Homeಕರ್ನಾಟಕಗುಬ್ಬಿ: ಫಲ ನೀಡುತ್ತಿದ್ದ ಅಡಕೆ, ತೆಂಗು ಧ್ವಂಸ ಮಾಡಿದ ಅರಣ್ಯ ಇಲಾಖೆ; ಭುಗಿಲೆದ್ದ ಆಕ್ರೋಶ

ಗುಬ್ಬಿ: ಫಲ ನೀಡುತ್ತಿದ್ದ ಅಡಕೆ, ತೆಂಗು ಧ್ವಂಸ ಮಾಡಿದ ಅರಣ್ಯ ಇಲಾಖೆ; ಭುಗಿಲೆದ್ದ ಆಕ್ರೋಶ

- Advertisement -
- Advertisement -

ಯಾವುದೇ ಮುನ್ಸೂಚನೆ ನೀಡದೆ ಅರಣ್ಯ ಇಲಾಖೆ ಅಧಿಕಾರಿ ನಡೆಸಿರುವ ಕಾರ್ಯಾಚರಣೆ ಖಂಡಿಸಿ ರೈತರು ತೀವ್ರ ವಿರೋಧ ವ್ಯಕ್ತಪಡಿಸಿರುವ ಘಟನೆ ತುಮಕೂರು ಜಿಲ್ಲೆಯ ಗುಬ್ಬಿ ತಾಲ್ಲೂಕಿನಲ್ಲಿ ನಡೆದಿದೆ.

ತಾಲ್ಲೂಕಿನ ಅಮ್ಮನಘಟ್ಟ ಅರಣ್ಯ ಪ್ರದೇಶದ ಗಡಿ ನಿರ್ಧರಿಸಲು ಮುಂದಾದ ಅರಣ್ಯ ಇಲಾಖೆ ವಲಯ ಅರಣ್ಯಾಧಿಕಾರಿ ದುಗ್ಗಪ್ಪ ನೇತೃತ್ವದ ತಂಡ ಏಕಾಏಕಿ ರೈತರ ಕೃಷಿ ಜಮೀನಿಗೆ ಅತಿಕ್ರಮಣ ಮಾಡಿದ್ದಲ್ಲದೇ ರೈತರ ವಿರುದ್ಧ ದೌರ್ಜನ್ಯದ ಮಾತುಗಳಾಡಿದ್ದಾರೆ ಎಂದು ರೈತರು ದೂರಿದ್ದಾರೆ.

ಫಲ ನೀಡಿತ್ತಿದ್ದ 30 ವರ್ಷದ ಅಡಕೆ, ತೆಂಗು ಮತ್ತು ಎಳೆಅಂಬು ಮಣ್ಣು ಪಾಲು ಮಾಡಿ ಅಮಾನವೀಯವಾಗಿ ನಡೆದುಕೊಂಡಿದ್ದಾರೆ. ಇದರಿಂದಾಗಿ ಸೋಮವಾರ ಸಂಜೆ ಸಿಟ್ಟಿಗೆದ್ದ ರೈತ ಸಂಘದ ಸದಸ್ಯರು ಹಾಗೂ ಸಂತ್ರಸ್ತ ರೈತರು ತಾಲ್ಲೂಕು ಕಚೇರಿ ಮುಂದೆ ಅನಿರ್ದಿಷ್ಟಾವಧಿ ಧರಣಿ ಕುಳಿದರು.

ಮರಗಿಡಗಳನ್ನು ಬೆಳೆಸಿ ಪೋಷಿಸುವ ಕಾಯಕ ಮಾಡುವ ಅರಣ್ಯ ಇಲಾಖೆ, ಕೃಷಿಕನ ಜಮೀನಿಗೆ ಹಿಟಾಜಿ ಯಂತ್ರ ನುಗ್ಗಿಸಿ ಫಲ ನೀಡುತ್ತಿದ್ದ 200ಕ್ಕೂ ಅಧಿಕ ಅಡಕೆಮರಗಳು, 10 ತೆಂಗಿನಮರಗಳು ಹಾಗೂ ವಿಳೇದೆಲೆ ಅಂಬುಗಳನ್ನು ಕತ್ತರಿಸಿ ಕಟುಕಟನ ಪ್ರದರ್ಶಿಸಿದೆ ಎಂದು ರೈತರು ಆರೋಪಿಸಲಾಗಿದೆ.

