Homeಕರ್ನಾಟಕಗುಬ್ಬಿ: ಫಲ ನೀಡುತ್ತಿದ್ದ ಅಡಕೆ, ತೆಂಗು ಧ್ವಂಸ ಮಾಡಿದ ಅರಣ್ಯ ಇಲಾಖೆ; ಭುಗಿಲೆದ್ದ ಆಕ್ರೋಶ

ಗುಬ್ಬಿ: ಫಲ ನೀಡುತ್ತಿದ್ದ ಅಡಕೆ, ತೆಂಗು ಧ್ವಂಸ ಮಾಡಿದ ಅರಣ್ಯ ಇಲಾಖೆ; ಭುಗಿಲೆದ್ದ ಆಕ್ರೋಶ

- Advertisement -
- Advertisement -

ಯಾವುದೇ ಮುನ್ಸೂಚನೆ ನೀಡದೆ ಅರಣ್ಯ ಇಲಾಖೆ ಅಧಿಕಾರಿ ನಡೆಸಿರುವ ಕಾರ್ಯಾಚರಣೆ ಖಂಡಿಸಿ ರೈತರು ತೀವ್ರ ವಿರೋಧ ವ್ಯಕ್ತಪಡಿಸಿರುವ ಘಟನೆ ತುಮಕೂರು ಜಿಲ್ಲೆಯ ಗುಬ್ಬಿ ತಾಲ್ಲೂಕಿನಲ್ಲಿ ನಡೆದಿದೆ.

ತಾಲ್ಲೂಕಿನ ಅಮ್ಮನಘಟ್ಟ ಅರಣ್ಯ ಪ್ರದೇಶದ ಗಡಿ ನಿರ್ಧರಿಸಲು ಮುಂದಾದ ಅರಣ್ಯ ಇಲಾಖೆ ವಲಯ ಅರಣ್ಯಾಧಿಕಾರಿ ದುಗ್ಗಪ್ಪ ನೇತೃತ್ವದ ತಂಡ ಏಕಾಏಕಿ ರೈತರ ಕೃಷಿ ಜಮೀನಿಗೆ ಅತಿಕ್ರಮಣ ಮಾಡಿದ್ದಲ್ಲದೇ ರೈತರ ವಿರುದ್ಧ ದೌರ್ಜನ್ಯದ ಮಾತುಗಳಾಡಿದ್ದಾರೆ ಎಂದು ರೈತರು ದೂರಿದ್ದಾರೆ.

ಫಲ ನೀಡಿತ್ತಿದ್ದ 30 ವರ್ಷದ ಅಡಕೆ, ತೆಂಗು ಮತ್ತು ಎಳೆಅಂಬು ಮಣ್ಣು ಪಾಲು ಮಾಡಿ ಅಮಾನವೀಯವಾಗಿ ನಡೆದುಕೊಂಡಿದ್ದಾರೆ. ಇದರಿಂದಾಗಿ ಸೋಮವಾರ ಸಂಜೆ ಸಿಟ್ಟಿಗೆದ್ದ ರೈತ ಸಂಘದ ಸದಸ್ಯರು ಹಾಗೂ ಸಂತ್ರಸ್ತ ರೈತರು ತಾಲ್ಲೂಕು ಕಚೇರಿ ಮುಂದೆ ಅನಿರ್ದಿಷ್ಟಾವಧಿ ಧರಣಿ ಕುಳಿದರು.

ಮರಗಿಡಗಳನ್ನು ಬೆಳೆಸಿ ಪೋಷಿಸುವ ಕಾಯಕ ಮಾಡುವ ಅರಣ್ಯ ಇಲಾಖೆ, ಕೃಷಿಕನ ಜಮೀನಿಗೆ ಹಿಟಾಜಿ ಯಂತ್ರ ನುಗ್ಗಿಸಿ ಫಲ ನೀಡುತ್ತಿದ್ದ 200ಕ್ಕೂ ಅಧಿಕ ಅಡಕೆಮರಗಳು, 10 ತೆಂಗಿನಮರಗಳು ಹಾಗೂ ವಿಳೇದೆಲೆ ಅಂಬುಗಳನ್ನು ಕತ್ತರಿಸಿ ಕಟುಕಟನ ಪ್ರದರ್ಶಿಸಿದೆ ಎಂದು ರೈತರು ಆರೋಪಿಸಲಾಗಿದೆ.

