Homeಕರ್ನಾಟಕಲಾಯರ್‌ ಜಗದೀಶ್‌ ಬಿಡುಗಡೆ; ಫೇಸ್‌ಬುಕ್‌ ಲೈವ್‌ ಮೂಲಕ ಜೈಲ್‌ ಡೈರಿ ರಿವೀಲ್‌

ಲಾಯರ್‌ ಜಗದೀಶ್‌ ಬಿಡುಗಡೆ; ಫೇಸ್‌ಬುಕ್‌ ಲೈವ್‌ ಮೂಲಕ ಜೈಲ್‌ ಡೈರಿ ರಿವೀಲ್‌

- Advertisement -
- Advertisement -

ಭ್ರಷ್ಟಾಚಾರ ವಿರೋಧಿ ಹೋರಾಟಗಾರ, ಲಾಯರ್‌ ಕೆ.ಎಂ.ಜಗದೀಶ್‌ ಜಾಮೀನಿನ ಮೇಲೆ ಮಂಗಳವಾರ ಸಂಜೆ ಬಿಡುಗಡೆಯಾಗಿದ್ದು, ಫೇಸ್‌ಬುಕ್‌ ಲೈವ್‌ ಮೂಲಕ ತಮ್ಮ ಜೈಲಿನ ಅನುಭವಗಳನ್ನು ಹಂಚಿಕೊಂಡಿದ್ದಾರೆ.

ಫೇಸ್‌ಬುಕ್ ಖಾತೆ ಲಾಕ್‌ ಆಗಿರುವ ಕಾರಣ ತಮ್ಮ ಸ್ನೇಹಿತೆ ಪ್ರಶಾಂತಿ ಸುಭಾಷ್ ಅವರ ಫೇಸ್‌ಬುಕ್‌‌ ಖಾತೆಯ ಮೂಲಕ ಲೈವ್ ಬಂದಿದ್ದ ಅವರು, ಬಹಳ ಖುಷಿ ಹಾಗೂ ಲವಲವಿಕೆಯಿಂದ ಮಾತನಾಡಿದರು.

“ಕಳೆದ 24 ದಿನಗಳ ಹಿಂದೆ ಒಂದು ಕೇಸ್‌ನಲ್ಲಿ ಬಂಧಿಸಿ, ಪರಪ್ಪನ ಅಗ್ರಹಾರದ ಜೈಲಿಗೆ ಕಳುಹಿಸಿದ್ದರು. ಇಂದು ರಿಲೀಸ್ ಆಗಿದ್ದೀನಿ. ನನಗಾಗಿ ಸಾಕಷ್ಟು ಹೃದಯಗಳು ಸ್ಪಂದಿಸಿವೆ. ಭ್ರಷ್ಟಾಚಾರದ ವಿರುದ್ಧ ಹೋರಾಟ ಮುಂದುವರಿಯಲಿದೆ. ಸಣ್ಣಪುಟ್ಟ ತಪ್ಪುಗಳಿಂದ ಅದು ಹಳಿ ತಪ್ಪಿತ್ತು. ಮತ್ತೆ ಟ್ರಾಕ್‌ಗೆ ಬಂದಿದೆ. ಎಲ್ಲ ನೈತಿಕತೆಯನ್ನು ಗಮನದಲ್ಲಿಟ್ಟುಕೊಂಡು ಹೋರಾಟ ಮುಂದುವರಿಸುವೆ” ಎಂದು ಗುಡುಗಿದ್ದಾರೆ.

“ನನಗಾಗಿ ಸಾಕಷ್ಟು ಜನರು ಹೋರಾಟ ಮಾಡಿದ್ದಾರೆ. ವಿಧಾನಸೌಧದ ಮುಂದೆ ಪ್ರತಿಭಟನೆ ನಡೆಸಿದ್ದಾರೆ. ಜೈಲಿಗೆ ಪತ್ರಿಕೆ ಬರುತ್ತಿತ್ತು, ಅದನ್ನು ಓದಿ ಇದನ್ನೆಲ್ಲ ತಿಳಿದುಕೊಳ್ಳುತ್ತಿದೆ. ಜೈಲು ನಿಜಕ್ಕೂ ವಂಡರ್‌ಫುಲ್‌. ಇದನ್ನು ಜೈಲು ಅನ್ನುವುದಕ್ಕಿಂತ ಮನಪರಿವರ್ತನೆಯ ಸ್ಥಳ ಎಂದು ಕರೆದಿದ್ದಾರೆ. ಬಹುಶಃ ನಾನು ಕೂಡ ನನ್ನಲ್ಲಿ ಸಾಕಷ್ಟು ಬದಲಾವಣೆಗಳನ್ನು ಮಾಡಿಕೊಂಡಿದ್ದೇನೆ” ಎಂದಿದ್ದಾರೆ.

