Homeಕರ್ನಾಟಕಮೇಕೆದಾಟು: ಸರ್ವಪಕ್ಷ ಸಭೆಗೆ ಮುಂದಾದ ಬೊಮ್ಮಾಯಿ; ಒಂದು ಇಟ್ಟಿಗೆ ಇಡಲೂ ಬಿಡುವುದಿಲ್ಲ ಎಂದ ತಮಿಳುನಾಡು

ಮೇಕೆದಾಟು: ಸರ್ವಪಕ್ಷ ಸಭೆಗೆ ಮುಂದಾದ ಬೊಮ್ಮಾಯಿ; ಒಂದು ಇಟ್ಟಿಗೆ ಇಡಲೂ ಬಿಡುವುದಿಲ್ಲ ಎಂದ ತಮಿಳುನಾಡು

- Advertisement -
- Advertisement -

ಕಾವೇರಿ ನದಿಗೆ ಅಡ್ಡಲಾಗಿ ಮೇಕೆದಾಟು ಅಣೆಕಟ್ಟು ನಿರ್ಮಿಸುವ ಕುರಿತು ಸರ್ಕಾರದ ಬದ್ಧತೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತೋರಿದ್ದು, ನೆರೆಯ ತಮಿಳುನಾಡು ಜೊತೆ ಮಾತುಕತೆಯನ್ನು ತಳ್ಳಿಹಾಕಿದ್ದಾರೆ.

ಕಾನೂನು ಕುರಿತು ಚರ್ಚಿಸಲು ಶೀಘ್ರದಲ್ಲೇ ಸರ್ವಪಕ್ಷ ಸಭೆಯನ್ನು ಕರೆಯುವುದಾಗಿ ಬೊಮ್ಮಾಯಿ ಮಂಗಳವಾರ ತಿಳಿಸಿದ್ದಾರೆ. ಮೇಕೆದಾಟು ಯೋಜನೆ ಕುರಿತು ಕರ್ನಾಟಕ ಮತ್ತು ತಮಿಳುನಾಡು ನಡುವೆ ಮಾತುಕತೆ ನಡೆಸಲು ಕೇಂದ್ರ ಸರ್ಕಾರ ಸಿದ್ಧವಿದೆ ಎಂದು ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರು ಇತ್ತೀಚೆಗೆ ನೀಡಿದ ಹೇಳಿಕೆಗೆ ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಆಕ್ಷೇಪ ಎತ್ತಿದ್ದು, ಬೊಮ್ಮಾಯಿ ಪ್ರತಿಕ್ರಿಯೆ ನೀಡಿದರು.

ಬೊಮ್ಮಾಯಿ ಅವರ ಘೋಷಣೆಗೆ ಪ್ರತಿಕ್ರಿಯಿಸಿರುವ ತಮಿಳುನಾಡು ಜಲಸಂಪನ್ಮೂಲ ಸಚಿವ ದುರೈಮುರುಗನ್, ಅಣೆಕಟ್ಟು ಕಟ್ಟಲು ಒಂದೇ ಒಂದು ಇಟ್ಟಿಗೆ ಇಡಲೂ ಕರ್ನಾಟಕ ಸರ್ಕಾರಕ್ಕೆ ತಮಿಳುನಾಡು ರಾಜ್ಯ ಸರ್ಕಾರ ಅವಕಾಶ ನೀಡುವುದಿಲ್ಲ ಎಂದು ಹೇಳಿದ್ದಾರೆ.

“ಕರ್ನಾಟಕ ಸರ್ಕಾರ ಯೋಜನೆಗಾಗಿ 1,000 ಕೋಟಿ ರೂಪಾಯಿಯಲ್ಲ; 5,000 ಕೋಟಿ ರೂಪಾಯಿಗಳನ್ನು ಮೀಸಲಿಟ್ಟರೂ ಒಂದು ಇಟ್ಟಿಗೆ ಇಡಲು ತಮಿಳುನಾಡು ಸರ್ಕಾರ ಅವಕಾಶ ನೀಡುವುದಿಲ್ಲ” ಎಂದು ಪ್ರತಿಕ್ರಿಯೆ ನೀಡಿದ್ದಾರೆ.

“ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ಚರ್ಚೆಗಳು ನಡೆದಿವೆ. ವಾಸ್ತವ ಸ್ಥಿತಿಗತಿ ಎಲ್ಲರಿಗೂ ಗೊತ್ತಿದ್ದು, ಅದರ ಪರಿಣಾಮಗಳ ಕುರಿತು ಕಾನೂನು ತಜ್ಞರೊಂದಿಗೆ ಚರ್ಚಿಸಬೇಕಾಗಿದೆ” ಎಂದು ಬೊಮ್ಮಾಯಿ ಹೇಳಿದ್ದಾರೆ.

