Homeಅಂತರಾಷ್ಟ್ರೀಯಭಾರತೀಯ ವಿದ್ಯಾರ್ಥಿಗಳ ಆತಂಕದ ನಡುವೆ ಸ್ಥಳಾಂತರಕ್ಕಾಗಿ ‘ಮಾನವೀಯ ಕಾರಿಡಾರ್‌’ಗಳನ್ನು ತೆರೆಯಲಿರುವ ರಷ್ಯಾ

ಭಾರತೀಯ ವಿದ್ಯಾರ್ಥಿಗಳ ಆತಂಕದ ನಡುವೆ ಸ್ಥಳಾಂತರಕ್ಕಾಗಿ ‘ಮಾನವೀಯ ಕಾರಿಡಾರ್‌’ಗಳನ್ನು ತೆರೆಯಲಿರುವ ರಷ್ಯಾ

- Advertisement -
- Advertisement -

‘ಮಾನವೀಯ ಕಾರ್ಯಾಚರಣೆ’ ನಡೆಸಲು ಭಾರತೀಯ ಕಾಲಮಾನ ಮಧ್ಯಾಹ್ನ 12:30ರ ಮಂಗಳವಾರದಂದು ರಷ್ಯಾ ಕದನ ವಿರಾಮ ಘೋಷಿಸಿದೆ. ಭಾರತದಲ್ಲಿನ ರಷ್ಯಾದ ರಾಯಭಾರ ಕಚೇರಿಯು ‘ಮಾನವೀಯ ಕಾರಿಡಾರ್’ಪಟ್ಟಿಯನ್ನು ಬಿಡುಗಡೆ ಮಾಡಿದ್ದು ಅದನ್ನು ಒದಗಿಸಲು ಸಿದ್ಧವಾಗಿದೆ. ಇದು ಈಶಾನ್ಯ ಉಕ್ರೇನ್‌ನ ಸುಮಿ ನಗರದ ಕಾರಿಡಾರ್‌ಗಳನ್ನು ಒಳಗೊಂಡಿದೆ. ಅಲ್ಲಿ ಸುಮಾರು 600 ಭಾರತೀಯ ವಿದ್ಯಾರ್ಥಿಗಳು ಸಿಕ್ಕಿಹಾಕಿಕೊಂಡಿದ್ದು, ಹಲವು ಪ್ರಯತ್ನಗಳ ಹೊರತಾಗಿಯೂ ಅವರಿಗೆ ಅಲ್ಲಿಂದ ಹೊರಹೋಗಲು ಸಾಧ್ಯವಾಗಿರಲಿಲ್ಲ.

ಸೋಮವಾರ ನಡೆದ ಉಕ್ರೇನ್ ಕುರಿತ ವಿಶ್ವಸಂಸ್ಥೆಯ ಭದ್ರತಾ ಮಂಡಳಿ ಸಭೆಯಲ್ಲಿ ಭಾರತ ಈ ವಿಷಯವನ್ನು ಪ್ರಸ್ತಾಪಿಸಿತ್ತು. ವಿಶ್ವಸಂಸ್ಥೆಯಲ್ಲಿ ಭಾರತದ ಖಾಯಂ ಪ್ರತಿನಿಧಿಯಾಗಿರುವ ರಾಯಭಾರಿ ಟಿ.ಎಸ್. ತಿರುಮೂರ್ತಿ, “ರಷ್ಯಾ ಮತ್ತು ಉಕ್ರೇನ್ ಎರಡಕ್ಕೂ ನಮ್ಮ ಹಲವು ಒತ್ತಾಯದ ಹೊರತಾಗಿಯೂ, ಸುಮಿಯಲ್ಲಿ ಸಿಲುಕಿರುವ ಭಾರತೀಯ ವಿದ್ಯಾರ್ಥಿಗಳಿಗೆ ಸುರಕ್ಷಿತ ಕಾರಿಡಾರ್ ಕಾರ್ಯರೂಪಕ್ಕೆ ಬರಲಿಲ್ಲ ಎಂಬುವುದು ತೀವ್ರ ಕಳವಳಕಾರಿಯಾಗಿದೆ” ಎಂದು ಹೇಳಿದ್ದರು.

