Homeಮುಖಪುಟಎಕ್ಸಿಟ್‌ ಪೋಲ್‌‌ ಉಲ್ಟಾ ಹೊಡೆದ ಪ್ರಸಂಗಗಳು

ಎಕ್ಸಿಟ್‌ ಪೋಲ್‌‌ ಉಲ್ಟಾ ಹೊಡೆದ ಪ್ರಸಂಗಗಳು

- Advertisement -
- Advertisement -

ಚುನಾವಣೋತ್ತರ ಅಥವಾ ಮತಗಟ್ಟೆ (exit poll) ಸಮೀಕ್ಷೆಗಳು ಯಾವಾಗಲೂ ಚರ್ಚೆಯ ವಿಷಯವಾಗಿ ತೋರುತ್ತಿವೆ. ಚುನಾವಣೆ ಮುಗಿದ ಬಳಿಕ ಬರುವ ಮತಗಟ್ಟೆ ಸಮೀಕ್ಷೆ ಕೆಲವೊಮ್ಮೆ ಸರಿಯಾಗಿಯೂ ಕೆಲವೊಮ್ಮೆ ತಪ್ಪಾಗಿಯೂ ಇರುವ ನಿದರ್ಶನಗಳಿವೆ.

ಮತಗಟ್ಟೆ ಸಮೀಕ್ಷೆಗಳು ಪ್ರಕಟವಾದಾಗ ಸಾಮಾನ್ಯವಾಗಿ ಕೆಲವರಿಗೆ ಆತಂಕ, ಕೆಲವರಿಗೆ ಖುಷಿಯಾಗುತ್ತದೆ. ಆದರೆ ಎಕ್ಸಿಟ್ ಪೋಲ್‌ನ ಇತಿಹಾಸವನ್ನು ಕೆದಕಿದರೆ, ನಿಜವಾದ ಫಲಿತಾಂಶ ಬರುವವರೆಗೂ ಮತದಾರರು ಸಮಾಧಾನದಿಂದ ಇರುವುದು ಸೂಕ್ತ.

ಈಗ ಪಂಚರಾಜ್ಯ ಚುನಾವಣೆಯ ಮತಗಟ್ಟೆ ಸಮೀಕ್ಷೆ ಬಂದಿದ್ದು, ಎಲ್ಲರ ಕೇಂದ್ರ ಬಿಂದುವಾಗಿರುವ ಉತ್ತರ ಪ್ರದೇಶದಲ್ಲಿ ಬಿಜೆಪಿ ಮೇಲುಗೈ ಸಾಧಿಸಲಿದೆ ಎನ್ನಲಾಗುತ್ತಿದೆ. ಪಂಜಾಬ್‌ನಲ್ಲಿ ಆಮ್‌ ಆದ್ಮಿ ಪಕ್ಷ ಅಧಿಕಾರಕ್ಕೆ ಬರುವುದಾಗಿ ಸಮೀಕ್ಷೆಗಳು ಹೇಳಿವೆ. ಗೋವಾ ಫಲಿತಾಂಶ ಅತಂತ್ರವಾಗಿ ಬರುತ್ತದೆ ಎನ್ನಲಾಗುತ್ತಿದೆ. ಆದರೆ ಮಣಿಪುರ, ಉತ್ತರಖಾಂಡ್‌ನಲ್ಲಿ ಬಿಜೆಪಿ ಅಧಿಕಾರ ಹಿಡಿಯಲಿದೆ ಎನ್ನಲಾಗುತ್ತಿದೆ.

ಇಂಡಿಯಾ ಟುಡೇ-ಆಕ್ಸಿಸ್ ಮೈ ಇಂಡಿಯಾ, ಎಬಿಪಿ ನ್ಯೂಸ್-ಸಿವೋಟರ್, ನ್ಯೂಸ್24- ಟುಡೇ ಚಾಣಕ್ಯ, ಟೈಮ್ಸ್ ನೌ-ವೆಟೊ, ರಿಪಬ್ಲಿಕ್-ಪಿ ಮಾರ್ಕ್ ಸಂಸ್ಥೆಗಳು ಮತಗಟ್ಟೆ ಸಮೀಕ್ಷೆ ನಡೆಸಿವೆ.

