Homeಅಂತರಾಷ್ಟ್ರೀಯNATO ಸದಸ್ಯತ್ವಕ್ಕೆ ಇನ್ನು ಮುಂದೆ ಒತ್ತಾಯಿಸುವುದಿಲ್ಲ; ಮಾತುಕತೆಗೆ ಒಪ್ಪಿಕೊಂಡ ಝೆಲೆನ್ಸ್ಕಿ!

NATO ಸದಸ್ಯತ್ವಕ್ಕೆ ಇನ್ನು ಮುಂದೆ ಒತ್ತಾಯಿಸುವುದಿಲ್ಲ; ಮಾತುಕತೆಗೆ ಒಪ್ಪಿಕೊಂಡ ಝೆಲೆನ್ಸ್ಕಿ!

- Advertisement -
- Advertisement -

ಭುಗಿಲೆದ್ದಿರುವ ಯುದ್ಧದ ನಡುವೆ, ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್‌‌ ಝೆಲೆನ್ಸ್ಕಿ ಅವರು ಉಕ್ರೇನ್‌ಗೆ ನ್ಯಾಟೋ ಸದಸ್ಯತ್ವಕ್ಕಾಗಿ ಇನ್ನು ಮುಂದೆ ಒತ್ತಾಯಿಸುವುದಿಲ್ಲ ಎಂದು ಹೇಳಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ. ರಷ್ಯಾ ಸರ್ಕಾರ ಉಕ್ರೇನ್‌ ವಿರುದ್ದ ಯುದ್ಧ ಘೋಷಣೆ ಮಾಡಲು ಪ್ರಮುಖ ಕಾರಣ ‘ನ್ಯಾಟೊ’ ಆಗಿದೆ ಎಂದು ಎಎಫ್‌ಪಿ ಮಂಗಳವಾರ ವರದಿ ಮಾಡಿದೆ.

“ನಾವು ಅದನ್ನು ಅರ್ಥಮಾಡಿಕೊಂಡಿದ್ದು, ಈ ಪ್ರಶ್ನೆಗೆ ಸಂಬಂಧಿಸಿದಂತೆ ಬಹಳ ಹಿಂದೆಯೇ ನಾನು ಸುಮ್ಮನಾಗಿದ್ದೇನೆ… ನ್ಯಾಟೊ ಉಕ್ರೇನ್ ಅನ್ನು ಸ್ವೀಕರಿಸಲು ಸಿದ್ಧವಾಗಿಲ್ಲ” ಎಂದು ABC ನ್ಯೂಸ್‌ನಲ್ಲಿ ಸೋಮವಾರ ರಾತ್ರಿ ಪ್ರಸಾರವಾದ ಸಂದರ್ಶನದಲ್ಲಿ ಝೆಲೆನ್ಸ್ಕಿ ಹೇಳಿದ್ದಾರೆ.

“ನ್ಯಾಟೋ ಮೈತ್ರಿಯು ವಿವಾದಿತ ಸಂಗತಿಗಳಿಂದ ದೂರ ಉಳಿದಿದ್ದು, ರಷ್ಯಾ ಜೊತೆಗಿನ ಸಂಘರ್ಷಕ್ಕೆ ಹೆದರುತ್ತಿದೆ” ಎಂದು ಝೆಲೆನ್ಸ್ಕಿ ತಿಳಿಸಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ನಾಟಕೀಯ ವಿಡಿಯೊವನ್ನು ನಿಜ ಘಟನೆ ಎಂದು ಬಿಂಬಿಸಿ ‘ಸುಳ್ಳು ಸುದ್ದಿ’ ಪ್ರಕಟಿಸಿದ ನ್ಯೂಸ್‌‌18 ಕನ್ನಡ!

ರಷ್ಯಾವನ್ನು ಸಮಾಧಾನಪಡಿಸುವ ರೀತಿಯಲ್ಲಿ ಮಾತನಾಡಿರುವ ಝೆಲೆನ್ಸ್ಕಿ, “ಫೆಬ್ರವರಿ 24 ರಂದು ಆಕ್ರಮಣವನ್ನು ಪ್ರಾರಂಭಿಸುವ ಮೊದಲು ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಸ್ವತಂತ್ರವೆಂದು ಗುರುತಿಸಿದ ಎರಡು ಪ್ಯಾಂತ್ಯಗಳಾದ ಡೊನೆಟ್‌ಸ್ಕ್ ಮತ್ತು ಲುಗಾನ್‌ಸ್ಕ್ ಪ್ರದೇಶಗಳನ್ನು ಸ್ವಾಯತ್ತ ಪ್ರಾಂತ್ಯ ಎಂದು ಒಪ್ಪಿ ತಾನು ರಾಜಿ ಮಾಡಿಕೊಳ್ಳಲು ಮುಕ್ತವಾಗಿದ್ದೇನೆ” ಎಂದು ಹೇಳಿದ್ದಾರೆ.