“ತಮ್ಮ ಜಮೀನಿನ ಬೆಳೆ ನಾಶ ಮಾಡದಂತೆ ಅಂಗಲಾಚಿದರೂ ಕಿಂಚಿತ್ತೂ ಕರುಣೆ ತೋರದ ವಲಯ ಅರಣ್ಯಾಧಿಕಾರಿ ದುಗ್ಗಪ್ಪ ಅವರು ರೈತರಿಗೆ ಅವಾಚ್ಯ ಶಬ್ದಗಳ ಬಳಕೆ ಮಾಡಿದ್ದಾರೆ. ಮುಗ್ದ ರೈತ ಕುಟುಂಬಕ್ಕೆ ದಿಕ್ಕು ತೋಚದೆ ತಲೆ ಮೇಲೆ ಕೈ ಹಿಟ್ಟುಕೊಂಡು ರೋಧಿಸತೊಡಗಿದರು. ಇಡೀ ರಾತ್ರಿ ನಿದ್ದೆಗೆಟ್ಟ ಕುಟುಂಬದ ಅರಣ್ಯ ರೋಧನೆ ಅಳಿಸುವವರಿಲ್ಲದೇ ಕಂಗಾಲಾದರು” ಎಂದು ರೈತರು ದೂರಿದ್ದಾರೆ.

ಸಂಜೆ ವೇಳೆಗೆ ವಿಷಯ ತಿಳಿದ ರೈತ ಸಂಘದ ಸದಸ್ಯರು ಸ್ಥಳಕ್ಕೆ ಧಾವಿಸಿ ಅಲ್ಲಿನ ಅಮಾನವೀಯ ಕೃತ್ಯ ನೋಡಿ ಆಕ್ರೋಶ ಹೊರಹಾಕಿದರು. ಅಲ್ಲಿ ಮಣ್ಣು ಪಾಲಾದ ಎಲ್ಲಾ ಮರಗಳನ್ನು ಟ್ರಾಕ್ಟರ್ ಮೂಲಕ ತಾಲ್ಲೂಕು ಕಚೇರಿ ಮುಂದೆ ಸುರಿದು ಪ್ರತಿಭಟನೆ ಆರಂಭಿಸಿದರು. ಅರಣ್ಯ ಇಲಾಖೆ ವಿರುದ್ಧ ಘೋಷಣೆ ಕೂಗಿದರು. ಅಧಿಕಾರಿ ದುಗ್ಗಪ್ಪ ಅಮಾನತು ಮಾಡುವಂತೆ ಆಗ್ರಹಿಸಿದರು.

ರೈತಸಂಘದ ತಾಲ್ಲೂಕು ಅಧ್ಯಕ್ಷ ಕೆ.ಎನ್.ವೆಂಕಟೇಗೌಡ ಮಾತನಾಡಿ, ಸರ್ವೆ ನಂಬರ್ 116 ರಲ್ಲಿನ 401 ಎಕರೆ ಅರಣ್ಯ ಪ್ರದೇಶದ ಗಡಿ ನಿರ್ಣಯ ಮಾಡಿದ್ದ ಇಲಾಖೆ ಸರ್ವೆ ಮೂಲಕ ಗಡಿ ಕಲ್ಲುಗಳನ್ನು ನೆಟ್ಟಿದ್ದಾರೆ. ಭಾನುವಾರವೇ ಟ್ರಂಚ್ ಆರಂಭಿಸಿದ ದುಗ್ಗಪ್ಪ ಅವರ ತಂಡ ಗಡಿ ಕಲ್ಲು ಬಿಟ್ಟು ಏಕಾಏಕಿ ಸಂತ್ರಸ್ತ ರೈತರಾದ ಪುಟ್ಟತಾಯಮ್ಮ ದೊಡ್ಡತಿಮ್ಮಯ್ಯ ಅವರ ಜಮೀನಿಗೆ ಅತಿಕ್ರಮಣ ಮಾಡಿ ಅಡಕೆ, ತೆಂಗಿನಮರ ಧರೆಗುರುಳಿಸಿದ್ದು ರಾಕ್ಷಸ ಕೃತ್ಯ ಎಂದು ಖಂಡಿಸಿದ್ದಾರೆ.

