Homeಮುಖಪುಟರೈತರ ಹತ್ಯಾಕಾಂಡ ನಡೆದ ಲಖಿಂಪುರ್‌ ಖೇರಿ ಚುನಾವಣಾ ಫಲಿತಾಂಶ ಹೀಗಿದೆ..? ನೋಡಿ

ರೈತರ ಹತ್ಯಾಕಾಂಡ ನಡೆದ ಲಖಿಂಪುರ್‌ ಖೇರಿ ಚುನಾವಣಾ ಫಲಿತಾಂಶ ಹೀಗಿದೆ..? ನೋಡಿ

- Advertisement -
- Advertisement -

ಉತ್ತರ ಪ್ರದೇಶದಲ್ಲಿ ಕಳೆದ ಅಕ್ಟೋಬರ್‌ನಲ್ಲಿ ರೈತರ ಹತ್ಯಾಕಾಂಡಕ್ಕೆ ಸಾಕ್ಷಿಯಾಗಿದ್ದ ಲಖಿಂಪುರ್‌ ಖೇರಿಯ ವಿಧಾನಸಭಾ ಚುನಾವಣೆ 2022 ರ ಮತ ಎಣಿಕೆ ನಡೆಯುತ್ತಿದೆ. ಲಖಿಂಪುರ್ ಖೇರಿಯು ಉತ್ತರ ಪ್ರದೇಶದ ಅವಧ್ ಪ್ರದೇಶ ಮತ್ತು ಖೇರಿ ಜಿಲ್ಲೆಯ ವಿಧಾನಸಭಾ ಸ್ಥಾನವಾಗಿದೆ.

ಕೇಂದ್ರ ಗೃಹ ಸಚಿವ ಅಜಯ್ ಮಿಶ್ರಾ ಸಂಸದರಾಗಿರುವ ಜಿಲ್ಲೆಯಲ್ಲಿ, ಕಳೆದ ವರ್ಷ ಅಕ್ಟೋಬರ್‌ನಲ್ಲಿ ಈಗ ರದ್ದಾಗಿರುವ ವಿವಾದಿತ ಮೂರು ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟನೆಯ ಸಂದರ್ಭದಲ್ಲಿ ನಾಲ್ವರು ರೈತರು ಸೇರಿದಂತೆ ಎಂಟು ಜನರು ಸಾವನ್ನಪ್ಪಿದರು. ಇದು ಅಂತರಾಷ್ಟ್ರೀಯ ಮಟ್ಟದಲ್ಲಿ ಚರ್ಚೆಗೆ ಕಾರಣವಾಗಿತ್ತು. ಚುನಾವಣೆ ಮೇಲೆ ಇದು ಸಾಕಷ್ಟು ಪ್ರಭಾವ ಬೀರಲಿದೆ ಎನ್ನಲಾಗಿತ್ತು.

2022 ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಲಖೀಂಪುರ್‌ ಖೇರಿಯಿಂದ ಸ್ಪರ್ಧಿಸಿರುವ ಅಭ್ಯರ್ಥಿಗಳಲ್ಲಿ ಕಾಂಗ್ರೆಸ್‌ನ ರವಿಶಂಕರ್ ತ್ರಿವೇದಿ, ಬಿಜೆಪಿಯ ಯೋಗೇಶ್ ವರ್ಮಾ, ಎಸ್‌ಪಿಯ ಉತ್ಕರ್ಷ್ ವರ್ಮಾ, ಬಿಎಸ್‌ಪಿಯ ಮೋಹನ್ ಬಾಜ್‌ಪೈ, ಎಐಎಂಐಎಂನ ಮೊ. ಉಸ್ಮಾನ್ ಸಿದ್ದಿಕಿ ಸೇರಿದ್ದಾರೆ.

