Homeಕರ್ನಾಟಕಲಾಯರ್‌ ಜಗದೀಶ್‌ ಬಿಡುಗಡೆ; ಫೇಸ್‌ಬುಕ್‌ ಲೈವ್‌ ಮೂಲಕ ಜೈಲ್‌ ಡೈರಿ ರಿವೀಲ್‌

ಲಾಯರ್‌ ಜಗದೀಶ್‌ ಬಿಡುಗಡೆ; ಫೇಸ್‌ಬುಕ್‌ ಲೈವ್‌ ಮೂಲಕ ಜೈಲ್‌ ಡೈರಿ ರಿವೀಲ್‌

- Advertisement -
- Advertisement -

ಭ್ರಷ್ಟಾಚಾರ ವಿರೋಧಿ ಹೋರಾಟಗಾರ, ಲಾಯರ್‌ ಕೆ.ಎಂ.ಜಗದೀಶ್‌ ಜಾಮೀನಿನ ಮೇಲೆ ಮಂಗಳವಾರ ಸಂಜೆ ಬಿಡುಗಡೆಯಾಗಿದ್ದು, ಫೇಸ್‌ಬುಕ್‌ ಲೈವ್‌ ಮೂಲಕ ತಮ್ಮ ಜೈಲಿನ ಅನುಭವಗಳನ್ನು ಹಂಚಿಕೊಂಡಿದ್ದಾರೆ.

ಫೇಸ್‌ಬುಕ್ ಖಾತೆ ಲಾಕ್‌ ಆಗಿರುವ ಕಾರಣ ತಮ್ಮ ಸ್ನೇಹಿತೆ ಪ್ರಶಾಂತಿ ಸುಭಾಷ್ ಅವರ ಫೇಸ್‌ಬುಕ್‌‌ ಖಾತೆಯ ಮೂಲಕ ಲೈವ್ ಬಂದಿದ್ದ ಅವರು, ಬಹಳ ಖುಷಿ ಹಾಗೂ ಲವಲವಿಕೆಯಿಂದ ಮಾತನಾಡಿದರು.

“ಕಳೆದ 24 ದಿನಗಳ ಹಿಂದೆ ಒಂದು ಕೇಸ್‌ನಲ್ಲಿ ಬಂಧಿಸಿ, ಪರಪ್ಪನ ಅಗ್ರಹಾರದ ಜೈಲಿಗೆ ಕಳುಹಿಸಿದ್ದರು. ಇಂದು ರಿಲೀಸ್ ಆಗಿದ್ದೀನಿ. ನನಗಾಗಿ ಸಾಕಷ್ಟು ಹೃದಯಗಳು ಸ್ಪಂದಿಸಿವೆ. ಭ್ರಷ್ಟಾಚಾರದ ವಿರುದ್ಧ ಹೋರಾಟ ಮುಂದುವರಿಯಲಿದೆ. ಸಣ್ಣಪುಟ್ಟ ತಪ್ಪುಗಳಿಂದ ಅದು ಹಳಿ ತಪ್ಪಿತ್ತು. ಮತ್ತೆ ಟ್ರಾಕ್‌ಗೆ ಬಂದಿದೆ. ಎಲ್ಲ ನೈತಿಕತೆಯನ್ನು ಗಮನದಲ್ಲಿಟ್ಟುಕೊಂಡು ಹೋರಾಟ ಮುಂದುವರಿಸುವೆ” ಎಂದು ಗುಡುಗಿದ್ದಾರೆ.

“ನನಗಾಗಿ ಸಾಕಷ್ಟು ಜನರು ಹೋರಾಟ ಮಾಡಿದ್ದಾರೆ. ವಿಧಾನಸೌಧದ ಮುಂದೆ ಪ್ರತಿಭಟನೆ ನಡೆಸಿದ್ದಾರೆ. ಜೈಲಿಗೆ ಪತ್ರಿಕೆ ಬರುತ್ತಿತ್ತು, ಅದನ್ನು ಓದಿ ಇದನ್ನೆಲ್ಲ ತಿಳಿದುಕೊಳ್ಳುತ್ತಿದೆ. ಜೈಲು ನಿಜಕ್ಕೂ ವಂಡರ್‌ಫುಲ್‌. ಇದನ್ನು ಜೈಲು ಅನ್ನುವುದಕ್ಕಿಂತ ಮನಪರಿವರ್ತನೆಯ ಸ್ಥಳ ಎಂದು ಕರೆದಿದ್ದಾರೆ. ಬಹುಶಃ ನಾನು ಕೂಡ ನನ್ನಲ್ಲಿ ಸಾಕಷ್ಟು ಬದಲಾವಣೆಗಳನ್ನು ಮಾಡಿಕೊಂಡಿದ್ದೇನೆ” ಎಂದಿದ್ದಾರೆ.

