Homeಕರ್ನಾಟಕಲಾಯರ್‌ ಜಗದೀಶ್‌ ಬಿಡುಗಡೆ; ಫೇಸ್‌ಬುಕ್‌ ಲೈವ್‌ ಮೂಲಕ ಜೈಲ್‌ ಡೈರಿ ರಿವೀಲ್‌

ಲಾಯರ್‌ ಜಗದೀಶ್‌ ಬಿಡುಗಡೆ; ಫೇಸ್‌ಬುಕ್‌ ಲೈವ್‌ ಮೂಲಕ ಜೈಲ್‌ ಡೈರಿ ರಿವೀಲ್‌

- Advertisement -
- Advertisement -

ಭ್ರಷ್ಟಾಚಾರ ವಿರೋಧಿ ಹೋರಾಟಗಾರ, ಲಾಯರ್‌ ಕೆ.ಎಂ.ಜಗದೀಶ್‌ ಜಾಮೀನಿನ ಮೇಲೆ ಮಂಗಳವಾರ ಸಂಜೆ ಬಿಡುಗಡೆಯಾಗಿದ್ದು, ಫೇಸ್‌ಬುಕ್‌ ಲೈವ್‌ ಮೂಲಕ ತಮ್ಮ ಜೈಲಿನ ಅನುಭವಗಳನ್ನು ಹಂಚಿಕೊಂಡಿದ್ದಾರೆ.

ಫೇಸ್‌ಬುಕ್ ಖಾತೆ ಲಾಕ್‌ ಆಗಿರುವ ಕಾರಣ ತಮ್ಮ ಸ್ನೇಹಿತೆ ಪ್ರಶಾಂತಿ ಸುಭಾಷ್ ಅವರ ಫೇಸ್‌ಬುಕ್‌‌ ಖಾತೆಯ ಮೂಲಕ ಲೈವ್ ಬಂದಿದ್ದ ಅವರು, ಬಹಳ ಖುಷಿ ಹಾಗೂ ಲವಲವಿಕೆಯಿಂದ ಮಾತನಾಡಿದರು.

“ಕಳೆದ 24 ದಿನಗಳ ಹಿಂದೆ ಒಂದು ಕೇಸ್‌ನಲ್ಲಿ ಬಂಧಿಸಿ, ಪರಪ್ಪನ ಅಗ್ರಹಾರದ ಜೈಲಿಗೆ ಕಳುಹಿಸಿದ್ದರು. ಇಂದು ರಿಲೀಸ್ ಆಗಿದ್ದೀನಿ. ನನಗಾಗಿ ಸಾಕಷ್ಟು ಹೃದಯಗಳು ಸ್ಪಂದಿಸಿವೆ. ಭ್ರಷ್ಟಾಚಾರದ ವಿರುದ್ಧ ಹೋರಾಟ ಮುಂದುವರಿಯಲಿದೆ. ಸಣ್ಣಪುಟ್ಟ ತಪ್ಪುಗಳಿಂದ ಅದು ಹಳಿ ತಪ್ಪಿತ್ತು. ಮತ್ತೆ ಟ್ರಾಕ್‌ಗೆ ಬಂದಿದೆ. ಎಲ್ಲ ನೈತಿಕತೆಯನ್ನು ಗಮನದಲ್ಲಿಟ್ಟುಕೊಂಡು ಹೋರಾಟ ಮುಂದುವರಿಸುವೆ” ಎಂದು ಗುಡುಗಿದ್ದಾರೆ.

“ನನಗಾಗಿ ಸಾಕಷ್ಟು ಜನರು ಹೋರಾಟ ಮಾಡಿದ್ದಾರೆ. ವಿಧಾನಸೌಧದ ಮುಂದೆ ಪ್ರತಿಭಟನೆ ನಡೆಸಿದ್ದಾರೆ. ಜೈಲಿಗೆ ಪತ್ರಿಕೆ ಬರುತ್ತಿತ್ತು, ಅದನ್ನು ಓದಿ ಇದನ್ನೆಲ್ಲ ತಿಳಿದುಕೊಳ್ಳುತ್ತಿದೆ. ಜೈಲು ನಿಜಕ್ಕೂ ವಂಡರ್‌ಫುಲ್‌. ಇದನ್ನು ಜೈಲು ಅನ್ನುವುದಕ್ಕಿಂತ ಮನಪರಿವರ್ತನೆಯ ಸ್ಥಳ ಎಂದು ಕರೆದಿದ್ದಾರೆ. ಬಹುಶಃ ನಾನು ಕೂಡ ನನ್ನಲ್ಲಿ ಸಾಕಷ್ಟು ಬದಲಾವಣೆಗಳನ್ನು ಮಾಡಿಕೊಂಡಿದ್ದೇನೆ” ಎಂದಿದ್ದಾರೆ.

