Homeಕರ್ನಾಟಕಮೇಕೆದಾಟು: ಸರ್ವಪಕ್ಷ ಸಭೆಗೆ ಮುಂದಾದ ಬೊಮ್ಮಾಯಿ; ಒಂದು ಇಟ್ಟಿಗೆ ಇಡಲೂ ಬಿಡುವುದಿಲ್ಲ ಎಂದ ತಮಿಳುನಾಡು

ಮೇಕೆದಾಟು: ಸರ್ವಪಕ್ಷ ಸಭೆಗೆ ಮುಂದಾದ ಬೊಮ್ಮಾಯಿ; ಒಂದು ಇಟ್ಟಿಗೆ ಇಡಲೂ ಬಿಡುವುದಿಲ್ಲ ಎಂದ ತಮಿಳುನಾಡು

- Advertisement -
- Advertisement -

ಕಾವೇರಿ ನದಿಗೆ ಅಡ್ಡಲಾಗಿ ಮೇಕೆದಾಟು ಅಣೆಕಟ್ಟು ನಿರ್ಮಿಸುವ ಕುರಿತು ಸರ್ಕಾರದ ಬದ್ಧತೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತೋರಿದ್ದು, ನೆರೆಯ ತಮಿಳುನಾಡು ಜೊತೆ ಮಾತುಕತೆಯನ್ನು ತಳ್ಳಿಹಾಕಿದ್ದಾರೆ.

ಕಾನೂನು ಕುರಿತು ಚರ್ಚಿಸಲು ಶೀಘ್ರದಲ್ಲೇ ಸರ್ವಪಕ್ಷ ಸಭೆಯನ್ನು ಕರೆಯುವುದಾಗಿ ಬೊಮ್ಮಾಯಿ ಮಂಗಳವಾರ ತಿಳಿಸಿದ್ದಾರೆ. ಮೇಕೆದಾಟು ಯೋಜನೆ ಕುರಿತು ಕರ್ನಾಟಕ ಮತ್ತು ತಮಿಳುನಾಡು ನಡುವೆ ಮಾತುಕತೆ ನಡೆಸಲು ಕೇಂದ್ರ ಸರ್ಕಾರ ಸಿದ್ಧವಿದೆ ಎಂದು ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರು ಇತ್ತೀಚೆಗೆ ನೀಡಿದ ಹೇಳಿಕೆಗೆ ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಆಕ್ಷೇಪ ಎತ್ತಿದ್ದು, ಬೊಮ್ಮಾಯಿ ಪ್ರತಿಕ್ರಿಯೆ ನೀಡಿದರು.

ಬೊಮ್ಮಾಯಿ ಅವರ ಘೋಷಣೆಗೆ ಪ್ರತಿಕ್ರಿಯಿಸಿರುವ ತಮಿಳುನಾಡು ಜಲಸಂಪನ್ಮೂಲ ಸಚಿವ ದುರೈಮುರುಗನ್, ಅಣೆಕಟ್ಟು ಕಟ್ಟಲು ಒಂದೇ ಒಂದು ಇಟ್ಟಿಗೆ ಇಡಲೂ ಕರ್ನಾಟಕ ಸರ್ಕಾರಕ್ಕೆ ತಮಿಳುನಾಡು ರಾಜ್ಯ ಸರ್ಕಾರ ಅವಕಾಶ ನೀಡುವುದಿಲ್ಲ ಎಂದು ಹೇಳಿದ್ದಾರೆ.

“ಕರ್ನಾಟಕ ಸರ್ಕಾರ ಯೋಜನೆಗಾಗಿ 1,000 ಕೋಟಿ ರೂಪಾಯಿಯಲ್ಲ; 5,000 ಕೋಟಿ ರೂಪಾಯಿಗಳನ್ನು ಮೀಸಲಿಟ್ಟರೂ ಒಂದು ಇಟ್ಟಿಗೆ ಇಡಲು ತಮಿಳುನಾಡು ಸರ್ಕಾರ ಅವಕಾಶ ನೀಡುವುದಿಲ್ಲ” ಎಂದು ಪ್ರತಿಕ್ರಿಯೆ ನೀಡಿದ್ದಾರೆ.

“ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ಚರ್ಚೆಗಳು ನಡೆದಿವೆ. ವಾಸ್ತವ ಸ್ಥಿತಿಗತಿ ಎಲ್ಲರಿಗೂ ಗೊತ್ತಿದ್ದು, ಅದರ ಪರಿಣಾಮಗಳ ಕುರಿತು ಕಾನೂನು ತಜ್ಞರೊಂದಿಗೆ ಚರ್ಚಿಸಬೇಕಾಗಿದೆ” ಎಂದು ಬೊಮ್ಮಾಯಿ ಹೇಳಿದ್ದಾರೆ.

ಇದನ್ನೂ ಓದಿರಿ: ಮೇಕೆದಾಟು ಪಾದಯಾತ್ರೆ: ಮುರುಘ ಶರಣರು ಸೇರಿದಂತೆ ಹಲವು ಸ್ವಾಮೀಜಿಗಳು ಭಾಗಿ

ವಿಸ್ತೃತ ಯೋಜನಾ ವರದಿ (ಡಿಪಿಆರ್) ಅನುಮೋದನೆ, ಪರಿಸರಕ್ಕೆ ಸಂಬಂಧಿಸಿದ ಅನುಮತಿಯನ್ನು ಕೇಂದ್ರ ಸರ್ಕಾರದಿಂದ ಪಡೆದ ನಂತರ ಕಾಮಗಾರಿಗೆ ಚಾಲನೆ ನೀಡುವುದು ಕರ್ನಾಟಕದ ಮುಂದಿರುವ ಕೆಲಸ ಎಂದು ಬೊಮ್ಮಾಯಿಯವರು ತಿಳಿಸಿದ್ದು, ಕಾನೂನು ಪರಿಣಾಮಗಳ ಕುರಿತು ಈಗಾಗಲೇ ಕಾನೂನು ತಜ್ಞರೊಂದಿಗೆ ಎರಡು ಸುತ್ತಿನ ಚರ್ಚೆ ನಡೆಸಲಾಗಿದೆ. ಬಹುಶಃ ಈ ವಾರವೇ ಸರ್ವಪಕ್ಷ ಸಭೆಯನ್ನು ಕರೆಯಲಾಗುವುದು ಎಂದಿದ್ದಾರೆ.

ನ್ಯಾಯಮಂಡಳಿ ಸೂಚನೆಯಂತೆ ತಮಿಳುನಾಡಿಗೆ ಬಾಕಿ ನೀರು ನೀಡುವುದು ನಮ್ಮ ಜವಾಬ್ದಾರಿ ಎಂಬುದು ಸ್ಪಷ್ಟ. ಅದರ ಹೊರತು ನಮಗೆ ಬೇರೆ ಯಾವುದೇ ಜವಾಬ್ದಾರಿ ಇಲ್ಲ. ಆದರೆ ತಮಿಳುನಾಡು ವಿವಿಧ ಅರ್ಜಿಗಳನ್ನು ಸಲ್ಲಿಸಿದೆ. ಈ ಹಿನ್ನೆಲೆಯಲ್ಲಿ ತಜ್ಞರಿಂದ ಮಾಹಿತಿ ಪಡೆದು ಮೇಕೆದಾಟು ಕೆಲಸವನ್ನು ಆದಷ್ಟು ಬೇಗ ಪ್ರಾರಂಭಿಸಲು ನಾವೆಲ್ಲರೂ ನಿರ್ಧರಿಸೋಣ ಎಂದು ಸ್ಪಷ್ಟಪಡಿಸಿದ್ದಾರೆ.

ಯೋಜನೆಗೆ ಸಂಬಂಧಿಸಿದಂತೆ ತಮಿಳುನಾಡಿನ ವಿವಿಧ ಅರ್ಜಿಗಳು ಸುಪ್ರೀಂ ಕೋರ್ಟ್‌ನಲ್ಲಿವೆ. ಚೆನ್ನೈನಲ್ಲಿರುವ ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ ದಕ್ಷಿಣ ವಲಯ ಪೀಠವು ಈ ಹಿಂದೆ ಯೋಜನೆಗೆ ತಡೆ ನೀಡಿದೆ. ಇದನ್ನು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಲಾಗಿದೆ ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.