“ಜೈಲಿನ ಸಿಬ್ಬಂದಿ ನಿಜಕ್ಕೂ ಅದ್ಭುತ. ಜೈಲಿನ ಬಗ್ಗೆ ಸಾಕಷ್ಟು ಜನ ಕೆಟ್ಟದ್ದಾಗಿ ಮಾತನಾಡುತ್ತಾರೆ. ಆದರೆ ನಾನು ಹೇಳುತ್ತೇನೆ: ಜೈಲಿನಲ್ಲಿ ತುಂಬಾ ಒಳ್ಳೆಯ ವಾತಾವರಣ ಇದೆ. ಗಾರ್ಡ್‌ಗಳಾಗಿ ನೇಮಕವಾಗಿರುವ ಯುವಕರು ನಿಜಕ್ಕೂ ಅದ್ಭುತ. ಜೈಲರ್‌ಗಳೆಲ್ಲ ನಿಜಕ್ಕೂ ನನ್ನ ಪಾಲಿಗೆ ಜಂಟಲ್‌ಮನ್‌ಗಳು. ಜೈಲೆಂದು ಯಾವತ್ತೂ ನನಗೆ ಫೀಲ್ ಆಗಿಲ್ಲ. ನನ್ನನ್ನು ನೋಡಿಕೊಂಡ ಡಾಕ್ಟರ್‌ಗಳಿಗೆ ತುಂಬಾ ಧನ್ಯವಾದ” ಎಂದು ತಿಳಿಸಿದ್ದಾರೆ.

“ಜೈಲು ಸಿಬ್ಬಂದಿ ಬಹುತೇಕ ಇಂಜಿನಿಯರ್‌ಗಳೆಂದು ಕೇಳಿ ನನ್ನ ಹೃದಯ ಒಡೆದುಹೋಯಿತು. ಸುಮಾರು ಒಂದು ಸಾವಿರ ಜನ ನೇಮಕವಾಗಿದ್ದಾರೆ. ಅದರಲ್ಲಿ ಏಳನೂರು ಜನ ಇಂಜಿನಿಯರ್‌ಗಳಿದ್ದಾರೆ. ಪಿಎಚ್‌ಡಿ ಪಡೆದವರು ಇದ್ದಾರೆ. ಮೇಷ್ಟ್ರಾದವರು ಇದ್ದಾರೆ. ಬೇಜಾರಾದ ಸಂಗತಿ ಏನೆಂದರೆ ಕೇವಲ ಹತ್ತನೇ ತರಗತಿ ವಿದ್ಯಾರ್ಹತೆ ಬೇಕಾದ ಗಾರ್ಡ್ ಕೆಲಸಕ್ಕೆ ಇಂಜಿನಿಯರ್‌ಗಳು ಬಂದಿದ್ದಾರೆ. ತುಂಬಾ ನೋವಾಗುತ್ತದೆ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

“ಇಪ್ಪತ್ತು ನಾಲ್ಕು ದಿನಗಳು ಹೇಗೆ ಕಳೆದವು ಎಂಬುದೇ ಗೊತ್ತಾಗಲಿಲ್ಲ. ನನ್ನ ಫೇಸ್‌ಬುಕ್ ಲೈವ್ ಮಿಸ್‌ ಮಾಡಿಕೊಂಡೆ… ಕೆಲವು ದಿನಗಳಲ್ಲಿ  ಬ್ಲಾಕ್ ಆಗಿರುವ ಫೇಸ್‌ಬುಕ್ ಖಾತೆ ಓಪನ್‌ ಮಾಡಿಸುತ್ತೇನೆ” ಎಂದು ಹೇಳಿದ ಅವರು, ತಮಗಾಗಿ ಹೋರಾಟ ಮಾಡಿದವರನ್ನು ಮನಪೂರ್ವಕವಾಗಿ ನೆನೆದು ಧನ್ಯವಾದ ತಿಳಿಸಿದ್ದಾರೆ.

