Homeಅಂತರಾಷ್ಟ್ರೀಯNATO ಸದಸ್ಯತ್ವಕ್ಕೆ ಇನ್ನು ಮುಂದೆ ಒತ್ತಾಯಿಸುವುದಿಲ್ಲ; ಮಾತುಕತೆಗೆ ಒಪ್ಪಿಕೊಂಡ ಝೆಲೆನ್ಸ್ಕಿ!

NATO ಸದಸ್ಯತ್ವಕ್ಕೆ ಇನ್ನು ಮುಂದೆ ಒತ್ತಾಯಿಸುವುದಿಲ್ಲ; ಮಾತುಕತೆಗೆ ಒಪ್ಪಿಕೊಂಡ ಝೆಲೆನ್ಸ್ಕಿ!

- Advertisement -
- Advertisement -

ಭುಗಿಲೆದ್ದಿರುವ ಯುದ್ಧದ ನಡುವೆ, ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್‌‌ ಝೆಲೆನ್ಸ್ಕಿ ಅವರು ಉಕ್ರೇನ್‌ಗೆ ನ್ಯಾಟೋ ಸದಸ್ಯತ್ವಕ್ಕಾಗಿ ಇನ್ನು ಮುಂದೆ ಒತ್ತಾಯಿಸುವುದಿಲ್ಲ ಎಂದು ಹೇಳಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ. ರಷ್ಯಾ ಸರ್ಕಾರ ಉಕ್ರೇನ್‌ ವಿರುದ್ದ ಯುದ್ಧ ಘೋಷಣೆ ಮಾಡಲು ಪ್ರಮುಖ ಕಾರಣ ‘ನ್ಯಾಟೊ’ ಆಗಿದೆ ಎಂದು ಎಎಫ್‌ಪಿ ಮಂಗಳವಾರ ವರದಿ ಮಾಡಿದೆ.

“ನಾವು ಅದನ್ನು ಅರ್ಥಮಾಡಿಕೊಂಡಿದ್ದು, ಈ ಪ್ರಶ್ನೆಗೆ ಸಂಬಂಧಿಸಿದಂತೆ ಬಹಳ ಹಿಂದೆಯೇ ನಾನು ಸುಮ್ಮನಾಗಿದ್ದೇನೆ… ನ್ಯಾಟೊ ಉಕ್ರೇನ್ ಅನ್ನು ಸ್ವೀಕರಿಸಲು ಸಿದ್ಧವಾಗಿಲ್ಲ” ಎಂದು ABC ನ್ಯೂಸ್‌ನಲ್ಲಿ ಸೋಮವಾರ ರಾತ್ರಿ ಪ್ರಸಾರವಾದ ಸಂದರ್ಶನದಲ್ಲಿ ಝೆಲೆನ್ಸ್ಕಿ ಹೇಳಿದ್ದಾರೆ.

“ನ್ಯಾಟೋ ಮೈತ್ರಿಯು ವಿವಾದಿತ ಸಂಗತಿಗಳಿಂದ ದೂರ ಉಳಿದಿದ್ದು, ರಷ್ಯಾ ಜೊತೆಗಿನ ಸಂಘರ್ಷಕ್ಕೆ ಹೆದರುತ್ತಿದೆ” ಎಂದು ಝೆಲೆನ್ಸ್ಕಿ ತಿಳಿಸಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ನಾಟಕೀಯ ವಿಡಿಯೊವನ್ನು ನಿಜ ಘಟನೆ ಎಂದು ಬಿಂಬಿಸಿ ‘ಸುಳ್ಳು ಸುದ್ದಿ’ ಪ್ರಕಟಿಸಿದ ನ್ಯೂಸ್‌‌18 ಕನ್ನಡ!

ರಷ್ಯಾವನ್ನು ಸಮಾಧಾನಪಡಿಸುವ ರೀತಿಯಲ್ಲಿ ಮಾತನಾಡಿರುವ ಝೆಲೆನ್ಸ್ಕಿ, “ಫೆಬ್ರವರಿ 24 ರಂದು ಆಕ್ರಮಣವನ್ನು ಪ್ರಾರಂಭಿಸುವ ಮೊದಲು ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಸ್ವತಂತ್ರವೆಂದು ಗುರುತಿಸಿದ ಎರಡು ಪ್ಯಾಂತ್ಯಗಳಾದ ಡೊನೆಟ್‌ಸ್ಕ್ ಮತ್ತು ಲುಗಾನ್‌ಸ್ಕ್ ಪ್ರದೇಶಗಳನ್ನು ಸ್ವಾಯತ್ತ ಪ್ರಾಂತ್ಯ ಎಂದು ಒಪ್ಪಿ ತಾನು ರಾಜಿ ಮಾಡಿಕೊಳ್ಳಲು ಮುಕ್ತವಾಗಿದ್ದೇನೆ” ಎಂದು ಹೇಳಿದ್ದಾರೆ.