NATO ಸದಸ್ಯತ್ವವನ್ನು ಉಲ್ಲೇಖಿಸಿದ ಝೆಲೆನ್ಸ್ಕಿ, “ಮೊಣಕಾಲುಗಳನ್ನು ಊರಿ ಬೇಡಿಕೊಳ್ಳುವ ದೇಶದ ಅಧ್ಯಕ್ಷನಾಗಲು ನಾನು ಬಯಸುವುದಿಲ್ಲ” ಎಂದು ಹೇಳಿದ್ದಾರೆ. ಅವರ ಈ ಹೇಳಿಕೆಯು, ಅಮೆರಿಕಾ ನೇತೃತ್ವದ NATO ಮಿತ್ರರಾಷ್ಟ್ರಗಳ ನಿಲುವಿನ ಬಗ್ಗೆ ನಿರಾಶೆಯನ್ನು ಪ್ರತಿಬಿಂಬಿಸುತ್ತದೆ.

ಸೋವಿಯತ್ ಒಕ್ಕೂಟದಿಂದ ಯುರೋಪ್ ಅನ್ನು ರಕ್ಷಿಸಲು ಶೀತಲ ಸಮರದ ಪ್ರಾರಂಭದಲ್ಲಿ ರಚಿಸಲಾದ ಒಕ್ಕೂಟವಾಗಿದೆ NATO. ಈ ನ್ಯಾಟೊಗೆ ನೆರೆಯ ಉಕ್ರೇನ್ ಸೇರುವುದನ್ನು ತಾನು ಇಷ್ಟ ಪಡುವುದಿಲ್ಲ ಎಂದು ರಷ್ಯಾ ಹೇಳಿದೆ. ಇತ್ತೀಚಿನ ವರ್ಷಗಳಲ್ಲಿ ನ್ಯಾಟೊ ರಷ್ಯಾದ ಸುತ್ತಮುತ್ತಲಿನ ದೇಶಗಳಲ್ಲಿ ತನ್ನ ಪ್ರಭಾವನ್ನು ವಿಸ್ತರಿಸಿತ್ತು. ಇದು ರಷ್ಯಾವನ್ನು ಕೆರಳಿಸಿತ್ತು. ರಷ್ಯಾ ದೇಶವು NATO ವಿಸ್ತರಣೆಯನ್ನು ತನ್ನ ದೇಶಕ್ಕೆ ಬೆದರಿಕೆಯಾಗಿ ನೋಡುತ್ತದೆ. ಯಾಕೆಂದರೆ ನ್ಯಾಟೊ ತನ್ನ ಮಿತ್ರ ರಾಷ್ಟ್ರಗಳಲ್ಲಿ ಮಿಲಿಟರಿಗಳನ್ನು ನೆಲೆಯನ್ನು ವಿಸ್ತರಿಸುತ್ತಾ, ತನ್ನ ಬಾಗಿಲಿಗೆ ಬರುತ್ತದೆ ಎಂಬುವುದು ರಷ್ಯಾದ ವಾದವಾಗಿದೆ.

ಇದನ್ನೂ ಓದಿ: ಉಕ್ರೇನ್‌ನಿಂದ ಬಂದಿರುವ ವೈದ್ಯ ವಿದ್ಯಾರ್ಥಿಗಳ ಭವಿಷ್ಯವೇನು?: ಎಚ್.ಡಿ. ಕುಮಾರಸ್ವಾಮಿ ಪ್ರಶ್ನೆ

