Homeಮುಖಪುಟಬಜೆಟ್ ಮಂಡಿಸಲು ಹಸುವಿನ ಸಗಣಿಯಿಂದ ತಯಾರಿಸಿದ ಬ್ರೀಫ್‌ಕೇಸ್‌ ತಂದ ಛತ್ತೀಸ್‌ಗಢ ಸಿಎಂ!

ಬಜೆಟ್ ಮಂಡಿಸಲು ಹಸುವಿನ ಸಗಣಿಯಿಂದ ತಯಾರಿಸಿದ ಬ್ರೀಫ್‌ಕೇಸ್‌ ತಂದ ಛತ್ತೀಸ್‌ಗಢ ಸಿಎಂ!

- Advertisement -
- Advertisement -

ಛತ್ತೀಸ್‌ಗಢ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಅವರು ರಾಜ್ಯ ಬಜೆಟ್ ಮಂಡಿಸಲು ಹಸುವಿನ ಸಗಣಿಯಿಂದ ತಯಾರಿಸಿದ ಬ್ರೀಫ್‌ಕೇಸ್‌ನೊಂದಿಗೆ ರಾಜ್ಯದ ವಿಧಾನಸಭೆಗೆ ತೆರಳಿದ ಆಶ್ಚರ್ಯಕರ ಘಟನೆ ಬುಧವಾರ ನಡೆದಿದೆ.

2022-23ರ ಆರ್ಥಿಕ ವರ್ಷಕ್ಕೆ ರಾಜ್ಯ ಬಜೆಟ್ ಮಂಡಿಸಲು ಮುಖ್ಯಮಂತ್ರಿ ಬಘೇಲ್‌ ಅವರು ವಿಧಾನಸಭೆಗೆ ಹಸುವಿನ ಸಗಣಿಯಿಂದ ಮಾಡಿದ ಚೌಕಾಕಾರದ ಬ್ರೀಫ್‌ಕೇಸ್‌ ಅನ್ನು ಹಿಡಿದುಕೊಂಡು ಪ್ರವೇಶಿಸಿದ್ದಾರೆ.

ಛತ್ತೀಸ್‌ಗಢ ವಿಧಾನಸಭೆಯ ಬಜೆಟ್ ಅಧಿವೇಶನ ಸೋಮವಾರ ಆರಂಭಗೊಂಡಿದ್ದು, 2022-23ನೇ ಸಾಲಿನ ರಾಜ್ಯದ ಬಜೆಟ್ ಅನ್ನು ಬುಧವಾರ ಸದನದಲ್ಲಿ ಮಂಡಿಸಲಾಯಿತು.

ಇದಕ್ಕೂ ಮುನ್ನ ಭೂಪೇಶ್ ಬಘೇಲ್ ಅವರು ಕೃಷಿಯನ್ನು ಹೆಚ್ಚು ಲಾಭದಾಯಕವಾಗಿಸಲು ಕ್ರಮಗಳನ್ನು ಕೈಗೊಂಡರು. ಜೊತೆಗೆ ಬಿಡಾಡಿ ದನಗಳ ಸಮಸ್ಯೆಯನ್ನು ಪರಿಹರಿಸಲು, ಸಾವಯವ ಕೃಷಿಯನ್ನು ಉತ್ತೇಜಿಸಲು ಮತ್ತು ಗ್ರಾಮೀಣ ಆರ್ಥಿಕತೆಗೆ ನೆರವು ಘೋಷಿಸಿದ್ದಾರೆ.

2020 ರಲ್ಲಿ, ಕಾಂಗ್ರೆಸ್ ಆಡಳಿತದ ಛತ್ತೀಸ್‌ಗಢ ಸರ್ಕಾರವು ಹಸು ಸಾಕಣೆದಾರರು ಮತ್ತು ರೈತರಿಂದ ಹಸುವಿನ ಸಗಣಿ ಸಂಗ್ರಹಿಸುವುದಾಗಿ ಘೋಷಿಸಿತ್ತು. ಈ ಘೋಷಣೆಯನ್ನು ಮಾಡಿದ ದೇಶದ ಮೊದಲ ರಾಜ್ಯ  ಛತ್ತೀಸ್‌ಗಢವಾಗಿದೆ.