ಕಾನೂನು ಹೋರಾಟಕ್ಕೆ ಸಹ ಸಮಯ ನೀಡದ ಅಧಿಕಾರಿಗಳು ರಜೆ ದಿನ ತೆರವು ಕಾರ್ಯಾಚರಣೆ ಮಾಡಿದ್ದು ಸರಿಯಲ್ಲ. ಸಂತ್ರಸ್ತ ಕುಟುಂಬದ ವಕೀಲ ಶ್ರೀನಿವಾಸ್ ಅಧಿಕಾರಿಗಳ ಬಳಿ ಮನವಿ ಮಾಡಿದರೂ ಯಾವುದೇ ಬೆಲೆ ನೀಡದೆ ನಮ್ಮ ಪ್ರದೇಶವೆಂದು ಕೂಗಾಡಿದ್ದಾರೆ. ಈ ಜೊತೆಗೆ ಸರ್ವೆ ಕಲ್ಲು ತಪ್ಪಾಗಿದ್ದರೆ ಮತ್ತೊಮ್ಮೆ ಸರ್ವೆ ನಡೆಸಬೇಕಿತ್ತು. ಕಾನೂನು ಕೈಗೆ ತೆಗೆದುಕೊಂಡು ಗಿಡ ಮರಗಳನ್ನು ಕಡಿದಿದ್ದು ಸರಿಯಲ್ಲ. ಈ ಕೃತ್ಯ ಮಾಡಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಿ ಎಂದು ಒತ್ತಾಯಿಸಿದ್ದಾರೆ.

ಧರಣಿಗೆ ಬೆಂಬಲ ಸೂಚಿಸಿದ ಜೆಡಿಎಸ್ ಮುಖಂಡ ಬಿ.ಎಸ್.ನಾಗರಾಜು ಮಾತನಾಡಿ, ಅನುಚಿತವಾಗಿ ವರ್ತಿಸಿದ ಅರಣ್ಯ ಇಲಾಖೆ ಕಾನೂನು ರೀತಿ ಕ್ರಮ ವಹಿಸದೆ ದುರುದ್ದೇಶದಲ್ಲಿ ರೈತರಿಗೆ ತೊಂದರೆ ನೀಡಿದೆ. ಅರಣ್ಯ ಪ್ರದೇಶದ ಬದಿಯಲ್ಲಿ ಅವರ ಜಮೀನಲ್ಲಿ ಕಳೆದ 30 ವರ್ಷದಿಂದ ಕೃಷಿ ನಂಬಿ ಬದುಕು ಸಾಗಿಸುತ್ತಿದೆ. ಈ ರೀತಿ ಅತಿಕ್ರಮಣ ಮಾಡಿದ ಇಲಾಖೆ ಫಲ ನೀಡುವ ಮರಗಳನ್ನು ಧರೆಗುರುಳಿಸಿದ್ದು ಸರಿಯಲ್ಲ. ತಪ್ಪಿತಸ್ಥ ಅಧಿಕಾರಿಯನ್ನು ಅಮಮಾತು ಮಾಡಬೇಕು ಎಂದು ಆಗ್ರಹಿಸಿದರು.

ಸ್ಥಳಕ್ಕೆ ಧಾವಿಸಿದ ತಹಸೀಲ್ದಾರ್ ಬಿ.ಆರತಿ ಪ್ರತಿಭಟನಾಕಾರರೊಂದಿಗೆ ಚರ್ಚಿಸಿ ಸರ್ಕಾರದ ಗಮನಕ್ಕೆ ತಂದು ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ನೀಡಿದರು. ಪ್ರತಿಭಟನೆ ನಿಲ್ಲಿಸಲು ಒಪ್ಪದ ರೈತರು ಅಹೋರಾತ್ರಿ ಧರಣಿ ನಡೆಸಲು ನಿರ್ಧರಿಸಿ ಅಮಾನತು ಶಿಕ್ಷೆ ಕೊಡುವಂತೆ ಆಗ್ರಹಿಸಿದರು.

ಎಪಿಎಂಸಿ ಮಾಜಿ ಅಧ್ಯಕ್ಷ ಕಳ್ಳಿಪಾಳ್ಯ ಲೋಕೇಶ್, ಗ್ರಾಪಂ ಸದಸ್ಯ ರಮೇಶ್, ರೈತಸಂಘದ ಸಿ.ಜಿ.ಲೋಕೇಶ್, ಗುರುಚನ್ನಬಸಪ್ಪ, ಮುಖಂಡರಾದ ಮಹಾದೇವಯ್ಯ, ವಿನಯ್, ಸಂತೋಷ್ ಸೇರಿದಂತೆ ಅಮ್ಮನಘಟ್ಟ ಗ್ರಾಮಸ್ಥರು ಇದ್ದರು.


