Homeಸಿನಿಮಾಕ್ರೀಡೆಜಗತ್ತು ಕಂಡ ಪ್ರತಿಭಾವಂತ ಲೆಗ್‌ಸ್ಪಿನ್ ಬೌಲರ್ ಶೇನ್ ವಾರ್ನ್

ಜಗತ್ತು ಕಂಡ ಪ್ರತಿಭಾವಂತ ಲೆಗ್‌ಸ್ಪಿನ್ ಬೌಲರ್ ಶೇನ್ ವಾರ್ನ್

- Advertisement -
- Advertisement -

ಶೇನ್ ವಾರ್ನ್ ಕ್ರಿಕೆಟ್ ಜಗತ್ತು ಕಂಡ ಪ್ರತಿಭಾವಂತ ಲೆಗ್‌ಸ್ಪಿನ್ ಬೌಲರ್. ಒಂದು ಕಾಲದಲ್ಲಿ ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ಅವಿಭಾಜ್ಯ ಅಂಗವಾಗಿದ್ದವರು ಶೇನ್ ವಾರ್ನ್. ಎದುರಾಳಿ ತಂಡ ಯಾವುದೇ ಇರಲಿ ಗೆಲುವು ಮಾತ್ರ ಆಸ್ಟ್ರೇಲಿಯಾ ತಂಡದ್ದೆ ಎನ್ನುವ ಅಭಿಪ್ರಾಯವನ್ನು ಸಾರ್ವತ್ರಿಕ ಮಾಡಿದ್ದರಲ್ಲಿ ವಾರ್ನ್ ಪಾಲು ದೊಡ್ಡದಿದೆ. ಕ್ರಿಕೆಟ್ ಆಡುವ ಪಶ್ಚಿಮದ ದೇಶಗಳಲ್ಲಿ ಹೆಸರಾಂತ ವೇಗದ ಬೌಲರ್‌ಗಳು ಮುನ್ನೆಲೆಗೆ ಬಂದರು. ವಾಲ್ಷ್, ಅಂಬ್ರೋಸ್, ಮೆಕ್‌ಗ್ರಾತ್, ಬ್ರೆಟ್‌ಲೀ, ಶಾನ್ ಪೊಲಾಕ್, ಮಖಾಯಾ ಎಂಟಿನಿ, ಶೇನ್‌ಬಾಂಡ್, ಡರೆಲ್ ಟಫಿ, ಹೀತ್ ಸ್ಟ್ರೀಕ್, ಓಲಾಂಗ, ಡೇಲ್‌ಸ್ಟೇನ್ ಹೀಗೆ ಈ ಯಾದಿ ಸಾಗುತ್ತದೆ.

ಸ್ಪಿನ್ ಬೌಲಿಂಗ್‌ನಲ್ಲಿ ವಾರ್ನ್ ಪಡೆದಷ್ಟು ಪ್ರಸಿದ್ಧಿಯನ್ನು ಪಶ್ಚಿಮದ ದೇಶದ ಯಾವ ಸ್ಪಿನ್ನರ್ ಕೂಡ ಇದುವರೆಗೂ ಪಡೆಯಲು ಸಾಧ್ಯವಾಗಿಲ್ಲ. ಇಂಗ್ಲೆಂಡಿನ ಮೈಕ್ ಗ್ಯಾಟಿಂಗ್‌ಗೆ ವಾರ್ನ್ ಹಾಕಿದ ಒಂದು ಎಸೆತ ಶತಮಾನದ ಎಸೆತ ಎನಿಸಿಕೊಂಡಿದೆ. ಬಹುಶಃ ಅವತ್ತು ಗ್ಯಾಟಿಂಗ್ ಅಷ್ಟೆ ಅಲ್ಲ ದೇವರೆ ಕ್ರಿಸ್‌ನಲ್ಲಿ ಇದ್ದಿದ್ದರೂ ವಾರ್ನ್‌ನ ಆ ಎಸೆತದಿಂದ ಬೌಲ್ಡ್ ಆಗುವುದನ್ನು ತಪ್ಪಿಸಿಕೊಳ್ಳಲು ಸಾಧ್ಯವಿರಲಿಲ್ಲ.