“ತಮ್ಮ ಜಮೀನಿನ ಬೆಳೆ ನಾಶ ಮಾಡದಂತೆ ಅಂಗಲಾಚಿದರೂ ಕಿಂಚಿತ್ತೂ ಕರುಣೆ ತೋರದ ವಲಯ ಅರಣ್ಯಾಧಿಕಾರಿ ದುಗ್ಗಪ್ಪ ಅವರು ರೈತರಿಗೆ ಅವಾಚ್ಯ ಶಬ್ದಗಳ ಬಳಕೆ ಮಾಡಿದ್ದಾರೆ. ಮುಗ್ದ ರೈತ ಕುಟುಂಬಕ್ಕೆ ದಿಕ್ಕು ತೋಚದೆ ತಲೆ ಮೇಲೆ ಕೈ ಹಿಟ್ಟುಕೊಂಡು ರೋಧಿಸತೊಡಗಿದರು. ಇಡೀ ರಾತ್ರಿ ನಿದ್ದೆಗೆಟ್ಟ ಕುಟುಂಬದ ಅರಣ್ಯ ರೋಧನೆ ಅಳಿಸುವವರಿಲ್ಲದೇ ಕಂಗಾಲಾದರು” ಎಂದು ರೈತರು ದೂರಿದ್ದಾರೆ.

ಸಂಜೆ ವೇಳೆಗೆ ವಿಷಯ ತಿಳಿದ ರೈತ ಸಂಘದ ಸದಸ್ಯರು ಸ್ಥಳಕ್ಕೆ ಧಾವಿಸಿ ಅಲ್ಲಿನ ಅಮಾನವೀಯ ಕೃತ್ಯ ನೋಡಿ ಆಕ್ರೋಶ ಹೊರಹಾಕಿದರು. ಅಲ್ಲಿ ಮಣ್ಣು ಪಾಲಾದ ಎಲ್ಲಾ ಮರಗಳನ್ನು ಟ್ರಾಕ್ಟರ್ ಮೂಲಕ ತಾಲ್ಲೂಕು ಕಚೇರಿ ಮುಂದೆ ಸುರಿದು ಪ್ರತಿಭಟನೆ ಆರಂಭಿಸಿದರು. ಅರಣ್ಯ ಇಲಾಖೆ ವಿರುದ್ಧ ಘೋಷಣೆ ಕೂಗಿದರು. ಅಧಿಕಾರಿ ದುಗ್ಗಪ್ಪ ಅಮಾನತು ಮಾಡುವಂತೆ ಆಗ್ರಹಿಸಿದರು.

ರೈತಸಂಘದ ತಾಲ್ಲೂಕು ಅಧ್ಯಕ್ಷ ಕೆ.ಎನ್.ವೆಂಕಟೇಗೌಡ ಮಾತನಾಡಿ, ಸರ್ವೆ ನಂಬರ್ 116 ರಲ್ಲಿನ 401 ಎಕರೆ ಅರಣ್ಯ ಪ್ರದೇಶದ ಗಡಿ ನಿರ್ಣಯ ಮಾಡಿದ್ದ ಇಲಾಖೆ ಸರ್ವೆ ಮೂಲಕ ಗಡಿ ಕಲ್ಲುಗಳನ್ನು ನೆಟ್ಟಿದ್ದಾರೆ. ಭಾನುವಾರವೇ ಟ್ರಂಚ್ ಆರಂಭಿಸಿದ ದುಗ್ಗಪ್ಪ ಅವರ ತಂಡ ಗಡಿ ಕಲ್ಲು ಬಿಟ್ಟು ಏಕಾಏಕಿ ಸಂತ್ರಸ್ತ ರೈತರಾದ ಪುಟ್ಟತಾಯಮ್ಮ ದೊಡ್ಡತಿಮ್ಮಯ್ಯ ಅವರ ಜಮೀನಿಗೆ ಅತಿಕ್ರಮಣ ಮಾಡಿ ಅಡಕೆ, ತೆಂಗಿನಮರ ಧರೆಗುರುಳಿಸಿದ್ದು ರಾಕ್ಷಸ ಕೃತ್ಯ ಎಂದು ಖಂಡಿಸಿದ್ದಾರೆ.

ಕಾನೂನು ಹೋರಾಟಕ್ಕೆ ಸಹ ಸಮಯ ನೀಡದ ಅಧಿಕಾರಿಗಳು ರಜೆ ದಿನ ತೆರವು ಕಾರ್ಯಾಚರಣೆ ಮಾಡಿದ್ದು ಸರಿಯಲ್ಲ. ಸಂತ್ರಸ್ತ ಕುಟುಂಬದ ವಕೀಲ ಶ್ರೀನಿವಾಸ್ ಅಧಿಕಾರಿಗಳ ಬಳಿ ಮನವಿ ಮಾಡಿದರೂ ಯಾವುದೇ ಬೆಲೆ ನೀಡದೆ ನಮ್ಮ ಪ್ರದೇಶವೆಂದು ಕೂಗಾಡಿದ್ದಾರೆ. ಈ ಜೊತೆಗೆ ಸರ್ವೆ ಕಲ್ಲು ತಪ್ಪಾಗಿದ್ದರೆ ಮತ್ತೊಮ್ಮೆ ಸರ್ವೆ ನಡೆಸಬೇಕಿತ್ತು. ಕಾನೂನು ಕೈಗೆ ತೆಗೆದುಕೊಂಡು ಗಿಡ ಮರಗಳನ್ನು ಕಡಿದಿದ್ದು ಸರಿಯಲ್ಲ. ಈ ಕೃತ್ಯ ಮಾಡಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಿ ಎಂದು ಒತ್ತಾಯಿಸಿದ್ದಾರೆ.