NATO ಸದಸ್ಯತ್ವವನ್ನು ಉಲ್ಲೇಖಿಸಿದ ಝೆಲೆನ್ಸ್ಕಿ, “ಮೊಣಕಾಲುಗಳನ್ನು ಊರಿ ಬೇಡಿಕೊಳ್ಳುವ ದೇಶದ ಅಧ್ಯಕ್ಷನಾಗಲು ನಾನು ಬಯಸುವುದಿಲ್ಲ” ಎಂದು ಹೇಳಿದ್ದಾರೆ. ಅವರ ಈ ಹೇಳಿಕೆಯು, ಅಮೆರಿಕಾ ನೇತೃತ್ವದ NATO ಮಿತ್ರರಾಷ್ಟ್ರಗಳ ನಿಲುವಿನ ಬಗ್ಗೆ ನಿರಾಶೆಯನ್ನು ಪ್ರತಿಬಿಂಬಿಸುತ್ತದೆ.

ಸೋವಿಯತ್ ಒಕ್ಕೂಟದಿಂದ ಯುರೋಪ್ ಅನ್ನು ರಕ್ಷಿಸಲು ಶೀತಲ ಸಮರದ ಪ್ರಾರಂಭದಲ್ಲಿ ರಚಿಸಲಾದ ಒಕ್ಕೂಟವಾಗಿದೆ NATO. ಈ ನ್ಯಾಟೊಗೆ ನೆರೆಯ ಉಕ್ರೇನ್ ಸೇರುವುದನ್ನು ತಾನು ಇಷ್ಟ ಪಡುವುದಿಲ್ಲ ಎಂದು ರಷ್ಯಾ ಹೇಳಿದೆ. ಇತ್ತೀಚಿನ ವರ್ಷಗಳಲ್ಲಿ ನ್ಯಾಟೊ ರಷ್ಯಾದ ಸುತ್ತಮುತ್ತಲಿನ ದೇಶಗಳಲ್ಲಿ ತನ್ನ ಪ್ರಭಾವನ್ನು ವಿಸ್ತರಿಸಿತ್ತು. ಇದು ರಷ್ಯಾವನ್ನು ಕೆರಳಿಸಿತ್ತು. ರಷ್ಯಾ ದೇಶವು NATO ವಿಸ್ತರಣೆಯನ್ನು ತನ್ನ ದೇಶಕ್ಕೆ ಬೆದರಿಕೆಯಾಗಿ ನೋಡುತ್ತದೆ. ಯಾಕೆಂದರೆ ನ್ಯಾಟೊ ತನ್ನ ಮಿತ್ರ ರಾಷ್ಟ್ರಗಳಲ್ಲಿ ಮಿಲಿಟರಿಗಳನ್ನು ನೆಲೆಯನ್ನು ವಿಸ್ತರಿಸುತ್ತಾ, ತನ್ನ ಬಾಗಿಲಿಗೆ ಬರುತ್ತದೆ ಎಂಬುವುದು ರಷ್ಯಾದ ವಾದವಾಗಿದೆ.

ಇದನ್ನೂ ಓದಿ: ಉಕ್ರೇನ್‌ನಿಂದ ಬಂದಿರುವ ವೈದ್ಯ ವಿದ್ಯಾರ್ಥಿಗಳ ಭವಿಷ್ಯವೇನು?: ಎಚ್.ಡಿ. ಕುಮಾರಸ್ವಾಮಿ ಪ್ರಶ್ನೆ