ಉಕ್ರೇನ್‌ ಆಕ್ರಮಣಕ್ಕೆ ಆದೇಶ ನೀಡುವ ಮೂಲಕ ಜಗತ್ತನ್ನು ಬೆಚ್ಚಿಬೀಳಿಸುವ ಸ್ವಲ್ಪ ಸಮಯದ ಮೊದಲು, ರಷ್ಯಾ ಅಧ್ಯಕ್ಷ ಪುಟಿನ್ ಪೂರ್ವ ಉಕ್ರೇನ್‌ನ ಡೊನೆಟ್ಸ್ಕ್ ಮತ್ತು ಲುಗಾನ್ಸ್ಕ್ ಎಂಬ ಎರಡು ಪ್ರತ್ಯೇಕತಾವಾದಿ ಪ್ರಾಂತ್ಯಗಳನ್ನು ರಷ್ಯನ್‌ ಪರ “ಗಣರಾಜ್ಯಗಳು” ಎಂದು ಗುರುತಿಸಿಕೊಂಡಿದ್ದರು. ಈ ಎರಡು ಪ್ರಾಂತ್ಯಗಳು 2014 ರಿಂದ ಉಕ್ರೇನ್ ವಿರುದ್ದ ಸಂಘರ್ಷದಲ್ಲಿದೆ. ಉಕ್ರೇನ್ ಕೂಡ ತಮ್ಮನ್ನು ಸಾರ್ವಭೌಮ ಮತ್ತು ಸ್ವತಂತ್ರ ಎಂದು ಗುರುತಿಸಿಕೊಳ್ಳಲಿ ಎಂದು ಪುಟಿನ್‌ ಬಯಸುತ್ತಿದ್ದಾರೆ.

ರಷ್ಯಾದ ಈ ಬೇಡಿಕೆಯ ಬಗ್ಗೆ ಎಬಿಸಿ ಸಂದರ್ಶನದಲ್ಲಿ ಮಾತನಾಡಿದ ಝೆಲೆನ್ಸ್ಕಿ, ತಾನು ಮಾತುಕತೆಗೆ ಮುಕ್ತನಾಗಿದ್ದೇನೆ ಎಂದು ಹೇಳಿದ್ದಾರೆ. “ನಾನು ಭದ್ರತಾ ಖಾತರಿಗಳ ಬಗ್ಗೆ ಮಾತನಾಡುತ್ತಿದ್ದೇನೆ. ಈ ಎರಡು ಪ್ರದೇಶಗಳು ಮುಂದೆ ಹೇಗಿರಬೇಕು ಎನ್ನುವ ಕುರಿತು ನಾವು ಚರ್ಚಿಸುತ್ತೇವೆ ಮತ್ತು ರಾಜಿ ಮಾಡಿಕೊಳ್ಳುತ್ತೇವೆ” ಎಂದು ಅವರು ಹೇಳಿದ್ದಾರೆ.

“ಉಕ್ರೇನ್‌ನ ಭಾಗವಾಗಲು ಬಯಸುವ, ಉಕ್ರೇನ್‌ನಲ್ಲಿ ಇರುವ ಆ ಪ್ರಾಂತ್ಯಗಳಲ್ಲಿನ ಜನರು ಹೇಗೆ ಬದುಕುತ್ತಾರೆ ಎಂಬುದು ನನಗೆ ಮುಖ್ಯವಾದುದು. ಆದ್ದರಿಂದ ಈ ಪ್ರಶ್ನೆಯನ್ನು ಸರಳವಾಗಿ ಒಪ್ಪಿಕೊಳ್ಳುವುದು ಹೆಚ್ಚು ಕಷ್ಟವಾಗಿದೆ. ಅಧ್ಯಕ್ಷ ಪುಟಿನ್ ಮಾತನಾಡಲು ಪ್ರಾರಂಭಿಸಲು ಏನು ಮಾಡಬೇಕು, ಮಾತುಕತೆ ಪ್ರಾರಂಭಿಸಿ” ಎಂದು ಝೆಲೆನ್ಸ್ಕಿ ಹೇಳಿದ್ದಾರೆ.

ಇದನ್ನೂ ಓದಿ: ನಿಮ್ಮ ದೌರ್ಬಲ್ಯದಿಂದಾಗಿ ನಮ್ಮ ಜನ ಸಾಯುತ್ತಿದ್ದಾರೆ: ನೋ-ಫ್ಲೈ ಝೋನ್ ಹೇರದ NATO ವಿರುದ್ಧ ಕಿಡಿಕಾರಿದ ಉಕ್ರೇನ್ ಅಧ್ಯಕ್ಷ ಝೆಲೆನ್ಸ್ಕಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....