ವಾರ್ನ್ ಚೆಂಡು ಕೈಗೆ ಬಂದ ಕೆಲವೆ ಸೆಕೆಂಡ್‌ಗಳಲ್ಲಿ ಬ್ಯಾಟ್ಸ್‌ಮೆನ್ ಫೇಸ್‌ರೀಡ್ ಮಾಡಿಬಿಡುತ್ತಿದ್ದ. ಬ್ಯಾಟ್ಸ್‌ಮೆನ್ ಮೈಮರೆಯುವ ಸೆಮಿಸೆಕೆಂಡ್ ಸಾಕಿತ್ತು ವಾರ್ನ್‌ಗೆ, ಅಷ್ಟರಲ್ಲಿ ಆ ಬ್ಯಾಟ್ಸ್‌ಮೆನ್ ವಾರ್ನ್‌ನ ಸ್ಪಿನ್ ಬಲೆಗೆ ಬಿದ್ದಿರುತ್ತಿದ್ದ. ವಾರ್ನ್‌ನ ಈ ಸೈಕಲಾಜಿಕಲ್ ಲೆಕ್ಕಾಚಾರವನ್ನು ತಲೆಕೆಳಗೆ ಮಾಡಿದ್ದು ಸಚಿನ್ ತೆಂಡೂಲ್ಕರ್. ಶಾರ್ಜಾದಲ್ಲಿ ವಾರ್ನ್ ಎಸೆತಗಳಿಗೆ ಸಚಿನ್ ಹೊಡೆದ ಸಿಕ್ಸರ್‌ಗಳು ನನ್ನನ್ನು ನಿದ್ದೆಯಲ್ಲೂ ಬೆಚ್ಚಿಬೀಳಿಸುತ್ತಿದ್ದವು ಎಂದು ವಾರ್ನ್ ಹೇಳಿಕೊಂಡಿದ್ದ.

ಶೇನ್ ವಾರ್ನ್ ಪ್ರತಿಭಾವಂತ ಎನ್ನುವುದರಲ್ಲಿ ಅನುಮಾನವಿಲ್ಲ, ಆದರೆ ಶೇನ್ ವಾರ್ನ್‌ನ ಸಮಕಾಲೀನ ಕ್ರಿಕೆಟಿಗನಾಗಿದ್ದ ಶ್ರೀಲಂಕಾದ ಮುತ್ತಯ್ಯ ಮುರುಳೀಧರನ್‌ನಿಂದ ವಾರ್ನ್‌ಗೆ ತೀವ್ರವಾದ ಪೈಪೋಟಿ ಇತ್ತು. ಆದರೆ ಮುರುಳೀಧರನ್ ಬೌಲಿಂಗ್ ಶೈಲಿಯ ಬಗ್ಗೆ ಇದ್ದ ಆರೋಪಗಳು ಕೂಡ ಪರೋಕ್ಷವಾಗಿ ವಾರ್ನ್ ಖ್ಯಾತಿಯನ್ನು ಹೆಚ್ಚಿಸಲು ಸಹಕಾರಿಯಾಯಿತು.

