Homeಸಿನಿಮಾಕ್ರೀಡೆಶೇನ್ ವಾರ್ನ್: ಮೂರು ಹೆಜ್ಜೆ ಗುರುತುಗಳು ನೂರಾರು ಕವಲು ದಾರಿಗಳು ಸಾವಿರದೊಂದು ರಹದಾರಿಗಳು!

ಶೇನ್ ವಾರ್ನ್: ಮೂರು ಹೆಜ್ಜೆ ಗುರುತುಗಳು ನೂರಾರು ಕವಲು ದಾರಿಗಳು ಸಾವಿರದೊಂದು ರಹದಾರಿಗಳು!

- Advertisement -
- Advertisement -

ಅದು ಸೀದಾಸಾದಾ ಮೂರೇಮೂರು ಹೆಜ್ಜೆ.. ತೋಳ್ಬಲದ ಜೊತೆಗೆ ಮಣಿಕಟ್ಟು ಮೂಲಕ ಕೈಬೆರಳಿನಲ್ಲಿ ಚೆಂಡನ್ನು ತಿರುಗಿಸುವ ಜಾದುಗಾರ! ಬುಗರಿಯಂತೆ ಗಾಳಿಯಲ್ಲಿ ತೇಲಿ ಬರುವ ಎಸೆತ. ಬ್ಯಾಟ್ಸ್‌ಮೆನ್‌ನನ್ನು ಒಂದುಕ್ಷಣ ತಬ್ಬಿಬ್ಬುಗೊಳಿಸುವ ಮಾಂತ್ರಿಕ!

ಕ್ರಿಕೆಟ್ ಜಗತ್ತಿನಲ್ಲಿ ಹತ್ತಾರು ಸ್ಪಿನ್ ಮಾಂತ್ರಿಕರು ಬಂದು ಹೋಗಿದ್ದಾರೆ. ಆದರೆ, ಶೇನ್ ವಾರ್ನ್ ಎಂಬ ಆ ಒಂದು ಹೆಸರು ಮಾತ್ರ ಎಂದೂ ಅಚ್ಚಳಿಯದ ಅಚ್ಚರಿಯೇ ಸರಿ. ಪುಟ್ಟಪುಟ್ಟ ಮೂರು ಹೆಜ್ಜೆಗಳನ್ನಿಟ್ಟು ಬಲಗೈನ ಮೂರು ಬೆರಳನ್ನು ಉಪಯೋಗಿಸಿ ಲೆಗ್‌ಸ್ಪಿನ್ ಮಾಡುವ ಮೂಲಕ ವಿಕೆಟ್‌ಅನ್ನು ಯ:ಕಶ್ಚಿತ್ ಮ್ಯಾಜಿಕ್ ರೀತಿಯಲ್ಲಿ ಉಡಾಯಿಸುತ್ತಿದ್ದ ಪರಿಗೆ ಇಡೀ ಜಗತ್ತೇ ತಲೆದೂಗಿತ್ತು.

ತನ್ನ ಪ್ರತಿಭೆ, ಸಾಮರ್ಥ್ಯದ ಮೇಲೆ ಅತಿಯಾದ ಆತ್ಮವಿಶ್ವಾಸವನ್ನು ಹೊಂದಿರುವ ಹುಂಬ ಮನುಷ್ಯ ಎಷ್ಟೆಲ್ಲಾ ಸಾಧನೆಗಳನ್ನು ಮಾಡಬಹುದು, ದಾಖಲೆಗಳ ಶಿಖರದ ಮೂಲಕ ಮುಂದಿನ ಪೀಳಿಗೆಗೂ ತಾನು ಹೇಗೆ ಸವಾಲು ಎಸೆಯಬಹುದು ಎಂಬುದಕ್ಕೆ ಉದಾಹರಣೆಯಂತೆ ಬದುಕಿದ್ದ ಸಾಧಕ ವಾರ್ನ್. ಮುಂದುವರಿದು ಹೇಳಬೇಕೆಂದರೆ ಆತ ಬ್ಯಾಟ್ಸ್‌ಮೆನ್‌ನ ಮನಸ್ಥಿತಿಯನ್ನು ಅರಿತುಕೊಳ್ಳುವ ಸಾಮರ್ಥ್ಯ ಹೊಂದಿದ್ದ ಮನಃಶಾಸ್ತ್ರಜ್ಞ. ಶಸ್ತ್ರಚಿಕಿತ್ಸೆ ಮಾಡುವ ಡಾಕ್ಟರ್‌ನಂತೆ ಏಕಾಗ್ರತೆಯಿಂದ ತನ್ನ ಬೌಲಿಂಗ್ ಲಯ ಮತ್ತು ನಿಖರತೆಯನ್ನು ಕಾಯ್ಡುಕೊಳ್ಳುವ ಸ್ಪಿನ್ ಡಾಕ್ಟರ್ ಆತ!