ಇದನ್ನೂ ಓದಿರಿ: ರೈತಸಂಘ ಇಳಿಮುಖವಾದ ಘಟ್ಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಒತ್ತುವರಿ ತೆರವು ಮಾಡುವಾಗ ಆ ಜಾಗದಲ್ಲಿರುವ ಬೆಳೆ, ಮರ, ಕಟ್ಟಡ ಮುಂತಾದವುಗಳನ್ನು ಕೆಡವಿ ಹಾಕದೇ ಸರ್ಕಾರದ ವಶಕ್ಕೆ ಪಡೆಯಬೇಕು. ಇವುಗಳಿಂದ ಬರುವ ಆದಾಯವನ್ನು ಮಂದಿ ಒಳಿತಿಗೆ ಬಳಸಬೇಕು.
    ‌ಈ ಬಗೆಗೆ ಸರ‌್ಕಾರ ತಕ್ಕ ಕಟ್ಟುಪಾಡು ಮಾಡಿ ಸುತ್ತೋಲೆ ಹೊರಡಿಸಬೇಕು.
    #SavePublicProperty

LEAVE A REPLY

Please enter your comment!
Please enter your name here

- Advertisment -

ಗೋವಾ ನೈಟ್ ಕ್ಲಬ್ ಮಾಲೀಕರ ಮಧ್ಯಂತರ ಜಾಮೀನು ನಿರಾಕರಿಸಿದ ದೆಹಲಿ ನ್ಯಾಯಾಲಯ: ಥೈಲ್ಯಾಂಡ್‌ನಿಂದಲೂ ಗಡಿಪಾರು ಪ್ರಕ್ರಿಯೆ ಆರಂಭ 

ನವದೆಹಲಿ: ಕಳೆದ ವಾರ ಕನಿಷ್ಠ 25 ಜನರ ಸಾವಿಗೆ ಕಾರಣವಾಗಿದ್ದ, ಗೋವಾದ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಮತ್ತು ಗೌರವ್ ಲುಥ್ರಾಸ್ ಅವರ ಟ್ರಾನ್ಸಿಟ್ ನಿರೀಕ್ಷಣಾ ಜಾಮೀನು ಅರ್ಜಿಯನ್ನು...

ಮಾದಕ ದ್ರವ್ಯ ಬಳಕೆ-ಮಾರಾಟದ ಶಿಕ್ಷೆಯ ಕುರಿತು ಶಾಲಾ-ಕಾಲೇಜುಗಳಲ್ಲಿ ಜಾಗೃತಿ ಕಾರ್ಯಕ್ರಮ: ಪರಮೇಶ್ವರ್

ಮಾದಕ ದ್ರವ್ಯ ಬಳಕೆಯ ದುಷ್ಪರಿಣಾಮ, ಮಾರಾಟದ ಶಿಕ್ಷೆಯ ಕುರಿತು ಶಾಲಾ-ಕಾಲೇಜುಗಳಲ್ಲಿ, ಪೊಲೀಸ್ ಠಾಣೆಗಳಲ್ಲಿ ನಿಯಮಿತವಾಗಿ ಜಾಗೃತಿ ಕಾರ್ಯಕ್ರಮಗಳನ್ನು ಮಾಡಲಾಗಿರುತ್ತದೆ ಎಂದು ಗೃಹ ಸಚಿವ ಜಿ ಪರಮೇಶ್ವರ್ ಹೇಳಿದರು. ಗುರುವಾರ ವಿಧಾನ ಪರಿಷತ್ತಿನಲ್ಲಿ ಕಾಂಗ್ರೆಸ್ ಸದಸ್ಯ...

