Homeಕರ್ನಾಟಕತಂದೆಯಿಂದ ಬೆದರಿಕೆ: ಬೆಂಗಳೂರು ಪೊಲೀಸರಿಂದ ರಕ್ಷಣೆ ಕೋರಿದ ತಮಿಳುನಾಡು ಸಚಿವರ ನವವಿವಾಹಿತ ಪುತ್ರಿ!

ತಂದೆಯಿಂದ ಬೆದರಿಕೆ: ಬೆಂಗಳೂರು ಪೊಲೀಸರಿಂದ ರಕ್ಷಣೆ ಕೋರಿದ ತಮಿಳುನಾಡು ಸಚಿವರ ನವವಿವಾಹಿತ ಪುತ್ರಿ!

- Advertisement -
- Advertisement -

ತಮಿಳುನಾಡು ಹಿಂದೂ ಧಾರ್ಮಿಕ ಮತ್ತು ಧರ್ಮದತ್ತಿ ಸಚಿವ ಪಿ ಕೆ ಸೇಕರ್ ಬಾಬು ಅವರ ನವವಿವಾಹಿತ ಪುತ್ರಿ ಜಯಕಲ್ಯಾಣಿ ಸೋಮವಾರ ತನ್ನ ತಂದೆಯಿಂದ ಬೆದರಿಕೆಗೆ ಒಳಗಾಗಿ ಬೆಂಗಳೂರು ನಗರ ಪೊಲೀಸರಿಂದ ರಕ್ಷಣೆ ಕೋರಿದ್ದಾರೆ ಎಂದು ಡೆಕ್ಕನ್‌ ಹೆರಾಲ್ಡ್‌ ವರದಿ ಮಾಡಿದೆ. ಬಾಬು ಅವರು ರಾಜ್ಯದ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರ ಆಪ್ತರಾಗಿದ್ದಾರೆ ಎಂದು ಡಿಎಚ್‌ ಮೂಲಗಳನ್ನು ಉಲ್ಲೇಖಿಸಿ ವರದಿ ಮಾಡಿದೆ.

ವೈದ್ಯೆಯಾಗಿರುವ ಜಯಕಲ್ಯಾಣಿ ಅವರು ಕುಟುಂಬದವರ ತೀವ್ರ ವಿರೋಧದ ನಡುವೆಯೂ ಡಿಪ್ಲೊಮಾ ಪದವೀಧರರಾಗಿ ಉದ್ಯಮಿಯಾಗಿರುವ ಸತೀಶ್ ಕುಮಾರ್ ಅವರನ್ನು ವಿವಾಹವಾಗಿದ್ದಾರೆ.

ರಾಜ್ಯದ ವಿಜಯನಗರ ಜಿಲ್ಲೆಯ ಹಿರೇಹಡಗಲಿಯ ಹಾಲಸ್ವಾಮಿ ಮಠದಲ್ಲಿ ನಡೆದ ವಿವಾಹದ ನಂತರ ಮಾಧ್ಯಮಗಳಿಗೆ ಬಿಡುಗಡೆ ಮಾಡಿದ ವೀಡಿಯೊದಲ್ಲಿ ಮಾತನಾಡಿರುವ ಜಯಕಲ್ಯಾಣಿ, “ಸತೀಶ್ ಮತ್ತು ನಾನು ಸುಮಾರು ಆರು ವರ್ಷಗಳಿಂದ ಸ್ನೇಹ ಹೊಂದಿದ್ದೇವೆ. ಮದುವೆಯಾಗಲು ನಮ್ಮ ಮನೆಯನ್ನು ತೊರೆದು ಬಂದಿದ್ದೇವೆ. ನಾವಿಬ್ಬರೂ ಪ್ರಾಪ್ತ ವಯಸ್ಕರಾಗಿದ್ದು ಪರಸ್ಪರ ಒಪ್ಪಿಗೆಯೊಂದಿಗೆ ಮದುವೆಯ ಮಾಡಿಕೊಂಡಿದ್ದೇವೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮೇಕೆದಾಟು: ಸರ್ವಪಕ್ಷ ಸಭೆಗೆ ಮುಂದಾದ ಬೊಮ್ಮಾಯಿ; ಒಂದು ಇಟ್ಟಿಗೆ ಇಡಲೂ ಬಿಡುವುದಿಲ್ಲ ಎಂದ ತಮಿಳುನಾಡು

ಸತೀಶ್‌ ಅವರ ಕುಟುಂಬಕ್ಕೆ ಬೆದರಿಕೆ ಹಾಕಬೇಡಿ ಎಂದು ಜಯಕಲ್ಯಾಣಿ ಅವರು ತನ್ನ ತಂದೆಯಾದ ಸಚಿವ ಪಿ.ಕೆ. ಸೇಕರ್ ಬಾಬು ಅವರಿಗೆ ಮನವಿ ಮಾಡಿಕೊಂಡಿದ್ದಾರೆ. ವರದಿಯ ಪ್ರಕಾರ ಜಯಕಲ್ಯಾಣಿ ಅವರಿಗೆ 24 ವರ್ಷ, ಸತೀಶ್‌ ಅವರಿಗೆ 27 ವರ್ಷ ವಯಸ್ಸಾಗಿದೆ.

