Homeಕರ್ನಾಟಕಯಾವ ನಿಯಮದಡಿ ಹರ್ಷ ಕುಟುಂಬಕ್ಕೆ ಪರಿಹಾರ ನೀಡಲಾಗಿದೆ?; ಪ್ರಿಯಾಂಕ್‌ ಸರಣಿ ಟ್ವೀಟ್‌

ಯಾವ ನಿಯಮದಡಿ ಹರ್ಷ ಕುಟುಂಬಕ್ಕೆ ಪರಿಹಾರ ನೀಡಲಾಗಿದೆ?; ಪ್ರಿಯಾಂಕ್‌ ಸರಣಿ ಟ್ವೀಟ್‌

"ಇಂತಹ ಉದಾರ ಮನಸಿದ್ದರೆ ಧರ್ಮಸ್ಥಳದಲ್ಲಿ ಬಿಜೆಪಿ ಮುಖಂಡನಿಂದ ಹತ್ಯೆಯಾದ ದಲಿತ ಯುವಕ ದಿನೇಶ್ ಕುಟುಂಬಕ್ಕೆ ಪರಿಹಾರ ಏಕಿಲ್ಲ? ಕೊಡಗಿನ ಯೋಧನ ಕುಟುಂಬಕ್ಕೆ ಏಕಿಲ್ಲ?"

- Advertisement -
- Advertisement -

ಶಿವಮೊಗ್ಗದಲ್ಲಿ ಹತ್ಯೆಗೀಡಾದ ಯುವಕ ಹರ್ಷನ ಕುಟುಂಬಕ್ಕೆ ಸರ್ಕಾರ 25 ಲಕ್ಷ ಪರಿಹಾರ ನೀಡಿರುವುದರ ಹಿಂದೆ ಯಾವ ಅಜೆಂಡಾ ಅಡಗಿದೆ? ಎಂದು ಕಾಂಗ್ರೆಸ್ ಯುವ ನಾಯಕ, ಮಾಜಿ ಸಚಿವ ಪ್ರಿಯಾಂಕ್‌ ಖರ್ಗೆ ಪ್ರಶ್ನಿಸಿದ್ದಾರೆ.

ಈ ಕುರಿತು ಸರಣಿ ಟ್ವೀಟ್‌ ಮಾಡಿರುವ ಅವರು, “ಯಾವ ನಿಯಮಗಳ ಅಡಿಯಲ್ಲಿ ಸಾರ್ವಜನಿಕರ ತೆರಿಗೆ ಹಣವನ್ನು ನೀಡಲಾಗಿದೆ? ರಾಜ್ಯದಲ್ಲಿ ವೈಯುಕ್ತಿಕ ದ್ವೇಷಗಳಿಗೆ ಮೃತಪಟ್ಟವರಿಗೆ ಇದೇ ರೀತಿ ಪರಿಹಾರ ನೀಡುತ್ತದೆಯೇ ಈ ಸರ್ಕಾರ?” ಎಂದು ಕೇಳಿದ್ದಾರೆ.

ಮೃತ ಹರ್ಷನ ಮೇಲೆ ಹಲವು ಗಂಭೀರ ಪ್ರಕರಣಗಳು ದಾಖಲಾಗಿದ್ದವು ಎಂಬ ವಿಷಯ ತಿಳಿದುಬಂದಿದೆ. 2020ರಲ್ಲಿ ಇವರದ್ದೇ ಸರ್ಕಾರ ಆತನನ್ನು ಜೈಲಿಗಟ್ಟಿತ್ತು, ಶಿವಮೊಗ್ಗದ ಉಸ್ತುವಾರಿ ಸಚಿವ ನಾರಾಯನಗೌಡರೇ ವೈಯುಕ್ತಿಕ ಕಾರಣಗಳಿಗೆ ನಡೆದ ಕೊಲೆ ಎಂದಿದ್ದಾರೆ. ಪೊಲೀಸರ ತನಿಖಾ ವರದಿಯೂ ಬಂದಿಲ್ಲ. ಹೀಗಿರುವಾಗ ಈ ಪರಿಹಾರ ಹಣ ಕೊಟ್ಟಿದ್ದು ಏಕೆ? ಹೇಗೆ? ಎಂದು ಕಟುವಾಗಿ ಟೀಕಿಸಿದ್ದಾರೆ.