ಶೋಕಿ, ದುಶ್ಚಟಗಳ ದಾಸ, ವಿವಾದಗಳು, ವಾಕ್ಸಮರಗಳು ಆತನ ಯಶಸ್ಸಿನ ಸುತ್ತ
ಅಂಟಿಕೊಂಡಿರುವ ಕಪ್ಪುಚುಕ್ಕೆಗಳೇನೋ ಹೌದು. ಆದರೂ, ಆತನ ಸಾಧನೆಯ ಮುಂದೆ ಆ ತಪ್ಪುಗಳೆಲ್ಲವೂ ಮರೆಯಾಗುತ್ತಿದ್ದವು. ಇಡೀ ಕ್ರಿಕೆಟ್ ಜಗತ್ತು ಆತನ ಯಶಸ್ಸನ್ನು ಪಕ್ಕಕ್ಕಿಟ್ಟು ಕರೆಯುತ್ತಿದ್ದದ್ದು ಕ್ರಿಕೆಟ್‌ನ ಬ್ಯಾಡ್ ಬಾಯ್ ಎಂದು.

ಆತನ ಬೌಲಿಂಗ್ ಬತ್ತಳಿಕೆಯಲ್ಲಿದ್ದ ಅಸ್ತ್ರಗಳೇ ವಿಭಿನ್ನ. ಅದನ್ನು ಅರ್ಥಮಾಡಿಕೊಳ್ಳುವುದು ಸಹ ಅಷ್ಟೇ ಕಷ್ಟ. ಎದುರಾಳಿ ಬ್ಯಾಟ್ಸ್‌ಮೆನ್‌ಗಳ ಆತ್ಮವಿಶ್ವಾಸವನ್ನು ಕುಗ್ಗಿಸುವಂತಹ ಸಾಮರ್ಥ್ಯ
ಆತನ ಬೌಲಿಂಗ್‌ನಲ್ಲಿತ್ತು. ಅದಕ್ಕಾಗಿ ಏನು ಬೇಕಾದ್ರೂ ಮಾಡುವ ಕಲೆಯೂ ಚೆನ್ನಾಗಿಯೇ ಗೊತ್ತಿತ್ತು. ಹಾಗಾಗಿಯೇ ಶೇನ್ ವಾರ್ನ್ ಜಂಟಲ್‌ಮ್ಯಾನ್ ಆಟದ ಜಂಟಲ್‌ಮ್ಯಾನ್ ಆಟಗಾರನಲ್ಲದಿದ್ದರೂ, ಆತನನ್ನು ವಿಶ್ವದ ಸರ್ವಶ್ರೇಷ್ಠ ಸ್ಪಿನ್ನರ್ ಅಂತ ಕರೆಯಲಾಗುತ್ತದೆ. ವಿಶ್ವದ ಶ್ರೇಷ್ಠ ಬ್ಯಾಟ್ಸ್‌ಮೆನ್‌ಗಳನ್ನು ದಿಗ್ಭ್ರಮೆಗೊಳಿಸಿದ್ದ ಮಾಂತ್ರಿಕ ಬೌಲರ್ ಆತ.

ಆತನ ಸ್ವಭಾವ, ವ್ಯಕ್ತಿತ್ವಗಳನ್ನು ಬದಿಗಿಟ್ಟು ಕ್ರಿಕೆಟ್ ಮೈದಾನದಲ್ಲಿ ಆತ ಮಾಡಿರುವ ಕರಾಮತ್ತಿನಿಂದ ಯುವಪೀಳಿಗೆಗೆ ಸ್ಫೂರ್ತಿಯ ಚಿಲುಮೆ ಎಂಬುದರಲ್ಲಿ ಎರಡು ಮಾತಿಲ್ಲ. ಆತನ ಬೌಲಿಂಗ್ ಶೈಲಿಯನ್ನು ಅನುಕರಣೆ ಮಾಡಿಕೊಂಡವರು ಅನೇಕರಿದ್ದಾರೆ. ಈ ಸಾಲಿನಲ್ಲಿ ಶೇನ್ ವಾರ್ನ್‌ನನ್ನು ಬಹುವಾಗಿ ಕಾಡಿದ್ದ ಭಾರತದ ಸಚಿನ್ ತೆಂಡೂಲ್ಕರ್ ಸಹ ಇದ್ದಾರೆ. ಈ ಎಲ್ಲವನ್ನೂ ಮೀರಿ ಶೇನ್ ವಾರ್ನ್‌ಗೆ ಯುವ ಪ್ರತಿಭೆಗಳನ್ನು ಗುರುತಿಸಿ, ಪ್ರೋತ್ಸಾಹಿಸುವ ಗುಣಗಳಿದ್ದವು. ಹಾಗಾಗಿಯೇ ಆತ ವಿಶ್ವ ಕ್ರಿಕೆಟ್‌ನ ಎವರ್‌ಗ್ರೀನ್ ಹೀರೋ ಆಗಿಬಿಟ್ಟ!