ಕಾವೇರಿ ನೀರಿನ ವಿಚಾರದಲ್ಲಿ ಕರ್ನಾಟಕದ ಯಾವುದೇ ಯೋಜನೆಗೆ ತಮಿಳುನಾಡು ವಿರೋಧ ವ್ಯಕ್ತಪಡಿಸುತ್ತಿದ್ದು, ಅಲ್ಲಿ ರಾಜಕೀಯ ಪ್ರಾಮುಖ್ಯತೆ ಪಡೆಯುತ್ತಿದೆ ಎಂದಿರುವ ಬೊಮ್ಮಾಯಿ, ‘ಕುಡಿಯುವ ನೀರಿಗೂ ಅವರು ವಿರೋಧಿಸುತ್ತಾರೆ, ಹೀಗಾಗಿ ಅವರ ಕೆಲವು ಯೋಜನೆಗಳಿಗೆ ನಾವೂ ಆಕ್ಷೇಪ ವ್ಯಕ್ತಪಡಿಸಿದ್ದೇವೆ’ ಎಂದಿದ್ದಾರೆ.

ಇದನ್ನೂ ಓದಿರಿ: ‘ಮೇಕೆದಾಟು’ ಮಾತ್ರವಲ್ಲ, ವಿವಿಧ ರಾಜ್ಯಗಳಲ್ಲಿವೆ ಹಲವು ಜಲ ವಿವಾದ

ಕೇಂದ್ರ ಸಚಿವರು ಪ್ರಸ್ತಾಪಿಸಿದಂತೆ ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ಮುಂದೆ ಯಾವುದೇ ಮಾತುಕತೆ ಇಲ್ಲ ಎಂದು ಮುಖ್ಯಮಂತ್ರಿ ಸ್ಪಷ್ಟಪಡಿಸಿದರು. “ಡಿಪಿಆರ್ ಅನುಮೋದನೆ ಮತ್ತು ಪರಿಸರ ಅನುಮತಿ ಪಡೆಯುವುದು ನಮ್ಮ ಮುಂದಿರುವ ಏಕೈಕ ಕಾರ್ಯಸೂಚಿಯಾಗಿದೆ” ಎಂದಿದ್ದಾರೆ.

ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಆಗ್ರಹಿಸಿ ಕಾಂಗ್ರೆಸ್ ಪಾದಯಾತ್ರೆ ಹಮ್ಮಿಕೊಂಡಿರುವುದನ್ನು ಪ್ರಸ್ತಾಪಿಸಿರುವ ಸಿದ್ದರಾಮಯ್ಯನವರು, “2018ರಲ್ಲಿ ಕಾವೇರಿ ನದಿ ನೀರು ವಿಚಾರದಲ್ಲಿ ಸುಪ್ರೀಂ ಕೋರ್ಟ್ ತೀರ್ಪು ನೀಡಿದ್ದು, ಮೇಕೆದಾಟು ಯೋಜನೆಗೆ ತಮಿಳುನಾಡು ಆಕ್ಷೇಪ ವ್ಯಕ್ತಪಡಿಸುವ ಹಕ್ಕಿಲ್ಲ” ಎಂದು ಅಭಿಪ್ರಾಯಪಟ್ಟಿದ್ದಾರೆ.

ಸಾಮಾನ್ಯ ವರ್ಷದಲ್ಲಿ 177.75 ಟಿಎಂಸಿ ನೀರಿನ ಜತೆಗೆ ಕಳೆದ ಏಳು ವರ್ಷಗಳಲ್ಲಿ 582 ಟಿಎಂಸಿ ಹೆಚ್ಚುವರಿ ನೀರು ತಮಿಳುನಾಡಿಗೆ ಹರಿದು ಬಂದಿದೆ. ತಮಿಳುನಾಡಿಗೆ ಹರಿದು ಸಮುದ್ರ ಸೇರುವ ಹೆಚ್ಚುವರಿ ನೀರು ನಮ್ಮದು ಎಂದು ಸಿದ್ದರಾಮಯ್ಯ ಪ್ರತಿಪಾದಿಸಿದ್ದಾರೆ.

ಮಧ್ಯಪ್ರವೇಶಿಸಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ ಸಿ ಮಾಧುಸ್ವಾಮಿ ಅವರು, ಕರ್ನಾಟಕಕ್ಕೂ ಒಂದು ಪ್ರಮಾಣದ ನೀರು ಹಂಚಿಕೆಯಾಗಿದೆ. ಹೆಚ್ಚುವರಿ ನೀರು ಕರ್ನಾಟಕಕ್ಕೆ ಸೇರಿದ್ದು ಎಂದು ಸುಪ್ರೀಂ ಕೋರ್ಟ್ ಹೇಳಿಲ್ಲ ಎಂದರು.