“ಜೈಲಿನ ಸಿಬ್ಬಂದಿ ನಿಜಕ್ಕೂ ಅದ್ಭುತ. ಜೈಲಿನ ಬಗ್ಗೆ ಸಾಕಷ್ಟು ಜನ ಕೆಟ್ಟದ್ದಾಗಿ ಮಾತನಾಡುತ್ತಾರೆ. ಆದರೆ ನಾನು ಹೇಳುತ್ತೇನೆ: ಜೈಲಿನಲ್ಲಿ ತುಂಬಾ ಒಳ್ಳೆಯ ವಾತಾವರಣ ಇದೆ. ಗಾರ್ಡ್‌ಗಳಾಗಿ ನೇಮಕವಾಗಿರುವ ಯುವಕರು ನಿಜಕ್ಕೂ ಅದ್ಭುತ. ಜೈಲರ್‌ಗಳೆಲ್ಲ ನಿಜಕ್ಕೂ ನನ್ನ ಪಾಲಿಗೆ ಜಂಟಲ್‌ಮನ್‌ಗಳು. ಜೈಲೆಂದು ಯಾವತ್ತೂ ನನಗೆ ಫೀಲ್ ಆಗಿಲ್ಲ. ನನ್ನನ್ನು ನೋಡಿಕೊಂಡ ಡಾಕ್ಟರ್‌ಗಳಿಗೆ ತುಂಬಾ ಧನ್ಯವಾದ” ಎಂದು ತಿಳಿಸಿದ್ದಾರೆ.

“ಜೈಲು ಸಿಬ್ಬಂದಿ ಬಹುತೇಕ ಇಂಜಿನಿಯರ್‌ಗಳೆಂದು ಕೇಳಿ ನನ್ನ ಹೃದಯ ಒಡೆದುಹೋಯಿತು. ಸುಮಾರು ಒಂದು ಸಾವಿರ ಜನ ನೇಮಕವಾಗಿದ್ದಾರೆ. ಅದರಲ್ಲಿ ಏಳನೂರು ಜನ ಇಂಜಿನಿಯರ್‌ಗಳಿದ್ದಾರೆ. ಪಿಎಚ್‌ಡಿ ಪಡೆದವರು ಇದ್ದಾರೆ. ಮೇಷ್ಟ್ರಾದವರು ಇದ್ದಾರೆ. ಬೇಜಾರಾದ ಸಂಗತಿ ಏನೆಂದರೆ ಕೇವಲ ಹತ್ತನೇ ತರಗತಿ ವಿದ್ಯಾರ್ಹತೆ ಬೇಕಾದ ಗಾರ್ಡ್ ಕೆಲಸಕ್ಕೆ ಇಂಜಿನಿಯರ್‌ಗಳು ಬಂದಿದ್ದಾರೆ. ತುಂಬಾ ನೋವಾಗುತ್ತದೆ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

“ಇಪ್ಪತ್ತು ನಾಲ್ಕು ದಿನಗಳು ಹೇಗೆ ಕಳೆದವು ಎಂಬುದೇ ಗೊತ್ತಾಗಲಿಲ್ಲ. ನನ್ನ ಫೇಸ್‌ಬುಕ್ ಲೈವ್ ಮಿಸ್‌ ಮಾಡಿಕೊಂಡೆ… ಕೆಲವು ದಿನಗಳಲ್ಲಿ  ಬ್ಲಾಕ್ ಆಗಿರುವ ಫೇಸ್‌ಬುಕ್ ಖಾತೆ ಓಪನ್‌ ಮಾಡಿಸುತ್ತೇನೆ” ಎಂದು ಹೇಳಿದ ಅವರು, ತಮಗಾಗಿ ಹೋರಾಟ ಮಾಡಿದವರನ್ನು ಮನಪೂರ್ವಕವಾಗಿ ನೆನೆದು ಧನ್ಯವಾದ ತಿಳಿಸಿದ್ದಾರೆ.