ಉಕ್ರೇನ್‌ ಆಕ್ರಮಣಕ್ಕೆ ಆದೇಶ ನೀಡುವ ಮೂಲಕ ಜಗತ್ತನ್ನು ಬೆಚ್ಚಿಬೀಳಿಸುವ ಸ್ವಲ್ಪ ಸಮಯದ ಮೊದಲು, ರಷ್ಯಾ ಅಧ್ಯಕ್ಷ ಪುಟಿನ್ ಪೂರ್ವ ಉಕ್ರೇನ್‌ನ ಡೊನೆಟ್ಸ್ಕ್ ಮತ್ತು ಲುಗಾನ್ಸ್ಕ್ ಎಂಬ ಎರಡು ಪ್ರತ್ಯೇಕತಾವಾದಿ ಪ್ರಾಂತ್ಯಗಳನ್ನು ರಷ್ಯನ್‌ ಪರ “ಗಣರಾಜ್ಯಗಳು” ಎಂದು ಗುರುತಿಸಿಕೊಂಡಿದ್ದರು. ಈ ಎರಡು ಪ್ರಾಂತ್ಯಗಳು 2014 ರಿಂದ ಉಕ್ರೇನ್ ವಿರುದ್ದ ಸಂಘರ್ಷದಲ್ಲಿದೆ. ಉಕ್ರೇನ್ ಕೂಡ ತಮ್ಮನ್ನು ಸಾರ್ವಭೌಮ ಮತ್ತು ಸ್ವತಂತ್ರ ಎಂದು ಗುರುತಿಸಿಕೊಳ್ಳಲಿ ಎಂದು ಪುಟಿನ್‌ ಬಯಸುತ್ತಿದ್ದಾರೆ.

ರಷ್ಯಾದ ಈ ಬೇಡಿಕೆಯ ಬಗ್ಗೆ ಎಬಿಸಿ ಸಂದರ್ಶನದಲ್ಲಿ ಮಾತನಾಡಿದ ಝೆಲೆನ್ಸ್ಕಿ, ತಾನು ಮಾತುಕತೆಗೆ ಮುಕ್ತನಾಗಿದ್ದೇನೆ ಎಂದು ಹೇಳಿದ್ದಾರೆ. “ನಾನು ಭದ್ರತಾ ಖಾತರಿಗಳ ಬಗ್ಗೆ ಮಾತನಾಡುತ್ತಿದ್ದೇನೆ. ಈ ಎರಡು ಪ್ರದೇಶಗಳು ಮುಂದೆ ಹೇಗಿರಬೇಕು ಎನ್ನುವ ಕುರಿತು ನಾವು ಚರ್ಚಿಸುತ್ತೇವೆ ಮತ್ತು ರಾಜಿ ಮಾಡಿಕೊಳ್ಳುತ್ತೇವೆ” ಎಂದು ಅವರು ಹೇಳಿದ್ದಾರೆ.

“ಉಕ್ರೇನ್‌ನ ಭಾಗವಾಗಲು ಬಯಸುವ, ಉಕ್ರೇನ್‌ನಲ್ಲಿ ಇರುವ ಆ ಪ್ರಾಂತ್ಯಗಳಲ್ಲಿನ ಜನರು ಹೇಗೆ ಬದುಕುತ್ತಾರೆ ಎಂಬುದು ನನಗೆ ಮುಖ್ಯವಾದುದು. ಆದ್ದರಿಂದ ಈ ಪ್ರಶ್ನೆಯನ್ನು ಸರಳವಾಗಿ ಒಪ್ಪಿಕೊಳ್ಳುವುದು ಹೆಚ್ಚು ಕಷ್ಟವಾಗಿದೆ. ಅಧ್ಯಕ್ಷ ಪುಟಿನ್ ಮಾತನಾಡಲು ಪ್ರಾರಂಭಿಸಲು ಏನು ಮಾಡಬೇಕು, ಮಾತುಕತೆ ಪ್ರಾರಂಭಿಸಿ” ಎಂದು ಝೆಲೆನ್ಸ್ಕಿ ಹೇಳಿದ್ದಾರೆ.

ಇದನ್ನೂ ಓದಿ: ನಿಮ್ಮ ದೌರ್ಬಲ್ಯದಿಂದಾಗಿ ನಮ್ಮ ಜನ ಸಾಯುತ್ತಿದ್ದಾರೆ: ನೋ-ಫ್ಲೈ ಝೋನ್ ಹೇರದ NATO ವಿರುದ್ಧ ಕಿಡಿಕಾರಿದ ಉಕ್ರೇನ್ ಅಧ್ಯಕ್ಷ ಝೆಲೆನ್ಸ್ಕಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...