ಅದನ್ನು ತಿರಸ್ಕರಿಸಿದ ಸಿದ್ದರಾಮಯ್ಯ, ಯೋಜನೆಗೆ ನ್ಯಾಯಾಲಯದಿಂದ ತಡೆಯಾಜ್ಞೆ ಇಲ್ಲ. “ನನ್ನ ಪ್ರಕಾರ ತಮಿಳುನಾಡು ರಾಜಕೀಯ ಮತ್ತು ವೋಟ್‌ಗಾಗಿ ಯೋಜನೆಯನ್ನು ವಿರೋಧಿಸುತ್ತಿದೆ. ಕಾನೂನು, ಸಾಂವಿಧಾನಿಕವಾಗಿ ಅವರಿಗೆ ಯಾವುದೇ ಹಕ್ಕಿಲ್ಲ” ಎಂದು ಪ್ರತಿಕ್ರಿಯೆ ನೀಡಿದ್ದಾರೆ.


ಇದನ್ನೂ ಓದಿರಿ: ಮೇಕೆದಾಟು: ಸ್ಟಾಲಿನ್‌ ಸರ್ವಪಕ್ಷ ಸಭೆ ಕರೆಯಲಿ- ಕೇಂದ್ರ ಮಾಜಿ ಸಚಿವ ಒತ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯದಲ್ಲಿ ಮಂಜೂರಾದ ಯೋಜನೆಗಳಿಗೆ ಹಣ ಬಿಡುಗಡೆ ಮಾಡುವಂತೆ, ರೈಲು ಯೋಜನೆ ತ್ವರಿತಗೊಳಿಸುವಂತೆ ಪ್ರಧಾನಿ ಮೋದಿಗೆ ಪತ್ರ ಬರೆದ ಸ್ಟಾಲಿನ್

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಭಾನುವಾರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ರಾಜ್ಯದಲ್ಲಿ ಮಂಜೂರಾದ ಯೋಜನೆಗಳಿಗೆ ಅಗತ್ಯವಿರುವ ಹಣವನ್ನು ಬಿಡುಗಡೆ ಮಾಡುವ ಮೂಲಕ ಮತ್ತು ಸ್ಥಗಿತಗೊಂಡಿರುವ ಯೋಜನೆಗಳನ್ನು ಪುನರುಜ್ಜೀವನಗೊಳಿಸುವ...

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ ವಿರೋಧಿಸಿದ ರೈತ ಸಂಘಟನೆಗಳು : ರಾಷ್ಟ್ರವ್ಯಾಪಿ ಪ್ರತಿಭಟನೆ ಘೋಷಣೆ

ಸಂಯುಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಂ), ಅಖಿಲ ಭಾರತ ಕಿಸಾನ್ ಸಭಾ (ಎಐಕೆಎಸ್‌) ಸೇರಿದಂತೆ ಹಲವಾರು ರೈತ ಸಂಘಟನೆಗಳು ಶನಿವಾರ (ಫೆ.7) ಭಾರತ-ಅಮೆರಿಕ ವ್ಯಾಪಾರ ಒಪ್ಪಂದವನ್ನು ವಿರೋಧಿಸಿದ್ದು, ಫೆಬ್ರವರಿ 12ರಂದು ರಾಷ್ಟ್ರವ್ಯಾಪಿ ಪ್ರತಿಭಟನೆ ಘೋಷಿಸಿವೆ. ಈ...

