯಕಿಯ ಪುಟ್ಟ ಮಗುವಿನೊಂದಿಗೆ ಭಾರತೀಯ ತಂಡದ ಪ್ರೀತಿಯ ಕ್ಷಣಗಳು: ಎಲ್ಲೆಡೆ ಅಭಿಮಾನದ ಮಹಾಪೂರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...

‘ನನ್ನ ಮೌನವನ್ನು ಸೋಲು ಎಂದು ತಿಳಿಯಬೇಡಿ’’: ರಾಜ್ಯಸಭೆಯಲ್ಲಿ ಪದಚ್ಯುತಿಯ ನಂತರ ಎಎಪಿಗೆ ತಿರಗೇಟು ನೀಡಿದ ಸಂಸದ ರಾಘವ್ ಛಡ್ಡಾ

ರಾಜ್ಯಸಭೆಯಲ್ಲಿ ಪಕ್ಷದ ಉಪ ನಾಯಕನ ಸ್ಥಾನದಿಂದ ತೆಗೆದುಹಾಕಲ್ಪಟ್ಟ ಒಂದು ದಿನದ ನಂತರ ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಛಡ್ಡಾ ಅವರು ಶುಕ್ರವಾರ "ನನ್ನ ಬಾಯಿ ಮುಚ್ಚಿಸಬಹುದು, ಸೋಲಿಸಲು ಸಾಧ್ಯವಿಲ್ಲ" ಎಂದು ಹೇಳಿದ್ದಾರೆ. ಪಕ್ಷದ...

ಮಾಲ್ಡಾ ನ್ಯಾಯಾಂಗ ಅಧಿಕಾರಿಗಳ ಘೇರಾವ್ ಪ್ರಕರಣದಲ್ಲಿ 17 ಜನರ ಬಂಧನ: ತನಿಖೆಯನ್ನು ಎನ್‌ಐಎಗೆ ಹಸ್ತಾಂತರಿಸಿದ ಇಸಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಏಳು ನ್ಯಾಯಾಂಗ ಅಧಿಕಾರಿಗಳ ಘೇರಾವ್‌ನಲ್ಲಿ ಭಾಗಿಯಾಗಿದ್ದಕ್ಕಾಗಿ ಚುನಾವಣಾ ಅಭ್ಯರ್ಥಿ ಸೇರಿದಂತೆ ಕನಿಷ್ಠ 17 ಜನರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ ಎಂದು...

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...