ದುಡ್ಡು ಕೊಟ್ಟವರಿಗೆ ರಾಜಾತಿಥ್ಯ, ಪೌರತ್ವಕ್ಕೆ ರಹದಾರಿ : ಏನಿದು ‘ಟ್ರಂಪ್ ಗೋಲ್ಡ್ ಕಾರ್ಡ್’

ಟ್ರಂಪ್ ಆಡಳಿತವು ಬುಧವಾರ (ಡಿಸೆಂಬರ್ 10) ಔಪಚಾರಿಕವಾಗಿ 'ಟ್ರಂಪ್ ಗೋಲ್ಡ್ ಕಾರ್ಡ್'ಗಾಗಿ ಅರ್ಜಿಗಳನ್ನು ಸ್ವೀಕರಿಸಲು ಪ್ರಾರಂಭಿಸಿದೆ. ಇದನ್ನು ಅಮೆರಿಕ ಸರ್ಕಾರ ಕನಿಷ್ಠ 1 ಮಿಲಿಯನ್ ಡಾಲರ್ ಪಾವತಿಸುವ ಜನರಿಗೆ ನೀಡಲು ಯೋಜಿಸಿದೆ. 'ಟ್ರಂಪ್ ಗೋಲ್ಡ್...

ಮಾಜಿ ಐಪಿಎಸ್ ಅಧಿಕಾರಿ ಸಂಜೀವ್ ಭಟ್ ಜೈಲು ಶಿಕ್ಷೆ ಅಮಾನತು ಮನವಿ ನಿರಾಕರಿಸಿದ ಸುಪ್ರೀಂ ಕೋರ್ಟ್

1996 ರ ಮಾದಕ ದ್ರವ್ಯ ವಶ ಪ್ರಕರಣದಲ್ಲಿ ಮಾಜಿ ಐಪಿಎಸ್ ಅಧಿಕಾರಿ ಸಂಜೀವ್ ಭಟ್ ಅವರ 20 ವರ್ಷಗಳ ಜೈಲು ಶಿಕ್ಷೆಯನ್ನು ಅಮಾನತುಗೊಳಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದ್ದರಿಂದ ಗುರುವಾರ ಅವರ ಬಿಡುಗಡೆಗಾಗಿನ ಪ್ರಯತ್ನ...

ಅರುಣಾಚಲ ಪ್ರದೇಶ: ಟ್ರಕ್ ಕಂದಕಕ್ಕೆ ಉರುಳಿ ಅಸ್ಸಾಂ ಮೂಲದ 21 ಕಾರ್ಮಿಕರು ಸಾವನ್ನಪ್ಪಿರುವ ಶಂಕೆ, 18 ಮೃತದೇಹಗಳು ಪತ್ತೆ

ಅರುಣಾಚಲ ಪ್ರದೇಶದ ಅಂಜಾವ್ ಜಿಲ್ಲೆಯಲ್ಲಿ ಅಸ್ಸಾಂನಿಂದ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಟ್ರಕ್ ಆಳವಾದ ಕಂದಕಕ್ಕೆ ಉರುಳಿದ್ದು, 21 ಜನರು ಸಾವನ್ನಪ್ಪಿದ್ದಾರೆ ಎಂದು ಶಂಕಿಸಲಾಗಿದೆ. ಇಲ್ಲಿಯವರೆಗೆ 18 ಶವಗಳನ್ನು ಹೊರತೆಗೆಯಲಾಗಿದೆ ಎಂಬ ಮಾಹಿತಿ ಸಿಕ್ಕಿದೆ.  ಡಿಸೆಂಬರ್ 8ನೇ...

ಜಾರ್ಖಂಡ್‌ನ 27 ಮಕ್ಕಳು ನೇಪಾಳಕ್ಕೆ ಕಳ್ಳಸಾಗಣೆ; ತನಿಖೆ ಆರಂಭಿಸಿದ ಪೊಲೀಸರು

ಉತ್ತಮ ಶಿಕ್ಷಣ ಒದಗಿಸುವ ನೆಪದಲ್ಲಿ 27 ಮಕ್ಕಳನ್ನು ನೇಪಾಳಕ್ಕೆ ಕಳ್ಳಸಾಗಣೆ ಮಾಡಲಾಗಿದೆ ಎಂಬ ಆರೋಪದ ಮೇಲೆ ಜಾರ್ಖಂಡ್‌ನ ಪಶ್ಚಿಮ ಸಿಂಗ್‌ಭೂಮ್ ಜಿಲ್ಲೆಯ ಪೊಲೀಸರು ಗುರುವಾರ ತನಿಖೆ ಆರಂಭಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಮಕ್ಕಳನ್ನು...

