Homeಕರ್ನಾಟಕಗುಬ್ಬಿ: ಫಲ ನೀಡುತ್ತಿದ್ದ ಅಡಕೆ, ತೆಂಗು ಧ್ವಂಸ ಮಾಡಿದ ಅರಣ್ಯ ಇಲಾಖೆ; ಭುಗಿಲೆದ್ದ ಆಕ್ರೋಶ

ಗುಬ್ಬಿ: ಫಲ ನೀಡುತ್ತಿದ್ದ ಅಡಕೆ, ತೆಂಗು ಧ್ವಂಸ ಮಾಡಿದ ಅರಣ್ಯ ಇಲಾಖೆ; ಭುಗಿಲೆದ್ದ ಆಕ್ರೋಶ

- Advertisement -
- Advertisement -

ಯಾವುದೇ ಮುನ್ಸೂಚನೆ ನೀಡದೆ ಅರಣ್ಯ ಇಲಾಖೆ ಅಧಿಕಾರಿ ನಡೆಸಿರುವ ಕಾರ್ಯಾಚರಣೆ ಖಂಡಿಸಿ ರೈತರು ತೀವ್ರ ವಿರೋಧ ವ್ಯಕ್ತಪಡಿಸಿರುವ ಘಟನೆ ತುಮಕೂರು ಜಿಲ್ಲೆಯ ಗುಬ್ಬಿ ತಾಲ್ಲೂಕಿನಲ್ಲಿ ನಡೆದಿದೆ.

ತಾಲ್ಲೂಕಿನ ಅಮ್ಮನಘಟ್ಟ ಅರಣ್ಯ ಪ್ರದೇಶದ ಗಡಿ ನಿರ್ಧರಿಸಲು ಮುಂದಾದ ಅರಣ್ಯ ಇಲಾಖೆ ವಲಯ ಅರಣ್ಯಾಧಿಕಾರಿ ದುಗ್ಗಪ್ಪ ನೇತೃತ್ವದ ತಂಡ ಏಕಾಏಕಿ ರೈತರ ಕೃಷಿ ಜಮೀನಿಗೆ ಅತಿಕ್ರಮಣ ಮಾಡಿದ್ದಲ್ಲದೇ ರೈತರ ವಿರುದ್ಧ ದೌರ್ಜನ್ಯದ ಮಾತುಗಳಾಡಿದ್ದಾರೆ ಎಂದು ರೈತರು ದೂರಿದ್ದಾರೆ.

ಫಲ ನೀಡಿತ್ತಿದ್ದ 30 ವರ್ಷದ ಅಡಕೆ, ತೆಂಗು ಮತ್ತು ಎಳೆಅಂಬು ಮಣ್ಣು ಪಾಲು ಮಾಡಿ ಅಮಾನವೀಯವಾಗಿ ನಡೆದುಕೊಂಡಿದ್ದಾರೆ. ಇದರಿಂದಾಗಿ ಸೋಮವಾರ ಸಂಜೆ ಸಿಟ್ಟಿಗೆದ್ದ ರೈತ ಸಂಘದ ಸದಸ್ಯರು ಹಾಗೂ ಸಂತ್ರಸ್ತ ರೈತರು ತಾಲ್ಲೂಕು ಕಚೇರಿ ಮುಂದೆ ಅನಿರ್ದಿಷ್ಟಾವಧಿ ಧರಣಿ ಕುಳಿದರು.

ಮರಗಿಡಗಳನ್ನು ಬೆಳೆಸಿ ಪೋಷಿಸುವ ಕಾಯಕ ಮಾಡುವ ಅರಣ್ಯ ಇಲಾಖೆ, ಕೃಷಿಕನ ಜಮೀನಿಗೆ ಹಿಟಾಜಿ ಯಂತ್ರ ನುಗ್ಗಿಸಿ ಫಲ ನೀಡುತ್ತಿದ್ದ 200ಕ್ಕೂ ಅಧಿಕ ಅಡಕೆಮರಗಳು, 10 ತೆಂಗಿನಮರಗಳು ಹಾಗೂ ವಿಳೇದೆಲೆ ಅಂಬುಗಳನ್ನು ಕತ್ತರಿಸಿ ಕಟುಕಟನ ಪ್ರದರ್ಶಿಸಿದೆ ಎಂದು ರೈತರು ಆರೋಪಿಸಲಾಗಿದೆ.

