Homeಕರ್ನಾಟಕಪ್ರತಿ ಲೀಟರ್‌ ಇಂಧನ ಬೆಲೆ 15 ರೂ. ಏರಿಕೆ ಸಾಧ್ಯತೆ: ತಜ್ಞರು

ಪ್ರತಿ ಲೀಟರ್‌ ಇಂಧನ ಬೆಲೆ 15 ರೂ. ಏರಿಕೆ ಸಾಧ್ಯತೆ: ತಜ್ಞರು

- Advertisement -
- Advertisement -

ನವ ದೆಹಲಿ: ಉತ್ತರ ಪ್ರದೇಶ ಸೇರಿದಂತೆ ಐದು ರಾಜ್ಯಗಳ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಸ್ಥಿರವಾಗಿದ್ದ ಇಂಧನ ಬೆಲೆಯು ಈಗ ಮತ್ತೆ ಏರಿಕೆಯಾಗುವ ಸಾಧ್ಯತೆ ಇದೆ.

ಚುನಾವಣೆ ಸಂದರ್ಭದಲ್ಲಿ ಅಂತಾರಾಷ್ಟ್ರೀಯ ಕಚ್ಚಾ ತೈಲ ಬೆಲೆ ಏರಿಳಿತವಾಗಿದ್ದು, ಅದನ್ನು ಸರಿದೂಗಿಸಲು ಮುಂದಿನ ದಿನಗಳಲ್ಲಿ ಕಂಪನಿಗಳು ಮುಂದಾಗಿರುವುದಾಗಿ ಎನ್‌ಡಿಟಿವಿ ವರದಿ ಮಾಡಿದೆ.

ಅಂತಾರಾಷ್ಟ್ರೀಯ ತೈಲ ಬೆಲೆಗಳು ಈ ವಾರದಲ್ಲಿ ಏರಿಕೆಯಾಗುವ ಸಾಧ್ಯತೆಯಿದೆ. ಪ್ರತಿ ಬ್ಯಾರೆಲ್‌ಗೆ 140 ಡಾಲರ್‌ ಆಗಲಿದೆ. ಹೀಗಾಗಿ ಪೆಟ್ರೋಲ್, ಡೀಸೆಲ್‌ ಬೆಲೆ ಪ್ರತಿ ಲೀಟರ್‌ಗೆ ₹ 15 ಹೆಚ್ಚಿಸಬೇಕಾಗಬಹುದು ಎಂದು ಉದ್ಯಮದ ಮೂಲಗಳು ತಿಳಿಸಿರುವುದಾಗಿ ವರದಿ ಹೇಳಿದೆ.

ಅಮೆರಿಕ ತೈಲ ಮಾನದಂಡವಾದ ವೆಸ್ಟ್ ಟೆಕ್ಸಾಸ್ ಇಂಟರ್ಮೀಡಿಯೇಟ್‌ನಲ್ಲಿ ಭಾನುವಾರ ಸಂಜೆ ಪ್ರತಿ ಬ್ಯಾರೆಲ್‌ಗೆ 130.50 ಡಾಲರ್‌‌ ಬೆಲೆ ಏರಿಕೆಯಾಯಿತು. ಜುಲೈ 2008ರಲ್ಲಾದ ಏರಿಕೆಯೇ ಇದುವರೆಗೆ ಅಧಿಕ ಎನ್ನಲಾಗಿತ್ತು. ಅಂತಾರಾಷ್ಟ್ರೀಯ ಮಾನದಂಡವಾದ ಬ್ರೆಂಟ್ ಕ್ರೂಡ್‌ನಲ್ಲಿ ಒಂದು ಬ್ಯಾರೆಲ್‌ ಇಂಧನ ಬೆಲೆ ರಾತ್ರೋರಾತ್ರಿ 139.13 ಡಾಲರ್‌ ಮುಟ್ಟಿತು. ಜುಲೈ 2008ರಲ್ಲಾದ ಏರಿಕೆಯ ಬಳಿಕ ಇದೇ ಮೊದಲ ಭಾರಿಗೆ ಅತಿ ಹೆಚ್ಚು ಏರಿಕೆ ಕಂಡಿದೆ ಎನ್ನಲಾಗಿದೆ.

ರೂಪಾಯಿ ಮೌಲ್ಯವೂ ಕುಸಿತ ಕಂಡಿದೆ. ರೂಪಾಯಿ ಮೌಲ್ಯ ಒಂದು ಡಾಲರ್‌ಗೆ 77.01 ರೂ. ಏರಿಕೆಯಾಗಿದೆ. ಭಾರತವು ತೈಲ ಅಗತ್ಯಗಳಿಗಾಗಿ ಶೇ. 85ರಷ್ಟು ವಿದೇಶಗಳನ್ನು ಅವಲಂಭಿಸಿದೆ. ಈಗಾಗಲೇ ಈ ವರ್ಷ ಶೇಕಡಾ 60ಕ್ಕಿಂತ ಹೆಚ್ಚು ಇಂಧನ ಬೆಲೆ ಏರಿಕೆಯಾಗಿದೆ. ಮುಂದಿನ ದಿನಗಳಲ್ಲಿ ಹಣದುಬ್ಬರ ತಲೆದೋರಬಹುದು. ಆರ್ಥಿಕತೆ ಮತ್ತಷ್ಟು ಸಂಕಷ್ಟಕ್ಕೆ ಈಡಾಗಬಹುದು ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ತೈಲ ಸಚಿವಾಲಯದ ಪೆಟ್ರೋಲಿಯಂ ಯೋಜನೆ ಮತ್ತು ವಿಶ್ಲೇಷಣಾ ಕೋಶದ (ಪಿಪಿಎಸಿ) ಮಾಹಿತಿಯ ಪ್ರಕಾರ ಭಾರತವು ಖರೀದಿಸುವ ಕಚ್ಚಾ ತೈಲದ ಬೆಲೆಯು ಮಾರ್ಚ್ 1 ರಂದು ಪ್ರತಿ ಬ್ಯಾರೆಲ್‌ಗೆ 111 ಡಾಲರ್‌ಕ್ಕಿಂತ ಹೆಚ್ಚಿತ್ತು.

“ಸೋಮವಾರದಂದು ಕೊನೆಯ ಹಂತದ ಮತದಾನ ಮುಕ್ತಾಯವಾಗಿದ್ದು, ಇಂಧನ ಬೆಲೆ ಪರಿಷ್ಕರಣೆಗೆ ಸರ್ಕಾರ ಮುಂದಾಗುವ ನಿರೀಕ್ಷೆ ಇದೆ” ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.


ಇದನ್ನೂ ಓದಿರಿ: Poll of Exit polls 2022: ಉತ್ತರ ಪ್ರದೇಶದಲ್ಲಿ ಬಿಜೆಪಿ, ಪಂಜಾಬ್‌ನಲ್ಲಿ ಆಪ್ ಅಧಿಕ್ಕಾರಕ್ಕೇರುವ ಸಾಧ್ಯತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...