ಮತಗಟ್ಟೆ ಸಮೀಕ್ಷೆ ಸುಳ್ಳಾದ ಚುನಾವಣೆಗಳು

ಎಕ್ಸಿಟ್ ಪೋಲ್‌ಗಳು ಸುಳ್ಳಾದ ಉದಾಹರಣೆಗಳನ್ನು ದೇಶದ ಜನರು ನೋಡಿದ್ದಾರೆ. 2004ರಲ್ಲಿ ಮತಗಟ್ಟೆ ಸಮೀಕ್ಷೆಯ ವೈಫಲ್ಯ ಹೆಚ್ಚು ಚರ್ಚೆಯಾಗಿತ್ತು. ಆ ಸಮಯದಲ್ಲಿ, ಹೆಚ್ಚಿನ ಎಕ್ಸಿಟ್ ಪೋಲ್‌ಗಳು ಅಟಲ್ ಬಿಹಾರಿ ವಾಜಪೇಯಿ ನೇತೃತ್ವದ ಎನ್‌ಡಿಎ ಸರ್ಕಾರವು ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಊಹಿಸಲಾಗಿತ್ತು. ಆದರೆ ಫಲಿತಾಂಶ ಸಂಪೂರ್ಣವಾಗಿ ಉಲ್ಟಾ ಹೊಡೆದಿತ್ತು. ಎನ್‌ಡಿಎ ಮೈತ್ರಿ ಕೂಟವು 189 ಸ್ಥಾನಗಳನ್ನು ಪಡೆದುಕೊಂಡಿತು. ಕಾಂಗ್ರೆಸ್ ನೇತೃತ್ವದ ಯುಪಿಎ 222 ಸ್ಥಾನಗಳನ್ನು ಗೆದ್ದು, ಡಾ.ಮನಮೋಹನ್ ಸಿಂಗ್ ಪ್ರಧಾನಿಯಾದರು.

2009ರ ಚುನಾವಣೆಯಲ್ಲೂ ಎಕ್ಸಿಟ್ ಪೋಲ್ ಸುಳ್ಳಾಗಿದ್ದವು. ಬಹುತೇಕ ಮತಗಟ್ಟೆ ಸಮೀಕ್ಷೆಗಳು ಎನ್‌ಡಿಎಗಿಂತ ಯುಪಿಎ ಮೇಲುಗೈ ಸಾಧಿಸಲಿದೆ ಎಂದು ಹೇಳಲಾಗಿತ್ತಾದರೂ ಕಾಂಗ್ರೆಸ್ ಮಾತ್ರ 200ರ ಗಡಿ ದಾಟುತ್ತದೆ ಎಂದು ಯಾರೂ ಭವಿಷ್ಯ ನುಡಿದಿರಲಿಲ್ಲ. ಫಲಿತಾಂಶ ಪ್ರಕಟವಾದಾಗ ಕಾಂಗ್ರೆಸ್ ಪಕ್ಷ 206 ಸ್ಥಾನಗಳನ್ನು ಗೆದ್ದರೆ, ಯುಪಿಎ 262 ಸ್ಥಾನಗಳನ್ನು ಗಳಿಸಿತ್ತು.

2015ರ ಬಿಹಾರ ಅಸೆಂಬ್ಲಿ ಚುನಾವಣೆಯ ಫಲಿತಾಂಶವನ್ನು ಅಂದಾಜು ಮಾಡುವಲ್ಲಿ ಮತಗಟ್ಟೆ ಸಮೀಕ್ಷೆಗಳು ವಿಫಲವಾಗಿದ್ದವು. ಎಲ್ಲಾ ಎಕ್ಸಿಟ್ ಪೋಲ್‌ಗಳಲ್ಲಿ ಬಿಜೆಪಿ ಮತ್ತು ಮಿತ್ರಪಕ್ಷಗಳ ಕುರಿತು ಸಕಾರಾತ್ಮಕ ಪ್ರತಿಕ್ರಿಯೆ ಬಂದಿತ್ತು. ಜೆಡಿಯು- ಆರ್‌ಜೆಡಿ ಗೆಲ್ಲುವುದಾಗಿ ಹೇಳಿದ್ದರೂ ಎನ್‌ಡಿಎ ಮೈತ್ರಿ ಕೂಟಕ್ಕೆ 100 ಸ್ಥಾನಗಳಿಗಿಂತ ಹೆಚ್ಚು ಸ್ಥಾನಗಳು ಬರುವುದಾಗಿ ಸಮೀಕ್ಷೆಗಳು ಹೇಳಿದ್ದವು. ಆದರೆ ವಾಸ್ತವದಲ್ಲಿ ಬಿಜೆಪಿ ಮೈತ್ರಿ ಕೂಟ 58 ಸ್ಥಾನಗಳಿಗೆ ಕುಸಿದಿದ್ದರೆ, ಜೆಡಿಯು-ಆರ್‌ಜೆಡಿ ಮೈತ್ರಿಕೂಟ 178 ಸ್ಥಾನಗಳನ್ನು ಗೆದ್ದಿತ್ತು.

