Homeಮುಖಪುಟತಮಿಳುನಾಡು: ಕಾಂಗ್ರೆಸ್‌ ಪಕ್ಷದಿಂದ ಕುಂಭಕೋಣಂ ಪಾಲಿಕೆ ಮೇಯರ್‌ ಆದ ಆಟೋರಿಕ್ಷಾ ಚಾಲಕ

ತಮಿಳುನಾಡು: ಕಾಂಗ್ರೆಸ್‌ ಪಕ್ಷದಿಂದ ಕುಂಭಕೋಣಂ ಪಾಲಿಕೆ ಮೇಯರ್‌ ಆದ ಆಟೋರಿಕ್ಷಾ ಚಾಲಕ

- Advertisement -
- Advertisement -

ತಮಿಳುನಾಡಿನ ತಂಜಾವೂರು ಜಿಲ್ಲೆಯ ಕುಂಭಕೋಣಂ ಕಾರ್ಪೊರೇಷನ್‌ನ ಮೇಯರ್ ಆಗಿ ಕಾಂಗ್ರೆಸ್ ಪಕ್ಷದಿಂದ 42 ವರ್ಷದ ಆಟೋರಿಕ್ಷಾ ಚಾಲಕ ಕೆ.ಸರವಣನ್ ಅಧಿಕಾರ ವಹಿಸಿಕೊಂಡಿದ್ದಾರೆ. ಸರವಣನ್ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ತಮ್ಮ ಆಟೋರಿಕ್ಷಾದಲ್ಲಿ  ಆಗಮಿಸಿ ಗಮನ ಸೆಳೆದಿದ್ದಾರೆ.

ತಮಿಳುನಾಡು ರಾಜ್ಯದ ಆಡಳಿತಾರೂಢ ಡಿಎಂಕೆ ರಾಜ್ಯದ 21 ಪಾಲಿಕೆಗಳ ಪೈಕಿ 20 ಪಾಲಿಕೆಗಳ ಮುಖ್ಯಸ್ಥರಾಗಿ ಪಕ್ಷದಿಂದ ಅಭ್ಯರ್ಥಿಗಳನ್ನು ನಾಮನಿರ್ದೇಶನ ಮಾಡಿದ್ದು, ಕಾಂಗ್ರೆಸ್‌ಗೆ ಒಂದು ಮೇಯರ್ ಹುದ್ದೆಯನ್ನು ಮೀಸಲಿಟ್ಟಿತ್ತು. ಕಾಂಗ್ರೆಸ್ ಪಕ್ಷ ಈ ಸ್ಥಾನಕ್ಕೆ ಪಕ್ಷದ ಹಿರಿಯ ಕಾರ್ಯಕರ್ತರಲ್ಲಿ ಒಬ್ಬರನ್ನು ನಾಮನಿರ್ದೇಶನ ಮಾಡುವ ನಿರೀಕ್ಷೆಯಿದ್ದರೂ, ಹೈಕಮಾಂಡ್ ಆಟೋರಿಕ್ಷಾ ಚಾಲಕರಾದ ಸರವಣನ್ ಅವರನ್ನು ಮೇಯರ್‌ ಸ್ಥಾನಕ್ಕೆ ಆಯ್ಕೆ ಮಾಡಿದೆ.

ಸರವಣನ್ ಅವರು ಇತ್ತೀಚೆಗೆ ಮಹಾನಗರ ಪಾಲಿಕೆಯಾಗಿ ಮೇಲ್ದರ್ಜೆಗೇರಿರುವ ಕುಂಭಕೋಣಂನ ಮೊದಲ ಮೇಯರ್ ಕೂಡ ಆಗಿದ್ದಾರೆ. ಕುಂಭಕೋಣಂನ ವಾರ್ಡ್ 17ರಲ್ಲಿ ನಡೆದ ಚುನಾವಣೆಯಲ್ಲಿ ಒಟ್ಟು 2,100 ಮತಗಳ ಪೈಕಿ 964 ಮತಗಳನ್ನು ಪಡೆದು ಸರವಣನ್ ಜಯಗಳಿಸಿದ್ದರು.

ಇದನ್ನೂ ಓದಿ: 334 ವರ್ಷಗಳ ಇತಿಹಾಸವಿರುವ ಚೆನ್ನೈ ಪಾಲಿಕೆಗೆ ಮೊದಲ ಬಾರಿಗೆ ದಲಿತ ಮಹಿಳೆ ಮೇಯರ್‌

“ತಂಜಾವೂರು ಉತ್ತರ ಕಾಂಗ್ರೆಸ್ ಸಮಿತಿಯ ಜಿಲ್ಲಾ ನಾಯಕ ಟಿ.ಆರ್.ಲೋಗನಾಥನ್ ಅವರು ಜಿಲ್ಲಾ ಕಛೇರಿಗೆ ಬರುವಂತೆ ನನ್ನನ್ನು ಹೇಳಿ, ನಿಮಗೆ ಒಂದು ಆಶ್ಚರ್ಯವಿದೆ ಎಂದು ಹೇಳಿದ್ದರು. ನಾನು ಕಚೇರಿಯನ್ನು ತಲುಪಿದಾಗ, ‘ಸ್ವಾಗತ, ಕುಂಭಕೋಣಂನ ಮೊದಲ ಮೇಯರ್’ ಎಂದು ನನಗೆ ಅದ್ದೂರಿ ಸ್ವಾಗತ ನೀಡಿದರು.  ನಾನು ಗಾಬರಿಯಾದೆ. ಅನೇಕ ಹಿರಿಯ ನಾಯಕರು ಮತ್ತು ಪದಾಧಿಕಾರಿಗಳಿರುವುದರಿಂದ ನಾನು ಇದನ್ನು ಎಂದಿಗೂ ನಿರೀಕ್ಷಿಸಿರಲಿಲ್ಲ” ಎಂದು ಕೆ. ಸರವಣನ್ ದಿ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದಾರೆ.