ಉಮರ್ ಖಾಲಿದ್‌ಗೆ 14 ದಿನಗಳ ಮಧ್ಯಂತರ ಜಾಮೀನು; ಸಹೋದರಿಯ ಮದುವೆಯಲ್ಲಿ ಪಾಲ್ಗೊಳ್ಳಲು ಅವಕಾಶ

ಸಾಮಾಜಿಕ ಕಾರ್ಯಕರ್ತ ಉಮರ್ ಖಾಲಿದ್ ಅವರಿಗೆ ಡಿಸೆಂಬರ್ 27 ರಂದು ನಿಗದಿಯಾಗಿದ್ದ ತಮ್ಮ ಸಹೋದರಿಯ ಮದುವೆಯಲ್ಲಿ ಪಾಲ್ಗೊಳ್ಳಲು ಡಿಸೆಂಬರ್ 16 ರಿಂದ 29 ರವರೆಗೆ 14 ದಿನಗಳ ಕಾಲ ಮಧ್ಯಂತರ ಜಾಮೀನು ನೀಡಲಾಯಿತು....

ಜಾತ್ಯತೀತತೆಯನ್ನು ಮಾತ್ರ ನಂಬುತ್ತೇನೆ; ಕೋಮುವಾದವನ್ನಲ್ಲ: ಮಮತಾ ಬ್ಯಾನರ್ಜಿ

ನಾನು ಕೋಮುವಾದದಲ್ಲಿ ನಂಬಿಕೆ ಇಡುವುದಿಲ್ಲ. ಜಾತ್ಯತೀತತೆಯನ್ನು ಮಾತ್ರ ನಂಬುತ್ತೇನೆ. ಚುನಾವಣೆ ಸಮೀಪಿಸಿದಾಗಲೆಲ್ಲಾ, ಬಿಜೆಪಿ ಹಣವನ್ನು ಬಳಸಿ ಇತರ ರಾಜ್ಯಗಳಿಂದ ಜನರನ್ನು ಕರೆತಂದು ಸಾರ್ವಜನಿಕರನ್ನು ವಿಭಜಿಸಲು ಪ್ರಯತ್ನಿಸುತ್ತದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ...

ಅತ್ಯಾಚಾರ ಪ್ರಕರಣದ ವಿಚಾರಣೆ ವರ್ಗಾವಣೆ ಕೋರಿ ಪ್ರಜ್ವಲ್ ರೇವಣ್ಣ ಮನವಿ : ತಿರಸ್ಕರಿಸಿದ ಸುಪ್ರೀಂ ಕೋರ್ಟ್‌

ಬೆಂಗಳೂರಿನ 81ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಧೀಶರು ವಿಚಾರಣೆ ನಡೆಸುತ್ತಿರುವ ತಮ್ಮ ವಿರುದ್ಧದ ಎರಡು ಅತ್ಯಾಚಾರ ಪ್ರಕರಣಗಳನ್ನು ಬೇರೆ ಸೆಷನ್ಸ್‌ ನ್ಯಾಯಾಲಯಕ್ಕೆ ವರ್ಗಾಯಿಸುವಂತೆ ಕೋರಿ ಜೆಡಿಎಸ್‌ ಮಾಜಿ ಸಂಸದ ಪ್ರಜ್ವಲ್‌...

ಭಗವದ್ಗೀತೆ ಕಾರ್ಯಕ್ರಮದಲ್ಲಿ ಚಿಕನ್ ಪಫ್ಸ್ ಮಾರಿದ ಮುಸ್ಲಿಂ ವ್ಯಾಪಾರಿಗೆ ಥಳಿತ : ಮೂವರ ಬಂಧನ

ಲಕ್ಷ ಕಂಠ ಗೀತಾ ಪಾರಾಯಣ (ಸುಮಾರು 5 ಲಕ್ಷ ಜನರಿಂದ ಭಗವದ್ಗೀತೆ ಪಾರಾಯಣ) ಕಾರ್ಯಕ್ರಮದಲ್ಲಿ ಚಿಕನ್ ಪಫ್ಸ್ ಮಾರಿದ ಬಡ ಮುಸ್ಲಿಂ ವ್ಯಾಪಾರಿಗೆ ಥಳಿಸಿದ ಘಟನೆ ಭಾನುವಾರ (ಡಿಸೆಂಬರ್ 7) ಕೋಲ್ಕತ್ತಾದ ಬ್ರಿಗೇಡ್...