Homeಅಂತರಾಷ್ಟ್ರೀಯNATO ಸದಸ್ಯತ್ವಕ್ಕೆ ಇನ್ನು ಮುಂದೆ ಒತ್ತಾಯಿಸುವುದಿಲ್ಲ; ಮಾತುಕತೆಗೆ ಒಪ್ಪಿಕೊಂಡ ಝೆಲೆನ್ಸ್ಕಿ!

NATO ಸದಸ್ಯತ್ವಕ್ಕೆ ಇನ್ನು ಮುಂದೆ ಒತ್ತಾಯಿಸುವುದಿಲ್ಲ; ಮಾತುಕತೆಗೆ ಒಪ್ಪಿಕೊಂಡ ಝೆಲೆನ್ಸ್ಕಿ!

- Advertisement -
- Advertisement -

ಭುಗಿಲೆದ್ದಿರುವ ಯುದ್ಧದ ನಡುವೆ, ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್‌‌ ಝೆಲೆನ್ಸ್ಕಿ ಅವರು ಉಕ್ರೇನ್‌ಗೆ ನ್ಯಾಟೋ ಸದಸ್ಯತ್ವಕ್ಕಾಗಿ ಇನ್ನು ಮುಂದೆ ಒತ್ತಾಯಿಸುವುದಿಲ್ಲ ಎಂದು ಹೇಳಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ. ರಷ್ಯಾ ಸರ್ಕಾರ ಉಕ್ರೇನ್‌ ವಿರುದ್ದ ಯುದ್ಧ ಘೋಷಣೆ ಮಾಡಲು ಪ್ರಮುಖ ಕಾರಣ ‘ನ್ಯಾಟೊ’ ಆಗಿದೆ ಎಂದು ಎಎಫ್‌ಪಿ ಮಂಗಳವಾರ ವರದಿ ಮಾಡಿದೆ.

“ನಾವು ಅದನ್ನು ಅರ್ಥಮಾಡಿಕೊಂಡಿದ್ದು, ಈ ಪ್ರಶ್ನೆಗೆ ಸಂಬಂಧಿಸಿದಂತೆ ಬಹಳ ಹಿಂದೆಯೇ ನಾನು ಸುಮ್ಮನಾಗಿದ್ದೇನೆ… ನ್ಯಾಟೊ ಉಕ್ರೇನ್ ಅನ್ನು ಸ್ವೀಕರಿಸಲು ಸಿದ್ಧವಾಗಿಲ್ಲ” ಎಂದು ABC ನ್ಯೂಸ್‌ನಲ್ಲಿ ಸೋಮವಾರ ರಾತ್ರಿ ಪ್ರಸಾರವಾದ ಸಂದರ್ಶನದಲ್ಲಿ ಝೆಲೆನ್ಸ್ಕಿ ಹೇಳಿದ್ದಾರೆ.

“ನ್ಯಾಟೋ ಮೈತ್ರಿಯು ವಿವಾದಿತ ಸಂಗತಿಗಳಿಂದ ದೂರ ಉಳಿದಿದ್ದು, ರಷ್ಯಾ ಜೊತೆಗಿನ ಸಂಘರ್ಷಕ್ಕೆ ಹೆದರುತ್ತಿದೆ” ಎಂದು ಝೆಲೆನ್ಸ್ಕಿ ತಿಳಿಸಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ನಾಟಕೀಯ ವಿಡಿಯೊವನ್ನು ನಿಜ ಘಟನೆ ಎಂದು ಬಿಂಬಿಸಿ ‘ಸುಳ್ಳು ಸುದ್ದಿ’ ಪ್ರಕಟಿಸಿದ ನ್ಯೂಸ್‌‌18 ಕನ್ನಡ!

ರಷ್ಯಾವನ್ನು ಸಮಾಧಾನಪಡಿಸುವ ರೀತಿಯಲ್ಲಿ ಮಾತನಾಡಿರುವ ಝೆಲೆನ್ಸ್ಕಿ, “ಫೆಬ್ರವರಿ 24 ರಂದು ಆಕ್ರಮಣವನ್ನು ಪ್ರಾರಂಭಿಸುವ ಮೊದಲು ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಸ್ವತಂತ್ರವೆಂದು ಗುರುತಿಸಿದ ಎರಡು ಪ್ಯಾಂತ್ಯಗಳಾದ ಡೊನೆಟ್‌ಸ್ಕ್ ಮತ್ತು ಲುಗಾನ್‌ಸ್ಕ್ ಪ್ರದೇಶಗಳನ್ನು ಸ್ವಾಯತ್ತ ಪ್ರಾಂತ್ಯ ಎಂದು ಒಪ್ಪಿ ತಾನು ರಾಜಿ ಮಾಡಿಕೊಳ್ಳಲು ಮುಕ್ತವಾಗಿದ್ದೇನೆ” ಎಂದು ಹೇಳಿದ್ದಾರೆ.