ಏಕದಿನ ಮತ್ತು ಟೆಸ್ಟ್ ಕ್ರಿಕೆಟ್ ಸೇರಿ ಸಾವಿರ ವಿಕೆಟ್‌ಗಳನ್ನು ಪಡೆದ ಖ್ಯಾತಿ ವಾರ್ನ್‌ನದು. ಆತ ಮಹಾನ್ ಕ್ರಿಕೆಟಿಗ ಎಂದು ಹೇಳಲು ನಾನು ಸ್ವಲ್ಪವೂ ಯೋಚಿಸುವುದಿಲ್ಲ ಎನ್ನುವ ಸುನಿಲ್ ಗಾವಸ್ಕರ್ ಮಾತಿಗೆ ಮಹತ್ವವಿದೆ. 2000ನೇ ಇಸವಿಯಲ್ಲಿ ಕ್ರಿಕೆಟ್ ಪರಿಣಿತರ ಸಮಿತಿಗೆ ಶತಮಾನದ ಐದು ಜನ ಕ್ರಿಕೆಟರ್‌ಗಳಲ್ಲಿ ಒಬ್ಬರಾಗಿ ಆಯ್ಕೆಯಾದದ್ದು ವಾರ್ನ್ ಹೆಗ್ಗಳಿಕೆ. ವಿಶೇಷವೇನೆಂದರೆ ಆ ಸಮಯದಲ್ಲಿ ವಾರ್ನ್ ಇನ್ನೂ ಆಸ್ಟ್ರೇಲಿಯಾ ಪರವಾಗಿ ಕ್ರಿಕೆಟ್ ಆಡುತ್ತಿದ್ದರು. ಇದೂವರೆಗೂ ಆ ಗೌರವ ಸಿಕ್ಕ ಏಕೈಕ ಬೌಲರ್ ವಾರ್ನ್. ಸುನಾಮಿಯಿಂದ ನಿರಾಶ್ರಿತರಾದವರಿಗೆ ಸಹಾಯ ಮಾಡಲು ಮೆಲ್ಬರ್ನ್‌ನಲ್ಲಿ ಒಂದು ಕ್ರಿಕೆಟ್ ಟೂರ್ನಿಯನ್ನು ಆಯೋಜಿಸಲಾಗಿತ್ತು, ಆ ತಂಡದಲ್ಲಿ ಶೇನ್ ವಾರ್ನ್ ಇದ್ದರು. ಇಷ್ಟೇ ಅಲ್ಲದೆ ಸುನಾಮಿಯ ದುಷ್ಪರಿಣಾಮಕ್ಕೆ ಒಳಗಾದ ಜನರಿಗೆ ಸಹಾಯ ಮಾಡಲು ತಮ್ಮ ದೀರ್ಘಾವಧಿಯ ಪ್ರತಿಸ್ಪರ್ಧಿ ಮುತ್ತಯ್ಯ ಮುರುಳೀಧರನ್ ಜೊತೆ ವಾರ್ನ್ ಕೈಜೋಡಿಸಿದರು. ಸುನಾಮಿ ದುರಂತದಿಂದ ಹಾನಿಗೊಳಗಾದ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣವನ್ನು ಸುಸ್ಥಿತಿಗೆ ತರಲು ವಾರ್ನ್ ಚಾರಿಟೇಬಲ್ ಟ್ರಸ್ಟ್‌ನಿಂದ ವಾರ್ನ್ ಸಹಾಯ ಮಾಡಿದ್ದರು.

ಕ್ರಿಕೆಟ್ ಮೈದಾನದ ಆಚೆಯ ಅತ್ಯಂತ ವರ್ಣರಂಜಿತ ವ್ಯಕ್ತಿತ್ವ ಶೇನ್ ವಾರ್ನ್‌ದು. ಯೌವ್ವನಿಗನಾಗಿ ಕಾಣಬೇಕೆಂಬ ಹಂಬಲ ವಾರ್ನ್‌ಗೆ ಬಹಳ ಇತ್ತು. ಕೂದಲಿನ ಬಣ್ಣದ ಕುರಿತು ಅವರಿಗೆ ಅಪಾರ ಕಾಳಜಿ. ಜೀವನವನ್ನು ಮೋಜಿನಿಂದ ಕಳೆಯಬೇಕು ಎನ್ನುವ ವಿಷಯದಲ್ಲಿ ವಾರ್ನ್‌ಗೆ ಯಾವುದೇ ಅನುಮಾನವಿರಲಿಲ್ಲ. ಹಣ, ಖ್ಯಾತಿ ಎಲ್ಲವು ಆತನನ್ನು ಹುಡುಕಿ ಬಂದಿತ್ತು. ಆಧುನಿಕ ಜಗತ್ತಿನ ಐಷಾರಾಮಿ ಬದುಕು ವಾರ್ನ್ ಜೀವನಶೈಲಿಯೆ ಆಗಿಹೋಗಿತ್ತು. ಬದುಕಿರುವಷ್ಟು ದಿನ ಜೀವನವನ್ನು ಸುಖಸಂತೋಷದಿಂದ ಕಳೆಯಬೇಕು ಎನ್ನುವ ವರ್ತಮಾನದ ಜಗತ್ತಿನ ಪ್ರತಿರೂಪವಾಗಿ ವಾರ್ನ್ ನಮಗೆ ಕಾಣುತ್ತಾನೆ. ಆತ ಅನೇಕ ಟಿ.ವಿ. ಷೋಗಳಲ್ಲಿ ಕಾಣಿಸಿಕೊಳ್ಳುತ್ತಿದ್ದ. ಇದೆಲ್ಲವು ಆತ ಇನ್ನಷ್ಟು ಜನಪ್ರಿಯನಾಗಲು ಬಳಸುತ್ತಿದ್ದ ಮಾರ್ಗವಾಗಿತ್ತು.