‘ನಮ್ಮ ಹಟ್ಟಿ’ ಕೇವಲ ದೊರೈರಾಜು ಅವರ ಕಥೆಯಲ್ಲ, ಒಂದು ಸಾಂಸ್ಕೃತಿಕ ಲೋಕವನ್ನೇ ಕಟ್ಟಿಕೊಡುವ ಕೃತಿ’: ಕೋಟಿಗಾನಹಳ್ಳಿ ರಾಮಯ್ಯ 

‘ಸಾಮಾನ್ಯವಾಗಿ ಆತ್ಮಕಥನಗಳು ಅಂದರೆ ಒಬ್ಬ ವ್ಯಕ್ತಿಯ ವಿವರಗಳು ಬಿಚ್ಚಿಕೊಳ್ಳುತ್ತಾ ಹೋಗುತ್ತವೆ. ಆದರೆ ‘ನಮ್ಮ ಹಟ್ಟಿ’ ಆತ್ಮಕಥಾನಕದಲ್ಲಿ ಒಂದು ಹಟ್ಟಿಯ ವಿವರಗಳು ಬಿಚ್ಚಿಕೊಳ್ಳುತ್ತಾ ಹೋಗುತ್ತವೆ. ಅಲ್ಲಿರುವ ಅನೇಕ ಕುಶಲ ಕರ್ಮಿಗಳು, ಹಾಗೂ ವಿಶಿಷ್ಟ ಲೋಕವೇ...

ಪ. ಬಂಗಾಳ ಎಸ್‌ಐಆರ್ | ಮೈಕ್ರೋ ಅಬ್ಸರ್ವರ್ಸ್ ಬದಲಿಗೆ 8,505 ಗ್ರೂಪ್ ಬಿ ಅಧಿಕಾರಿಗಳನ್ನು ಒದಗಿಸುತ್ತೇವೆ : ಚು. ಆಯೋಗಕ್ಕೆ ತಿಳಿಸಿದ ಮಮತಾ ಸರ್ಕಾರ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯಕ್ಕಾಗಿ ಮೈಕ್ರೋ ಅಬ್ಸರ್ವರ್ಸ್ ಬದಲಿಗೆ ತನ್ನ ಅಧೀನದ ಸುಮಾರು 8,505 ಗ್ರೂಪ್ ಬಿ ಅಧಿಕಾರಿಗಳನ್ನು ನಿಯೋಜಿಸಲು ಸಿದ್ಧವಿರುವುದಾಗಿ ಪಶ್ಚಿಮ ಬಂಗಾಳ ಸರ್ಕಾರ ಕೇಂದ್ರ...

ಸಿಎಂ ಶರ್ಮಾ ಮುಸ್ಲಿಮರಿಗೆ ಗುಂಡಿಕ್ಕಿದಂತೆ ತೋರಿಸುವ ವಿಡಿಯೋ ಹಂಚಿಕೊಂಡ ಅಸ್ಸಾಂ ಬಿಜೆಪಿ!

ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಮುಸ್ಲಿಮರಿಗೆ ಗುಂಡಿಕ್ಕಿದಂತೆ ತೋರಿಸುವ ವಿಡಿಯೋವನ್ನು ಅಸ್ಸಾಂ ಬಿಜೆಪಿಯ ರಾಜ್ಯ ಘಟಕ ತನ್ನ ಅಧಿಕೃತ ಎಕ್ಸ್ ಹ್ಯಾಂಡಲ್‌ನಲ್ಲಿ ಶನಿವಾರ (ಫೆ.7) ಹಂಚಿಕೊಂಡಿತ್ತು. ತೀವ್ರ ಆಕ್ರೋಶ ವ್ಯಕ್ತವಾದ ಬಳಿಕ ಅದನ್ನು...

ಯಾವುದೇ ಕಾರಣಕ್ಕೂ ಕೇರಳದಲ್ಲಿ ಎನ್‌ಪಿಆರ್ ಜಾರಿಯಾಗುವುದಿಲ್ಲ : ಸಿಎಂ ಪಿಣರಾಯಿ ವಿಜಯನ್

ಕೇರಳದಲ್ಲಿ ರಾಷ್ಟ್ರೀಯ ಜನಸಂಖ್ಯಾ ನೋಂದಣಿ (ಎನ್‌ಪಿಆರ್) ಯನ್ನು ಜಾರಿಗೆ ತರಲು ಬಿಡುವುದಿಲ್ಲ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಶನಿವಾರ (ಫೆ.7) ಪುನರುಚ್ಚರಿಸಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಾಕಿರುವ ಅವರು, "ಯಾವುದೇ ಸಂದರ್ಭದಲ್ಲೂ...