ಇದನ್ನೂ ಓದಿ: ಉದ್ಯಮವಾಗಿ ರೂಪುಗೊಳ್ಳುತ್ತಿರುವ ಕ್ರಿಕೆಟ್ ಮೈದಾನಗಳು

ವಿಶ್ವದ ಶ್ರೀಮಂತ ಕ್ರಿಕೆಟ್ ಲೀಗ್ ಎನಿಸಿಕೊಂಡ ಐಪಿಎಲ್‌ನಲ್ಲಿ ಯುವ ಪ್ರತಿಭೆಗಳನ್ನು ಗುರುತಿಸಿ ಅವರಿಗೆ ಉತ್ತಮ ವೇದಿಕೆ ನೀಡುವ ಮೂಲಕ ಭವಿಷ್ಯವನ್ನು ಕಟ್ಟಿಕೊಟ್ಟದ್ದು ಇದೇ ವಾರ್ನ್. ಮೊದಲ ಋತುವಿನಲ್ಲೇ ರಾಜಸ್ತಾನ ರಾಯಲ್ಸ್ ತಂಡದ ನಾಯಕ ಮತ್ತು ಕೋಚ್ ಆಗಿ ಕಣ ಪ್ರವೇಶಿಸಿದ್ದ ವಾರ್ನ್ ಅಂದು ತಮ್ಮ ತಂಡದಲ್ಲಿ ರವೀಂದ್ರ ಜಡೇಜಾ ಸೇರಿದಂತೆ ಅನೇಕ ಯುವಕರಿಗೆ ಅವಕಾಶ ನೀಡಿದ್ದರು. ತಮ್ಮ ಅನುಭವದ ಮೂಲಕ ಮಾರ್ಗದರ್ಶನವನ್ನೂ ಧಾರೆ ಎರೆದಿದ್ದರು. ಪರಿಣಾಮ ಮೊದಲ ಆವೃತ್ತಿಯಲ್ಲೇ ರಾಜಸ್ಥಾನ ಚಾಂಪಿಯನ್ ಪಟ್ಟ ಧರಿಸಿತು, ಭಾರತದ ಆಲ್‌ರೌಂಡರ್ ಜಡೇಜಾ ಏರಿರುವ ಉತ್ತುಂಗ ಎಲ್ಲರಿಗೂ ತಿಳಿದೇ ಇದೆ.

ಆತ ಚೆಂಡನ್ನು ಕೈ ಬೆರಳಿನಲ್ಲೇ ಆಡಿಸುವ ಮೋಡಿಗಾರ. ಏರಿಳಿತಗಳ ನಡುವೆಯೇ ಯಶಸ್ಸಿನ ಉತ್ತುಂಗಕ್ಕೇರಿದ್ದ ಅತ್ಯದ್ಭುತ ಬೌಲರ್. ಕವಲು ದಾರಿಯ ಕಲ್ಲು ಮುಳ್ಳಿನ ಹಾದಿಯಲ್ಲಿ ನಡೆದು ಬಂದ ಚಾಣಕ್ಯ. ಮೂರು ಹೆಜ್ಜೆಗಳನ್ನು ಹಾಕಿ 22 ಯಾರ್ಡ್‌ನ ಪಿಚ್‌ನಲ್ಲಿ ಆತ ಮಾಡಿರುವ ಮೋಡಿಯನ್ನು ಕ್ರಿಕೆಟ್ ಜಗತ್ತು ಎಂದೆಂದೂ ಮರೆಯಲು ಸಾಧ್ಯವಿಲ್ಲ.