2021 ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆಯಲ್ಲಿ ಇಂಡಿಯಾ ಟುಡೇ ಸೇರಿದಂತೆ ಬಹುತೇಕರ ಸಮೀಕ್ಷೆಗಳು ಸುಳ್ಳಾಗಿತ್ತು. ಪೋಲ್ ಆಫ್ ಪೋಲ್‌, ಟೈಮ್ಸ್‌ನೌ-ಸಿವೋಟರ್‌, ಪಿ-ಮಾರ್ಕ್‌, ಇಟಿಜಿ ರೀಸರ್ಚ್‌, ಇಪ್‌ಸೋಸ್‌, ಪೊಲ್‌ಸ್ಟಾಟ್, ಎಬಿಪಿ-ಸಿವೊಟರ್‌ ಸಮೀಕ್ಷೆಗಳು ಸರಳ ಬಹುಮತ ಟಿಎಂಸಿ ಪಡೆಯಲಿದೆ ಮತ್ತು ಬಿಜೆಪಿಗೆ ಭಾರಿ ಲಾಭ ಮಾಡಿಕೊಳ್ಳುತ್ತದೆ ಎಂದು ಹೇಳಿತ್ತು. ಆದರೆ ಈ ಚುನಾವಣೆಯಲ್ಲಿ ಟಿಎಂಸಿ 214 ಸ್ಥಾನಗಳೊಂದಿಗೆ ಭಾರಿ ಬಹುಮತದೊಂದಿಗೆ ಅಧಿಕಾರಕ್ಕೆ ಏರಿತ್ತು, ಆದರೆ ಬಿಜೆಪಿ ಕನಿಷ್ಠ ಪಕ್ಷ ನೂರರ ಗಡಿಯನ್ನು ದಾಟದೆ, 76 ಸ್ಥಾನಗಳಿಗೆ ಸಂತೃಪ್ತಿಗೊಂಡಿತ್ತು.

ವಿಶೇಷವೇನೆಂದರೆ, ಪಶ್ಚಿಮ ಬಂಗಾಳದ ಚುನಾವಣೆಯಲ್ಲಿ, ಇಂಡಿಯಾ ಟುಡೆ-ಆಕ್ಸಿಸ್‌ ಮೈ ಇಂಡಿಯಾ ಸಮೀಕ್ಷೆಯು 147 ಸ್ಥಾನಗಳೊಂದಿಗೆ ಬಿಜೆಪಿ ಸರಳ ಬಹುಮತ ಗಳಿಸಿ ಅಧಿಕಾರ ಹಿಡಿಯಲಿದೆ ಎಂದು ಹೇಳಿತ್ತು. ಜೊತೆಗೆ ರಿಪಬ್ಲಿಕ್‌-ಸಿಎನ್‌ಎಕ್ಸ್‌ ಕೂಡಾ ಬಿಜೆಪಿ ಅತೀ ದೊಡ್ಡ ಪಕ್ಷವಾಗಿ ಹೊರಹೊಮ್ಮಲಿದೆ ಎಂದು ಹೇಳಿತ್ತು. ಜನ್‌ಕಿ ಬಾತ್‌ ಸಮೀಕ್ಷೆ ಬಿಜೆಪಿಗೆ 174 ಕ್ಷೇತ್ರಗಳು ಸಿಗಲಿವೆ ಎಂದು ಹೇಳಿತ್ತು. ಇಂಡಿಯಾ ಟಿವಿ 192 ಸ್ಥಾನಗಳು ಬಿಜೆಪಿಗೆ ದಕ್ಕಲಿವೆ ಎಂದಿತ್ತು. ಆದರೆ ಫಲಿತಾಂಶ ಬಂದಾಗ ಎಲ್ಲಾ ಲೆಕ್ಕಾಚಾರಗಳು ತಲೆಕೆಳಗಾಗಿ, TMC ಗೆ 214,
BJPಗೆ 76 ಮತ್ತು ಕಾಂಗ್ರೆಸ್-ಎಡ ಪಕ್ಷ-ಇತರೆ ಸೇರಿ 3 ಸ್ಥಾನಗಳು ದಕ್ಕಿತ್ತು.