“ಈ ಹೋರಾಟ ಎಂದ ಮೇಲೆ ಇವೆಲ್ಲ ಸಾಮಾನ್ಯ. ತಾಳ್ಮೆಯನ್ನು ಕಳೆದುಕೊಂಡೆ ಅನಿಸುತ್ತೆ. ಒಬ್ಬ ತಂದೆಯಾಗಿ ಹೀಗೆ ವರ್ತಿಸಿದ್ದು ಸರಿ. ಆದರೆ ಒಬ್ಬ ವಕೀಲನಾಗಿ ನಾನು ಹೀಗೆ ನಡೆದುಕೊಳ್ಳಬಾರದಿತ್ತು” ಎಂದು ತಮ್ಮ ತಪ್ಪನ್ನು ಒಪ್ಪಿಕೊಂಡಿದ್ದಾರೆ.

“ಜೈಲಿನಲ್ಲಿ ನಾನು ಸಹ ಒಂದು ಒಳ್ಳೆಯ ಕೆಲಸವನ್ನು ಮಾಡಿಕೊಂಡು ಬಂದಿದ್ದೇನೆ. ಅದನ್ನು ಸಮಯ ಬಂದಾಗ ತಿಳಿಸುತ್ತೇನೆ. ಈಗ ಹೇಳಿದರೆ ವಿರೋಧಿಗಳು ಅಲರ್ಟ್ ಆಗಿಬಿಡುತ್ತಾರೆ. ಇನ್ನ ಮೇಲೆ ಮುಚ್ಚಿಡುವ ಕೆಲಸಗಳನ್ನು ಮಾಡಬೇಕಾಗುತ್ತದೆ” ಎಂದಿದ್ದಾರೆ.

ಏನಿದು ಪ್ರಕರಣ?

ಕೊಲೆ ಯತ್ನ ಪ್ರಕರಣ ಆರೋಪಿಸಿ ಜಗದೀಶ್‌ ಅವರನ್ನು ಬಂಧಿಸಲಾಗಿತ್ತು. ಬೆಂಗಳೂರಿನ ಸಿಟಿ ಸಿವಿಲ್‌ ಮತ್ತು ಸೆಷನ್ಸ್‌ ನ್ಯಾಯಾಲಯದ ಆವರಣದಲ್ಲಿ ಈಚೆಗೆ ನಡೆದ ಜಗಳಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿತ್ತು.

ವಕೀಲರಾದ ಕೆ.ಎನ್.ಜಗದೀಶ್‌ ವಕೀಲರನ್ನು ಅವ್ಯಾಚ್ಯ ಪದಗಳಿಂದ ನಿಂದಿಸಿ ವೃತ್ತಿಗೆ ಚ್ಯುತಿ ತಂದಿದ್ದಾರೆ. ನ್ಯಾಯಾಲಯ ಆವರಣದಲ್ಲಿ ಅಶಾಂತಿ ಉಂಟು ಮಾಡಿದ್ದಾರೆ, ಕೊಲೆಗೆ ಯತ್ನಿಸಿದ್ದಾರೆ ಎಂದು ಆರೋಪಿಸಿ ವಕೀಲರ ಸಂಘದ ಪ್ರತಿನಿಧಿಗಳು ನೀಡಿದ್ದ ದೂರಿನ ಮೇಲೆ ಜಗದೀಶ್ ಅವರನ್ನು ಹಲಸೂರು ಗೇಟ್‌‌ ಪೊಲೀಸರು ಬಂಧಿಸಿದ್ದರು.

ಜಾತಿ ನಿಂದನೆ ಮತ್ತು ಪೊಲೀಸ್‌ ಸಿಬ್ಬಂದಿಗೆ ಬೆದರಿಕೆ ಹಾಕಿದ್ದಾರೆಂದೂ ಆರೋಪಿಸಲಾಗಿತ್ತು. ಈಗ ಈ ಎರಡು ಪ್ರಕರಣಗಳಲ್ಲಿಯೂ ಜಾಮೀನು ದೊರೆತು ಜಗದೀಶ್‌ ಬಿಡುಗಡೆಯಾಗಿದ್ದಾರೆ.


ಇದನ್ನೂ ಓದಿರಿ: ಲಾಯರ್‌ ಜಗದೀಶ್ ವಿಚಾರದಲ್ಲಿ ವಕೀಲರ ಸಂಘದ ನಡೆ ಸ್ವೀಕಾರಾರ್ಹವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...