ರಾಜ್ಯದ ‘ಗೋಧನ್ ನ್ಯಾಯ್’ ಎಂಬ ಯೋಜನೆಯು ಜಾನುವಾರು ಮಾಲೀಕರಿಗೆ ಸಗಣಿ ಸಂಗ್ರಹಣೆಯ ಮೂಲಕ ಆದಾಯದ ಬೆಂಬಲವನ್ನು ಒದಗಿಸುವ ಉದ್ದೇಶವನ್ನು ಹೊಂದಿದ್ದು, ರಾಜ್ಯದಲ್ಲಿನ ರಾಸಾಯನಿಕ ಗೊಬ್ಬರಗಳ ಕೊರತೆಯನ್ನು ಪರಿಹರಿಸಲು ಭೂಪೇಶ್ ಬಘೇಲ್ ಸರ್ಕಾರವು ವರ್ಮಿಕಾಂಪೋಸ್ಟ್‌‌ಗಾಗಿ ಇದನ್ನು ಬಳಸಿಕೊಳ್ಳುತ್ತಿದೆ.

ಭೂಪೇಶ್ ಬಘೇಲ್ ಮಾತ್ರವಲ್ಲ, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಉನ್ನತ ನಾಯಕರು ಗ್ರಾಮೀಣ ಆರ್ಥಿಕತೆಯನ್ನು ಹೆಚ್ಚಿಸಲು ಗೋವಿನ ಸಗಣಿ ಬಳಕೆಯನ್ನು ಪ್ರಸ್ತಾಪಿಸಿದ್ದಾರೆ.

ಕಳೆದ ವರ್ಷ ಡಿಸೆಂಬರ್‌ನಲ್ಲಿ ರಾಸಾಯನಿಕ ಗೊಬ್ಬರಗಳನ್ನು ತ್ಯಜಿಸುವಂತೆ ರೈತರನ್ನು ಒತ್ತಾಯಿಸಿದ್ದ ಪ್ರಧಾನಿ ಮೋದಿ, “ನಾವು ಸಾವಯವ ಕೃಷಿ ವಿಧಾನಗಳಿಗೆ ಬದಲಾಗಬೇಕಾಗಿದೆ… ದೇಸಿ ಹಸುವಿನ ಸಗಣಿ ಮತ್ತು ಮೂತ್ರವು ನಿಮ್ಮ ಕೃಷಿ ಉತ್ಪನ್ನಗಳನ್ನು ರಕ್ಷಿಸಲು ಮತ್ತು ಉತ್ಪಾದಕತೆಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಇದನ್ನು ಸ್ವಾಭಾವಿಕವಾಗಿ ಮಾಡಬಹುದು” ಎಂದು ಹೇಳಿದ್ದರು.

ಇದನ್ನೂ ಓದಿ: ಸಿಬಿಐಗಿದ್ದ ಸಮ್ಮತಿಯನ್ನು ಹಿಂಪಡೆದ ಮೇಘಾಲಯ: ಒಂಬತ್ತು ರಾಜ್ಯಗಳಲ್ಲಿ ಸಿಬಿಐಗೆ ಎಂಟ್ರಿ ಇಲ್ಲ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಇಷ್ಟೊಂದು‌ ಮೂಢನಂಬಿಕೆ ಇನ್ನೂ ನಮ್ಮ‌ ಜನಗಳಲ್ಲಿ ಇದೆಯಲ್ಲಾ……

LEAVE A REPLY

Please enter your comment!
Please enter your name here

- Advertisment -

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...