ಇದನ್ನೂ ಓದಿರಿ: ಮೇಕೆದಾಟು ಪಾದಯಾತ್ರೆ: ಮುರುಘ ಶರಣರು ಸೇರಿದಂತೆ ಹಲವು ಸ್ವಾಮೀಜಿಗಳು ಭಾಗಿ

ವಿಸ್ತೃತ ಯೋಜನಾ ವರದಿ (ಡಿಪಿಆರ್) ಅನುಮೋದನೆ, ಪರಿಸರಕ್ಕೆ ಸಂಬಂಧಿಸಿದ ಅನುಮತಿಯನ್ನು ಕೇಂದ್ರ ಸರ್ಕಾರದಿಂದ ಪಡೆದ ನಂತರ ಕಾಮಗಾರಿಗೆ ಚಾಲನೆ ನೀಡುವುದು ಕರ್ನಾಟಕದ ಮುಂದಿರುವ ಕೆಲಸ ಎಂದು ಬೊಮ್ಮಾಯಿಯವರು ತಿಳಿಸಿದ್ದು, ಕಾನೂನು ಪರಿಣಾಮಗಳ ಕುರಿತು ಈಗಾಗಲೇ ಕಾನೂನು ತಜ್ಞರೊಂದಿಗೆ ಎರಡು ಸುತ್ತಿನ ಚರ್ಚೆ ನಡೆಸಲಾಗಿದೆ. ಬಹುಶಃ ಈ ವಾರವೇ ಸರ್ವಪಕ್ಷ ಸಭೆಯನ್ನು ಕರೆಯಲಾಗುವುದು ಎಂದಿದ್ದಾರೆ.

ನ್ಯಾಯಮಂಡಳಿ ಸೂಚನೆಯಂತೆ ತಮಿಳುನಾಡಿಗೆ ಬಾಕಿ ನೀರು ನೀಡುವುದು ನಮ್ಮ ಜವಾಬ್ದಾರಿ ಎಂಬುದು ಸ್ಪಷ್ಟ. ಅದರ ಹೊರತು ನಮಗೆ ಬೇರೆ ಯಾವುದೇ ಜವಾಬ್ದಾರಿ ಇಲ್ಲ. ಆದರೆ ತಮಿಳುನಾಡು ವಿವಿಧ ಅರ್ಜಿಗಳನ್ನು ಸಲ್ಲಿಸಿದೆ. ಈ ಹಿನ್ನೆಲೆಯಲ್ಲಿ ತಜ್ಞರಿಂದ ಮಾಹಿತಿ ಪಡೆದು ಮೇಕೆದಾಟು ಕೆಲಸವನ್ನು ಆದಷ್ಟು ಬೇಗ ಪ್ರಾರಂಭಿಸಲು ನಾವೆಲ್ಲರೂ ನಿರ್ಧರಿಸೋಣ ಎಂದು ಸ್ಪಷ್ಟಪಡಿಸಿದ್ದಾರೆ.

ಯೋಜನೆಗೆ ಸಂಬಂಧಿಸಿದಂತೆ ತಮಿಳುನಾಡಿನ ವಿವಿಧ ಅರ್ಜಿಗಳು ಸುಪ್ರೀಂ ಕೋರ್ಟ್‌ನಲ್ಲಿವೆ. ಚೆನ್ನೈನಲ್ಲಿರುವ ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ ದಕ್ಷಿಣ ವಲಯ ಪೀಠವು ಈ ಹಿಂದೆ ಯೋಜನೆಗೆ ತಡೆ ನೀಡಿದೆ. ಇದನ್ನು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಲಾಗಿದೆ ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.

ಕಾವೇರಿ ನೀರಿನ ವಿಚಾರದಲ್ಲಿ ಕರ್ನಾಟಕದ ಯಾವುದೇ ಯೋಜನೆಗೆ ತಮಿಳುನಾಡು ವಿರೋಧ ವ್ಯಕ್ತಪಡಿಸುತ್ತಿದ್ದು, ಅಲ್ಲಿ ರಾಜಕೀಯ ಪ್ರಾಮುಖ್ಯತೆ ಪಡೆಯುತ್ತಿದೆ ಎಂದಿರುವ ಬೊಮ್ಮಾಯಿ, ‘ಕುಡಿಯುವ ನೀರಿಗೂ ಅವರು ವಿರೋಧಿಸುತ್ತಾರೆ, ಹೀಗಾಗಿ ಅವರ ಕೆಲವು ಯೋಜನೆಗಳಿಗೆ ನಾವೂ ಆಕ್ಷೇಪ ವ್ಯಕ್ತಪಡಿಸಿದ್ದೇವೆ’ ಎಂದಿದ್ದಾರೆ.