ಕವಲುದಾರಿಯನ್ನು ರಹದಾರಿಯನ್ನಾಗಿಸಿಕೊಂಡು ಪ್ರತಿ ವಿಕೆಟ್‌ಅನ್ನೂ ಒಂದೊಂದು ಮೈಲುಗಲ್ಲಾಗಿಸಿಕೊಂಡಿದ್ದ. ಒಟ್ಟಾರೆ ಕ್ರಿಕೆಟ್ ವೃತ್ತಿಜೀವನದಲ್ಲಿ 1001 ಅಂತಾರಾಷ್ಟ್ರೀಯ ವಿಕೆಟ್‌ಗಳನ್ನು ಉರುಳಿಸಿದ. ಟೆಸ್ಟ್ ಕ್ರಿಕೆಟ್‌ನಲ್ಲಿ 700 ವಿಕೆಟ್‌ಗಳಿಸಿದ ಮೊದಲ ಬೌಲರ್ ಎಂಬ ಶ್ರೇಯಕ್ಕೂ ಪಾತ್ರನಾದ. ಆದರೆ, ತನ್ನ ವಿಕೆಟ್ ಗಳಿಕೆ ಸಾವಿರದೊಂದು ತಲುಪುವಷ್ಟರಲ್ಲಿ ಕ್ರಿಕೆಟ್ ಸಾಕು ಎಂದು ಆತನಿಗೆ ಅನ್ನಿಸಿಬಿಟ್ಟಿತ್ತು. ಅದಕ್ಕೊಂದು ಸಲಾಂ ಹೊಡೆದು ತನ್ನ ಎರಡನೇ ಇನಿಂಗ್ಸ್‌ನ ಬದುಕನ್ನು ಚೆನ್ನಾಗಿಯೇ ಎಂಜಾಯ್ ಮಾಡುತ್ತಿದ್ದ.

ಮೈದಾನದಲ್ಲಿ ವಿಕೆಟ್ ಪಡೆದ ಹಾಗೇ ವಿದಾಯದ ನಂತರ ಒಂದೊಂದು ದುಶ್ಚಟಗಳನ್ನು ಹವ್ಯಾಸವನ್ನಾಗಿಸಿಕೊಂಡ. ಆರೋಗ್ಯದ ಕಡೆ ಗಮನ ಹರಿಸಲಿಲ್ಲ. ಅಷ್ಟರಲ್ಲೇ ವಿಧಿಯ ಆಟಕ್ಕೆ ಈ ಲೋಕವನ್ನೇ ಬಿಟ್ಟು ಹೋದ ಈ ಮಹಾನ್ ಕ್ರಿಕೆಟಿಗ.

ಹೌದು, ಶೇನ್ ವಾರ್ನ್, ಮೂರು ಹೆಜ್ಜೆ ಗುರುತುಗಳು.. ನೂರಾರು ಕವಲು ದಾರಿಗಳು… ಸಾವಿರದೊಂದು ರಹದಾರಿಗಳು! ಇನ್ನು ನೆನಪು ಮಾತ್ರ.


ಇದನ್ನೂ ಓದಿ: ನಾಗರಾಜ್‌ ಮಂಜುಳೆಯ ‘ಝುಂಡ್‌’: ಕ್ರೀಡಾ ಜಗತ್ತಿನ ‘ಅಸ್ಪೃಶ್ಯ ಭಾರತ ದರ್ಶನ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...

ವಿಮಾನ ಅಪಘಾತದಲ್ಲಿ ಅಜಿತ್ ಪವಾರ್ ಸಾವು : ಪಿತೂರಿ ಶಂಕೆ ವ್ಯಕ್ತಪಡಿಸಿದ ಮಮತಾ ಬ್ಯಾನರ್ಜಿ, ಉನ್ನತ ಮಟ್ಟದ ತನಿಖೆಗೆ ಒತ್ತಾಯಿಸಿದ ರಾಜಕೀಯ ನಾಯಕರು

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಸಾವಿಗೆ ಕಾರಣವಾದ ಬಾರಾಮತಿ ವಿಮಾನ ಪತನದ ಕುರಿತು ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸಬೇಕೆಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ (ಜ.28) ಒತ್ತಾಯಿಸಿದ್ದಾರೆ....

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯ ತಡೆಯಲು ಯುಜಿಸಿ ಹೊಸ ನಿಯಮ; ಮುಂದುವರೆದ ಪ್ರಬಲಜಾತಿ ಗುಂಪಿನ ವಿರೋಧ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ಪರಿಹರಿಸುವ ಗುರಿಯನ್ನು ಹೊಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಪರಿಷ್ಕೃತ ನಿಯಮಗಳ ಕುರಿತು ದೇಶದಲ್ಲಿ ಭಾರಿ ರಾಜಕೀಯ ವಾಗ್ವಾದ ಭುಗಿಲೆದ್ದಿದೆ. ಹೊಸ ಮಾರ್ಗಸೂಚಿಗಳ ಕುರಿತು...