ಸಮೀಕ್ಷೆ ನಿಜವಾದ ಚುನಾವಣೆಗಳು

ಎಕ್ಸಿಟ್‌ ಪೋಲ್ ಸರಿಯಾದ ಸಂದರ್ಭಗಳು ಸಾಕಷ್ಟಿವೆ. 1996ರ ಲೋಕಸಭಾ ಚುನಾವಣೆಯಲ್ಲಿ, ಸಿಎಸ್‌ಡಿಎಸ್‌‌ನ ಮತಗಟ್ಟೆ ಸಮೀಕ್ಷೆಯು ಸರಿಯಾದ ಅಂದಾಜನ್ನು ಮಾಡಿತ್ತು.

ಚುನಾವಣೆಯಲ್ಲಿ ಬಿಜೆಪಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿತ್ತು. ಯಾರಿಗೂ ಬಹುಮತ ದೊರೆತಿರಲಿಲ್ಲ. ಅಟಲ್ ಬಿಹಾರಿ ವಾಜಪೇಯಿ ಅವರು ಆ ಸಮಯದಲ್ಲಿ ಸರ್ಕಾರವನ್ನು ರಚಿಸಿದರು. ಆದರೆ ಅವರ ಸರ್ಕಾರವು 13 ದಿನಗಳಲ್ಲಿ ಪತನವಾಯಿತು.

ಅದೇ ರೀತಿ 1998ರ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಬಹುತೇಕ ಎಕ್ಸಿಟ್ ಪೋಲ್‌ಗಳ ಫಲಿತಾಂಶ ಸರಿಯಾಗಿತ್ತು. ಬಿಜೆಪಿ ಹಾಗೂ ಮಿತ್ರ ಪಕ್ಷಗಳು 200ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುತ್ತವೆ; ಕಾಂಗ್ರೆಸ್ ಹಾಗೂ ಮಿತ್ರ ಪಕ್ಷಗಳು 200ಕ್ಕಿಂತ ಕಡಿಮೆ ಸ್ಥಾನಗಳನ್ನು ಗೆಲ್ಲಲಿವೆ ಎಂದು ಅಂದಾಜಿಸಲಾಗಿತ್ತು. ಫಲಿತಾಂಶ ಬಂದಾಗ, ಬಿಜೆಪಿ ಹಾಗೂ ಮಿತ್ರ ಪಕ್ಷಗಳು 252, ಕಾಂಗ್ರೆಸ್ ಹಾಗೂ ಮಿತ್ರ ಪಕ್ಷಗಳು 166, ಮತ್ತು ಇತರ ಪಕ್ಷಗಳು 119 ಸ್ಥಾನಗಳನ್ನು ಗೆದ್ದಿದ್ದವು.

2014ರ ಲೋಕಸಭಾ ಚುನಾವಣೆಯ ಸಮಯದಲ್ಲಿ ಎಕ್ಸಿಟ್ ಪೋಲ್‌‌ ನಿಖರವಾಗಿತ್ತು. ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರ ಅಧಿಕಾರ ಹಿಡಿಯಲಿದೆ ಎನ್ನಲಾಗಿತ್ತು. ಫಲಿತಾಂಶ ಬಂದಾಗ, ಬಿಜೆಪಿ ಸ್ವಂತ ಬಲದಿಂದ ಬಹುಮತ ಗಳಿಸಿತ್ತು. ಎನ್‌ಡಿಎ 336 ಸ್ಥಾನಗಳನ್ನು ಗಳಿಸಿತು. ಕಾಂಗ್ರೆಸ್ ಪಕ್ಷ 44 ಸ್ಥಾನಗಳಿಗೆ ಕುಸಿದಿತ್ತು.


ಇದನ್ನೂ ಓದಿರಿ: Poll of Exit polls 2022: ಉತ್ತರ ಪ್ರದೇಶದಲ್ಲಿ ಬಿಜೆಪಿ, ಪಂಜಾಬ್‌ನಲ್ಲಿ ಆಪ್ ಅಧಿಕ್ಕಾರಕ್ಕೇರುವ ಸಾಧ್ಯತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...