ಕೋಗಿಲು ಬಡಾವಣೆ ಮನೆಗಳ ನೆಲಸಮ : ವರದಿ ಸಲ್ಲಿಸಲು ಹೈಕೋರ್ಟ್ ಸೂಚನೆ

ಬೆಂಗಳೂರಿನ ಕೋಗಿಲು ಬಡಾವಣೆಯಲ್ಲಿ ಎಷ್ಟು ಮನೆಗಳನ್ನು ನೆಲಸಮ ಮಾಡಲಾಗಿದೆ. ಇದರಿಂದಾಗಿ ಎಷ್ಟು ಕುಟುಂಬಗಳು ನಿರಾಶ್ರಿತರಾಗಿದ್ದಾರೆ ಮತ್ತು ಪುನರ್ವವಸತಿಗೆ ಏನೆಲ್ಲ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂಬ ಮಾಹಿತಿಯನ್ನು ಒಳಗೊಂಡ ವರದಿ ಸಲ್ಲಿಸುವಂತೆ ಪ್ರಕರಣದಲ್ಲಿ ನ್ಯಾಯಾಲಯದ ನೆರವುಗಾರರಾಗಿರುವ...

ಫೈಝಾನ್ ಸಾವು ಪ್ರಕರಣ : ಆರು ವರ್ಷಗಳ ಬಳಿಕ ಇಬ್ಬರು ಪೊಲೀಸರಿಗೆ ಕೋರ್ಟ್ ಸಮನ್ಸ್

ಈಶಾನ್ಯ ದೆಹಲಿಯ 2020ರ ಗಲಭೆ ವೇಳೆ ಮುಸ್ಲಿಂ ಯುವಕ ಫೈಝಾನ್ ಸಾವಿಗೀಡಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಪೊಲೀಸ್ ಸಿಬ್ಬಂದಿಗೆ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ ಎಂದು ವರದಿಯಾಗಿದೆ. ಸಾವನ್ನಪ್ಪುವ ಮುನ್ನ ಇತರ ನಾಲ್ಕೈದು ಯುವಕರೊಂದಿಗೆ...

ಗಂಗಾವತಿ : ವಿದೇಶಿ ಮಹಿಳೆ ಸೇರಿ ಇಬ್ಬರ ಅತ್ಯಾಚಾರ, ಓರ್ವನ ಕೊಲೆ ಪ್ರಕರಣ : ಮೂವರು ದೋಷಿಗಳು ಎಂದ ಕೋರ್ಟ್

ಕೊಪ್ಪಳದ ಗಂಗಾವತಿ ತಾಲೂಕಿನ ಸಾಣಾಪುರ ಕೆರೆ ಬಳಿ ಸ್ಥಳೀಯ ಹೋಮ್‌ ಸ್ಟೇ ಮಾಲಕಿ ಮತ್ತು ಇಸ್ರೇಲಿ ಯುವತಿ ಮೇಲೆ ಅತ್ಯಾಚಾರವೆಸಗಿ, ಅವರ ಜೊತೆಗಿದ್ದ ಯುವಕನನ್ನು ಕೊಲೆಗೈದ ಪ್ರಕರಣದ ಮೂವರು ಆರೋಪಿಗಳನ್ನು ಒಂದನೇ ಹೆಚ್ಚುವರಿ...

ರಾಜಸ್ಥಾನದ ಬುಂಡಿಯಲ್ಲಿ ಎರಡು ಬಾಲ್ಯ ವಿವಾಹಗಳು ಸ್ಥಗಿತ; ಬಾಲಕಿಯರ ದೂರಿನ ಮೇರೆಗೆ ಅಧಿಕಾರಿಗಳ ಮಧ್ಯಪ್ರವೇಶ

ಕೋಟಾ: ಫೆಬ್ರವರಿ 10ರಂದು ನಿಗದಿಯಾಗಿದ್ದ ತಮ್ಮ ವಿವಾಹಗಳನ್ನು ನಿಲ್ಲಿಸುವಂತೆ ರಾಜಸ್ಥಾನದ ಬುಂಡಿ ಜಿಲ್ಲೆಯ 12ನೇ ತರಗತಿಯಲ್ಲಿ ಓದುತ್ತಿರುವ ಇಬ್ಬರು ಹುಡುಗಿಯರು ಅಧಿಕಾರಿಗಳನ್ನು ಸಂಪರ್ಕಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. 17 ವರ್ಷದ ಬಾಲಕಿಯೊಬ್ಬಳು ತನ್ನ...