NATO ಸದಸ್ಯತ್ವವನ್ನು ಉಲ್ಲೇಖಿಸಿದ ಝೆಲೆನ್ಸ್ಕಿ, “ಮೊಣಕಾಲುಗಳನ್ನು ಊರಿ ಬೇಡಿಕೊಳ್ಳುವ ದೇಶದ ಅಧ್ಯಕ್ಷನಾಗಲು ನಾನು ಬಯಸುವುದಿಲ್ಲ” ಎಂದು ಹೇಳಿದ್ದಾರೆ. ಅವರ ಈ ಹೇಳಿಕೆಯು, ಅಮೆರಿಕಾ ನೇತೃತ್ವದ NATO ಮಿತ್ರರಾಷ್ಟ್ರಗಳ ನಿಲುವಿನ ಬಗ್ಗೆ ನಿರಾಶೆಯನ್ನು ಪ್ರತಿಬಿಂಬಿಸುತ್ತದೆ.

ಸೋವಿಯತ್ ಒಕ್ಕೂಟದಿಂದ ಯುರೋಪ್ ಅನ್ನು ರಕ್ಷಿಸಲು ಶೀತಲ ಸಮರದ ಪ್ರಾರಂಭದಲ್ಲಿ ರಚಿಸಲಾದ ಒಕ್ಕೂಟವಾಗಿದೆ NATO. ಈ ನ್ಯಾಟೊಗೆ ನೆರೆಯ ಉಕ್ರೇನ್ ಸೇರುವುದನ್ನು ತಾನು ಇಷ್ಟ ಪಡುವುದಿಲ್ಲ ಎಂದು ರಷ್ಯಾ ಹೇಳಿದೆ. ಇತ್ತೀಚಿನ ವರ್ಷಗಳಲ್ಲಿ ನ್ಯಾಟೊ ರಷ್ಯಾದ ಸುತ್ತಮುತ್ತಲಿನ ದೇಶಗಳಲ್ಲಿ ತನ್ನ ಪ್ರಭಾವನ್ನು ವಿಸ್ತರಿಸಿತ್ತು. ಇದು ರಷ್ಯಾವನ್ನು ಕೆರಳಿಸಿತ್ತು. ರಷ್ಯಾ ದೇಶವು NATO ವಿಸ್ತರಣೆಯನ್ನು ತನ್ನ ದೇಶಕ್ಕೆ ಬೆದರಿಕೆಯಾಗಿ ನೋಡುತ್ತದೆ. ಯಾಕೆಂದರೆ ನ್ಯಾಟೊ ತನ್ನ ಮಿತ್ರ ರಾಷ್ಟ್ರಗಳಲ್ಲಿ ಮಿಲಿಟರಿಗಳನ್ನು ನೆಲೆಯನ್ನು ವಿಸ್ತರಿಸುತ್ತಾ, ತನ್ನ ಬಾಗಿಲಿಗೆ ಬರುತ್ತದೆ ಎಂಬುವುದು ರಷ್ಯಾದ ವಾದವಾಗಿದೆ.

ಇದನ್ನೂ ಓದಿ: ಉಕ್ರೇನ್‌ನಿಂದ ಬಂದಿರುವ ವೈದ್ಯ ವಿದ್ಯಾರ್ಥಿಗಳ ಭವಿಷ್ಯವೇನು?: ಎಚ್.ಡಿ. ಕುಮಾರಸ್ವಾಮಿ ಪ್ರಶ್ನೆ