“ತಮ್ಮ ಜಮೀನಿನ ಬೆಳೆ ನಾಶ ಮಾಡದಂತೆ ಅಂಗಲಾಚಿದರೂ ಕಿಂಚಿತ್ತೂ ಕರುಣೆ ತೋರದ ವಲಯ ಅರಣ್ಯಾಧಿಕಾರಿ ದುಗ್ಗಪ್ಪ ಅವರು ರೈತರಿಗೆ ಅವಾಚ್ಯ ಶಬ್ದಗಳ ಬಳಕೆ ಮಾಡಿದ್ದಾರೆ. ಮುಗ್ದ ರೈತ ಕುಟುಂಬಕ್ಕೆ ದಿಕ್ಕು ತೋಚದೆ ತಲೆ ಮೇಲೆ ಕೈ ಹಿಟ್ಟುಕೊಂಡು ರೋಧಿಸತೊಡಗಿದರು. ಇಡೀ ರಾತ್ರಿ ನಿದ್ದೆಗೆಟ್ಟ ಕುಟುಂಬದ ಅರಣ್ಯ ರೋಧನೆ ಅಳಿಸುವವರಿಲ್ಲದೇ ಕಂಗಾಲಾದರು” ಎಂದು ರೈತರು ದೂರಿದ್ದಾರೆ.

ಸಂಜೆ ವೇಳೆಗೆ ವಿಷಯ ತಿಳಿದ ರೈತ ಸಂಘದ ಸದಸ್ಯರು ಸ್ಥಳಕ್ಕೆ ಧಾವಿಸಿ ಅಲ್ಲಿನ ಅಮಾನವೀಯ ಕೃತ್ಯ ನೋಡಿ ಆಕ್ರೋಶ ಹೊರಹಾಕಿದರು. ಅಲ್ಲಿ ಮಣ್ಣು ಪಾಲಾದ ಎಲ್ಲಾ ಮರಗಳನ್ನು ಟ್ರಾಕ್ಟರ್ ಮೂಲಕ ತಾಲ್ಲೂಕು ಕಚೇರಿ ಮುಂದೆ ಸುರಿದು ಪ್ರತಿಭಟನೆ ಆರಂಭಿಸಿದರು. ಅರಣ್ಯ ಇಲಾಖೆ ವಿರುದ್ಧ ಘೋಷಣೆ ಕೂಗಿದರು. ಅಧಿಕಾರಿ ದುಗ್ಗಪ್ಪ ಅಮಾನತು ಮಾಡುವಂತೆ ಆಗ್ರಹಿಸಿದರು.

ರೈತಸಂಘದ ತಾಲ್ಲೂಕು ಅಧ್ಯಕ್ಷ ಕೆ.ಎನ್.ವೆಂಕಟೇಗೌಡ ಮಾತನಾಡಿ, ಸರ್ವೆ ನಂಬರ್ 116 ರಲ್ಲಿನ 401 ಎಕರೆ ಅರಣ್ಯ ಪ್ರದೇಶದ ಗಡಿ ನಿರ್ಣಯ ಮಾಡಿದ್ದ ಇಲಾಖೆ ಸರ್ವೆ ಮೂಲಕ ಗಡಿ ಕಲ್ಲುಗಳನ್ನು ನೆಟ್ಟಿದ್ದಾರೆ. ಭಾನುವಾರವೇ ಟ್ರಂಚ್ ಆರಂಭಿಸಿದ ದುಗ್ಗಪ್ಪ ಅವರ ತಂಡ ಗಡಿ ಕಲ್ಲು ಬಿಟ್ಟು ಏಕಾಏಕಿ ಸಂತ್ರಸ್ತ ರೈತರಾದ ಪುಟ್ಟತಾಯಮ್ಮ ದೊಡ್ಡತಿಮ್ಮಯ್ಯ ಅವರ ಜಮೀನಿಗೆ ಅತಿಕ್ರಮಣ ಮಾಡಿ ಅಡಕೆ, ತೆಂಗಿನಮರ ಧರೆಗುರುಳಿಸಿದ್ದು ರಾಕ್ಷಸ ಕೃತ್ಯ ಎಂದು ಖಂಡಿಸಿದ್ದಾರೆ.

ಕಾನೂನು ಹೋರಾಟಕ್ಕೆ ಸಹ ಸಮಯ ನೀಡದ ಅಧಿಕಾರಿಗಳು ರಜೆ ದಿನ ತೆರವು ಕಾರ್ಯಾಚರಣೆ ಮಾಡಿದ್ದು ಸರಿಯಲ್ಲ. ಸಂತ್ರಸ್ತ ಕುಟುಂಬದ ವಕೀಲ ಶ್ರೀನಿವಾಸ್ ಅಧಿಕಾರಿಗಳ ಬಳಿ ಮನವಿ ಮಾಡಿದರೂ ಯಾವುದೇ ಬೆಲೆ ನೀಡದೆ ನಮ್ಮ ಪ್ರದೇಶವೆಂದು ಕೂಗಾಡಿದ್ದಾರೆ. ಈ ಜೊತೆಗೆ ಸರ್ವೆ ಕಲ್ಲು ತಪ್ಪಾಗಿದ್ದರೆ ಮತ್ತೊಮ್ಮೆ ಸರ್ವೆ ನಡೆಸಬೇಕಿತ್ತು. ಕಾನೂನು ಕೈಗೆ ತೆಗೆದುಕೊಂಡು ಗಿಡ ಮರಗಳನ್ನು ಕಡಿದಿದ್ದು ಸರಿಯಲ್ಲ. ಈ ಕೃತ್ಯ ಮಾಡಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಿ ಎಂದು ಒತ್ತಾಯಿಸಿದ್ದಾರೆ.