ಧರಣಿಗೆ ಬೆಂಬಲ ಸೂಚಿಸಿದ ಜೆಡಿಎಸ್ ಮುಖಂಡ ಬಿ.ಎಸ್.ನಾಗರಾಜು ಮಾತನಾಡಿ, ಅನುಚಿತವಾಗಿ ವರ್ತಿಸಿದ ಅರಣ್ಯ ಇಲಾಖೆ ಕಾನೂನು ರೀತಿ ಕ್ರಮ ವಹಿಸದೆ ದುರುದ್ದೇಶದಲ್ಲಿ ರೈತರಿಗೆ ತೊಂದರೆ ನೀಡಿದೆ. ಅರಣ್ಯ ಪ್ರದೇಶದ ಬದಿಯಲ್ಲಿ ಅವರ ಜಮೀನಲ್ಲಿ ಕಳೆದ 30 ವರ್ಷದಿಂದ ಕೃಷಿ ನಂಬಿ ಬದುಕು ಸಾಗಿಸುತ್ತಿದೆ. ಈ ರೀತಿ ಅತಿಕ್ರಮಣ ಮಾಡಿದ ಇಲಾಖೆ ಫಲ ನೀಡುವ ಮರಗಳನ್ನು ಧರೆಗುರುಳಿಸಿದ್ದು ಸರಿಯಲ್ಲ. ತಪ್ಪಿತಸ್ಥ ಅಧಿಕಾರಿಯನ್ನು ಅಮಮಾತು ಮಾಡಬೇಕು ಎಂದು ಆಗ್ರಹಿಸಿದರು.

ಸ್ಥಳಕ್ಕೆ ಧಾವಿಸಿದ ತಹಸೀಲ್ದಾರ್ ಬಿ.ಆರತಿ ಪ್ರತಿಭಟನಾಕಾರರೊಂದಿಗೆ ಚರ್ಚಿಸಿ ಸರ್ಕಾರದ ಗಮನಕ್ಕೆ ತಂದು ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ನೀಡಿದರು. ಪ್ರತಿಭಟನೆ ನಿಲ್ಲಿಸಲು ಒಪ್ಪದ ರೈತರು ಅಹೋರಾತ್ರಿ ಧರಣಿ ನಡೆಸಲು ನಿರ್ಧರಿಸಿ ಅಮಾನತು ಶಿಕ್ಷೆ ಕೊಡುವಂತೆ ಆಗ್ರಹಿಸಿದರು.

ಎಪಿಎಂಸಿ ಮಾಜಿ ಅಧ್ಯಕ್ಷ ಕಳ್ಳಿಪಾಳ್ಯ ಲೋಕೇಶ್, ಗ್ರಾಪಂ ಸದಸ್ಯ ರಮೇಶ್, ರೈತಸಂಘದ ಸಿ.ಜಿ.ಲೋಕೇಶ್, ಗುರುಚನ್ನಬಸಪ್ಪ, ಮುಖಂಡರಾದ ಮಹಾದೇವಯ್ಯ, ವಿನಯ್, ಸಂತೋಷ್ ಸೇರಿದಂತೆ ಅಮ್ಮನಘಟ್ಟ ಗ್ರಾಮಸ್ಥರು ಇದ್ದರು.


ಇದನ್ನೂ ಓದಿರಿ: ರೈತಸಂಘ ಇಳಿಮುಖವಾದ ಘಟ್ಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಒತ್ತುವರಿ ತೆರವು ಮಾಡುವಾಗ ಆ ಜಾಗದಲ್ಲಿರುವ ಬೆಳೆ, ಮರ, ಕಟ್ಟಡ ಮುಂತಾದವುಗಳನ್ನು ಕೆಡವಿ ಹಾಕದೇ ಸರ್ಕಾರದ ವಶಕ್ಕೆ ಪಡೆಯಬೇಕು. ಇವುಗಳಿಂದ ಬರುವ ಆದಾಯವನ್ನು ಮಂದಿ ಒಳಿತಿಗೆ ಬಳಸಬೇಕು.
    ‌ಈ ಬಗೆಗೆ ಸರ‌್ಕಾರ ತಕ್ಕ ಕಟ್ಟುಪಾಡು ಮಾಡಿ ಸುತ್ತೋಲೆ ಹೊರಡಿಸಬೇಕು.
    #SavePublicProperty

LEAVE A REPLY

Please enter your comment!
Please enter your name here

- Advertisment -

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....