ಹತ್ತನೇ ತರಗತಿವರೆಗೆ ಓದಿರುವ ಸರವಣನ್ ಚಿಕ್ಕವಯಸ್ಸಿನಲ್ಲೇ ತಂದೆ-ತಾಯಿ ಇಬ್ಬರನ್ನೂ ಕಳೆದುಕೊಂಡು ಅಜ್ಜ-ಅಜ್ಜಿಯ ಆಶ್ರಯದಲ್ಲಿ ಬೆಳೆದವರು. ಅವರ ಅಜ್ಜ ಟಿ.ಕುಮಾರಸ್ವಾಮಿ ಅವರು 1976 ರಲ್ಲಿ ಕುಂಭಕೋಣಂ ಪುರಸಭೆಯ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ. ಅವರ ಅಜ್ಜನಿಂದ ಪ್ರೇರಿತರಾದ ಸರವಣನ್ 2002 ರಲ್ಲಿ ಕಾಂಗ್ರೆಸ್‌ಗೆ ಸೇರಿದ್ದರು. ಶೀಘ್ರದಲ್ಲೇ ವಾರ್ಡ್ ನಾಯಕರ ಹುದ್ದೆಗೆ ಮತ್ತು ನಂತರ ಪುರಸಭೆಯಲ್ಲಿ ಪಕ್ಷದ ಉಪನಾಯಕರಾಗಿ ನಾಮನಿರ್ದೇಶನಗೊಂಡಿದ್ದರು.

ಪತ್ನಿ ದೇವಿ ಮತ್ತು ಮೂವರು ಮಕ್ಕಳೊಂದಿಗೆ ತುಕ್ಕಂಪಾಳ್ಯಂನಲ್ಲಿ ಬಾಡಿಗೆ ಮನೆಯಲ್ಲಿ ವಾಸವಿರುವ ಸರವಣನ್ ಎರಡು ದಶಕಗಳಿಂದ ಆಟೋರಿಕ್ಷಾ ಓಡಿಸುತ್ತಿದ್ದಾರೆ. ಏಳು ವರ್ಷಗಳ ಹಿಂದೆ ಸ್ವಂತ ಆಟೋರಿಕ್ಷಾ ಖರೀದಿಸಿ ಜೀವನ ಸಾಗಿಸುತ್ತಿದ್ದಾರೆ. ದಿನಕ್ಕೆ ನನಗೆ ಸುಮಾರು 200-250 ರೂಪಾಯಿ ಗಳಿಸುವ ಇವರು ಲಾಕ್‌ಡೌನ್ ನನ್ನ ಜೀವನೋಪಾಯಕ್ಕೆ ಸಂಪೂರ್ಣ ಹೊಡೆತ ನೀಡಿತ್ತು ಎಂದಿದ್ದಾರೆ.

“ಲಾಕ್‌ಡೌನ್ ಸಮಯದಲ್ಲಿ ನನ್ನ ಪ್ರದೇಶದ ಜನರು ನನಗೆ ಸಾಕಷ್ಟು ಸಹಾಯ ಮಾಡಿದ್ದಾರೆ. ಈಗಲೂ, ಅವರು ಈ ಚುನಾವನೆ ಗೆಲ್ಲಲು ನನಗೆ ಸಹಾಯ ಮಾಡಿದರು. ಸಾಧ್ಯವಾದಾಗಲೆಲ್ಲಾ ನಾನು ಅವರನ್ನು ಭೇಟಿ ಮಾಡುವುದನ್ನು ಮುಂದುವರಿಸುತ್ತೇನೆ. ಭೂಗತ ಒಳಚರಂಡಿ ಕಾಮಗಾರಿಗಳನ್ನು ಪೂರ್ಣಗೊಳಿಸುವುದು, ಹಾಳಾದ ರಸ್ತೆಗಳನ್ನು ಸರಿಪಡಿಸುವುದು ಮತ್ತು ಕುಡಿಯುವ ನೀರು ಸರಬರಾಜು, ಬೀದಿ ದೀಪಗಳು ಮುಂತಾದ ಮೂಲಭೂತ ಸೌಕರ್ಯಗಳನ್ನು ನೀಡುವುದು ನನ್ನ ಮೊದಲ ಕರ್ತವ್ಯ ಎಂದು ಹೇಳಿದ್ದಾರೆ.


ಇದನ್ನೂ ಓದಿ: ತಮಿಳುನಾಡು: ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ 15 ಮತಗಳ ಅಂತರದಿಂದ ಗೆದ್ದ ಟ್ರಾನ್ಸ್‌ಜೆಂಡರ್‌ ಅಭ್ಯರ್ಥಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...