ಧರಣಿಗೆ ಬೆಂಬಲ ಸೂಚಿಸಿದ ಜೆಡಿಎಸ್ ಮುಖಂಡ ಬಿ.ಎಸ್.ನಾಗರಾಜು ಮಾತನಾಡಿ, ಅನುಚಿತವಾಗಿ ವರ್ತಿಸಿದ ಅರಣ್ಯ ಇಲಾಖೆ ಕಾನೂನು ರೀತಿ ಕ್ರಮ ವಹಿಸದೆ ದುರುದ್ದೇಶದಲ್ಲಿ ರೈತರಿಗೆ ತೊಂದರೆ ನೀಡಿದೆ. ಅರಣ್ಯ ಪ್ರದೇಶದ ಬದಿಯಲ್ಲಿ ಅವರ ಜಮೀನಲ್ಲಿ ಕಳೆದ 30 ವರ್ಷದಿಂದ ಕೃಷಿ ನಂಬಿ ಬದುಕು ಸಾಗಿಸುತ್ತಿದೆ. ಈ ರೀತಿ ಅತಿಕ್ರಮಣ ಮಾಡಿದ ಇಲಾಖೆ ಫಲ ನೀಡುವ ಮರಗಳನ್ನು ಧರೆಗುರುಳಿಸಿದ್ದು ಸರಿಯಲ್ಲ. ತಪ್ಪಿತಸ್ಥ ಅಧಿಕಾರಿಯನ್ನು ಅಮಮಾತು ಮಾಡಬೇಕು ಎಂದು ಆಗ್ರಹಿಸಿದರು.

ಸ್ಥಳಕ್ಕೆ ಧಾವಿಸಿದ ತಹಸೀಲ್ದಾರ್ ಬಿ.ಆರತಿ ಪ್ರತಿಭಟನಾಕಾರರೊಂದಿಗೆ ಚರ್ಚಿಸಿ ಸರ್ಕಾರದ ಗಮನಕ್ಕೆ ತಂದು ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ನೀಡಿದರು. ಪ್ರತಿಭಟನೆ ನಿಲ್ಲಿಸಲು ಒಪ್ಪದ ರೈತರು ಅಹೋರಾತ್ರಿ ಧರಣಿ ನಡೆಸಲು ನಿರ್ಧರಿಸಿ ಅಮಾನತು ಶಿಕ್ಷೆ ಕೊಡುವಂತೆ ಆಗ್ರಹಿಸಿದರು.

ಎಪಿಎಂಸಿ ಮಾಜಿ ಅಧ್ಯಕ್ಷ ಕಳ್ಳಿಪಾಳ್ಯ ಲೋಕೇಶ್, ಗ್ರಾಪಂ ಸದಸ್ಯ ರಮೇಶ್, ರೈತಸಂಘದ ಸಿ.ಜಿ.ಲೋಕೇಶ್, ಗುರುಚನ್ನಬಸಪ್ಪ, ಮುಖಂಡರಾದ ಮಹಾದೇವಯ್ಯ, ವಿನಯ್, ಸಂತೋಷ್ ಸೇರಿದಂತೆ ಅಮ್ಮನಘಟ್ಟ ಗ್ರಾಮಸ್ಥರು ಇದ್ದರು.


ಇದನ್ನೂ ಓದಿರಿ: ರೈತಸಂಘ ಇಳಿಮುಖವಾದ ಘಟ್ಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಒತ್ತುವರಿ ತೆರವು ಮಾಡುವಾಗ ಆ ಜಾಗದಲ್ಲಿರುವ ಬೆಳೆ, ಮರ, ಕಟ್ಟಡ ಮುಂತಾದವುಗಳನ್ನು ಕೆಡವಿ ಹಾಕದೇ ಸರ್ಕಾರದ ವಶಕ್ಕೆ ಪಡೆಯಬೇಕು. ಇವುಗಳಿಂದ ಬರುವ ಆದಾಯವನ್ನು ಮಂದಿ ಒಳಿತಿಗೆ ಬಳಸಬೇಕು.
    ‌ಈ ಬಗೆಗೆ ಸರ‌್ಕಾರ ತಕ್ಕ ಕಟ್ಟುಪಾಡು ಮಾಡಿ ಸುತ್ತೋಲೆ ಹೊರಡಿಸಬೇಕು.
    #SavePublicProperty

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...