“ಜೈಲಿನ ಸಿಬ್ಬಂದಿ ನಿಜಕ್ಕೂ ಅದ್ಭುತ. ಜೈಲಿನ ಬಗ್ಗೆ ಸಾಕಷ್ಟು ಜನ ಕೆಟ್ಟದ್ದಾಗಿ ಮಾತನಾಡುತ್ತಾರೆ. ಆದರೆ ನಾನು ಹೇಳುತ್ತೇನೆ: ಜೈಲಿನಲ್ಲಿ ತುಂಬಾ ಒಳ್ಳೆಯ ವಾತಾವರಣ ಇದೆ. ಗಾರ್ಡ್‌ಗಳಾಗಿ ನೇಮಕವಾಗಿರುವ ಯುವಕರು ನಿಜಕ್ಕೂ ಅದ್ಭುತ. ಜೈಲರ್‌ಗಳೆಲ್ಲ ನಿಜಕ್ಕೂ ನನ್ನ ಪಾಲಿಗೆ ಜಂಟಲ್‌ಮನ್‌ಗಳು. ಜೈಲೆಂದು ಯಾವತ್ತೂ ನನಗೆ ಫೀಲ್ ಆಗಿಲ್ಲ. ನನ್ನನ್ನು ನೋಡಿಕೊಂಡ ಡಾಕ್ಟರ್‌ಗಳಿಗೆ ತುಂಬಾ ಧನ್ಯವಾದ” ಎಂದು ತಿಳಿಸಿದ್ದಾರೆ.

“ಜೈಲು ಸಿಬ್ಬಂದಿ ಬಹುತೇಕ ಇಂಜಿನಿಯರ್‌ಗಳೆಂದು ಕೇಳಿ ನನ್ನ ಹೃದಯ ಒಡೆದುಹೋಯಿತು. ಸುಮಾರು ಒಂದು ಸಾವಿರ ಜನ ನೇಮಕವಾಗಿದ್ದಾರೆ. ಅದರಲ್ಲಿ ಏಳನೂರು ಜನ ಇಂಜಿನಿಯರ್‌ಗಳಿದ್ದಾರೆ. ಪಿಎಚ್‌ಡಿ ಪಡೆದವರು ಇದ್ದಾರೆ. ಮೇಷ್ಟ್ರಾದವರು ಇದ್ದಾರೆ. ಬೇಜಾರಾದ ಸಂಗತಿ ಏನೆಂದರೆ ಕೇವಲ ಹತ್ತನೇ ತರಗತಿ ವಿದ್ಯಾರ್ಹತೆ ಬೇಕಾದ ಗಾರ್ಡ್ ಕೆಲಸಕ್ಕೆ ಇಂಜಿನಿಯರ್‌ಗಳು ಬಂದಿದ್ದಾರೆ. ತುಂಬಾ ನೋವಾಗುತ್ತದೆ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

“ಇಪ್ಪತ್ತು ನಾಲ್ಕು ದಿನಗಳು ಹೇಗೆ ಕಳೆದವು ಎಂಬುದೇ ಗೊತ್ತಾಗಲಿಲ್ಲ. ನನ್ನ ಫೇಸ್‌ಬುಕ್ ಲೈವ್ ಮಿಸ್‌ ಮಾಡಿಕೊಂಡೆ… ಕೆಲವು ದಿನಗಳಲ್ಲಿ  ಬ್ಲಾಕ್ ಆಗಿರುವ ಫೇಸ್‌ಬುಕ್ ಖಾತೆ ಓಪನ್‌ ಮಾಡಿಸುತ್ತೇನೆ” ಎಂದು ಹೇಳಿದ ಅವರು, ತಮಗಾಗಿ ಹೋರಾಟ ಮಾಡಿದವರನ್ನು ಮನಪೂರ್ವಕವಾಗಿ ನೆನೆದು ಧನ್ಯವಾದ ತಿಳಿಸಿದ್ದಾರೆ.