ಇದನ್ನೂ ಓದಿ: ಉಕ್ರೇನ್: ರಕ್ಷಣೆಯಲ್ಲೂ ದಕ್ಷಿಣ ಭಾರತದವರಿಗೆ ತಾರತಮ್ಯ, ವಿದ್ಯಾರ್ಥಿಗಳ ಆರೋಪ

“ಮಾರ್ಚ್ 8, 2022 ರಂದು ಭಾರತೀಯ ಕಾಲಮಾನ 12.30 ನಿಂದ ಮಾನವೀಯ ಕಾರ್ಯಾಚರಣೆಯನ್ನು ನಡೆಸಲು, ರಷ್ಯಾ ಕದನ ವಿರಾಮವನ್ನು ಘೋಷಿಸುತ್ತದೆ. ಜೊತೆಗೆ ಮಾನವೀಯ ಕಾರಿಡಾರ್‌ಗಳನ್ನು ಒದಗಿಸಲು ಸಿದ್ಧವಾಗಿದೆ” ಎಂದು ಭಾರತದಲ್ಲಿನ ರಷ್ಯಾದ ರಾಯಭಾರ ಕಚೇರಿ ಇಂದು ಬೆಳೆಗ್ಗೆ ಟ್ವೀಟ್ ಮಾಡಿದೆ.

ರಷ್ಯಾವು ಸುಮಿಯಿಂದ ಪೋಲ್ಟವಾಗೆ ಎರಡು ಮಾರ್ಗಗಳ ಮೂಲಕ ಮಾನವೀಯ ಕಾರಿಡಾರ್‌ಗಳನ್ನು ಘೋಷಿಸಿದೆ. ವಿಶ್ವಸಂಸ್ಥೆಯು ಮಾನವೀಯ ಕಾರಿಡಾರ್‌ಗಳನ್ನು ಸಶಸ್ತ್ರ ಸಂಘರ್ಷದ ತಾತ್ಕಾಲಿಕ ವಿರಾಮದ ಪ್ರಮುಖ ರೂಪಗಳಲ್ಲಿ ಒಂದಾಗಿದೆ ಎಂದು ಪರಿಗಣಿಸುತ್ತದೆ.

ಉಭಯ ದೇಶಗಳೂ ಕಾರಿಡಾರ್‌ಗಳನ್ನು ಸ್ಥಾಪಿಸುವಲ್ಲಿ ವಿಫಲರಾಗಿದ್ದಾರೆ ಎಂದು ಪರಸ್ಪರ ಆರೋಪಿಸಿದ್ದಾರೆ. ಶನಿವಾರ ಉಕ್ರೇನಿಯನ್ ಪಡೆಗಳು ಜನರು ಮಾರಿಯುಪೋಲ್ ನಗರವನ್ನು ತೊರೆಯದಂತೆ ತಡೆದಿದ್ದಾರೆ ಎಂದು ರಷ್ಯಾ ಹೇಳಿಕೊಂಡರೆ, ಉಕ್ರೇನಿಯನ್ ಅಧಿಕಾರಿಗಳು ರಷ್ಯಾದ ಪಡೆಗಳು ಒಪ್ಪಿಕೊಂಡ ಕದನ ವಿರಾಮವನ್ನು ಉಲ್ಲಂಘಿಸಿದೆ ಎಂದು ದೂಷಿಸಿದೆ.

ಇದನ್ನೂ ಓದಿ: ಉಕ್ರೇನ್‌ನಿಂದ ಬಂದಿರುವ ವೈದ್ಯ ವಿದ್ಯಾರ್ಥಿಗಳ ಭವಿಷ್ಯವೇನು?: ಎಚ್.ಡಿ. ಕುಮಾರಸ್ವಾಮಿ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...