ಇದನ್ನೂ ಓದಿ: Uttarakhand Election Results | ಉತ್ತರಾಖಂಡ್‌ ಬಿಜೆಪಿ ಮುನ್ನಡೆ: ಮೊದಲ ಗೆಲುವು ದಾಖಲಿಸಿದ ಕಾಂಗ್ರೆಸ್‌ | Live

ಈ ಚುನಾವಣೆಯಲ್ಲಿ ರೈತರ ಮೇಲೆ ನಡೆದ ಹತ್ಯಾಕಾಂಡ ಯಾವುದೇ ಪ್ರಭಾವ ಬೀರಿಲ್ಲ ಎಂಬುದು ಆರಂಭಿಕ ಹಂತಗಳಲ್ಲಿ ಕಾಣಿಸುತ್ತಿದೆ. ಎಂಟು ವಿಧಾನಸಭಾ ಕ್ಷೇತ್ರದ ಲಖಿಂಪುರ್‌ ಖೇರಿಯ ಎರಡು ಕ್ಷೇತ್ರಗಳಲ್ಲಿ ಸಮಾಜವಾದಿ ಪಾರ್ಟಿ ಮುನ್ನಡೆ ಸಾಧಿಸುತ್ತಿದ್ದರೂ ಉಳಿದ ಆರು ಕ್ಷೇತ್ರಗಳಲ್ಲಿ  ಬಿಜೆಪಿ ಪ್ರಬಲ ಮುನ್ನಡೆ ಸಾಧಿಸುತ್ತಿದೆ.

ಲಖಿಂಪುರ್‌ ಖೇರಿಯಲ್ಲಿ 4,832, ಗೋಲಾದಲ್ಲಿ 9,468, ನಿಘಸನ್‌ನಲ್ಲಿ 12,854, ಧೌರ್ಹರಾದಲ್ಲಿ 4,777, ಕಾಸ್ತಾದಲ್ಲಿ 3,966, ಶ್ರೀನಗರದಲ್ಲಿ 4,711 ಮತಗಳಿಂದ ಬಿಜೆಪಿ ಮುನ್ನಡೆ ಸಾಧಿಸಿದೆ. ಮತ್ತೊಂದೆಡೆ, ಮೊಹಮ್ಮದಿ ಮತ್ತು ಪಿಲಾಯದಲ್ಲಿ ಸಮಾಜವಾದಿ ಪಾರ್ಟಿ ಅಭ್ಯರ್ಥಿಗಳು ಮುನ್ನಡೆ ಸಾಧಿಸಿದ್ದಾರೆ.

ಈ ಹಿಂದೆ ಲಖಿಂಪುರ ಖೇರಿಯಲ್ಲಿ ಎಲ್ಲಾ ಎಂಟು ಅಸೆಂಬ್ಲಿ ಸ್ಥಾನಗಳು ಬಿಜೆಪಿಯವು. ಲಖೀಂಪುರ್‌ ನಗರದಲ್ಲಿ ಹಾಲಿ ಶಾಸಕ ಯೋಗೇಶ್ ವರ್ಮಾ ಅವರು ಎಸ್‌ಪಿಯ ಉತ್ಕರ್ಷ್ ವರ್ಮಾ ಮಧುರ್ ವಿರುದ್ಧ ಕಣಕ್ಕಿಳಿದಿದ್ದರು. ಕಾಂಗ್ರೆಸ್ ತನ್ನ ಅಭ್ಯರ್ಥಿ ರವಿಶಂಕರ್ ತ್ರಿವೇದಿ ಮೇಲೆ ಭಾರಿ ನಿರೀಕ್ಷೆ ಇಟ್ಟುಕೊಂಡು ಕಣಕಿಳಿಸಿತ್ತು. ಸದ್ಯ ಬಿಜೆಪಿಯ ಯೋಗೇಶ್ ವರ್ಮಾ ಅವರು ಎಸ್‌ಪಿಯ ಉತ್ಕರ್ಷ್ ವರ್ಮಾ ಮಧುರ್ ಅವರಿಗಿಂತ 2,787 ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ.


ಇದನ್ನೂ ಓದಿ: Uttar Pradesh Elections Result | ಎಲ್ಲಾ ಕ್ಷೇತ್ರಗಳ ಎಣಿಕೆ ಪ್ರಾರಂಭ; ಬಿಜೆಪಿ ಮುನ್ನಡೆ | Live

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...