ಬಹುಶಃ ತನ್ನ ವರ್ಣರಂಜಿತ ಬದುಕಿನ ಕಾರಣಕ್ಕಾಗಿ ಅನೇಕ ವಿವಾದಗಳಿಗೂ ಕೂಡ ವಾರ್ನ್ ಒಳಗಾಗಬೇಕಾಯಿತು. ವಾರ್ನ್ ಕ್ರಿಕೆಟ್ ಆಡುವ ಕಾಲದಲ್ಲಿ ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ನಾಯಕನಾಗಿದ್ದ ಸ್ಟೀವ್ ವಾನನ್ನು ಅತ್ಯಂತ ಸ್ವಾರ್ಥಿ ಕ್ರಿಕೆಟಿಗ ಎಂದು ವಾರ್ನ್ ದೂಷಿಸಿದ. 1999ರ ವೆಸ್ಟ್ ಇಂಡಿಸ್ ಪ್ರವಾಸಕ್ಕೆ ತನ್ನನ್ನು ಕೈ ಬಿಡುವುದಕ್ಕೆ ಸ್ಟೀವ್ ವಾ ಕಾರಣವೆಂದು ವಾರ್ನ್‌ನ ವಾದವಾಗಿತ್ತು. ಬ್ರಿಟಿಷ್ ನರ್ಸ್ ಒಬ್ಬರಿಗೆ ಅಶ್ಲೀಲ ಸಂದೇಶಗಳನ್ನು ಕಳಿಸಿದ ವಿವಾದವೂ ಕೂಡ ವಾರ್ನ್ ಮೇಲೆ ಬಂದಿತು. ಉದ್ದೀಪನ ಮದ್ದು ಸೇವನೆ ಮಾಡಿದ ಆರೋಪಕ್ಕೂ ವಾರ್ನ್ ಒಳಗಾದರು. ವೈವಾಹಿಕ ಜೀವನದಲ್ಲಿಯೂ ಹಲವು ಏರುಪೇರುಗಳನ್ನು ಕಂಡವರು ಅವರು.

ಇವುಗಳೆಲ್ಲದರ ಆಚೆ ವಾರ್ನ್ ಬೌಲಿಂಗ್ ಒಂದು ದೃಶ್ಯ ಕಾವ್ಯ. ನಾಲಿಗೆಯನ್ನು ತುಟಿಯಂಚಿಗೆ ಚಾಚಿ ಆತ ಹಾಕುತ್ತಿದ್ದ ಎಸೆತ ಇತ್ತಲ್ಲ ಅದು ಬ್ಯಾಟ್ಸ್‌ಮೆನ್‌ನನ್ನು ವಂಚಿಸುತ್ತಿದ್ದ ಪರಿ ಇತ್ತಲ್ಲ ಅದು ವರ್ಣನಾತೀತ. ಇನ್ನು ಬಹಳಷ್ಟು ಬದುಕಬೇಕಿದ್ದ ವಾರ್ನ್ ತನ್ನ 52 ವಯಸ್ಸಿನಲ್ಲಿ ಥೈಲ್ಯಾಂಡ್‌ನಲ್ಲಿ ನಿಧನ ಹೊಂದಿದ. ಆತ ಥೈಲ್ಯಾಂಡ್‌ನಲ್ಲಿ ತನ್ನ ಅಂತಿಮ ಕ್ಷಣಗಳನ್ನು ಕಳೆದಿದ್ದು ಒಂದು ರೀತಿಯ ಸೋಜಿಗವೆ. ವಿದಾಯ ವಾರ್ನ್.

ಡಾ. ನವೀನ್ ಮಂಡಗದ್ದೆ
ಉಪನ್ಯಾಸಕರು, ಕನ್ನಡಭಾರತಿ ಕುವೆಂಪು ವಿಶ್ವವಿದ್ಯಾಲಯ.


ಇದನ್ನೂ ಓದಿ: ಉದ್ಯಮವಾಗಿ ರೂಪುಗೊಳ್ಳುತ್ತಿರುವ ಕ್ರಿಕೆಟ್ ಮೈದಾನಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...