Homeಕರ್ನಾಟಕತಂದೆಯಿಂದ ಬೆದರಿಕೆ: ಬೆಂಗಳೂರು ಪೊಲೀಸರಿಂದ ರಕ್ಷಣೆ ಕೋರಿದ ತಮಿಳುನಾಡು ಸಚಿವರ ನವವಿವಾಹಿತ ಪುತ್ರಿ!

ತಂದೆಯಿಂದ ಬೆದರಿಕೆ: ಬೆಂಗಳೂರು ಪೊಲೀಸರಿಂದ ರಕ್ಷಣೆ ಕೋರಿದ ತಮಿಳುನಾಡು ಸಚಿವರ ನವವಿವಾಹಿತ ಪುತ್ರಿ!

- Advertisement -
- Advertisement -

ತಮಿಳುನಾಡು ಹಿಂದೂ ಧಾರ್ಮಿಕ ಮತ್ತು ಧರ್ಮದತ್ತಿ ಸಚಿವ ಪಿ ಕೆ ಸೇಕರ್ ಬಾಬು ಅವರ ನವವಿವಾಹಿತ ಪುತ್ರಿ ಜಯಕಲ್ಯಾಣಿ ಸೋಮವಾರ ತನ್ನ ತಂದೆಯಿಂದ ಬೆದರಿಕೆಗೆ ಒಳಗಾಗಿ ಬೆಂಗಳೂರು ನಗರ ಪೊಲೀಸರಿಂದ ರಕ್ಷಣೆ ಕೋರಿದ್ದಾರೆ ಎಂದು ಡೆಕ್ಕನ್‌ ಹೆರಾಲ್ಡ್‌ ವರದಿ ಮಾಡಿದೆ. ಬಾಬು ಅವರು ರಾಜ್ಯದ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರ ಆಪ್ತರಾಗಿದ್ದಾರೆ ಎಂದು ಡಿಎಚ್‌ ಮೂಲಗಳನ್ನು ಉಲ್ಲೇಖಿಸಿ ವರದಿ ಮಾಡಿದೆ.

ವೈದ್ಯೆಯಾಗಿರುವ ಜಯಕಲ್ಯಾಣಿ ಅವರು ಕುಟುಂಬದವರ ತೀವ್ರ ವಿರೋಧದ ನಡುವೆಯೂ ಡಿಪ್ಲೊಮಾ ಪದವೀಧರರಾಗಿ ಉದ್ಯಮಿಯಾಗಿರುವ ಸತೀಶ್ ಕುಮಾರ್ ಅವರನ್ನು ವಿವಾಹವಾಗಿದ್ದಾರೆ.

ರಾಜ್ಯದ ವಿಜಯನಗರ ಜಿಲ್ಲೆಯ ಹಿರೇಹಡಗಲಿಯ ಹಾಲಸ್ವಾಮಿ ಮಠದಲ್ಲಿ ನಡೆದ ವಿವಾಹದ ನಂತರ ಮಾಧ್ಯಮಗಳಿಗೆ ಬಿಡುಗಡೆ ಮಾಡಿದ ವೀಡಿಯೊದಲ್ಲಿ ಮಾತನಾಡಿರುವ ಜಯಕಲ್ಯಾಣಿ, “ಸತೀಶ್ ಮತ್ತು ನಾನು ಸುಮಾರು ಆರು ವರ್ಷಗಳಿಂದ ಸ್ನೇಹ ಹೊಂದಿದ್ದೇವೆ. ಮದುವೆಯಾಗಲು ನಮ್ಮ ಮನೆಯನ್ನು ತೊರೆದು ಬಂದಿದ್ದೇವೆ. ನಾವಿಬ್ಬರೂ ಪ್ರಾಪ್ತ ವಯಸ್ಕರಾಗಿದ್ದು ಪರಸ್ಪರ ಒಪ್ಪಿಗೆಯೊಂದಿಗೆ ಮದುವೆಯ ಮಾಡಿಕೊಂಡಿದ್ದೇವೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮೇಕೆದಾಟು: ಸರ್ವಪಕ್ಷ ಸಭೆಗೆ ಮುಂದಾದ ಬೊಮ್ಮಾಯಿ; ಒಂದು ಇಟ್ಟಿಗೆ ಇಡಲೂ ಬಿಡುವುದಿಲ್ಲ ಎಂದ ತಮಿಳುನಾಡು

ಸತೀಶ್‌ ಅವರ ಕುಟುಂಬಕ್ಕೆ ಬೆದರಿಕೆ ಹಾಕಬೇಡಿ ಎಂದು ಜಯಕಲ್ಯಾಣಿ ಅವರು ತನ್ನ ತಂದೆಯಾದ ಸಚಿವ ಪಿ.ಕೆ. ಸೇಕರ್ ಬಾಬು ಅವರಿಗೆ ಮನವಿ ಮಾಡಿಕೊಂಡಿದ್ದಾರೆ. ವರದಿಯ ಪ್ರಕಾರ ಜಯಕಲ್ಯಾಣಿ ಅವರಿಗೆ 24 ವರ್ಷ, ಸತೀಶ್‌ ಅವರಿಗೆ 27 ವರ್ಷ ವಯಸ್ಸಾಗಿದೆ.