ಉಕ್ರೇನ್‌ ಆಕ್ರಮಣಕ್ಕೆ ಆದೇಶ ನೀಡುವ ಮೂಲಕ ಜಗತ್ತನ್ನು ಬೆಚ್ಚಿಬೀಳಿಸುವ ಸ್ವಲ್ಪ ಸಮಯದ ಮೊದಲು, ರಷ್ಯಾ ಅಧ್ಯಕ್ಷ ಪುಟಿನ್ ಪೂರ್ವ ಉಕ್ರೇನ್‌ನ ಡೊನೆಟ್ಸ್ಕ್ ಮತ್ತು ಲುಗಾನ್ಸ್ಕ್ ಎಂಬ ಎರಡು ಪ್ರತ್ಯೇಕತಾವಾದಿ ಪ್ರಾಂತ್ಯಗಳನ್ನು ರಷ್ಯನ್‌ ಪರ “ಗಣರಾಜ್ಯಗಳು” ಎಂದು ಗುರುತಿಸಿಕೊಂಡಿದ್ದರು. ಈ ಎರಡು ಪ್ರಾಂತ್ಯಗಳು 2014 ರಿಂದ ಉಕ್ರೇನ್ ವಿರುದ್ದ ಸಂಘರ್ಷದಲ್ಲಿದೆ. ಉಕ್ರೇನ್ ಕೂಡ ತಮ್ಮನ್ನು ಸಾರ್ವಭೌಮ ಮತ್ತು ಸ್ವತಂತ್ರ ಎಂದು ಗುರುತಿಸಿಕೊಳ್ಳಲಿ ಎಂದು ಪುಟಿನ್‌ ಬಯಸುತ್ತಿದ್ದಾರೆ.

ರಷ್ಯಾದ ಈ ಬೇಡಿಕೆಯ ಬಗ್ಗೆ ಎಬಿಸಿ ಸಂದರ್ಶನದಲ್ಲಿ ಮಾತನಾಡಿದ ಝೆಲೆನ್ಸ್ಕಿ, ತಾನು ಮಾತುಕತೆಗೆ ಮುಕ್ತನಾಗಿದ್ದೇನೆ ಎಂದು ಹೇಳಿದ್ದಾರೆ. “ನಾನು ಭದ್ರತಾ ಖಾತರಿಗಳ ಬಗ್ಗೆ ಮಾತನಾಡುತ್ತಿದ್ದೇನೆ. ಈ ಎರಡು ಪ್ರದೇಶಗಳು ಮುಂದೆ ಹೇಗಿರಬೇಕು ಎನ್ನುವ ಕುರಿತು ನಾವು ಚರ್ಚಿಸುತ್ತೇವೆ ಮತ್ತು ರಾಜಿ ಮಾಡಿಕೊಳ್ಳುತ್ತೇವೆ” ಎಂದು ಅವರು ಹೇಳಿದ್ದಾರೆ.

“ಉಕ್ರೇನ್‌ನ ಭಾಗವಾಗಲು ಬಯಸುವ, ಉಕ್ರೇನ್‌ನಲ್ಲಿ ಇರುವ ಆ ಪ್ರಾಂತ್ಯಗಳಲ್ಲಿನ ಜನರು ಹೇಗೆ ಬದುಕುತ್ತಾರೆ ಎಂಬುದು ನನಗೆ ಮುಖ್ಯವಾದುದು. ಆದ್ದರಿಂದ ಈ ಪ್ರಶ್ನೆಯನ್ನು ಸರಳವಾಗಿ ಒಪ್ಪಿಕೊಳ್ಳುವುದು ಹೆಚ್ಚು ಕಷ್ಟವಾಗಿದೆ. ಅಧ್ಯಕ್ಷ ಪುಟಿನ್ ಮಾತನಾಡಲು ಪ್ರಾರಂಭಿಸಲು ಏನು ಮಾಡಬೇಕು, ಮಾತುಕತೆ ಪ್ರಾರಂಭಿಸಿ” ಎಂದು ಝೆಲೆನ್ಸ್ಕಿ ಹೇಳಿದ್ದಾರೆ.

ಇದನ್ನೂ ಓದಿ: ನಿಮ್ಮ ದೌರ್ಬಲ್ಯದಿಂದಾಗಿ ನಮ್ಮ ಜನ ಸಾಯುತ್ತಿದ್ದಾರೆ: ನೋ-ಫ್ಲೈ ಝೋನ್ ಹೇರದ NATO ವಿರುದ್ಧ ಕಿಡಿಕಾರಿದ ಉಕ್ರೇನ್ ಅಧ್ಯಕ್ಷ ಝೆಲೆನ್ಸ್ಕಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...