“ಈ ಹೋರಾಟ ಎಂದ ಮೇಲೆ ಇವೆಲ್ಲ ಸಾಮಾನ್ಯ. ತಾಳ್ಮೆಯನ್ನು ಕಳೆದುಕೊಂಡೆ ಅನಿಸುತ್ತೆ. ಒಬ್ಬ ತಂದೆಯಾಗಿ ಹೀಗೆ ವರ್ತಿಸಿದ್ದು ಸರಿ. ಆದರೆ ಒಬ್ಬ ವಕೀಲನಾಗಿ ನಾನು ಹೀಗೆ ನಡೆದುಕೊಳ್ಳಬಾರದಿತ್ತು” ಎಂದು ತಮ್ಮ ತಪ್ಪನ್ನು ಒಪ್ಪಿಕೊಂಡಿದ್ದಾರೆ.

“ಜೈಲಿನಲ್ಲಿ ನಾನು ಸಹ ಒಂದು ಒಳ್ಳೆಯ ಕೆಲಸವನ್ನು ಮಾಡಿಕೊಂಡು ಬಂದಿದ್ದೇನೆ. ಅದನ್ನು ಸಮಯ ಬಂದಾಗ ತಿಳಿಸುತ್ತೇನೆ. ಈಗ ಹೇಳಿದರೆ ವಿರೋಧಿಗಳು ಅಲರ್ಟ್ ಆಗಿಬಿಡುತ್ತಾರೆ. ಇನ್ನ ಮೇಲೆ ಮುಚ್ಚಿಡುವ ಕೆಲಸಗಳನ್ನು ಮಾಡಬೇಕಾಗುತ್ತದೆ” ಎಂದಿದ್ದಾರೆ.

ಏನಿದು ಪ್ರಕರಣ?

ಕೊಲೆ ಯತ್ನ ಪ್ರಕರಣ ಆರೋಪಿಸಿ ಜಗದೀಶ್‌ ಅವರನ್ನು ಬಂಧಿಸಲಾಗಿತ್ತು. ಬೆಂಗಳೂರಿನ ಸಿಟಿ ಸಿವಿಲ್‌ ಮತ್ತು ಸೆಷನ್ಸ್‌ ನ್ಯಾಯಾಲಯದ ಆವರಣದಲ್ಲಿ ಈಚೆಗೆ ನಡೆದ ಜಗಳಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿತ್ತು.

ವಕೀಲರಾದ ಕೆ.ಎನ್.ಜಗದೀಶ್‌ ವಕೀಲರನ್ನು ಅವ್ಯಾಚ್ಯ ಪದಗಳಿಂದ ನಿಂದಿಸಿ ವೃತ್ತಿಗೆ ಚ್ಯುತಿ ತಂದಿದ್ದಾರೆ. ನ್ಯಾಯಾಲಯ ಆವರಣದಲ್ಲಿ ಅಶಾಂತಿ ಉಂಟು ಮಾಡಿದ್ದಾರೆ, ಕೊಲೆಗೆ ಯತ್ನಿಸಿದ್ದಾರೆ ಎಂದು ಆರೋಪಿಸಿ ವಕೀಲರ ಸಂಘದ ಪ್ರತಿನಿಧಿಗಳು ನೀಡಿದ್ದ ದೂರಿನ ಮೇಲೆ ಜಗದೀಶ್ ಅವರನ್ನು ಹಲಸೂರು ಗೇಟ್‌‌ ಪೊಲೀಸರು ಬಂಧಿಸಿದ್ದರು.

ಜಾತಿ ನಿಂದನೆ ಮತ್ತು ಪೊಲೀಸ್‌ ಸಿಬ್ಬಂದಿಗೆ ಬೆದರಿಕೆ ಹಾಕಿದ್ದಾರೆಂದೂ ಆರೋಪಿಸಲಾಗಿತ್ತು. ಈಗ ಈ ಎರಡು ಪ್ರಕರಣಗಳಲ್ಲಿಯೂ ಜಾಮೀನು ದೊರೆತು ಜಗದೀಶ್‌ ಬಿಡುಗಡೆಯಾಗಿದ್ದಾರೆ.


ಇದನ್ನೂ ಓದಿರಿ: ಲಾಯರ್‌ ಜಗದೀಶ್ ವಿಚಾರದಲ್ಲಿ ವಕೀಲರ ಸಂಘದ ನಡೆ ಸ್ವೀಕಾರಾರ್ಹವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...