“ಈ ಹೋರಾಟ ಎಂದ ಮೇಲೆ ಇವೆಲ್ಲ ಸಾಮಾನ್ಯ. ತಾಳ್ಮೆಯನ್ನು ಕಳೆದುಕೊಂಡೆ ಅನಿಸುತ್ತೆ. ಒಬ್ಬ ತಂದೆಯಾಗಿ ಹೀಗೆ ವರ್ತಿಸಿದ್ದು ಸರಿ. ಆದರೆ ಒಬ್ಬ ವಕೀಲನಾಗಿ ನಾನು ಹೀಗೆ ನಡೆದುಕೊಳ್ಳಬಾರದಿತ್ತು” ಎಂದು ತಮ್ಮ ತಪ್ಪನ್ನು ಒಪ್ಪಿಕೊಂಡಿದ್ದಾರೆ.

“ಜೈಲಿನಲ್ಲಿ ನಾನು ಸಹ ಒಂದು ಒಳ್ಳೆಯ ಕೆಲಸವನ್ನು ಮಾಡಿಕೊಂಡು ಬಂದಿದ್ದೇನೆ. ಅದನ್ನು ಸಮಯ ಬಂದಾಗ ತಿಳಿಸುತ್ತೇನೆ. ಈಗ ಹೇಳಿದರೆ ವಿರೋಧಿಗಳು ಅಲರ್ಟ್ ಆಗಿಬಿಡುತ್ತಾರೆ. ಇನ್ನ ಮೇಲೆ ಮುಚ್ಚಿಡುವ ಕೆಲಸಗಳನ್ನು ಮಾಡಬೇಕಾಗುತ್ತದೆ” ಎಂದಿದ್ದಾರೆ.

ಏನಿದು ಪ್ರಕರಣ?

ಕೊಲೆ ಯತ್ನ ಪ್ರಕರಣ ಆರೋಪಿಸಿ ಜಗದೀಶ್‌ ಅವರನ್ನು ಬಂಧಿಸಲಾಗಿತ್ತು. ಬೆಂಗಳೂರಿನ ಸಿಟಿ ಸಿವಿಲ್‌ ಮತ್ತು ಸೆಷನ್ಸ್‌ ನ್ಯಾಯಾಲಯದ ಆವರಣದಲ್ಲಿ ಈಚೆಗೆ ನಡೆದ ಜಗಳಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿತ್ತು.

ವಕೀಲರಾದ ಕೆ.ಎನ್.ಜಗದೀಶ್‌ ವಕೀಲರನ್ನು ಅವ್ಯಾಚ್ಯ ಪದಗಳಿಂದ ನಿಂದಿಸಿ ವೃತ್ತಿಗೆ ಚ್ಯುತಿ ತಂದಿದ್ದಾರೆ. ನ್ಯಾಯಾಲಯ ಆವರಣದಲ್ಲಿ ಅಶಾಂತಿ ಉಂಟು ಮಾಡಿದ್ದಾರೆ, ಕೊಲೆಗೆ ಯತ್ನಿಸಿದ್ದಾರೆ ಎಂದು ಆರೋಪಿಸಿ ವಕೀಲರ ಸಂಘದ ಪ್ರತಿನಿಧಿಗಳು ನೀಡಿದ್ದ ದೂರಿನ ಮೇಲೆ ಜಗದೀಶ್ ಅವರನ್ನು ಹಲಸೂರು ಗೇಟ್‌‌ ಪೊಲೀಸರು ಬಂಧಿಸಿದ್ದರು.

ಜಾತಿ ನಿಂದನೆ ಮತ್ತು ಪೊಲೀಸ್‌ ಸಿಬ್ಬಂದಿಗೆ ಬೆದರಿಕೆ ಹಾಕಿದ್ದಾರೆಂದೂ ಆರೋಪಿಸಲಾಗಿತ್ತು. ಈಗ ಈ ಎರಡು ಪ್ರಕರಣಗಳಲ್ಲಿಯೂ ಜಾಮೀನು ದೊರೆತು ಜಗದೀಶ್‌ ಬಿಡುಗಡೆಯಾಗಿದ್ದಾರೆ.


ಇದನ್ನೂ ಓದಿರಿ: ಲಾಯರ್‌ ಜಗದೀಶ್ ವಿಚಾರದಲ್ಲಿ ವಕೀಲರ ಸಂಘದ ನಡೆ ಸ್ವೀಕಾರಾರ್ಹವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...