ಮೂಲಗಳ ಪ್ರಕಾರ ಹುಡುಗಿಯ ಮನೆಯವರು ಆಕೆಯನ್ನು ಬೇರೆ ಸಮುದಾಯದ ಶ್ರೀಮಂತ ಕುಟುಂಬಕ್ಕೆ ಮದುವೆ ಮಾಡಲು ಬಯಸಿದ್ದರು. ಆದರೆ ಅವರು ಸತೀಶ್ ಜೊತೆ ಮನೆಬಿಟ್ಟು ತೆರಳಿದ್ದರು. ಇದರ ನಂತರ ಚೆನ್ನೈನಲ್ಲಿ ಜಯಕಲ್ಯಾಣಿ ಕಾಣೆಯಾದ ಬಗ್ಗೆ ದೂರು ದಾಖಲಾಗಿತ್ತು.

ವಿವಾಹ ನಡೆಸುವ ಮೊದಲು ದಂಪತಿಗಳ ವಿಚಾರಗಳನ್ನು ತಮಿಳುನಾಡಿನ ನಮ್ಮ ಮೂಲಗಳ ಮೂಲಕ ಪರಿಶೀಲಿಸಿದ್ದೇವೆ ಎಂದು ಹಾಲಸ್ವಾಮಿ ಮಠದ ಅಭಿನವ ಹಾಲವೀರಪ್ಪಜ್ಜ ಸ್ವಾಮಿ ಅವರು ಡೆಕ್ಕನ್‌ ಹೆರಾಲ್ಡ್‌‌ಗೆ ತಿಳಿಸಿದ್ದಾರೆ.

“ನಾವು ಪ್ರೇಮ ವಿವಾಹಗಳನ್ನು ಬೆಂಬಲಿಸುವುದಿಲ್ಲ. ಆದರೆ ವೈದ್ಯೆಯಾಗಿರುವ ಕಲ್ಯಾಣಿ ತನ್ನ ಒಪ್ಪಿಗೆಯ ವಿರುದ್ಧ ಮದುವೆಯಾಗಲು ನಿರಾಕರಿಸಿ ತನ್ನ ಮನೆಯನ್ನು ತೊರೆದಿದ್ದಾರೆ. ಸತ್ಯಾಂಶ ತಿಳಿದುಕೊಂಡ ನಂತರವೇ ಹಿಂದೂ ಸಂಪ್ರದಾಯದಂತೆ ಮದುವೆ ನಡೆಸಿದ್ದೇವೆ” ಎಂದು ಸ್ವಾಮಿ ಹೇಳಿದ್ದಾರೆ.

ಈ ಬಗ್ಗೆ ಪೊಲೀಸ್ ಕಮಿಷನರ್ ಕಮಲ್ ಪಂತ್ ಮಾತನಾಡಿ, ಸಚಿವರ ಮಗಳು ರಕ್ಷಣೆ ಕೋರಿ ಇದುವರೆಗೆ ಅವರನ್ನು ಅಥವಾ ಅವರ ಕಚೇರಿಯನ್ನು ಸಂಪರ್ಕಿಸಿಲ್ಲ ಎಂದು ಹೇಳಿದ್ದಾರೆ.

ತಮಿಳುನಾಡು ಪೊಲೀಸರು ತಮಗೆ ಸಹಾಯ ಮಾಡಿಲ್ಲ ಎಂದು ಜಯಕಲ್ಯಾಣಿ ಆರೋಪಿಸಿದ್ದಾರೆ. ಡಿಎಂಕೆ ಸರ್ಕಾರದಲ್ಲಿ ಸಚಿವರಾಗಿರುವ ತನ್ನ ತಂದೆ ತನಗೆ ಬೆದರಿಕೆ ಹಾಕಲು ಸಚಿವ ಸ್ಥಾನವನ್ನು ಬಳಸುತ್ತಿದ್ದಾರೆ, ಹೀಗಾಗಿ ಅವರು ಪೊಲೀಸರ ಬೆಂಬಲವನ್ನು ಕೋರಿ ಬೆಂಗಳೂರಿಗೆ ಬಂದಿದ್ದಾರೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ತಮಿಳುನಾಡು-ನ್ಯೂಸ್‌18ಗೆ ಮಾಜಿ ಸಿಎಂ ಪಳನಿಸ್ವಾಮಿಯಿಂದ ಲೀಗಲ್‌ ನೋಟಿಸ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...