ಜನಸೇನಾ ಶಾಸಕನಿಂದ ಅತ್ಯಾಚಾರ, ಬಲವಂತದ ಗರ್ಭಪಾತ : ಮಹಿಳೆ ಆರೋಪ

ಆಂಧ್ರ ಪ್ರದೇಶದ ರೈಲ್ವೆ ಕೊಡೂರು ವಿಧಾನಸಭಾ ಕ್ಷೇತ್ರದ ಜನ ಸೇನಾ ಶಾಸಕ ಮತ್ತು ಸರ್ಕಾರಿ ಸಚೇತಕ ಅರವ ಶ್ರೀಧರ್ ವಿರುದ್ಧ ಮಹಿಳೆಯೊಬ್ಬರು ಅತ್ಯಾಚಾರ ಮತ್ತು ಬಲವಂತದ ಗರ್ಭಪಾತ ಆರೋಪ ಮಾಡಿದ್ದಾರೆ. ಈ ಕುರಿತು ವಿಡಿಯೋ...

ಬಾರಾಮತಿ ವಿಮಾನ ಅಪಘಾತದಲ್ಲಿ ಅಜಿತ್ ಪವಾರ್ ನಿಧನ; ಸಂತಾಪ ಸೂಚಿಸಿದ ಪ್ರಮುಖರು

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ಐವರು ಜನರು ಪ್ರಯಾಣಿಸುತ್ತಿದ್ದ ವಿಮಾನ ಬುಧವಾರ ಬೆಳಿಗ್ಗೆ ಪುಣೆ ಜಿಲ್ಲೆಯಲ್ಲಿ ಪತನಗೊಂಡು ಸಾವನ್ನಪ್ಪಿದ್ದಾರೆ. ಎನ್‌ಸಿಪಿ ನಾಯಕರಾದ ಅಜಿತ್ ಪವಾರ್ (66) ಮತ್ತು ಇತರರನ್ನು ಹೊತ್ತೊಯ್ಯುತ್ತಿದ್ದ...

ಗುರುಗ್ರಾಮ ಮತ್ತು ಚಂಡೀಗಢದ ಶಾಲೆಗಳಲ್ಲಿ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ: ವಿದ್ಯಾರ್ಥಿಗಳ ಸ್ಥಳಾಂತರ

ಗುರುಗ್ರಾಮ್‌ನ ಕನಿಷ್ಠ ಆರು ಖಾಸಗಿ ಶಾಲೆಗಳಿಗೆ ಬುಧವಾರ ಬೆಳಿಗ್ಗೆ ಬಾಂಬ್ ಬೆದರಿಕೆ ಇಮೇಲ್‌ಗಳು ಬಂದಿದ್ದು, ದೊಡ್ಡ ಪ್ರಮಾಣದ ಸ್ಥಳಾಂತರ ಮತ್ತು ಭದ್ರತಾ ತಪಾಸಣೆಗಳನ್ನು ನಡೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.  ಬೆಳಿಗ್ಗೆ 7:10 ರ ಸುಮಾರಿಗೆ...

ಜಿಲ್ಲಾ ಸಹಕಾರಿ ಬ್ಯಾಂಕ್‌ನಿಂದ ಮಹಾರಾಷ್ಟ್ರ ಡಿಸಿಎಂ ಆಗುವವರೆಗೆ: ಅಜಿತ್ ಪವಾರ್ ರಾಜಕೀಯ ಹೆಜ್ಜೆಗಳು

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಬುಧವಾರ ಬಾರಾಮತಿಯಲ್ಲಿ ಲ್ಯಾಂಡ್‌ ಆಗಲು ಪ್ರಯತ್ನಿಸುವಾಗ ಅವರು ಪ್ರಯಾಣಿಸುತ್ತಿದ್ದ ವಿಮಾನ ಅಪಘಾತಕ್ಕೀಡಾಗಿ ನಿಧನರಾದರು. ಈ ಅಪಘಾತ ಮೂಲಕ, ಮಹಾರಾಷ್ಟ್ರದ ಅತ್ಯಂತ ಪ್ರಭಾವಶಾಲಿ ಮತ್ತು ಶಾಶ್ವತ ರಾಜಕೀಯ ವ್ಯಕ್ತಿಗಳಲ್ಲಿ...