ಇದನ್ನೂ ಓದಿರಿ: ‘ಮೇಕೆದಾಟು’ ಮಾತ್ರವಲ್ಲ, ವಿವಿಧ ರಾಜ್ಯಗಳಲ್ಲಿವೆ ಹಲವು ಜಲ ವಿವಾದ

ಕೇಂದ್ರ ಸಚಿವರು ಪ್ರಸ್ತಾಪಿಸಿದಂತೆ ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ಮುಂದೆ ಯಾವುದೇ ಮಾತುಕತೆ ಇಲ್ಲ ಎಂದು ಮುಖ್ಯಮಂತ್ರಿ ಸ್ಪಷ್ಟಪಡಿಸಿದರು. “ಡಿಪಿಆರ್ ಅನುಮೋದನೆ ಮತ್ತು ಪರಿಸರ ಅನುಮತಿ ಪಡೆಯುವುದು ನಮ್ಮ ಮುಂದಿರುವ ಏಕೈಕ ಕಾರ್ಯಸೂಚಿಯಾಗಿದೆ” ಎಂದಿದ್ದಾರೆ.

ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಆಗ್ರಹಿಸಿ ಕಾಂಗ್ರೆಸ್ ಪಾದಯಾತ್ರೆ ಹಮ್ಮಿಕೊಂಡಿರುವುದನ್ನು ಪ್ರಸ್ತಾಪಿಸಿರುವ ಸಿದ್ದರಾಮಯ್ಯನವರು, “2018ರಲ್ಲಿ ಕಾವೇರಿ ನದಿ ನೀರು ವಿಚಾರದಲ್ಲಿ ಸುಪ್ರೀಂ ಕೋರ್ಟ್ ತೀರ್ಪು ನೀಡಿದ್ದು, ಮೇಕೆದಾಟು ಯೋಜನೆಗೆ ತಮಿಳುನಾಡು ಆಕ್ಷೇಪ ವ್ಯಕ್ತಪಡಿಸುವ ಹಕ್ಕಿಲ್ಲ” ಎಂದು ಅಭಿಪ್ರಾಯಪಟ್ಟಿದ್ದಾರೆ.

ಸಾಮಾನ್ಯ ವರ್ಷದಲ್ಲಿ 177.75 ಟಿಎಂಸಿ ನೀರಿನ ಜತೆಗೆ ಕಳೆದ ಏಳು ವರ್ಷಗಳಲ್ಲಿ 582 ಟಿಎಂಸಿ ಹೆಚ್ಚುವರಿ ನೀರು ತಮಿಳುನಾಡಿಗೆ ಹರಿದು ಬಂದಿದೆ. ತಮಿಳುನಾಡಿಗೆ ಹರಿದು ಸಮುದ್ರ ಸೇರುವ ಹೆಚ್ಚುವರಿ ನೀರು ನಮ್ಮದು ಎಂದು ಸಿದ್ದರಾಮಯ್ಯ ಪ್ರತಿಪಾದಿಸಿದ್ದಾರೆ.

ಮಧ್ಯಪ್ರವೇಶಿಸಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ ಸಿ ಮಾಧುಸ್ವಾಮಿ ಅವರು, ಕರ್ನಾಟಕಕ್ಕೂ ಒಂದು ಪ್ರಮಾಣದ ನೀರು ಹಂಚಿಕೆಯಾಗಿದೆ. ಹೆಚ್ಚುವರಿ ನೀರು ಕರ್ನಾಟಕಕ್ಕೆ ಸೇರಿದ್ದು ಎಂದು ಸುಪ್ರೀಂ ಕೋರ್ಟ್ ಹೇಳಿಲ್ಲ ಎಂದರು.

ಅದನ್ನು ತಿರಸ್ಕರಿಸಿದ ಸಿದ್ದರಾಮಯ್ಯ, ಯೋಜನೆಗೆ ನ್ಯಾಯಾಲಯದಿಂದ ತಡೆಯಾಜ್ಞೆ ಇಲ್ಲ. “ನನ್ನ ಪ್ರಕಾರ ತಮಿಳುನಾಡು ರಾಜಕೀಯ ಮತ್ತು ವೋಟ್‌ಗಾಗಿ ಯೋಜನೆಯನ್ನು ವಿರೋಧಿಸುತ್ತಿದೆ. ಕಾನೂನು, ಸಾಂವಿಧಾನಿಕವಾಗಿ ಅವರಿಗೆ ಯಾವುದೇ ಹಕ್ಕಿಲ್ಲ” ಎಂದು ಪ್ರತಿಕ್ರಿಯೆ ನೀಡಿದ್ದಾರೆ.


ಇದನ್ನೂ ಓದಿರಿ: ಮೇಕೆದಾಟು: ಸ್ಟಾಲಿನ್‌ ಸರ್ವಪಕ್ಷ ಸಭೆ ಕರೆಯಲಿ- ಕೇಂದ್ರ ಮಾಜಿ ಸಚಿವ ಒತ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....