ಮೂಲಗಳ ಪ್ರಕಾರ ಹುಡುಗಿಯ ಮನೆಯವರು ಆಕೆಯನ್ನು ಬೇರೆ ಸಮುದಾಯದ ಶ್ರೀಮಂತ ಕುಟುಂಬಕ್ಕೆ ಮದುವೆ ಮಾಡಲು ಬಯಸಿದ್ದರು. ಆದರೆ ಅವರು ಸತೀಶ್ ಜೊತೆ ಮನೆಬಿಟ್ಟು ತೆರಳಿದ್ದರು. ಇದರ ನಂತರ ಚೆನ್ನೈನಲ್ಲಿ ಜಯಕಲ್ಯಾಣಿ ಕಾಣೆಯಾದ ಬಗ್ಗೆ ದೂರು ದಾಖಲಾಗಿತ್ತು.

ವಿವಾಹ ನಡೆಸುವ ಮೊದಲು ದಂಪತಿಗಳ ವಿಚಾರಗಳನ್ನು ತಮಿಳುನಾಡಿನ ನಮ್ಮ ಮೂಲಗಳ ಮೂಲಕ ಪರಿಶೀಲಿಸಿದ್ದೇವೆ ಎಂದು ಹಾಲಸ್ವಾಮಿ ಮಠದ ಅಭಿನವ ಹಾಲವೀರಪ್ಪಜ್ಜ ಸ್ವಾಮಿ ಅವರು ಡೆಕ್ಕನ್‌ ಹೆರಾಲ್ಡ್‌‌ಗೆ ತಿಳಿಸಿದ್ದಾರೆ.

“ನಾವು ಪ್ರೇಮ ವಿವಾಹಗಳನ್ನು ಬೆಂಬಲಿಸುವುದಿಲ್ಲ. ಆದರೆ ವೈದ್ಯೆಯಾಗಿರುವ ಕಲ್ಯಾಣಿ ತನ್ನ ಒಪ್ಪಿಗೆಯ ವಿರುದ್ಧ ಮದುವೆಯಾಗಲು ನಿರಾಕರಿಸಿ ತನ್ನ ಮನೆಯನ್ನು ತೊರೆದಿದ್ದಾರೆ. ಸತ್ಯಾಂಶ ತಿಳಿದುಕೊಂಡ ನಂತರವೇ ಹಿಂದೂ ಸಂಪ್ರದಾಯದಂತೆ ಮದುವೆ ನಡೆಸಿದ್ದೇವೆ” ಎಂದು ಸ್ವಾಮಿ ಹೇಳಿದ್ದಾರೆ.

ಈ ಬಗ್ಗೆ ಪೊಲೀಸ್ ಕಮಿಷನರ್ ಕಮಲ್ ಪಂತ್ ಮಾತನಾಡಿ, ಸಚಿವರ ಮಗಳು ರಕ್ಷಣೆ ಕೋರಿ ಇದುವರೆಗೆ ಅವರನ್ನು ಅಥವಾ ಅವರ ಕಚೇರಿಯನ್ನು ಸಂಪರ್ಕಿಸಿಲ್ಲ ಎಂದು ಹೇಳಿದ್ದಾರೆ.

ತಮಿಳುನಾಡು ಪೊಲೀಸರು ತಮಗೆ ಸಹಾಯ ಮಾಡಿಲ್ಲ ಎಂದು ಜಯಕಲ್ಯಾಣಿ ಆರೋಪಿಸಿದ್ದಾರೆ. ಡಿಎಂಕೆ ಸರ್ಕಾರದಲ್ಲಿ ಸಚಿವರಾಗಿರುವ ತನ್ನ ತಂದೆ ತನಗೆ ಬೆದರಿಕೆ ಹಾಕಲು ಸಚಿವ ಸ್ಥಾನವನ್ನು ಬಳಸುತ್ತಿದ್ದಾರೆ, ಹೀಗಾಗಿ ಅವರು ಪೊಲೀಸರ ಬೆಂಬಲವನ್ನು ಕೋರಿ ಬೆಂಗಳೂರಿಗೆ ಬಂದಿದ್ದಾರೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ತಮಿಳುನಾಡು-ನ್ಯೂಸ್‌18ಗೆ ಮಾಜಿ ಸಿಎಂ ಪಳನಿಸ್ವಾಮಿಯಿಂದ ಲೀಗಲ್‌ ನೋಟಿಸ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...