ನೆರೆ ಸಂತ್ರಸ್ತರಿಗೆ, ಕೋವಿಡ್ ಮೃತರ ಕುಟುಂಬಕ್ಕೆ ಪರಿಹಾರ ನೀಡಲು ಸತಾಯಿಸುವ ಈ ಸರ್ಕಾರ ತಮ್ಮ ಪಕ್ಷದ ಕಾರ್ಯಕರ್ತನ ಕುಟುಂಬಕ್ಕೆ 25 ಲಕ್ಷ ಹಣ ನೀಡಿರುವುದು ಆಶ್ಚರ್ಯಕರ! ಇಂತಹ ಉದಾರ ಮನಸಿದ್ದರೆ ಧರ್ಮಸ್ಥಳದಲ್ಲಿ ಬಿಜೆಪಿ ಮುಖಂಡನಿಂದ ಹತ್ಯೆಯಾದ ದಲಿತ ಯುವಕ ದಿನೇಶ್ ಕುಟುಂಬಕ್ಕೆ ಏಕಿಲ್ಲ? ಕೊಡಗಿನ ಯೋಧನ ಕುಟುಂಬಕ್ಕೆ ಏಕಿಲ್ಲ? ಎಂದು ಕೇಳಿದ್ದಾರೆ.

ಅನಾರೋಗ್ಯ ಪೀಡಿತರಿಗೆ, ಬಡವರ ನೆರವಿಗೆ, ಯೋಧರ ಕುಟುಂಬಗಳಿಗೆ ಬಳಸಬಹುದಾದ ‘ವಿವೇಚನೆ’ಯನ್ನು ತಮ್ಮ ಪಕ್ಷದ ಕೆಡರ್ ಒಬ್ಬನಿಗೆ ಬಳಸಿದ್ದು ಮುಖ್ಯಮಂತ್ರಿಗಳ ಯೋಚನೆ, ವಿವೇಚನೆ ಎಂತದ್ದು ಎಂದು ತಿಳಿಸುತ್ತದೆ. ಬಿಜೆಪಿ ಪಕ್ಷದ ಮೂಲಕ 25 ಲಕ್ಷವಲ್ಲ 25 ಕೋಟಿಯಾದರೂ ಕೊಡಲಿ, ಆದರೆ ಸರ್ಕಾರದ ಹಣ ದುರ್ಬಳಕೆಗೆ ಅಧಿಕಾರ ಕೊಟ್ಟವರು ಯಾರು? ಎಂದು ಸರಣಿ ಪ್ರಶ್ನೆಗಳನ್ನು ಎಸೆದಿದ್ದಾರೆ.

ಗಾಂಧಿಯ ಕೊಲೆಗಾರ ಗೋಡ್ಸೆಯಲ್ಲಿ ದೇಶಭಕ್ತಿ ಕಾಣುವ ವ್ಯಕ್ತಿಯ ಸಾವಿಗೆ 25 ಲಕ್ಷ ನೀಡಿದ ಸರ್ಕಾರ, ದೇಶದ ಗಡಿ ಕಾಯುತ್ತಾ ಮೃತನಾದ ಯೋಧ ಅಲ್ತಾಫ್‌ಗೆ ಎಷ್ಟು ನೀಡಿದೆ? ದೇಶಭಕ್ತಿಯ ವ್ಯಾಖ್ಯಾನ ಬದಲಿಸಿದೆಯೇ ಬಿಜೆಪಿ ಸರ್ಕಾರ? ಗೋಡ್ಸೆ ಆರಾಧಕನಿಗೆ ಹಣ ನೀಡುವ ಮೂಲಕ ಗಾಂಧಿ ಹತ್ಯೆಯನ್ನು ಅನುಮೋದಿಸುತ್ತದೆಯೇ ಬಿಜೆಪಿ? ಸಿಎಂ ಉತ್ತರಿಸಬೇಕು ಎಂದು ಕೇಳಿದ್ದಾರೆ.


ಇದನ್ನೂ ಓದಿರಿ: ವರ್ಷ ವರ್ಷವೂ ಎಸ್‌ಸಿ, ಎಸ್‌ಟಿಗಳ ಅನುದಾನ ಗೋತಾ; ಸರ್ಕಾರಕ್ಕಿಲ್ಲ ದಲಿತರ ಮೇಲೆ ಕಾಳಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....